Homeಕರ್ನಾಟಕರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! - ವರದಿ

ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! – ವರದಿ

- Advertisement -
- Advertisement -

ರಾಜ್ಯದಲ್ಲಿರುವ ಸುಮಾರು 6,158 ಸರ್ಕಾರಿ ಶಾಲೆಗಳು ತಲಾ ಒಬ್ಬ ಶಿಕ್ಷಕರನ್ನು ಹೊಂದಿದೆ ಎಂದು TNIE ಪತ್ರಿಕೆ ವರದಿ ಮಾಡಿದೆ. ಈ 6,158 ಶಿಕ್ಷಕರು ತಮ್ಮ ಶಾಲೆಯ 1.38 ಲಕ್ಷ ವಿದ್ಯಾರ್ಥಿಗಳಿಗೆ ಜವಾಬ್ದಾರರಾಗಿದ್ದಾರೆ ಎಂದು ಅದು ಹೇಳಿದೆ. ವಿಪರ್ಯಾಸವೇನೆಂದರೆ, ರಾಜ್ಯದ 530 ಶಾಲೆಗಳಲ್ಲಿ ಶೂನ್ಯ ದಾಖಲಾತಿಯಿದ್ದು, ಅಲ್ಲಿ 358 ಶಿಕ್ಷಕರಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ರಾಜ್ಯದ 6,158

ವರದಿಯು ರಾಜ್ಯದ ಸರ್ಕಾರಿ ಶಾಲೆಗಳ ವ್ಯವಸ್ಥೆಯಲ್ಲಿನ ಗಂಭೀರ ಲೋಪವನ್ನು ಎತ್ತಿತೋರಿಸಿದ್ದು, ಕೆಲವು ಶಾಲೆಗಳು ಕೆಲವೇ ಶಿಕ್ಷಕರನ್ನು ಹೊಂದಿದ್ದರೆ (ಹಲವು ಸಂದರ್ಭಗಳಲ್ಲಿ ಒಬ್ಬರು), ಇತರ ಶೂನ್ಯ ದಾಖಲಾತಿ ಹೊಂದಿರುವ ಶಾಲೆಗಳು ಹೆಚ್ಚುವರಿ ಸಿಬ್ಬಂದಿಯನ್ನು ಹೊಂದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. ಅದಾಗ್ಯೂ, ಶೂನ್ಯ ದಾಖಲಾತಿ ಶಾಲೆಗಳ ಶಿಕ್ಷಕರನ್ನು ಅಗತ್ಯವಿರುವೆಡೆಗೆ ವರ್ಗಾಯಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023-24 ರಲ್ಲಿ ಏಕ ಶಿಕ್ಷಕರು ಇದ್ದ 6,360 ಶಾಲೆಗಳು ಇದ್ದು, 2024-25 ರಲ್ಲಿ ಇದರ ಸಂಖ್ಯೆ 6,158ಕ್ಕೆ ಇಳಿಕೆಯಾಗಿದೆ. ಅಂದರೆ ಒಂದು ವರ್ಷದಲ್ಲಿ 202 ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ದಾಖಲಾತಿಯು 33,794 ರಷ್ಟು ಕಡಿಮೆಯಾಗಿದೆ ಎಂದು ವರದಿ ಉಲ್ಲೇಖಿಸಿದ್ದು, ಮಕ್ಕಳು ಶಾಲೆ ತೊರೆದ ಕಾರಣಕ್ಕೆ ದಾಖಲಾತಿ ಕಡಿಮೆಯಾಗಿದೆ ಎಂದು ತಜ್ಞರು ಹೇಳಿದ್ದಾಗಿ ಪತ್ರಿಕೆ ವರದಿ ಮಾಡಿದೆ.

ವಿಷಯ ಶಿಕ್ಷಕರ ಕೊರತೆಯ ಕಾರಣಕ್ಕೆ ವಿದ್ಯಾರ್ಥಿಗಳು ಶಾಲೆ ತೊರೆಯುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಅನೇಕ ಸಂದರ್ಭಗಳಲ್ಲಿ ಶಿಕ್ಷಕರನ್ನು ಕನ್ನಡ ಅಥವಾ ಸಮಾಜಶಾಸ್ತ್ರವನ್ನು ಕಲಿಸಲು ಮಾತ್ರ ನಿಯೋಜಿಸಲಾಗುತ್ತಿದ್ದು, ಗಣಿತ ಮತ್ತು ವಿಜ್ಞಾನ ಅಥವಾ ಇಂಗ್ಲಿಷ್‌ನಂತಹ ಪ್ರಮುಖ ವಿಷಯಗಳಿಗೆ ಶಿಕ್ಷಕರ ನಿಯೋಜನೆ ಆಗುತ್ತಿಲ್ಲ ಎಂದು ವರದಿ ಹೇಳಿದೆ.

ಅದೇ ರೀತಿ, “100% ಉತ್ತೀರ್ಣ ದರವನ್ನು” ಕಾಪಾಡಿಕೊಳ್ಳಲು, ಶಾಲೆಗಳು ಸಾಮಾನ್ಯವಾಗಿ “ಶೈಕ್ಷಣಿಕವಾಗಿ ದುರ್ಬಲ ಆಗಿರುವ ವಿದ್ಯಾರ್ಥಿಗಳನ್ನು ಹೊರಗೆ ತಳ್ಳುತ್ತಿವೆ” ಎಂದು ತಜ್ಞರ ಹೇಳಿಕೆಯನ್ನು ವರದಿಯು ಹೇಳಿದೆ.

ಮಕ್ಕಳ ಹಕ್ಕುಗಳ ಕಾರ್ಯಕರ್ತ ಮತ್ತು ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ವಾಸುದೇವ್ ಶರ್ಮಾ ಮಾತನಾಡಿ, “ಶಾಲೆಗಳಲ್ಲಿ ಶಿಕ್ಷಕರು ಕನ್ನಡ ಅಥವಾ ಸಮಾಜಶಾಸ್ತ್ರವನ್ನು ಮಾತ್ರ ಕಲಿಸುತ್ತಾರೆ. ಆದರೆ, ತಮ್ಮ ಮಕ್ಕಳು ಗಣಿತ ಮತ್ತು ವಿಜ್ಞಾನವನ್ನು ಕಲಿಸುವ ಶಾಲೆಗಳಿಗೆ ತೆರಳಬೇಕು ಎಂದು ಪೊಷಕರು ಬಯಸುತ್ತಾರೆ. ಅದಕ್ಕಾಗಿ ಅನೇಕರು ಅನುದಾನಿತ ಅಥವಾ ಖಾಸಗಿ ಶಾಲೆಗಳತ್ತ ಒಲವು ತೋರುತ್ತಿದ್ದಾರೆ” ಎಂದು ಹೇಳಿದ್ದಾರೆ ಎಂದು ವರದಿ ಹೇಳಿದೆ.

“ಇದಲ್ಲದೆ, ಒಬ್ಬ ವಿದ್ಯಾರ್ಥಿಯು ಉನ್ನತ ಪ್ರಾಥಮಿಕ ಹಂತವನ್ನು ತಲುಪುವ ಹೊತ್ತಿಗೆ, ಶಾಲೆಗಳು ಉದ್ದೇಶಪೂರ್ವಕವಾಗಿ 10 ನೇ ತರಗತಿಯಲ್ಲಿ ‘100% ಉತ್ತೀರ್ಣ ದರ’ ಕಾಯ್ದುಕೊಳ್ಳಲು ಶೈಕ್ಷಣಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿಯನ್ನು ಹೊರಹಾಕುತ್ತವೆ. ಆದರೆ, ಇದು ನಿಜವಾದ ಶಿಕ್ಷಣದ ಗುಣಮಟ್ಟವನ್ನು ಪ್ರತಿಬಿಂಬಿಸುವುದಿಲ್ಲ, ಬದಲಾಗಿ ವ್ಯವಸ್ಥೆಯ ವೈಫಲ್ಯವನ್ನು ಮರೆಮಾಡುತ್ತದೆ” ಎಂದು ಹೇಳಿದ್ದಾರೆ.

7 ಮತ್ತು 8 ನೇ ತರಗತಿ ಮತ್ತು 10 ನೇ ತರಗತಿಯ ನಡುವೆ ಡ್ರಾಪ್ಔಟ್ ದರಗಳು ಏಕೆ ಹೆಚ್ಚಾಗುತ್ತವೆ ಎಂಬ ಬಗ್ಗೆ ಯಾರೂ ಪ್ರಶ್ನಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ರಾಜ್ಯದ 6,158

“ಈ ಮಕ್ಕಳು ಎಲ್ಲಿಗೆ ಹೋಗುತ್ತಾರೆ? ಅವರು ಬೇರೆ ಶಾಲೆಗಳಿಗೆ ಸೇರುತ್ತಿದ್ದಾರೆಯೆ ಅಥವಾ ಇಲ್ಲವೇ ಎಂಬ ಬಗ್ಗೆ ಯಾವುದೇ ದಾಖಲೆಗಳಿಲ್ಲ. ಬಾಲಕಾರ್ಮಿಕರು ಇಲ್ಲ ಎಂದು ಸರ್ಕಾರ ಹೇಳಿಕೊಂಡರೂ. ಈ ಮಕ್ಕಳಲ್ಲಿ ಕೆಲವರು ಬಲವಂತವಾಗಿ ದುಡಿಮೆಗೆ ತಳ್ಳಲ್ಪಡುತ್ತಿದ್ದಾರೆ. ಇನ್ನು ಕೆಲವರು ಬಾಲ್ಯವಿವಾಹಕ್ಕೆ ಬಲಿಯಾಗುತ್ತಿದ್ದಾರೆ. ಆದಾಗ್ಯೂ, ಸಂಬಂಧಿಸಿದ ಇಲಾಖೆಗಳು ಯಾವುದೇ ಬಾಲ್ಯವಿವಾಹ ನಡೆಯದಂತೆ ನೋಡಿಕೊಳ್ಳುತ್ತಿದೆ” ಎಂದು ಶರ್ಮಾ ಹೇಳಿದ್ದಾರೆ.

ಇಷ್ಟೆ ಅಲ್ಲದೆ, ಶಿಕ್ಷಕರು ಹೆಚ್ಚಾಗಿ ನಗರಗಳು ಅಥವಾ ಪಟ್ಟಣಗಳ ಶಾಲೆಗಳಿಗೆ ವರ್ಗಾಯಿಸಲು ಪ್ರಭಾವ ಬಳಸುತ್ತಾರೆ. ಅನೇಕ ಸಂದರ್ಭಗಳಲ್ಲಿ, ಶಿಕ್ಷಕರೂ ಕೂಡಾ ದೂರದ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕೆಲಸಕ್ಕೆ ತೆರಳದ ಕಾರಣ ವಿದ್ಯಾರ್ಥಿಗಳು ಶಿಕ್ಷಕರಿಲ್ಲದೆ ಕಲಿಕೆಯಿಂದ ವಂಚಿತರಾಗುತ್ತಾರೆ. ಇದರಲ್ಲಿ ಶಿಕ್ಷಕರಿಗೂ ಅನ್ಯಾಯವಾಗುತ್ತದೆ. ಏಕೆಂದರೆ ಅವರಿಗೆ ವಸತಿ ಒದಗಿಸದಿದ್ದರೆ, ಅವರು ಪ್ರತಿದಿನ 50 ಕಿಮೀ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ತಜ್ಞರು ಹೇಳುತ್ತಾರೆ.

ಅಭಿವೃದ್ಧಿ ಶಿಕ್ಷಣತಜ್ಞ ಪ್ರಾಧ್ಯಾಪಕ ನಿರಂಜನಾರಾಧ್ಯ ವಿಪಿ ಮಾತನಾಡಿ, “ಇಡೀ ಶಾಲೆ ಒಬ್ಬ ಶಿಕ್ಷಕರನ್ನು ಹೊಂದಿರುವುದು ಶಿಕ್ಷಣ ಹಕ್ಕು ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಕಾಯ್ದೆಯ ಪ್ರಕಾರ, ಲೋವರ್ ಪ್ರೈಮರಿ ಸ್ಕೂಲ್ (ಎಲ್‌ಪಿಎ) ಕನಿಷ್ಠ ಇಬ್ಬರು ಶಿಕ್ಷಕರನ್ನು ಹೊಂದಿರಬೇಕು ಹಾಗೂ ಹೈಯರ್ ಪ್ರೈಮರಿ ಸ್ಕೂಲ್ (ಎಚ್‌ಪಿಎ) ಕನಿಷ್ಠ ಮೂವರು ಶಿಕ್ಷಕರನ್ನು ಹೊಂದಿರಬೇಕು” ಅವರು ಹೇಳಿದ್ದಾರೆ. ಒಂದು ಶಾಲೆಗೆ ಒಬ್ಬ ಶಿಕ್ಷಕ ಇದ್ದರೆ ಅಂತಹ ಶಾಲೆಗೆ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ದಾಖಲಿಸುವುದಿಲ್ಲ ಎಂದು ಅವರು ಹೇಳುತ್ತಾರೆ.

“ಕೇವಲ ಕಲಿಕೆಯ ಮಾಧ್ಯಮವಾಗಿ ಅಲ್ಲ, ಕನಿಷ್ಠ ಭಾಷೆಯಾಗಿ ಆದರೂ ತಮ್ಮ ಮಕ್ಕಳು ಇಂಗ್ಲಿಷ್ ಕಲಿಯಬೇಕೆಂದು ಹೆಚ್ಚಿನ ಪೋಷಕರು ಬಯಸುತ್ತಾರೆ. ಆದರೆ, ಒಬ್ಬ ಶಿಕ್ಷಕ ಈ ಎಲ್ಲಾ ವಿಷಯಗಳು, ತರಗತಿಗಳು ಮತ್ತು ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ರಾಜ್ಯಾದ್ಯಂತ ಸುಮಾರು 5,000 ಶಿಕ್ಷಕರ ನೇಮಕಾತಿಗೆ ಇಲಾಖೆ ಚಾಲನೆ ನೀಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಕೆ.ವಿ. ತ್ರಿಲೋಕಚಂದ್ರ ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ. ವಿಶೇಷವಾಗಿ ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಗುರಿಯನ್ನು ಇದು ಹೊಂದಿದ್ದು, ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೂ ನೇಮಕಾತಿ ಅಭಿಯಾನವನ್ನು ವಿಸ್ತರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...