Homeಕರ್ನಾಟಕರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! - ವರದಿ

ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! – ವರದಿ

- Advertisement -
- Advertisement -

ರಾಜ್ಯದಲ್ಲಿರುವ ಸುಮಾರು 6,158 ಸರ್ಕಾರಿ ಶಾಲೆಗಳು ತಲಾ ಒಬ್ಬ ಶಿಕ್ಷಕರನ್ನು ಹೊಂದಿದೆ ಎಂದು TNIE ಪತ್ರಿಕೆ ವರದಿ ಮಾಡಿದೆ. ಈ 6,158 ಶಿಕ್ಷಕರು ತಮ್ಮ ಶಾಲೆಯ 1.38 ಲಕ್ಷ ವಿದ್ಯಾರ್ಥಿಗಳಿಗೆ ಜವಾಬ್ದಾರರಾಗಿದ್ದಾರೆ ಎಂದು ಅದು ಹೇಳಿದೆ. ವಿಪರ್ಯಾಸವೇನೆಂದರೆ, ರಾಜ್ಯದ 530 ಶಾಲೆಗಳಲ್ಲಿ ಶೂನ್ಯ ದಾಖಲಾತಿಯಿದ್ದು, ಅಲ್ಲಿ 358 ಶಿಕ್ಷಕರಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ರಾಜ್ಯದ 6,158

ವರದಿಯು ರಾಜ್ಯದ ಸರ್ಕಾರಿ ಶಾಲೆಗಳ ವ್ಯವಸ್ಥೆಯಲ್ಲಿನ ಗಂಭೀರ ಲೋಪವನ್ನು ಎತ್ತಿತೋರಿಸಿದ್ದು, ಕೆಲವು ಶಾಲೆಗಳು ಕೆಲವೇ ಶಿಕ್ಷಕರನ್ನು ಹೊಂದಿದ್ದರೆ (ಹಲವು ಸಂದರ್ಭಗಳಲ್ಲಿ ಒಬ್ಬರು), ಇತರ ಶೂನ್ಯ ದಾಖಲಾತಿ ಹೊಂದಿರುವ ಶಾಲೆಗಳು ಹೆಚ್ಚುವರಿ ಸಿಬ್ಬಂದಿಯನ್ನು ಹೊಂದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. ಅದಾಗ್ಯೂ, ಶೂನ್ಯ ದಾಖಲಾತಿ ಶಾಲೆಗಳ ಶಿಕ್ಷಕರನ್ನು ಅಗತ್ಯವಿರುವೆಡೆಗೆ ವರ್ಗಾಯಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಹೇಳಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023-24 ರಲ್ಲಿ ಏಕ ಶಿಕ್ಷಕರು ಇದ್ದ 6,360 ಶಾಲೆಗಳು ಇದ್ದು, 2024-25 ರಲ್ಲಿ ಇದರ ಸಂಖ್ಯೆ 6,158ಕ್ಕೆ ಇಳಿಕೆಯಾಗಿದೆ. ಅಂದರೆ ಒಂದು ವರ್ಷದಲ್ಲಿ 202 ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ದಾಖಲಾತಿಯು 33,794 ರಷ್ಟು ಕಡಿಮೆಯಾಗಿದೆ ಎಂದು ವರದಿ ಉಲ್ಲೇಖಿಸಿದ್ದು, ಮಕ್ಕಳು ಶಾಲೆ ತೊರೆದ ಕಾರಣಕ್ಕೆ ದಾಖಲಾತಿ ಕಡಿಮೆಯಾಗಿದೆ ಎಂದು ತಜ್ಞರು ಹೇಳಿದ್ದಾಗಿ ಪತ್ರಿಕೆ ವರದಿ ಮಾಡಿದೆ.

ವಿಷಯ ಶಿಕ್ಷಕರ ಕೊರತೆಯ ಕಾರಣಕ್ಕೆ ವಿದ್ಯಾರ್ಥಿಗಳು ಶಾಲೆ ತೊರೆಯುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಅನೇಕ ಸಂದರ್ಭಗಳಲ್ಲಿ ಶಿಕ್ಷಕರನ್ನು ಕನ್ನಡ ಅಥವಾ ಸಮಾಜಶಾಸ್ತ್ರವನ್ನು ಕಲಿಸಲು ಮಾತ್ರ ನಿಯೋಜಿಸಲಾಗುತ್ತಿದ್ದು, ಗಣಿತ ಮತ್ತು ವಿಜ್ಞಾನ ಅಥವಾ ಇಂಗ್ಲಿಷ್‌ನಂತಹ ಪ್ರಮುಖ ವಿಷಯಗಳಿಗೆ ಶಿಕ್ಷಕರ ನಿಯೋಜನೆ ಆಗುತ್ತಿಲ್ಲ ಎಂದು ವರದಿ ಹೇಳಿದೆ.

ಅದೇ ರೀತಿ, “100% ಉತ್ತೀರ್ಣ ದರವನ್ನು” ಕಾಪಾಡಿಕೊಳ್ಳಲು, ಶಾಲೆಗಳು ಸಾಮಾನ್ಯವಾಗಿ “ಶೈಕ್ಷಣಿಕವಾಗಿ ದುರ್ಬಲ ಆಗಿರುವ ವಿದ್ಯಾರ್ಥಿಗಳನ್ನು ಹೊರಗೆ ತಳ್ಳುತ್ತಿವೆ” ಎಂದು ತಜ್ಞರ ಹೇಳಿಕೆಯನ್ನು ವರದಿಯು ಹೇಳಿದೆ.

ಮಕ್ಕಳ ಹಕ್ಕುಗಳ ಕಾರ್ಯಕರ್ತ ಮತ್ತು ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ವಾಸುದೇವ್ ಶರ್ಮಾ ಮಾತನಾಡಿ, “ಶಾಲೆಗಳಲ್ಲಿ ಶಿಕ್ಷಕರು ಕನ್ನಡ ಅಥವಾ ಸಮಾಜಶಾಸ್ತ್ರವನ್ನು ಮಾತ್ರ ಕಲಿಸುತ್ತಾರೆ. ಆದರೆ, ತಮ್ಮ ಮಕ್ಕಳು ಗಣಿತ ಮತ್ತು ವಿಜ್ಞಾನವನ್ನು ಕಲಿಸುವ ಶಾಲೆಗಳಿಗೆ ತೆರಳಬೇಕು ಎಂದು ಪೊಷಕರು ಬಯಸುತ್ತಾರೆ. ಅದಕ್ಕಾಗಿ ಅನೇಕರು ಅನುದಾನಿತ ಅಥವಾ ಖಾಸಗಿ ಶಾಲೆಗಳತ್ತ ಒಲವು ತೋರುತ್ತಿದ್ದಾರೆ” ಎಂದು ಹೇಳಿದ್ದಾರೆ ಎಂದು ವರದಿ ಹೇಳಿದೆ.

“ಇದಲ್ಲದೆ, ಒಬ್ಬ ವಿದ್ಯಾರ್ಥಿಯು ಉನ್ನತ ಪ್ರಾಥಮಿಕ ಹಂತವನ್ನು ತಲುಪುವ ಹೊತ್ತಿಗೆ, ಶಾಲೆಗಳು ಉದ್ದೇಶಪೂರ್ವಕವಾಗಿ 10 ನೇ ತರಗತಿಯಲ್ಲಿ ‘100% ಉತ್ತೀರ್ಣ ದರ’ ಕಾಯ್ದುಕೊಳ್ಳಲು ಶೈಕ್ಷಣಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿಯನ್ನು ಹೊರಹಾಕುತ್ತವೆ. ಆದರೆ, ಇದು ನಿಜವಾದ ಶಿಕ್ಷಣದ ಗುಣಮಟ್ಟವನ್ನು ಪ್ರತಿಬಿಂಬಿಸುವುದಿಲ್ಲ, ಬದಲಾಗಿ ವ್ಯವಸ್ಥೆಯ ವೈಫಲ್ಯವನ್ನು ಮರೆಮಾಡುತ್ತದೆ” ಎಂದು ಹೇಳಿದ್ದಾರೆ.

7 ಮತ್ತು 8 ನೇ ತರಗತಿ ಮತ್ತು 10 ನೇ ತರಗತಿಯ ನಡುವೆ ಡ್ರಾಪ್ಔಟ್ ದರಗಳು ಏಕೆ ಹೆಚ್ಚಾಗುತ್ತವೆ ಎಂಬ ಬಗ್ಗೆ ಯಾರೂ ಪ್ರಶ್ನಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ರಾಜ್ಯದ 6,158

“ಈ ಮಕ್ಕಳು ಎಲ್ಲಿಗೆ ಹೋಗುತ್ತಾರೆ? ಅವರು ಬೇರೆ ಶಾಲೆಗಳಿಗೆ ಸೇರುತ್ತಿದ್ದಾರೆಯೆ ಅಥವಾ ಇಲ್ಲವೇ ಎಂಬ ಬಗ್ಗೆ ಯಾವುದೇ ದಾಖಲೆಗಳಿಲ್ಲ. ಬಾಲಕಾರ್ಮಿಕರು ಇಲ್ಲ ಎಂದು ಸರ್ಕಾರ ಹೇಳಿಕೊಂಡರೂ. ಈ ಮಕ್ಕಳಲ್ಲಿ ಕೆಲವರು ಬಲವಂತವಾಗಿ ದುಡಿಮೆಗೆ ತಳ್ಳಲ್ಪಡುತ್ತಿದ್ದಾರೆ. ಇನ್ನು ಕೆಲವರು ಬಾಲ್ಯವಿವಾಹಕ್ಕೆ ಬಲಿಯಾಗುತ್ತಿದ್ದಾರೆ. ಆದಾಗ್ಯೂ, ಸಂಬಂಧಿಸಿದ ಇಲಾಖೆಗಳು ಯಾವುದೇ ಬಾಲ್ಯವಿವಾಹ ನಡೆಯದಂತೆ ನೋಡಿಕೊಳ್ಳುತ್ತಿದೆ” ಎಂದು ಶರ್ಮಾ ಹೇಳಿದ್ದಾರೆ.

ಇಷ್ಟೆ ಅಲ್ಲದೆ, ಶಿಕ್ಷಕರು ಹೆಚ್ಚಾಗಿ ನಗರಗಳು ಅಥವಾ ಪಟ್ಟಣಗಳ ಶಾಲೆಗಳಿಗೆ ವರ್ಗಾಯಿಸಲು ಪ್ರಭಾವ ಬಳಸುತ್ತಾರೆ. ಅನೇಕ ಸಂದರ್ಭಗಳಲ್ಲಿ, ಶಿಕ್ಷಕರೂ ಕೂಡಾ ದೂರದ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕೆಲಸಕ್ಕೆ ತೆರಳದ ಕಾರಣ ವಿದ್ಯಾರ್ಥಿಗಳು ಶಿಕ್ಷಕರಿಲ್ಲದೆ ಕಲಿಕೆಯಿಂದ ವಂಚಿತರಾಗುತ್ತಾರೆ. ಇದರಲ್ಲಿ ಶಿಕ್ಷಕರಿಗೂ ಅನ್ಯಾಯವಾಗುತ್ತದೆ. ಏಕೆಂದರೆ ಅವರಿಗೆ ವಸತಿ ಒದಗಿಸದಿದ್ದರೆ, ಅವರು ಪ್ರತಿದಿನ 50 ಕಿಮೀ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ತಜ್ಞರು ಹೇಳುತ್ತಾರೆ.

ಅಭಿವೃದ್ಧಿ ಶಿಕ್ಷಣತಜ್ಞ ಪ್ರಾಧ್ಯಾಪಕ ನಿರಂಜನಾರಾಧ್ಯ ವಿಪಿ ಮಾತನಾಡಿ, “ಇಡೀ ಶಾಲೆ ಒಬ್ಬ ಶಿಕ್ಷಕರನ್ನು ಹೊಂದಿರುವುದು ಶಿಕ್ಷಣ ಹಕ್ಕು ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಕಾಯ್ದೆಯ ಪ್ರಕಾರ, ಲೋವರ್ ಪ್ರೈಮರಿ ಸ್ಕೂಲ್ (ಎಲ್‌ಪಿಎ) ಕನಿಷ್ಠ ಇಬ್ಬರು ಶಿಕ್ಷಕರನ್ನು ಹೊಂದಿರಬೇಕು ಹಾಗೂ ಹೈಯರ್ ಪ್ರೈಮರಿ ಸ್ಕೂಲ್ (ಎಚ್‌ಪಿಎ) ಕನಿಷ್ಠ ಮೂವರು ಶಿಕ್ಷಕರನ್ನು ಹೊಂದಿರಬೇಕು” ಅವರು ಹೇಳಿದ್ದಾರೆ. ಒಂದು ಶಾಲೆಗೆ ಒಬ್ಬ ಶಿಕ್ಷಕ ಇದ್ದರೆ ಅಂತಹ ಶಾಲೆಗೆ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ದಾಖಲಿಸುವುದಿಲ್ಲ ಎಂದು ಅವರು ಹೇಳುತ್ತಾರೆ.

“ಕೇವಲ ಕಲಿಕೆಯ ಮಾಧ್ಯಮವಾಗಿ ಅಲ್ಲ, ಕನಿಷ್ಠ ಭಾಷೆಯಾಗಿ ಆದರೂ ತಮ್ಮ ಮಕ್ಕಳು ಇಂಗ್ಲಿಷ್ ಕಲಿಯಬೇಕೆಂದು ಹೆಚ್ಚಿನ ಪೋಷಕರು ಬಯಸುತ್ತಾರೆ. ಆದರೆ, ಒಬ್ಬ ಶಿಕ್ಷಕ ಈ ಎಲ್ಲಾ ವಿಷಯಗಳು, ತರಗತಿಗಳು ಮತ್ತು ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ರಾಜ್ಯಾದ್ಯಂತ ಸುಮಾರು 5,000 ಶಿಕ್ಷಕರ ನೇಮಕಾತಿಗೆ ಇಲಾಖೆ ಚಾಲನೆ ನೀಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಕೆ.ವಿ. ತ್ರಿಲೋಕಚಂದ್ರ ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ. ವಿಶೇಷವಾಗಿ ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಗುರಿಯನ್ನು ಇದು ಹೊಂದಿದ್ದು, ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೂ ನೇಮಕಾತಿ ಅಭಿಯಾನವನ್ನು ವಿಸ್ತರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ಕೇರಳ | ‘ಮಲ್ಲು ಹಿಂದೂ ಆಫೀಸರ್ಸ್’ ವಾಟ್ಸಾಪ್ ಗ್ರೂಪ್ ರಚಿಸಿದವರು ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...