Homeಕರ್ನಾಟಕರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! - ವರದಿ

ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! – ವರದಿ

- Advertisement -
- Advertisement -

ರಾಜ್ಯದಲ್ಲಿರುವ ಸುಮಾರು 6,158 ಸರ್ಕಾರಿ ಶಾಲೆಗಳು ತಲಾ ಒಬ್ಬ ಶಿಕ್ಷಕರನ್ನು ಹೊಂದಿದೆ ಎಂದು TNIE ಪತ್ರಿಕೆ ವರದಿ ಮಾಡಿದೆ. ಈ 6,158 ಶಿಕ್ಷಕರು ತಮ್ಮ ಶಾಲೆಯ 1.38 ಲಕ್ಷ ವಿದ್ಯಾರ್ಥಿಗಳಿಗೆ ಜವಾಬ್ದಾರರಾಗಿದ್ದಾರೆ ಎಂದು ಅದು ಹೇಳಿದೆ. ವಿಪರ್ಯಾಸವೇನೆಂದರೆ, ರಾಜ್ಯದ 530 ಶಾಲೆಗಳಲ್ಲಿ ಶೂನ್ಯ ದಾಖಲಾತಿಯಿದ್ದು, ಅಲ್ಲಿ 358 ಶಿಕ್ಷಕರಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ರಾಜ್ಯದ 6,158

ವರದಿಯು ರಾಜ್ಯದ ಸರ್ಕಾರಿ ಶಾಲೆಗಳ ವ್ಯವಸ್ಥೆಯಲ್ಲಿನ ಗಂಭೀರ ಲೋಪವನ್ನು ಎತ್ತಿತೋರಿಸಿದ್ದು, ಕೆಲವು ಶಾಲೆಗಳು ಕೆಲವೇ ಶಿಕ್ಷಕರನ್ನು ಹೊಂದಿದ್ದರೆ (ಹಲವು ಸಂದರ್ಭಗಳಲ್ಲಿ ಒಬ್ಬರು), ಇತರ ಶೂನ್ಯ ದಾಖಲಾತಿ ಹೊಂದಿರುವ ಶಾಲೆಗಳು ಹೆಚ್ಚುವರಿ ಸಿಬ್ಬಂದಿಯನ್ನು ಹೊಂದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. ಅದಾಗ್ಯೂ, ಶೂನ್ಯ ದಾಖಲಾತಿ ಶಾಲೆಗಳ ಶಿಕ್ಷಕರನ್ನು ಅಗತ್ಯವಿರುವೆಡೆಗೆ ವರ್ಗಾಯಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023-24 ರಲ್ಲಿ ಏಕ ಶಿಕ್ಷಕರು ಇದ್ದ 6,360 ಶಾಲೆಗಳು ಇದ್ದು, 2024-25 ರಲ್ಲಿ ಇದರ ಸಂಖ್ಯೆ 6,158ಕ್ಕೆ ಇಳಿಕೆಯಾಗಿದೆ. ಅಂದರೆ ಒಂದು ವರ್ಷದಲ್ಲಿ 202 ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ದಾಖಲಾತಿಯು 33,794 ರಷ್ಟು ಕಡಿಮೆಯಾಗಿದೆ ಎಂದು ವರದಿ ಉಲ್ಲೇಖಿಸಿದ್ದು, ಮಕ್ಕಳು ಶಾಲೆ ತೊರೆದ ಕಾರಣಕ್ಕೆ ದಾಖಲಾತಿ ಕಡಿಮೆಯಾಗಿದೆ ಎಂದು ತಜ್ಞರು ಹೇಳಿದ್ದಾಗಿ ಪತ್ರಿಕೆ ವರದಿ ಮಾಡಿದೆ.

ವಿಷಯ ಶಿಕ್ಷಕರ ಕೊರತೆಯ ಕಾರಣಕ್ಕೆ ವಿದ್ಯಾರ್ಥಿಗಳು ಶಾಲೆ ತೊರೆಯುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಅನೇಕ ಸಂದರ್ಭಗಳಲ್ಲಿ ಶಿಕ್ಷಕರನ್ನು ಕನ್ನಡ ಅಥವಾ ಸಮಾಜಶಾಸ್ತ್ರವನ್ನು ಕಲಿಸಲು ಮಾತ್ರ ನಿಯೋಜಿಸಲಾಗುತ್ತಿದ್ದು, ಗಣಿತ ಮತ್ತು ವಿಜ್ಞಾನ ಅಥವಾ ಇಂಗ್ಲಿಷ್‌ನಂತಹ ಪ್ರಮುಖ ವಿಷಯಗಳಿಗೆ ಶಿಕ್ಷಕರ ನಿಯೋಜನೆ ಆಗುತ್ತಿಲ್ಲ ಎಂದು ವರದಿ ಹೇಳಿದೆ.

ಅದೇ ರೀತಿ, “100% ಉತ್ತೀರ್ಣ ದರವನ್ನು” ಕಾಪಾಡಿಕೊಳ್ಳಲು, ಶಾಲೆಗಳು ಸಾಮಾನ್ಯವಾಗಿ “ಶೈಕ್ಷಣಿಕವಾಗಿ ದುರ್ಬಲ ಆಗಿರುವ ವಿದ್ಯಾರ್ಥಿಗಳನ್ನು ಹೊರಗೆ ತಳ್ಳುತ್ತಿವೆ” ಎಂದು ತಜ್ಞರ ಹೇಳಿಕೆಯನ್ನು ವರದಿಯು ಹೇಳಿದೆ.

ಮಕ್ಕಳ ಹಕ್ಕುಗಳ ಕಾರ್ಯಕರ್ತ ಮತ್ತು ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ವಾಸುದೇವ್ ಶರ್ಮಾ ಮಾತನಾಡಿ, “ಶಾಲೆಗಳಲ್ಲಿ ಶಿಕ್ಷಕರು ಕನ್ನಡ ಅಥವಾ ಸಮಾಜಶಾಸ್ತ್ರವನ್ನು ಮಾತ್ರ ಕಲಿಸುತ್ತಾರೆ. ಆದರೆ, ತಮ್ಮ ಮಕ್ಕಳು ಗಣಿತ ಮತ್ತು ವಿಜ್ಞಾನವನ್ನು ಕಲಿಸುವ ಶಾಲೆಗಳಿಗೆ ತೆರಳಬೇಕು ಎಂದು ಪೊಷಕರು ಬಯಸುತ್ತಾರೆ. ಅದಕ್ಕಾಗಿ ಅನೇಕರು ಅನುದಾನಿತ ಅಥವಾ ಖಾಸಗಿ ಶಾಲೆಗಳತ್ತ ಒಲವು ತೋರುತ್ತಿದ್ದಾರೆ” ಎಂದು ಹೇಳಿದ್ದಾರೆ ಎಂದು ವರದಿ ಹೇಳಿದೆ.

“ಇದಲ್ಲದೆ, ಒಬ್ಬ ವಿದ್ಯಾರ್ಥಿಯು ಉನ್ನತ ಪ್ರಾಥಮಿಕ ಹಂತವನ್ನು ತಲುಪುವ ಹೊತ್ತಿಗೆ, ಶಾಲೆಗಳು ಉದ್ದೇಶಪೂರ್ವಕವಾಗಿ 10 ನೇ ತರಗತಿಯಲ್ಲಿ ‘100% ಉತ್ತೀರ್ಣ ದರ’ ಕಾಯ್ದುಕೊಳ್ಳಲು ಶೈಕ್ಷಣಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿಯನ್ನು ಹೊರಹಾಕುತ್ತವೆ. ಆದರೆ, ಇದು ನಿಜವಾದ ಶಿಕ್ಷಣದ ಗುಣಮಟ್ಟವನ್ನು ಪ್ರತಿಬಿಂಬಿಸುವುದಿಲ್ಲ, ಬದಲಾಗಿ ವ್ಯವಸ್ಥೆಯ ವೈಫಲ್ಯವನ್ನು ಮರೆಮಾಡುತ್ತದೆ” ಎಂದು ಹೇಳಿದ್ದಾರೆ.

7 ಮತ್ತು 8 ನೇ ತರಗತಿ ಮತ್ತು 10 ನೇ ತರಗತಿಯ ನಡುವೆ ಡ್ರಾಪ್ಔಟ್ ದರಗಳು ಏಕೆ ಹೆಚ್ಚಾಗುತ್ತವೆ ಎಂಬ ಬಗ್ಗೆ ಯಾರೂ ಪ್ರಶ್ನಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ರಾಜ್ಯದ 6,158

“ಈ ಮಕ್ಕಳು ಎಲ್ಲಿಗೆ ಹೋಗುತ್ತಾರೆ? ಅವರು ಬೇರೆ ಶಾಲೆಗಳಿಗೆ ಸೇರುತ್ತಿದ್ದಾರೆಯೆ ಅಥವಾ ಇಲ್ಲವೇ ಎಂಬ ಬಗ್ಗೆ ಯಾವುದೇ ದಾಖಲೆಗಳಿಲ್ಲ. ಬಾಲಕಾರ್ಮಿಕರು ಇಲ್ಲ ಎಂದು ಸರ್ಕಾರ ಹೇಳಿಕೊಂಡರೂ. ಈ ಮಕ್ಕಳಲ್ಲಿ ಕೆಲವರು ಬಲವಂತವಾಗಿ ದುಡಿಮೆಗೆ ತಳ್ಳಲ್ಪಡುತ್ತಿದ್ದಾರೆ. ಇನ್ನು ಕೆಲವರು ಬಾಲ್ಯವಿವಾಹಕ್ಕೆ ಬಲಿಯಾಗುತ್ತಿದ್ದಾರೆ. ಆದಾಗ್ಯೂ, ಸಂಬಂಧಿಸಿದ ಇಲಾಖೆಗಳು ಯಾವುದೇ ಬಾಲ್ಯವಿವಾಹ ನಡೆಯದಂತೆ ನೋಡಿಕೊಳ್ಳುತ್ತಿದೆ” ಎಂದು ಶರ್ಮಾ ಹೇಳಿದ್ದಾರೆ.

ಇಷ್ಟೆ ಅಲ್ಲದೆ, ಶಿಕ್ಷಕರು ಹೆಚ್ಚಾಗಿ ನಗರಗಳು ಅಥವಾ ಪಟ್ಟಣಗಳ ಶಾಲೆಗಳಿಗೆ ವರ್ಗಾಯಿಸಲು ಪ್ರಭಾವ ಬಳಸುತ್ತಾರೆ. ಅನೇಕ ಸಂದರ್ಭಗಳಲ್ಲಿ, ಶಿಕ್ಷಕರೂ ಕೂಡಾ ದೂರದ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕೆಲಸಕ್ಕೆ ತೆರಳದ ಕಾರಣ ವಿದ್ಯಾರ್ಥಿಗಳು ಶಿಕ್ಷಕರಿಲ್ಲದೆ ಕಲಿಕೆಯಿಂದ ವಂಚಿತರಾಗುತ್ತಾರೆ. ಇದರಲ್ಲಿ ಶಿಕ್ಷಕರಿಗೂ ಅನ್ಯಾಯವಾಗುತ್ತದೆ. ಏಕೆಂದರೆ ಅವರಿಗೆ ವಸತಿ ಒದಗಿಸದಿದ್ದರೆ, ಅವರು ಪ್ರತಿದಿನ 50 ಕಿಮೀ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ತಜ್ಞರು ಹೇಳುತ್ತಾರೆ.

ಅಭಿವೃದ್ಧಿ ಶಿಕ್ಷಣತಜ್ಞ ಪ್ರಾಧ್ಯಾಪಕ ನಿರಂಜನಾರಾಧ್ಯ ವಿಪಿ ಮಾತನಾಡಿ, “ಇಡೀ ಶಾಲೆ ಒಬ್ಬ ಶಿಕ್ಷಕರನ್ನು ಹೊಂದಿರುವುದು ಶಿಕ್ಷಣ ಹಕ್ಕು ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಕಾಯ್ದೆಯ ಪ್ರಕಾರ, ಲೋವರ್ ಪ್ರೈಮರಿ ಸ್ಕೂಲ್ (ಎಲ್‌ಪಿಎ) ಕನಿಷ್ಠ ಇಬ್ಬರು ಶಿಕ್ಷಕರನ್ನು ಹೊಂದಿರಬೇಕು ಹಾಗೂ ಹೈಯರ್ ಪ್ರೈಮರಿ ಸ್ಕೂಲ್ (ಎಚ್‌ಪಿಎ) ಕನಿಷ್ಠ ಮೂವರು ಶಿಕ್ಷಕರನ್ನು ಹೊಂದಿರಬೇಕು” ಅವರು ಹೇಳಿದ್ದಾರೆ. ಒಂದು ಶಾಲೆಗೆ ಒಬ್ಬ ಶಿಕ್ಷಕ ಇದ್ದರೆ ಅಂತಹ ಶಾಲೆಗೆ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ದಾಖಲಿಸುವುದಿಲ್ಲ ಎಂದು ಅವರು ಹೇಳುತ್ತಾರೆ.

“ಕೇವಲ ಕಲಿಕೆಯ ಮಾಧ್ಯಮವಾಗಿ ಅಲ್ಲ, ಕನಿಷ್ಠ ಭಾಷೆಯಾಗಿ ಆದರೂ ತಮ್ಮ ಮಕ್ಕಳು ಇಂಗ್ಲಿಷ್ ಕಲಿಯಬೇಕೆಂದು ಹೆಚ್ಚಿನ ಪೋಷಕರು ಬಯಸುತ್ತಾರೆ. ಆದರೆ, ಒಬ್ಬ ಶಿಕ್ಷಕ ಈ ಎಲ್ಲಾ ವಿಷಯಗಳು, ತರಗತಿಗಳು ಮತ್ತು ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ರಾಜ್ಯಾದ್ಯಂತ ಸುಮಾರು 5,000 ಶಿಕ್ಷಕರ ನೇಮಕಾತಿಗೆ ಇಲಾಖೆ ಚಾಲನೆ ನೀಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಕೆ.ವಿ. ತ್ರಿಲೋಕಚಂದ್ರ ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ. ವಿಶೇಷವಾಗಿ ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಗುರಿಯನ್ನು ಇದು ಹೊಂದಿದ್ದು, ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೂ ನೇಮಕಾತಿ ಅಭಿಯಾನವನ್ನು ವಿಸ್ತರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...