Homeಕರ್ನಾಟಕಬೆಂಗಳೂರು: ದೇವಸ್ಥಾನದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅರ್ಚಕ

ಬೆಂಗಳೂರು: ದೇವಸ್ಥಾನದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅರ್ಚಕ

ಇತ್ತಿಚೆಗೆ,  ‘ಎ ಸೂಟಬಲ್ ಬಾಯ್’ ಎನ್ನುವ ವೆಬ್ ಸೀರೀಸ್‌ನಲ್ಲಿ ದೇವಸ್ಥಾನದಲ್ಲಿ ಚುಂಬನದ ದೃಶ್ಯವಿದೆ ಎಂಬ ಕಾರಣಕ್ಕೆ “ಬಾಯ್ಕಾಟ್ ನೆಟ್‌ಫ್ಲಿಕ್ಸ್”‌ ಎನ್ನಲಾಗಿತ್ತು

- Advertisement -
- Advertisement -

ಬೆಂಗಳೂರಿನ ಉತ್ತರದ ಹೊರವಲಯದಲ್ಲಿರುವ ದೇವನಹಳ್ಳಿಯಲ್ಲಿ ದೇವಾಲಯದ ಬಳಿ ಆಟವಾಡುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಅರ್ಚಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಅರ್ಚಕನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ದೇವನಹಳ್ಳಿ ಸಮೀಪದ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಗಟನೆ ನಡೆದಿದ್ದು, ಅತ್ಯಾಚಾರ ಎಸಗಿರುವ ಆರೋಪಿ 62 ವರ್ಷದ ಅರ್ಚಕ ವೆಂಕಟರಮಣಪ್ಪನನ್ನು ದೇವನಹಳ್ಳಿ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅರ್ಚಕ ವೆಂಕಟರಮಣಪ್ಪ ತನ್ನ ಪತ್ನಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ವಾಸಿಸುತ್ತಿದ್ದಾರೆ. ಅವರ ಇಬ್ಬರು ಹೆಣ್ಣುಮಕ್ಕಳನ್ನು ದೇವಾಲಯದ ಅರ್ಚಕರಿಗೆ ಕೊಟ್ಟು ಮದುವೆ ಮಾಡಲಾಗಿದೆ. ಅದರಲ್ಲಿ ಒಬ್ಬ ಮಗಳು ದೇವನಹಳ್ಳಿಯಲ್ಲಿ ಮತ್ತು ಇನ್ನೊಬ್ಬರು ಯಲಹಂಕದಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಒಡಿಶಾ ಅಸೆಂಬ್ಲಿ ಮುಂದೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಪೋಷಕರು!

ಆರೋಪಿ ವೆಂಕಟರಮಣಪ್ಪ ಅವರ ಅಳಿಯ, ಚೌಡೇಶ್ವರಿ ದೇವಸ್ಥಾನದ ಅರ್ಚಕರಾಗಿದ್ದು, ಘಟನೆ ನಡೆದಾಗ ನಗರದಿಂದ ಹೊರಗೆ ಹೋಗಿದ್ದರು. ಹೀಗಾಗಿ ಆರೋಪಿ ವೆಂಕಟರಮಣಪ್ಪ ಚೌಡೇಶ್ವರಿ ದೇವಸ್ಥಾನದ ಅರ್ಚಕರಾಗಿ ದಿನನಿತ್ಯದ ಆಚರಣೆಗಳನ್ನು ನಡೆಸುತ್ತಿದ್ದರು.

ಕಳೆದ ಮಂಗಳವಾರ ಸಂಜೆ 4.30ರ ಸುಮಾರಿಗೆ ದೇವಸ್ಥಾನದ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು  ವೆಂಕಟರಮಣಪ್ಪ ಸಿಹಿತಿಂಡಿಗಳನ್ನು ನೀಡುವ ನೆಪದಲ್ಲಿ ತಮ್ಮ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಸಿ.ಕೆ. ಬಾಬಾ ತಿಳಿಸಿದ್ದಾರೆ ಎಂದು ಡೆಕನ್ ಹೆರಾಲ್ಡ್ ವರದಿ ಮಾಡಿದೆ.

ಮಗಳು ಮನೆಗೆ ಹಿಂತಿಗದನ್ನು ಕಂಡು ಪೋಷಕರು ವಿಚಾರಿಸಿದಾಗ, ಹೂ ಮಾರುವ ಮಹಿಳೆ, ಬಾಲಕಿ ಅರ್ಚಕರ ಮನೆಗೆ ಹೊಗುವುದನ್ನು ನೋಡಿದ್ದನ್ನು ತಿಳಿಸಿದ್ದಾರೆ. ಅಲ್ಲಿ ಹೋಗಿ ನೋಡಿದಾಗ ಬಾಲಕಿ ಅಳುವ ಧ್ವನಿ ಕೇಳಿಸಿದೆ. ನಂತರ ಜನಸಮೂಹ ಗುಂಪುಗೂಡು, ಪೊಲೀಸರನ್ನು ಕರೆಸಿ ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಬಾಲಕಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಪೋಲಿಸರು ವಿವರಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಮತ್ತು ಹೂ ಮಾರಾಟಗಾರರ ಹೇಳಿಕೆಯ ಆಧಾರದ ಮೇಲೆ ಪೊಲೀಸರು ವೆಂಕಟರಮಣಪ್ಪ ಅವರನ್ನು ಬಂಧಿಸಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಆತನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತಿಚೆಗೆ,  ‘ಎ ಸೂಟಬಲ್ ಬಾಯ್’ ಎನ್ನುವ ವೆಬ್ ಸೀರೀಸ್‌ನಲ್ಲಿ ದೇವಸ್ಥಾನದಲ್ಲಿ ಚುಂಬನದ ದೃಶ್ಯವಿದೆ ಎಂಬ ಕಾರಣಕ್ಕೆ “ಬಾಯ್ಕಾಟ್ ನೆಟ್‌ಫ್ಲಿಕ್ಸ್”‌ ಎನ್ನಲಾಗಿತ್ತು. ಆದರೆ ದೇವಾಲಯಗಳಲ್ಲಿ ನಡೆಯುವ ಅತ್ಯಾಚಾರ ಪ್ರಕರಣಗಳಿಗೆ ಯಾರು ತಲೆಕೆಡಿಸಿಕೊಳ್ಳುವುದಿಲ್ಲ, ಅಂತಹ ಘಟನೆಗಳ ಬಗ್ಗೆ ಯಾರು ತುಟಿ ಬಿಚ್ಚುವುದಿಲ್ಲ. ಸರ್ಕಾರ ಕೂಡ ಇಂತಹ ಪ್ರರಕರಣಗಳ ಬಗ್ಗೆ ಗಮನ ಹರಿಸುವುದಿಲ್ಲ ಸಾಮಾಜಿಕ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...