Homeಕರ್ನಾಟಕ33 ಲಕ್ಷ ರೈತರ ಖಾತೆಗೆ 628 ಕೋಟಿ ರೂ. ಬರ ಪರಿಹಾರದ ಹಣ ಬಿಡುಗಡೆ: ಸಚಿವ...

33 ಲಕ್ಷ ರೈತರ ಖಾತೆಗೆ 628 ಕೋಟಿ ರೂ. ಬರ ಪರಿಹಾರದ ಹಣ ಬಿಡುಗಡೆ: ಸಚಿವ ಕೃಷ್ಣ ಭೈರೇಗೌಡ

- Advertisement -
- Advertisement -

ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ ರೂ 2000 ಕೋಟಿ ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ರೂ 628 ಕೋಟಿ ಹಣವನ್ನು ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಡನಾಡಿದ ಅವರು, 1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗಳಿಗೂ ಬರ ಪರಿಹಾರದ ಹಣವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು ಎಂದರು.

ಅರ್ಹ ರೈತರಿಗೆ ಬರ ಪರಿಹಾರ ತಲುಪಿಸುವ ಹಾಗೂ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಬರ ಪರಿಹಾರ ಬಿಡುಗಡೆ ಮಾಡಿರುವ ರೈತ ಪಟ್ಟಿಯನ್ನು ಪ್ರಕಟ ಮಾಡಬೇಕು ಎಂದು ಸೂಚನೆ ನೀಡಿರುವ ಹಿನ್ನೆಲೆ, ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಣೆ ಮಾಡಲಾಗಿದೆ. ಆ ಪಟ್ಟಿಯಲ್ಲಿ ರೈತರ ಹೆಸರು ಬಿಟ್ಟು ಹೋಗಿದ್ದಲ್ಲಿ, ಅಂತಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸ್ಥಳೀಯ ಕಂದಾಯ ಇಲಾಖೆ ಕಚೇರಿಗೆ ಭೇಟಿ ನೀಡಿ, ಹೆಸರು ಸೇರ್ಪಡಿಕೊಳ್ಳಬೇಕು ಎಂದು ಸಚಿವರು ರೈತರಲ್ಲಿ ಕೋರಿದರು.

ರಾಜ್ಯ ಸರ್ಕಾರವು ರಾಜ್ಯದ 223 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿದ್ದು, ಕುಡಿಯುವ ನೀರು, ಮೇವು ಹಾಗೂ ಇತರೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ, ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಗಳ ಖಾತೆಗಳಿಗೆ ರೂ 870 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಪರಿಹಾರದ ಹಣವನ್ನು ಸಮರ್ಪಕವಾಗಿ ಬಳಸಲು, ಶಾಸಕರ ಅಧ್ಯಕ್ಷತೆಯಲ್ಲಿ 223 ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದ್ದು, ರಾಜ್ಯಾದ್ಯಂತ ಇಲ್ಲಿಯವರೆಗೆ, 431 ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿ 236 ಟಾಸ್ಕ್ ಫೋರ್ಸ್ ಸಮಿತಿಯ ಸಭೆಗಳು ನಡೆದಿವೆ ಎಂದು ಹೇಳಿದರು.

ರಾಜ್ಯದ 156 ಹಳ್ಳಿಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ಬಾಡಿಗೆ ಆಧಾರದ ಮೇಲೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಅಲ್ಲದೇ 46 ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದಲ್ಲಿನ 46 ವಾರ್ಡ್ ಗಳಲ್ಲಿ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಕಳೆದ ಐದು ವರ್ಷದ ಅಂಕಿ ಅಂಶಗಳ ಆಧಾರದ ಮೇಲೆ, ಮುಂಜಾಗ್ರತಾ ಕ್ರಮವಾಗಿ, ಮುಂಬರುವ ದಿನಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವ 782 ಗ್ರಾಮಗಳು ಹಾಗೂ 1193 ವಾರ್ಡ್ ಗಳನ್ನು ಗುರುತಿಸಲಾಗಿದ್ದು, ಅಂತಹ ಪ್ರದೇಶಗಳಲ್ಲಿ ಸಹ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕ್ರಮವನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ಸಮಸ್ಯೆಯ ನಿರ್ವಹಣೆಗೆ ಹೊಸ ಕೊಳವೆ ಬಾವಿಗಳ ಕೊರೆಯುವ ಅವಶ್ಯಕತೆ ಇದ್ದಲ್ಲಿ, ಕೊಳವೆ ಬಾವಿಗಳನ್ನು ಕೊರೆಯಲು ಕ್ರಮವಹಿಸುವಂತೆ ಮುಖ್ಯಮಂತ್ರಿಯವರು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಮೇವಿನ ಸಮಸ್ಯೆ ನೀಗಿಸಲು 2023ರ ನವೆಂಬರ್ ತಿಂಗಳಲ್ಲಿ ಮೊದಲ ಹಂತದ ಕ್ರಮವಾಗಿ 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ಗಳನ್ನು ರೈತರಿಗೆ ನೀಡಲಾಗಿದ್ದು, ಎರಡನೇ ಹಂತವಾಗಿ 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ಗಳನ್ನು ರೈತರಿಗೆ ವಿತರಿಸಲು ಪಶುಸಂಗೋಪನೆ ಇಲಾಖೆಗೆ ಹಣವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ ವಿವಿಧೆಡೆ 3 ಗೂಶಾಲೆಗಳನ್ನು‌ ಸ್ಥಾಪಿಸಲಾಗಿದ್ದು, ಇದರ ಜೊತೆಗೆ ಮೇವಿನ ದಾಸ್ತಾನಿಗೆ ಹಲವು ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರಕ್ಕೆ ರೂ 18,178 ಕೋಟಿ ಬರ ಪರಿಹಾರ ಅನುದಾನವನ್ನು ಬಿಡುಗಡೆ ಮಾಡಲು ಮನವಿಯನ್ನು ಸಲ್ಲಿಸಲಾಗಿದ್ದು, ಮುಖ್ಯಮಂತ್ರಿ ಕೂಡ ಪ್ರಧಾನ ಮಂತ್ರಿಯನ್ನು ಖುದ್ದು ಭೇಟಿಯಾಗಿ ಬರ ಪರಿಹಾರದ ಅನುದಾನ ಬಿಡುಗಡೆಗೆ ಮಾಡಲು ಮನವಿ ಮಾಡಿದ್ದಾರೆ. ಕೇಂದ್ರ ಗೃಹ ಸಚಿವರನ್ನು ಮುಖ್ಯಮಂತ್ರಿಗಳು ಸೇರಿದಂತೆ ರಾಜ್ಯ ಸರ್ಕಾರದ ಹಲವು ಸಚಿವರು ಖುದ್ದು ಭೇಟಿ ಮಾಡಿ, ಬರ ಪರಿಹಾರ ನೀಡಲು ಮನವಿಯನ್ನು ಮಾಡಿದ್ದಾರೆ. ಈಗಾಗಲೇ ಬರ ಪರಿಹಾರಕ್ಕೆ ಮನವಿಯನ್ನು ಸಲ್ಲಿಸಿ ನಾಲ್ಕು ತಿಂಗಳು ಕಳೆದಿದ್ದು, ಕೇಂದ್ರ ಗೃಹ ಸಚಿವರು ರಾಜ್ಯ ಪ್ರವಾಸದಲ್ಲಿರುವ, ಈ ಸಂದರ್ಭದಲ್ಲಿ, ಬರ ಪರಿಹಾರ ಘೋಷಿಸಿದರೆ ರಾಜ್ಯದ ರೈತರಿಗೆ ಬಹಳ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ : ಬಡವರು, ರೈತರ ಬಗ್ಗೆ ಮಾತನಾಡಲು ಅಮಿತ್ ಶಾ ಅವರಿಗೆ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...