Homeಕರ್ನಾಟಕಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಸರ್ಕಾರ ಇನ್ನೂ ಜೀವಂತವಾಗಿದೆಯೇ?

- Advertisement -
- Advertisement -

ಈ ವರೆಗೆ ಪಿಎಂ‌ ಕೇರ್ಸ್‌ಗೆ ಸುಮಾರು ರೂ.60,000 ಕೋಟಿ ಸಂಗ್ರಹವಾಗಿದೆ. ಇದು ಜನರ ದೇಣಿಗೆ, ಈ ಹಣದ ಬಗ್ಗೆ ಸರ್ಕಾರ ಜನರಿಗೆ ಲೆಕ್ಕ ಕೊಡಬೇಕಲ್ಲವೇ ಎಂದು ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ರಾಜ್ಯ ಸರ್ಕಾರವೂ ಜನರಿಗೆ ಹೇಳಬೇಕು. ಈ ಕಾರಣಕ್ಕಾಗಿಯೇ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ನಾನು ಒತ್ತಾಯಿಸಿದ್ದು. ಮೆಡಿಕಲ್ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ. ಇದಕ್ಕೆ ಸಮರ್ಥನೆಗಳಿಲ್ಲ ಎಂದು ಆರ್ಥಿಕ ಇಲಾಖೆ ಟಿಪ್ಪಣಿ ಇದೆ. ಈ ಪ್ರಕರಣದಲ್ಲಿ ಸುಮಾರು ರೂ.2,200 ಕೋಟಿ ಅವ್ಯವಹಾರ ನಡೆದಿದೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮಾರ್ಚ್ 24 ಕ್ಕೆ ಮುಂಚೆ ವಿಶ್ವದಲ್ಲಿ 4 ಲಕ್ಷದ 25 ಸಾವಿರ ಸಕ್ರಿಯ ಕೊರೊನಾ ಪ್ರಕರಣಗಳಿದ್ದವು, ಸುಮಾರು 19,000 ಮಂದಿ ಸಾವಿಗೀಡಾಗಿದ್ದರು.‌ ಆಗ ಭಾರತದಲ್ಲಿ 536 ಮಂದಿಗೆ ಕೊರೊನಾ ದೃಢಪಟ್ಟಿತ್ತು ಮತ್ತು 10 ಜನ ಕೊರೊನಾದಿಂದ ಸಾವಿಗೀಡಾಗಿದ್ದರು. ಆದರೆ ಈಗ ಭಾರತ ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲೇ 4ನೇ ಸ್ಥಾನದಲ್ಲಿದೆ. ಮಾರ್ಚ್‌ನಿಂದ ಈ ವರೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಕಷ್ಟು ಸಮಯವಿದ್ದಾಗ್ಯೂ ಕೊರೊನಾ ವ್ಯಾಪಕವಾಗಿ ಹರಡಿದೆ. ಇದಕ್ಕೆ ಎರಡೂ ಸರ್ಕಾರಗಳ ನಿರ್ಲಕ್ಷ್ಯ ಮತ್ತು ತಪ್ಪು ನಿರ್ಧಾರಗಳೇ ಕಾರಣ ಎಂದು ಅವರು ದೂರಿದ್ದಾರೆ.

ವಿಶ್ವದ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಿರುವ ಜನರ ಪ್ರಮಾಣ ತುಂಬಾ ಕಡಿಮೆಯಿದೆ. ಅಮೆರಿಕಾದಲ್ಲಿ ಪ್ರತಿ 10 ಲಕ್ಷ ಮಂದಿಗೆ 1 ಲಕ್ಷ ಜನರನ್ನು, ಇಟಲಿಯಲ್ಲಿ 90 ಸಾವಿರ, ಇಂಗ್ಲೆಂಡ್‌ನಲ್ಲಿ 75 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಭಾರತದಲ್ಲಿ ಪ್ರತಿ 10 ಲಕ್ಷ ಮಂದಿಗೆ 6,943 ಜನರನ್ನು, ಕರ್ನಾಟಕದಲ್ಲಿ 9,741 ಜನರನ್ನು ಪರೀಕ್ಷೆ ಒಳಪಡಿಸಲಾಗುತ್ತಿದೆ. ಇದರಿಂದ ಸೋಂಕಿತರ ಪತ್ತೆ ವಿಳಂಬವಾಗಿ ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ನಿಯಂತ್ರಣದಲ್ಲಿ ಭಾರತ ನಂ.1 ಎನ್ನುತ್ತಿದ್ದರು, ಇತರೆ ದೇಶಗಳೊಂದಿಗೆ ಎಲ್ಲಿದೆ ಸಾಮ್ಯತೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಮೊನ್ನೆ ಬಳ್ಳಾರಿಯಲ್ಲಿ ಕೊರೊನಾದಿಂದ ಮೃತಪಟ್ಟ ನಾಲ್ವರ ಶವಗಳನ್ನು ಅಮಾನವೀಯವಾಗಿ ಒಂದೇ ಗುಂಡಿಯಲ್ಲಿ ಶವ ಸಂಸ್ಕಾರ ಮಾಡಲಾಯಿತು. ಆರೋಗ್ಯ ಸಚಿವರ ಜಿಲ್ಲೆಯಲ್ಲೇ ಇಷ್ಟು ನಿರ್ಲಕ್ಷ್ಯವಾದರೆ ಹೇಗೆ? ಇಷ್ಟು ದಿನಗಳಾದರೂ ಸರ್ಕಾರ ಶವ ಸಂಸ್ಕಾರಕ್ಕೆ ಕನಿಷ್ಠ ಒಂದು ನಿಯಮ ರೂಪಿಸದೆ ಇರುವುದು ದುರಾದೃಷ್ಟದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಸರ್ಕಾರ ಇನ್ನೂ ಜೀವಂತವಾಗಿದೆಯೇ ಎಂದು ಕೇಳಿದ್ದಾರೆ.

ಸರ್ಕಾರವೇ ನೀಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಒಟ್ಟು ಹಾಸಿಗೆಗಳ ಪ್ರಮಾಣ 4,663, ಇದರಲ್ಲಿ 2,694 ಹಾಸಿಗೆಗಳು ಬಳಕೆಯಾಗುತ್ತಿದ್ದು, 1,969 ಹಾಸಿಗೆಗಳು ಲಭ್ಯವಿದೆಯಂತೆ. ನನ್ನ ಪ್ರಕಾರ ಈ ವೇಳೆಗೆ ರಾಜ್ಯದಲ್ಲಿ ಕನಿಷ್ಠ 30,000 ಹಾಸಿಗೆಗಳು ಲಭ್ಯವಿರಬೇಕಿತ್ತು. ನಮ್ಮ ರಾಜ್ಯದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳೇ 6000ಕ್ಕೂ ಹೆಚ್ಚಿದೆ, ಬೆಂಗಳೂರು ನಗರವೊಂದರಲ್ಲೇ ನಿತ್ಯ 900 ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಎಲ್ಲಾ ಕೊರೊನಾ ಚಿಕಿತ್ಸಾ ಕೇಂದ್ರಗಳ ಹಾಸಿಗೆಗಳು ಭರ್ತಿಯಾದರೆ ಉಳಿದವರ ಗತಿಯೇನು ಎಂದು ಅವರು ಪ್ರಶ್ನಿಸಿದ್ದಾರೆ.

ಮಣಿಪಾಲ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ಸುದರ್ಶನ್ ಬಲ್ಲಾಳ್ ಅವರು ಮುಂದಿನ ಒಂದೂವರೆ ತಿಂಗಳಿನಲ್ಲಿ ಬೆಂಗಳೂರು ನಗರವೊಂದರಲ್ಲೇ 40,000 ಜನ ಸೋಂಕಿಗೆ ಒಳಗಾಗಲಿದ್ದಾರೆ ಎಂದಿದ್ದಾರೆ. ಈ ರೀತಿ ಹಿಂದೆಯೂ ಹಲವು ತಜ್ಞರು ಎಚ್ಚರಿಕೆ ನೀಡಿದ್ದರ ಹೊರತಾಗಿಯೂ ಸರ್ಕಾರ ಯಾರ ಮಾತನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿನಿತ್ಯ ಕೊರೊನಾ ಸೋಂಕಿತರಿಗೆ ಅಗತ್ಯ ಪ್ರಮಾಣದ ಆಹಾರ, ಔಷಧಿ, ವೆಂಟಿಲೇಟರ್ ಮತ್ತು ಹಾಸಿಗೆ ಸೌಲಭ್ಯ ಸಿಗುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ವಸ್ತುನಿಷ್ಠ ಸುದ್ದಿ ಪ್ರಸಾರ ಮಾಡುತ್ತಿರುವ ಮಾಧ್ಯಮ ಮಿತ್ರರಿಗೆ ನನ್ನ ಧನ್ಯವಾದಗಳು. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಸಮರೋಪಾದಿಯಲ್ಲಿ ಕೆಲಸ ಮಾಡಲಿ ಎಂದು ಒತ್ತಾಯಿಸಿದ್ದಾರೆ.


ಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...