Homeಮುಖಪುಟಭಾರತದುದ್ದಕ್ಕೂ 6000 ಕಿ.ಮೀ ಸೈಕಲ್ ಸವಾರಿ: ಸೈಕ್ಲಿಸ್ಟ್‌ಗಳಿಬ್ಬರ ಸಾಹಸಗಾಥೆ

ಭಾರತದುದ್ದಕ್ಕೂ 6000 ಕಿ.ಮೀ ಸೈಕಲ್ ಸವಾರಿ: ಸೈಕ್ಲಿಸ್ಟ್‌ಗಳಿಬ್ಬರ ಸಾಹಸಗಾಥೆ

- Advertisement -
- Advertisement -

ಲಾಕ್‌ಡೌನ್ ಭಾರತದಲ್ಲಿ ವಿಚಿತ್ರ ಸನ್ನಿವೇಶವನ್ನು ಸೃಷ್ಟಿಸಿದೆ. ಜನರ ಜೀವನ ಶೈಲಿಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಯೋಗ, ನಡಿಗೆ, ವ್ಯಾಯಾಮ, ಸೈಕ್ಲಿಂಗ್ ಹೀಗೆ ಜನರು ದೇಹ ಮನಸ್ಸಿನ ಆರೋಗ್ಯದ ಕಡೆ ಹೆಚ್ಚು ಹೆಚ್ಚು ಗಮನ ಕೊಡುತ್ತಿದ್ದಾರೆ. ಬೆಂಗಳೂರಿನಿಂದ ಇಬ್ಬರು ಸೈಕ್ಲಿಸ್ಟ್‌ಗಳು ಭಾರತ ಯಾತ್ರೆಯನ್ನು ಹೊರಟಿದ್ದಾರೆ. ಅದೂ ಸೈಕಲ್‌ನಲ್ಲಿ. ಆರಂಭದ ಉತ್ಸಾಹ, ದಾರಿ ಮಧ್ಯೆ ದಣಿಯುತ್ತಾರೆ ಎಂದುಕೊಳ್ಳುವವರೇ ಹೆಚ್ಚು. ಆದರೆ ಈ ಇಬ್ಬರು ಸೈಕ್ಲಿಸ್ಟ್‌ಗಳು ಈಗಾಗಲೇ ಸೈಕಲ್ ಸವಾರಿಯ ಮೂಲಕ ದೆಹಲಿ ತಲುಪಿದ್ದಾರೆ. ಸರಿ ಸುಮಾರು 3000 ಕಿಲೋ ಮೀಟರ್‌ ದೂರವನ್ನು ಬಿಸಿಲು, ಮಳೆ, ನಿರ್ಬಂಧಗಳ ನಡುವಿನಲ್ಲಿ ಕ್ರಮಿಸಿದ್ದಾರೆ.

ಇವರದು ಸಾಮಾನ್ಯ ಸೈಕಲ್‌ ಅಲ್ಲ. ಉದ್ದವಾದ ಇಬ್ಬರು ವ್ಯಕ್ತಿಗಳು ಒಟ್ಟಿಗೆ ಪೆಡೆಲ್‌ ತುಳಿಯುವ ಎರಡು ಸೀಟ್‌ಗಳ ಟೆಂಡೆಮ್‌ ಸೈಕಲ್. ಒಬ್ಬರಿಗೊಬ್ಬರ ಹೊಂದಾಣಿಕೆ, ವೇಗ, ಲಯ ಮತ್ತು ಸಹಕಾರ ಮಾತ್ರ ಈ ಬಗೆಯ ಸೈಕಲ್‌ ಪ್ರಯಾಣದ ಯಶಸ್ಸನ್ನು ನಿರ್ಧರಿಸುತ್ತದೆ. ಇದುವರೆಗೆ ಟೆಂಡೆಮ್‌ ಸೈಕಲ್‌ನಲ್ಲಿ ಭಾರತದಲ್ಲಿ ಇಷ್ಟು ದೂರ ಯಾರೂ ಕ್ರಮಿಸಿಲ್ಲ. 6000 ಕಿ.ಮೀ ಪ್ರಯಾಣದ ಮೂಲಕ ಈ ಸೈಕ್ಲಿಸ್ಟ್‌ಗಳು ಹೊಸ ದಾಖಲೆಗೆ ಸದ್ಯದಲ್ಲಿಯೇ ಸಾಕ್ಷಿಯಾಗಲಿದ್ದಾರೆ.

44 ವರ್ಷದ ಮೀರಾ ವೇಲಂಕರ್ ಮತ್ತು 48 ವರ್ಷದ ದಿಂಕರ್ ಪಾಟಿಲ್ ಜೂನ್‌ 19 ರಂದು ಬೆಂಗಳೂರಿನಿಂದ ಸೈಕಲ್‌ನಲ್ಲಿ ಹೊರಟು 14 ದಿನಗಳ ನಂತರ ಇಂದು ದೆಹಲಿ ತಲುಪಿದ್ದಾರೆ. 6000 ಕಿಲೋಮೀಟರ್ ದೂರದ ಗೋಲ್ಡ್‌ನ್‌ ಕ್ವಾಡ್ರಿಲಾಟರಲ್ ರಸ್ತೆಯನ್ನು ಸಂಪೂರ್ಣವಾಗಿ ಸೈಕಲ್‌ನಲ್ಲಿಯೇ ಕ್ರಮಿಸುವ ಉದ್ಧೇಶ ಹೊಂದಿರುವ ಸೈಕ್ಲಿಸ್ಟ್‌ಗಳು ಸದ್ಯ ಅರ್ಧ ದೂರವನ್ನು ಕ್ರಮಿಸಿದ್ದಾರೆ.

ಇದನ್ನೂ ಓದಿ: ವಿಚ್ಛೇದನದ ನಂತರ ಅಮಿರ್ ಖಾನ್-ಕಿರಣ್ ರಾವ್ ಭಾವನಾತ್ಮಕ ವಿಡಿಯೋ ಸಂದೇಶ

12 ರಾಜ್ಯಗಳ ಮೂಲಕ  ಹಾದುಹೋಗುವ ಈ ಜರ್ನಿ ಬೆಂಗಳೂರು, ಪುಣೆ, ಮುಂಬೈ, ಅಹ್ಮದಾಬಾದ್‌, ಜೈಪುರ್, ದೆಹಲಿ, ಲಕ್ನೊ, ಕಲ್ಕತ್ತಾ, ಭುವನೇಶ್ವರ, ವಿಶಾಖಪಟ್ಟಣಂ ಚೆನ್ನೈ ನಗರಗಳ ಮೂಲಕ ಸಾಗಲಿದೆ.

ಅಹ್ಮದಾಬಾದ್‌ನಲ್ಲಿ ಮೀರಾ ಮತ್ತು ದಿಂಕರ್ ತಮ್ಮ ಟೆಂಡಮ್‌ ಸೈಕಲ್‌ನೊಂದಿಗೆ (ಚಿತ್ರ ಕೃಪೆ: Times of India)

ನನಗೆ ಸವಾಲುಗಳೆಂದರೆ ಇಷ್ಟ. ಕಳೆದ ಅಕ್ಟೋಬರ್‌ನಲ್ಲಿ ನಾನು ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಸೈಕಲ್‌ನಲ್ಲಿ ತೆರಳಿದ್ದೆ. ಭಾರತದ ಪೂರ್ವ ಪಶ್ಚಿಮ ತೀರಗಳನ್ನು ಬೆಸೆಯುವ ಗೋಲ್ಡನ್‌ ಕ್ವಾಡ್ರಿಲಾಟರಲ್‌ ಅನ್ನು ಸೈಕಲ್‌ ಮೂಲಕ ಕ್ರಮಿಸುವ ಆಸೆಯಿತ್ತು. ಈ ಪ್ರಯತ್ನದಲ್ಲಿ ನಾಸಿಕ್‌ ನ ದಿಂಕರ್ ಪರಿಚಯವಾಯಿತು. ಈ ಪ್ರಯಾಣದಲ್ಲಿ ನಾವಿಬ್ಬದು ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದೇವೆ. ಮಹಾರಾಷ್ಟ್ರ, ಗುಜರಾತ್‌ನಲ್ಲಿ ಭಾರಿ ಮಳೆಯಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ. ಆದರೂ ನಮ್ಮ ಪ್ರಯತ್ನ ಬಿಡಲಿಲ್ಲ. ಇಂದು ಸೈಕಲ್‌ ಮೂಲಕ ರಾಷ್ಟ್ರ ರಾಜಧಾನಿಯನ್ನು ತಲುಪಿದ್ದೇವೆ ಎಂದು ಮೀರಾ ವೇಲಂಕರ್‌ ತಮ್ಮ ಭಾರತ ಪ್ರಯಾಣದ ಅನುಭವವನ್ನು ಹಂಚಿಕೊಳ್ಳುತ್ತಾರೆ.

ಮೀರಾ ಅವರು ಜೀವ ವಿಜ್ಞಾನದಲ್ಲಿ ಪಿಹೆಚ್‌ಡಿ ಪದವಿಯನ್ನು ಪಡೆದಿದ್ದು ಇಬ್ಬರು ಮಕ್ಕಳ ತಾಯಿಯಾಗಿದ್ದಾರೆ.

ನಾಸಿಕ್‌ನ ಹಿಂದುಸ್ತಾನ್‌ ಎರೋನಾಟಿಕಲ್ ಲಿಮಿಟ್ಸ್‌ನ ಭದ್ರತಾ ಮುಖ್ಯಸ್ಥರಾಗಿರುವ ದಿಂಕರ್ ಪಾಟೀಲ್, “ಸೈನಿಕನಾಗಿ ಯಾವಾಗಲೂ ನಾನು ಸಾಹಸಗಳಿಗೆ ಸಿದ್ಧವಿದ್ದೆ. ಮೀರಾ ಅವರು ಸೈಕ್ಲಿಂಗ್ ಯೋಜನೆಯನ್ನು ಮುಂದಿಟ್ಟರು. ಆರಂಭದಲ್ಲಿ ನನಗೆ ವಿಶ್ವಾಸವಿರಲಿಲ್ಲ. ಜೂನ್‌ 19 ರಂದು ಬೆಂಗಳೂರಿನಿಂದ ಹೊರಟ ನಮ್ಮ ಪ್ರಯಾಣ ಇಂದು ದೆಹಲಿಗೆ ತಲುಪಿದೆ” ಎಂದಿದ್ದಾರೆ.

ಬೆಂಗಳೂರಿನಿಂದ ಮುಂಬೈವರೆಗಿನ ಮಾರ್ಗ ಬೆಟ್ಟ ಗುಡ್ಡಗಳಿಂದ ಕೂಡಿದ ಪಶ್ಚಿಮಘಟ್ಟದ ಮೂಲಕ ಹಾದುಹೋಗುತ್ತದೆ. ಮುಂಗಾರಿನ ವೇಳೆ ಪಶ್ಚಿಮ ಘಟ್ಟದ ಪ್ರಯಾಣ ಅತ್ಯಂತ ಕಠಿಣವಾಗಿರುತ್ತದೆ. ನಾವು ನಿತ್ಯ 150-200 ಕಿಲೊ ಮೀಟರ್‌ ದೂರವನ್ನು ಕ್ರಮಿಸುತ್ತಿದ್ದೆವು. ಮಹಾರಾಷ್ಟ್ರದ ಬಹುಪಾಲು ಪ್ರದೇಶದಲ್ಲಿ ಮಳೆಯಿಂದ ರಸ್ತೆಗಳಲ್ಲಿ ಸೈಕಲ್ ಓಡಿಸುವುದು ಸುಲಭವಿರಲಿಲ್ಲ. ಗುಜರಾತ್, ರಾಜಸ್ಥಾನಗಳಲ್ಲಿ ಇನ್ನೊಂದು ರೀತಿಯ ಸವಾಲು. ಮರಭೂಮಿಯ ಪ್ರದೇಶಗಳಲ್ಲಿ ವಿಪರೀತ ಸೆಕೆ. ಕ್ರಮಿಸುವ ದೂರ ಮತ್ತು ವೇಗದಲ್ಲಿ ಸ್ಥಿರತೆಯನ್ನು ಕಾಯ್ದುಕೊಳ್ಳುವುದು ದೀರ್ಘ ಪ್ರಯಾಣದಲ್ಲಿ ಯಾವಾಗಲೂ ಸವಾಲಿನಿಂದ ಕೂಡಿರುತ್ತದೆ ಎಂದು ಸೈಕ್ಲಿಸ್ಟ್‌ಗಳು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ: ಬೆಂಗಳೂರು ಮಹಾನಗರ ಪಾಲಿಕೆಯಿಂದ ಕೆರೆ ಒತ್ತುವರಿ ತೆರವು: ಮನೆಗಳು ನೆಲಸಮ

ಲಾಕ್‌ಡೌನ್ ಜಾರಿಯಿರುವ ಕಾರಣ ಕೆಲವು ರಾಜ್ಯಗಳಲ್ಲಿ ಹಗಲು ಪ್ರಯಾಣ ಸಾಧ್ಯವಿರಲಿಲ್ಲ. ರಾತ್ರಿ ವೇಳೆ ಪೊಲೀಸರ ಕಣ್ಣು ತಪ್ಪಿಸಿ ಪ್ರಯಾಣಿಸಬೇಕಿತ್ತು. ಅರ್ಧ ದಾರಿಯಲ್ಲಿ ಪ್ರಯಾಣವನ್ನು ಕೈಬಿಡುವುದು ಸಾಧ್ಯವಿಲ್ಲ. ದಾಖಲೆಗಳನ್ನು ಸೃಷ್ಟಿಸುವ ಉದ್ಧೇಶಕ್ಕಿಂತ ನಮ್ಮ ಜೊತೆಗಾರರ ಉತ್ಸಾಹಕ್ಕೆ ತಣ್ಣೀರು ಎರಚಬಾರದೆಂಬುದು ನನ್ನ ಇಷ್ಟು ವರ್ಷದ ಪ್ರಯಾಣದಲ್ಲಿ ಕಂಡುಕೊಂಡಿದ್ದೇನೆ ಎಂದು ದಿಂಕರ್ ಪಾಟೀಲ್ ಹೇಳಿದ್ದಾರೆ.

ನಮ್ಮದು ಮಾಮೂಲು ಸೈಕಲ್‌ ಅಲ್ಲ. ಇದು ಟೆಂಡಾಮ್ ಸೈಕಲ್. ಇಬ್ಬರು ಸವಾರರು ಒಂದೇ ಸೈಕಲ್‌ನಲ್ಲಿ ಕುಳಿತು ಒಂದೇ ಸಮಯದಲ್ಲಿ ಪೆಡೆಲ್‌ ತುಳಿಯಬೇಕು. ಇಬ್ಬರ ವೇಗ ಹೊಂದಾಣಿಕೆಯನ್ನು ಮಾಡಬೇಕು. ಪ್ರಯಾಣವನ್ನು ನಿಲ್ಲಿಸುವುದಾದರೆ ಸೈಕಲ್‌ ಅನ್ನು ಮರಳಿ ತೆಗೆದುಕೊಂಡು ಹೋಗಲು ದೊಡ್ಡ ವಾಹನ ಬೇಕು. ಹೀಗೆ ಸಮಸ್ಯೆಗಳು ಹಲವಾರು ಇವೆ. ನಮ್ಮ ಪ್ರಯಾಣದ ಅರ್ಧದೂರವಿನ್ನು ಬಾಕಿಯಿದೆ. ಉತ್ತರ ಪ್ರದೇಶ, ಬಂಗಾಳ, ಕೊಲ್ಕತ್ತ, ವಾರಣಾಸಿಗಳ ಬಗ್ಗೆ ಕುತೂಹಲವಿದೆ. ಕುತೂಹಲವೊಂದೇ ದಿನದ ಕೊನೆಯಲ್ಲಿ ದಣಿದ  ನಮ್ಮನ್ನು ಮಾರನೇಯ ದಿನ ಇನ್ನೊಂದಿಷ್ಟು ದೂರ ಕೊಂಡೊಯ್ಯಬಲ್ಲದೆಂದು ಮೀರಾ ಮಾರ್ಮಿಕವಾಗಿ ತಮ್ಮ ಪ್ರಯಾಣದ ಹಿಂದಿನ ಸ್ಪೂರ್ತಿಯನ್ನು ತೆರೆದಿಡುತ್ತಾರೆ.

– ರಾಜೇಶ್ ಹೆಬ್ಬಾರ್ 


ಇದನ್ನೂ ಓದಿ; ಎಲ್‌ಎಸ್‌ಇಯಿಂದ ಅಂಬೇಡ್ಕರ್‌ ಅವರ ಅಪರೂಪದ ದಾಖಲೆಗಳ ಆನ್ಲೈನ್ ವಸ್ತು ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...