Homeಕರ್ನಾಟಕಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಸರ್ಕಾರ ಇನ್ನೂ ಜೀವಂತವಾಗಿದೆಯೇ?

- Advertisement -
- Advertisement -

ಈ ವರೆಗೆ ಪಿಎಂ‌ ಕೇರ್ಸ್‌ಗೆ ಸುಮಾರು ರೂ.60,000 ಕೋಟಿ ಸಂಗ್ರಹವಾಗಿದೆ. ಇದು ಜನರ ದೇಣಿಗೆ, ಈ ಹಣದ ಬಗ್ಗೆ ಸರ್ಕಾರ ಜನರಿಗೆ ಲೆಕ್ಕ ಕೊಡಬೇಕಲ್ಲವೇ ಎಂದು ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ರಾಜ್ಯ ಸರ್ಕಾರವೂ ಜನರಿಗೆ ಹೇಳಬೇಕು. ಈ ಕಾರಣಕ್ಕಾಗಿಯೇ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ನಾನು ಒತ್ತಾಯಿಸಿದ್ದು. ಮೆಡಿಕಲ್ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ. ಇದಕ್ಕೆ ಸಮರ್ಥನೆಗಳಿಲ್ಲ ಎಂದು ಆರ್ಥಿಕ ಇಲಾಖೆ ಟಿಪ್ಪಣಿ ಇದೆ. ಈ ಪ್ರಕರಣದಲ್ಲಿ ಸುಮಾರು ರೂ.2,200 ಕೋಟಿ ಅವ್ಯವಹಾರ ನಡೆದಿದೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮಾರ್ಚ್ 24 ಕ್ಕೆ ಮುಂಚೆ ವಿಶ್ವದಲ್ಲಿ 4 ಲಕ್ಷದ 25 ಸಾವಿರ ಸಕ್ರಿಯ ಕೊರೊನಾ ಪ್ರಕರಣಗಳಿದ್ದವು, ಸುಮಾರು 19,000 ಮಂದಿ ಸಾವಿಗೀಡಾಗಿದ್ದರು.‌ ಆಗ ಭಾರತದಲ್ಲಿ 536 ಮಂದಿಗೆ ಕೊರೊನಾ ದೃಢಪಟ್ಟಿತ್ತು ಮತ್ತು 10 ಜನ ಕೊರೊನಾದಿಂದ ಸಾವಿಗೀಡಾಗಿದ್ದರು. ಆದರೆ ಈಗ ಭಾರತ ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲೇ 4ನೇ ಸ್ಥಾನದಲ್ಲಿದೆ. ಮಾರ್ಚ್‌ನಿಂದ ಈ ವರೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಕಷ್ಟು ಸಮಯವಿದ್ದಾಗ್ಯೂ ಕೊರೊನಾ ವ್ಯಾಪಕವಾಗಿ ಹರಡಿದೆ. ಇದಕ್ಕೆ ಎರಡೂ ಸರ್ಕಾರಗಳ ನಿರ್ಲಕ್ಷ್ಯ ಮತ್ತು ತಪ್ಪು ನಿರ್ಧಾರಗಳೇ ಕಾರಣ ಎಂದು ಅವರು ದೂರಿದ್ದಾರೆ.

ವಿಶ್ವದ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಿರುವ ಜನರ ಪ್ರಮಾಣ ತುಂಬಾ ಕಡಿಮೆಯಿದೆ. ಅಮೆರಿಕಾದಲ್ಲಿ ಪ್ರತಿ 10 ಲಕ್ಷ ಮಂದಿಗೆ 1 ಲಕ್ಷ ಜನರನ್ನು, ಇಟಲಿಯಲ್ಲಿ 90 ಸಾವಿರ, ಇಂಗ್ಲೆಂಡ್‌ನಲ್ಲಿ 75 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಭಾರತದಲ್ಲಿ ಪ್ರತಿ 10 ಲಕ್ಷ ಮಂದಿಗೆ 6,943 ಜನರನ್ನು, ಕರ್ನಾಟಕದಲ್ಲಿ 9,741 ಜನರನ್ನು ಪರೀಕ್ಷೆ ಒಳಪಡಿಸಲಾಗುತ್ತಿದೆ. ಇದರಿಂದ ಸೋಂಕಿತರ ಪತ್ತೆ ವಿಳಂಬವಾಗಿ ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ನಿಯಂತ್ರಣದಲ್ಲಿ ಭಾರತ ನಂ.1 ಎನ್ನುತ್ತಿದ್ದರು, ಇತರೆ ದೇಶಗಳೊಂದಿಗೆ ಎಲ್ಲಿದೆ ಸಾಮ್ಯತೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಮೊನ್ನೆ ಬಳ್ಳಾರಿಯಲ್ಲಿ ಕೊರೊನಾದಿಂದ ಮೃತಪಟ್ಟ ನಾಲ್ವರ ಶವಗಳನ್ನು ಅಮಾನವೀಯವಾಗಿ ಒಂದೇ ಗುಂಡಿಯಲ್ಲಿ ಶವ ಸಂಸ್ಕಾರ ಮಾಡಲಾಯಿತು. ಆರೋಗ್ಯ ಸಚಿವರ ಜಿಲ್ಲೆಯಲ್ಲೇ ಇಷ್ಟು ನಿರ್ಲಕ್ಷ್ಯವಾದರೆ ಹೇಗೆ? ಇಷ್ಟು ದಿನಗಳಾದರೂ ಸರ್ಕಾರ ಶವ ಸಂಸ್ಕಾರಕ್ಕೆ ಕನಿಷ್ಠ ಒಂದು ನಿಯಮ ರೂಪಿಸದೆ ಇರುವುದು ದುರಾದೃಷ್ಟದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಸರ್ಕಾರ ಇನ್ನೂ ಜೀವಂತವಾಗಿದೆಯೇ ಎಂದು ಕೇಳಿದ್ದಾರೆ.

ಸರ್ಕಾರವೇ ನೀಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಒಟ್ಟು ಹಾಸಿಗೆಗಳ ಪ್ರಮಾಣ 4,663, ಇದರಲ್ಲಿ 2,694 ಹಾಸಿಗೆಗಳು ಬಳಕೆಯಾಗುತ್ತಿದ್ದು, 1,969 ಹಾಸಿಗೆಗಳು ಲಭ್ಯವಿದೆಯಂತೆ. ನನ್ನ ಪ್ರಕಾರ ಈ ವೇಳೆಗೆ ರಾಜ್ಯದಲ್ಲಿ ಕನಿಷ್ಠ 30,000 ಹಾಸಿಗೆಗಳು ಲಭ್ಯವಿರಬೇಕಿತ್ತು. ನಮ್ಮ ರಾಜ್ಯದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳೇ 6000ಕ್ಕೂ ಹೆಚ್ಚಿದೆ, ಬೆಂಗಳೂರು ನಗರವೊಂದರಲ್ಲೇ ನಿತ್ಯ 900 ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಎಲ್ಲಾ ಕೊರೊನಾ ಚಿಕಿತ್ಸಾ ಕೇಂದ್ರಗಳ ಹಾಸಿಗೆಗಳು ಭರ್ತಿಯಾದರೆ ಉಳಿದವರ ಗತಿಯೇನು ಎಂದು ಅವರು ಪ್ರಶ್ನಿಸಿದ್ದಾರೆ.

ಮಣಿಪಾಲ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ಸುದರ್ಶನ್ ಬಲ್ಲಾಳ್ ಅವರು ಮುಂದಿನ ಒಂದೂವರೆ ತಿಂಗಳಿನಲ್ಲಿ ಬೆಂಗಳೂರು ನಗರವೊಂದರಲ್ಲೇ 40,000 ಜನ ಸೋಂಕಿಗೆ ಒಳಗಾಗಲಿದ್ದಾರೆ ಎಂದಿದ್ದಾರೆ. ಈ ರೀತಿ ಹಿಂದೆಯೂ ಹಲವು ತಜ್ಞರು ಎಚ್ಚರಿಕೆ ನೀಡಿದ್ದರ ಹೊರತಾಗಿಯೂ ಸರ್ಕಾರ ಯಾರ ಮಾತನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿನಿತ್ಯ ಕೊರೊನಾ ಸೋಂಕಿತರಿಗೆ ಅಗತ್ಯ ಪ್ರಮಾಣದ ಆಹಾರ, ಔಷಧಿ, ವೆಂಟಿಲೇಟರ್ ಮತ್ತು ಹಾಸಿಗೆ ಸೌಲಭ್ಯ ಸಿಗುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ವಸ್ತುನಿಷ್ಠ ಸುದ್ದಿ ಪ್ರಸಾರ ಮಾಡುತ್ತಿರುವ ಮಾಧ್ಯಮ ಮಿತ್ರರಿಗೆ ನನ್ನ ಧನ್ಯವಾದಗಳು. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಸಮರೋಪಾದಿಯಲ್ಲಿ ಕೆಲಸ ಮಾಡಲಿ ಎಂದು ಒತ್ತಾಯಿಸಿದ್ದಾರೆ.


ಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...