Homeಮುಖಪುಟಭಾರತದುದ್ದಕ್ಕೂ 6000 ಕಿ.ಮೀ ಸೈಕಲ್ ಸವಾರಿ: ಸೈಕ್ಲಿಸ್ಟ್‌ಗಳಿಬ್ಬರ ಸಾಹಸಗಾಥೆ

ಭಾರತದುದ್ದಕ್ಕೂ 6000 ಕಿ.ಮೀ ಸೈಕಲ್ ಸವಾರಿ: ಸೈಕ್ಲಿಸ್ಟ್‌ಗಳಿಬ್ಬರ ಸಾಹಸಗಾಥೆ

- Advertisement -
- Advertisement -

ಲಾಕ್‌ಡೌನ್ ಭಾರತದಲ್ಲಿ ವಿಚಿತ್ರ ಸನ್ನಿವೇಶವನ್ನು ಸೃಷ್ಟಿಸಿದೆ. ಜನರ ಜೀವನ ಶೈಲಿಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಯೋಗ, ನಡಿಗೆ, ವ್ಯಾಯಾಮ, ಸೈಕ್ಲಿಂಗ್ ಹೀಗೆ ಜನರು ದೇಹ ಮನಸ್ಸಿನ ಆರೋಗ್ಯದ ಕಡೆ ಹೆಚ್ಚು ಹೆಚ್ಚು ಗಮನ ಕೊಡುತ್ತಿದ್ದಾರೆ. ಬೆಂಗಳೂರಿನಿಂದ ಇಬ್ಬರು ಸೈಕ್ಲಿಸ್ಟ್‌ಗಳು ಭಾರತ ಯಾತ್ರೆಯನ್ನು ಹೊರಟಿದ್ದಾರೆ. ಅದೂ ಸೈಕಲ್‌ನಲ್ಲಿ. ಆರಂಭದ ಉತ್ಸಾಹ, ದಾರಿ ಮಧ್ಯೆ ದಣಿಯುತ್ತಾರೆ ಎಂದುಕೊಳ್ಳುವವರೇ ಹೆಚ್ಚು. ಆದರೆ ಈ ಇಬ್ಬರು ಸೈಕ್ಲಿಸ್ಟ್‌ಗಳು ಈಗಾಗಲೇ ಸೈಕಲ್ ಸವಾರಿಯ ಮೂಲಕ ದೆಹಲಿ ತಲುಪಿದ್ದಾರೆ. ಸರಿ ಸುಮಾರು 3000 ಕಿಲೋ ಮೀಟರ್‌ ದೂರವನ್ನು ಬಿಸಿಲು, ಮಳೆ, ನಿರ್ಬಂಧಗಳ ನಡುವಿನಲ್ಲಿ ಕ್ರಮಿಸಿದ್ದಾರೆ.

ಇವರದು ಸಾಮಾನ್ಯ ಸೈಕಲ್‌ ಅಲ್ಲ. ಉದ್ದವಾದ ಇಬ್ಬರು ವ್ಯಕ್ತಿಗಳು ಒಟ್ಟಿಗೆ ಪೆಡೆಲ್‌ ತುಳಿಯುವ ಎರಡು ಸೀಟ್‌ಗಳ ಟೆಂಡೆಮ್‌ ಸೈಕಲ್. ಒಬ್ಬರಿಗೊಬ್ಬರ ಹೊಂದಾಣಿಕೆ, ವೇಗ, ಲಯ ಮತ್ತು ಸಹಕಾರ ಮಾತ್ರ ಈ ಬಗೆಯ ಸೈಕಲ್‌ ಪ್ರಯಾಣದ ಯಶಸ್ಸನ್ನು ನಿರ್ಧರಿಸುತ್ತದೆ. ಇದುವರೆಗೆ ಟೆಂಡೆಮ್‌ ಸೈಕಲ್‌ನಲ್ಲಿ ಭಾರತದಲ್ಲಿ ಇಷ್ಟು ದೂರ ಯಾರೂ ಕ್ರಮಿಸಿಲ್ಲ. 6000 ಕಿ.ಮೀ ಪ್ರಯಾಣದ ಮೂಲಕ ಈ ಸೈಕ್ಲಿಸ್ಟ್‌ಗಳು ಹೊಸ ದಾಖಲೆಗೆ ಸದ್ಯದಲ್ಲಿಯೇ ಸಾಕ್ಷಿಯಾಗಲಿದ್ದಾರೆ.

44 ವರ್ಷದ ಮೀರಾ ವೇಲಂಕರ್ ಮತ್ತು 48 ವರ್ಷದ ದಿಂಕರ್ ಪಾಟಿಲ್ ಜೂನ್‌ 19 ರಂದು ಬೆಂಗಳೂರಿನಿಂದ ಸೈಕಲ್‌ನಲ್ಲಿ ಹೊರಟು 14 ದಿನಗಳ ನಂತರ ಇಂದು ದೆಹಲಿ ತಲುಪಿದ್ದಾರೆ. 6000 ಕಿಲೋಮೀಟರ್ ದೂರದ ಗೋಲ್ಡ್‌ನ್‌ ಕ್ವಾಡ್ರಿಲಾಟರಲ್ ರಸ್ತೆಯನ್ನು ಸಂಪೂರ್ಣವಾಗಿ ಸೈಕಲ್‌ನಲ್ಲಿಯೇ ಕ್ರಮಿಸುವ ಉದ್ಧೇಶ ಹೊಂದಿರುವ ಸೈಕ್ಲಿಸ್ಟ್‌ಗಳು ಸದ್ಯ ಅರ್ಧ ದೂರವನ್ನು ಕ್ರಮಿಸಿದ್ದಾರೆ.

ಇದನ್ನೂ ಓದಿ: ವಿಚ್ಛೇದನದ ನಂತರ ಅಮಿರ್ ಖಾನ್-ಕಿರಣ್ ರಾವ್ ಭಾವನಾತ್ಮಕ ವಿಡಿಯೋ ಸಂದೇಶ

12 ರಾಜ್ಯಗಳ ಮೂಲಕ  ಹಾದುಹೋಗುವ ಈ ಜರ್ನಿ ಬೆಂಗಳೂರು, ಪುಣೆ, ಮುಂಬೈ, ಅಹ್ಮದಾಬಾದ್‌, ಜೈಪುರ್, ದೆಹಲಿ, ಲಕ್ನೊ, ಕಲ್ಕತ್ತಾ, ಭುವನೇಶ್ವರ, ವಿಶಾಖಪಟ್ಟಣಂ ಚೆನ್ನೈ ನಗರಗಳ ಮೂಲಕ ಸಾಗಲಿದೆ.

ಅಹ್ಮದಾಬಾದ್‌ನಲ್ಲಿ ಮೀರಾ ಮತ್ತು ದಿಂಕರ್ ತಮ್ಮ ಟೆಂಡಮ್‌ ಸೈಕಲ್‌ನೊಂದಿಗೆ (ಚಿತ್ರ ಕೃಪೆ: Times of India)

ನನಗೆ ಸವಾಲುಗಳೆಂದರೆ ಇಷ್ಟ. ಕಳೆದ ಅಕ್ಟೋಬರ್‌ನಲ್ಲಿ ನಾನು ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಸೈಕಲ್‌ನಲ್ಲಿ ತೆರಳಿದ್ದೆ. ಭಾರತದ ಪೂರ್ವ ಪಶ್ಚಿಮ ತೀರಗಳನ್ನು ಬೆಸೆಯುವ ಗೋಲ್ಡನ್‌ ಕ್ವಾಡ್ರಿಲಾಟರಲ್‌ ಅನ್ನು ಸೈಕಲ್‌ ಮೂಲಕ ಕ್ರಮಿಸುವ ಆಸೆಯಿತ್ತು. ಈ ಪ್ರಯತ್ನದಲ್ಲಿ ನಾಸಿಕ್‌ ನ ದಿಂಕರ್ ಪರಿಚಯವಾಯಿತು. ಈ ಪ್ರಯಾಣದಲ್ಲಿ ನಾವಿಬ್ಬದು ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದೇವೆ. ಮಹಾರಾಷ್ಟ್ರ, ಗುಜರಾತ್‌ನಲ್ಲಿ ಭಾರಿ ಮಳೆಯಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ. ಆದರೂ ನಮ್ಮ ಪ್ರಯತ್ನ ಬಿಡಲಿಲ್ಲ. ಇಂದು ಸೈಕಲ್‌ ಮೂಲಕ ರಾಷ್ಟ್ರ ರಾಜಧಾನಿಯನ್ನು ತಲುಪಿದ್ದೇವೆ ಎಂದು ಮೀರಾ ವೇಲಂಕರ್‌ ತಮ್ಮ ಭಾರತ ಪ್ರಯಾಣದ ಅನುಭವವನ್ನು ಹಂಚಿಕೊಳ್ಳುತ್ತಾರೆ.

ಮೀರಾ ಅವರು ಜೀವ ವಿಜ್ಞಾನದಲ್ಲಿ ಪಿಹೆಚ್‌ಡಿ ಪದವಿಯನ್ನು ಪಡೆದಿದ್ದು ಇಬ್ಬರು ಮಕ್ಕಳ ತಾಯಿಯಾಗಿದ್ದಾರೆ.

ನಾಸಿಕ್‌ನ ಹಿಂದುಸ್ತಾನ್‌ ಎರೋನಾಟಿಕಲ್ ಲಿಮಿಟ್ಸ್‌ನ ಭದ್ರತಾ ಮುಖ್ಯಸ್ಥರಾಗಿರುವ ದಿಂಕರ್ ಪಾಟೀಲ್, “ಸೈನಿಕನಾಗಿ ಯಾವಾಗಲೂ ನಾನು ಸಾಹಸಗಳಿಗೆ ಸಿದ್ಧವಿದ್ದೆ. ಮೀರಾ ಅವರು ಸೈಕ್ಲಿಂಗ್ ಯೋಜನೆಯನ್ನು ಮುಂದಿಟ್ಟರು. ಆರಂಭದಲ್ಲಿ ನನಗೆ ವಿಶ್ವಾಸವಿರಲಿಲ್ಲ. ಜೂನ್‌ 19 ರಂದು ಬೆಂಗಳೂರಿನಿಂದ ಹೊರಟ ನಮ್ಮ ಪ್ರಯಾಣ ಇಂದು ದೆಹಲಿಗೆ ತಲುಪಿದೆ” ಎಂದಿದ್ದಾರೆ.

ಬೆಂಗಳೂರಿನಿಂದ ಮುಂಬೈವರೆಗಿನ ಮಾರ್ಗ ಬೆಟ್ಟ ಗುಡ್ಡಗಳಿಂದ ಕೂಡಿದ ಪಶ್ಚಿಮಘಟ್ಟದ ಮೂಲಕ ಹಾದುಹೋಗುತ್ತದೆ. ಮುಂಗಾರಿನ ವೇಳೆ ಪಶ್ಚಿಮ ಘಟ್ಟದ ಪ್ರಯಾಣ ಅತ್ಯಂತ ಕಠಿಣವಾಗಿರುತ್ತದೆ. ನಾವು ನಿತ್ಯ 150-200 ಕಿಲೊ ಮೀಟರ್‌ ದೂರವನ್ನು ಕ್ರಮಿಸುತ್ತಿದ್ದೆವು. ಮಹಾರಾಷ್ಟ್ರದ ಬಹುಪಾಲು ಪ್ರದೇಶದಲ್ಲಿ ಮಳೆಯಿಂದ ರಸ್ತೆಗಳಲ್ಲಿ ಸೈಕಲ್ ಓಡಿಸುವುದು ಸುಲಭವಿರಲಿಲ್ಲ. ಗುಜರಾತ್, ರಾಜಸ್ಥಾನಗಳಲ್ಲಿ ಇನ್ನೊಂದು ರೀತಿಯ ಸವಾಲು. ಮರಭೂಮಿಯ ಪ್ರದೇಶಗಳಲ್ಲಿ ವಿಪರೀತ ಸೆಕೆ. ಕ್ರಮಿಸುವ ದೂರ ಮತ್ತು ವೇಗದಲ್ಲಿ ಸ್ಥಿರತೆಯನ್ನು ಕಾಯ್ದುಕೊಳ್ಳುವುದು ದೀರ್ಘ ಪ್ರಯಾಣದಲ್ಲಿ ಯಾವಾಗಲೂ ಸವಾಲಿನಿಂದ ಕೂಡಿರುತ್ತದೆ ಎಂದು ಸೈಕ್ಲಿಸ್ಟ್‌ಗಳು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ: ಬೆಂಗಳೂರು ಮಹಾನಗರ ಪಾಲಿಕೆಯಿಂದ ಕೆರೆ ಒತ್ತುವರಿ ತೆರವು: ಮನೆಗಳು ನೆಲಸಮ

ಲಾಕ್‌ಡೌನ್ ಜಾರಿಯಿರುವ ಕಾರಣ ಕೆಲವು ರಾಜ್ಯಗಳಲ್ಲಿ ಹಗಲು ಪ್ರಯಾಣ ಸಾಧ್ಯವಿರಲಿಲ್ಲ. ರಾತ್ರಿ ವೇಳೆ ಪೊಲೀಸರ ಕಣ್ಣು ತಪ್ಪಿಸಿ ಪ್ರಯಾಣಿಸಬೇಕಿತ್ತು. ಅರ್ಧ ದಾರಿಯಲ್ಲಿ ಪ್ರಯಾಣವನ್ನು ಕೈಬಿಡುವುದು ಸಾಧ್ಯವಿಲ್ಲ. ದಾಖಲೆಗಳನ್ನು ಸೃಷ್ಟಿಸುವ ಉದ್ಧೇಶಕ್ಕಿಂತ ನಮ್ಮ ಜೊತೆಗಾರರ ಉತ್ಸಾಹಕ್ಕೆ ತಣ್ಣೀರು ಎರಚಬಾರದೆಂಬುದು ನನ್ನ ಇಷ್ಟು ವರ್ಷದ ಪ್ರಯಾಣದಲ್ಲಿ ಕಂಡುಕೊಂಡಿದ್ದೇನೆ ಎಂದು ದಿಂಕರ್ ಪಾಟೀಲ್ ಹೇಳಿದ್ದಾರೆ.

ನಮ್ಮದು ಮಾಮೂಲು ಸೈಕಲ್‌ ಅಲ್ಲ. ಇದು ಟೆಂಡಾಮ್ ಸೈಕಲ್. ಇಬ್ಬರು ಸವಾರರು ಒಂದೇ ಸೈಕಲ್‌ನಲ್ಲಿ ಕುಳಿತು ಒಂದೇ ಸಮಯದಲ್ಲಿ ಪೆಡೆಲ್‌ ತುಳಿಯಬೇಕು. ಇಬ್ಬರ ವೇಗ ಹೊಂದಾಣಿಕೆಯನ್ನು ಮಾಡಬೇಕು. ಪ್ರಯಾಣವನ್ನು ನಿಲ್ಲಿಸುವುದಾದರೆ ಸೈಕಲ್‌ ಅನ್ನು ಮರಳಿ ತೆಗೆದುಕೊಂಡು ಹೋಗಲು ದೊಡ್ಡ ವಾಹನ ಬೇಕು. ಹೀಗೆ ಸಮಸ್ಯೆಗಳು ಹಲವಾರು ಇವೆ. ನಮ್ಮ ಪ್ರಯಾಣದ ಅರ್ಧದೂರವಿನ್ನು ಬಾಕಿಯಿದೆ. ಉತ್ತರ ಪ್ರದೇಶ, ಬಂಗಾಳ, ಕೊಲ್ಕತ್ತ, ವಾರಣಾಸಿಗಳ ಬಗ್ಗೆ ಕುತೂಹಲವಿದೆ. ಕುತೂಹಲವೊಂದೇ ದಿನದ ಕೊನೆಯಲ್ಲಿ ದಣಿದ  ನಮ್ಮನ್ನು ಮಾರನೇಯ ದಿನ ಇನ್ನೊಂದಿಷ್ಟು ದೂರ ಕೊಂಡೊಯ್ಯಬಲ್ಲದೆಂದು ಮೀರಾ ಮಾರ್ಮಿಕವಾಗಿ ತಮ್ಮ ಪ್ರಯಾಣದ ಹಿಂದಿನ ಸ್ಪೂರ್ತಿಯನ್ನು ತೆರೆದಿಡುತ್ತಾರೆ.

– ರಾಜೇಶ್ ಹೆಬ್ಬಾರ್ 


ಇದನ್ನೂ ಓದಿ; ಎಲ್‌ಎಸ್‌ಇಯಿಂದ ಅಂಬೇಡ್ಕರ್‌ ಅವರ ಅಪರೂಪದ ದಾಖಲೆಗಳ ಆನ್ಲೈನ್ ವಸ್ತು ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...