HomeUncategorizedಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

ಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

- Advertisement -
- Advertisement -

ಸ್ತ್ರೀಗೆ ಹೆಣ್ತನ ವರದಾನ. ಮಗುವಿಗೆ ಜನ್ಮ ನೀಡುವುದು ಅಂದರೆ ತಾಯಿಯೇ ಪುನರ್ಜನ್ಮ ಪಡೆದಂತೆ. ಅಂತಹ ತಾಯಿ ಒಂಬತ್ತು ತಿಂಗಳವರೆಗೆ ಮಗುವನ್ನು ಹೊತ್ತು ಕನಸು ಕಟ್ಟುತ್ತಾಳೆ. ಮಗುವಿನ ಒದ್ದಾಟ, ಹೊರಳಾಟವನ್ನು ಅನುಭವಿಸಿ, ಬೇನೆ ತಿಂದು, ಜೀವವನ್ನೇ ಪಣಕ್ಕಿಟ್ಟು ತನ್ನ ಕರುಳ ಕುಡಿಯನ್ನು ಜಗತ್ತಿಗೆ ಪರಿಚಯಿಸುತ್ತಾಳೆ. ಇಂತಹ ತಾಯಿಯ ಹೆರಿಗೆಯ ಸಮಯ ಅದೆಷ್ಟು ಯಾತನಾಮಯ. ಆದರೆ ಇದ್ಯಾವುದನ್ನೂ ಲೆಕ್ಕಿಸದೇ, ಹೆರಿಗೆಯ ಸಮಯದವರೆಗೆ ಗರ್ಭಿಣಿ ಕೆಲಸ ಮಾಡುತ್ತಾಳಂತೆ.

ಹೌದು… ಶೇ. 63 ರಷ್ಟು ಗರ್ಭಿಣಿಯರು ಮಗುವಿನ ಹೆರಿಗೆಯ ಸಮಯದವರೆಗೆ ಕೆಲಸ ಮಾಡುತ್ತಾರೆ ಎಂದು ಜಚ್ಚಾ-ಬಚ್ಚಾ ಸಮೀಕ್ಷೆ ಹೇಳಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಸಮೀಕ್ಷೆ ನಡೆಸಿದ್ದ ಜಚ್ಚಾ-ಬಚ್ಚಾ ಗರ್ಭಿಣಿಯರು ಮಗುವಿಗೆ ಜನ್ಮ ನೀಡುವ ಕೊನೆಯ ಗಳಿಗೆಯವರೆಗೂ ಕೆಲಸ ಮಾಡುತ್ತಾರೆ ಎಂದು ತಿಳಿಸಿದೆ.

ಅರ್ಥಶಾಸ್ತ್ರಜ್ಞ ಜೀನ್ ಡ್ರೇಜ್ ನೇತೃತ್ವದ ಸಂಶೋಧನಾ ತಂಡ, ಛತ್ತೀಸ್ ಗಢ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿತ್ತು. ಹಿಂದಿನ 6 ತಿಂಗಳಲ್ಲಿ ಮಗುವಿಗೆ ಜನ್ಮ ನೀಡಿದ ತಾಯಂದಿರನ್ನು ಮಾತನಾಡಿಸಿತ್ತು. 706 ಮಹಿಳೆಯರಲ್ಲಿ 342 ಗರ್ಭಿಣಿಯರು, 364 ಹೆರಿಗೆಯಾದ ತಾಯಂದಿರನ್ನು (ಶೂಶ್ರೂಷೆ ತಾಯಂದಿರನ್ನು) ಸಂದರ್ಶಿಸಿತ್ತು.

ಸಮೀಕ್ಷೆ ವೇಳೆ, ಶೇ. 21 ರಷ್ಟು ಶುಶ್ರೂಷಾ ಗರ್ಭಿಣಿಯರಿಗೆ ಕೆಲಸದಲ್ಲಿ ಸಹಾಯ ಮಾಡಲು ಸಹಾಯಕರಿಲ್ಲ. ಕೆಲಸಕ್ಕಾಗಿ ಯಾವುದೇ ಸಹಾಯ ಲಭ್ಯವಿಲ್ಲ ಎಂದು ಸಮೀಕ್ಷೆ ತಿಳಿಸಿದೆ. ಅದರಲ್ಲಿ ಶೇ.49 ರಷ್ಟು ಮಹಿಳೆಯರು ಆಹಾರ ಮತ್ತು ವಿಶ್ರಾಂತಿ ಕೊರತೆಯಿಂದ ಬಳಲಿದ್ದಾರೆ ಮತ್ತು ದಣಿದಿದ್ದಾರೆ ಎಂದು ಮಾಹಿತಿಯನ್ನು ಸಮೀಕ್ಷೆ ಬಹಿರಂಗಪಡಿಸಿದೆ.  ದಾಗಿ ಗರ್ಭಾವಸ್ಥೆಯಲ್ಲಿ ಕ್ಷಾಮ ಮತ್ತು ದಣಿದಿದ್ದಾರೆ. ಭಾರತದಲ್ಲಿ ಸಂಭವಿಸುವ 3 ಮಕ್ಕಳ ಸಾವುಗಳಲ್ಲಿ 2 ಮಕ್ಕಳು ಅಪೌಷ್ಟಿಕತೆಯಿಂದ ಸಾವನ್ನಪ್ಪುತ್ತವೆ. ಇದು ಗ್ರಾಮೀಣ ಭಾಗಗಳಲ್ಲಿ ಅತಿಹೆಚ್ಚು ಪ್ರಮಾಣದಲ್ಲಿದೆ ಎಂದು ಸಮೀಕ್ಷೆ ದೃಢೀಕರಿಸಿದೆ.

ಸಾಮಾನ್ಯವಾಗಿ ನಾರ್ಮಲ್ ಶಿಶುಗಳ ಮಾಸ್ ಇಂಡೆಕ್ಸ್ ಹೊಂದಿರುವ ಗರ್ಭಿಣಿಯರ ತೂಕ 13 ರಿಂದ 18 ಕಿಲೋಗ್ರಾಂ ಇರುತ್ತದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಗ್ರಾಮೀಣ ಭಾಗದ ಮಹಿಳೆಯರಲ್ಲಿ 7 ಕಿಲೋ ಗ್ರಾಂ ತೂಕ ಹೆಚ್ಚಿರುತ್ತದೆ ಎಂದು ಸಮೀಕ್ಷೆ ತಿಳಿಸಿದೆ.

ಪ್ರಾಯೋಗಿಕವಾಗಿ, ಶುಶ್ರೂಷಾ ಮಹಿಳೆಯರು ಹೆರಿಗೆಗಾಗಿ ಸರಾಸರಿ 6,500 ರೂಪಾಯಿಗಳನ್ನು ಖರ್ಚು ಮಾಡಿದ್ದಾರೆ. ಇದು ಒಬ್ಬ ಕಾರ್ಮಿಕನಿಗೆ ಇರುವ ಸಂಬಳಕ್ಕಿಂತ ದುಪ್ಪಟ್ಟು ಖರ್ಚಾಗಿದೆ. ಕಾರ್ಮಿಕರ ಮನೆಯ ಮೂರನೇ ಒಂದು ಭಾಗದಷ್ಟು ಮಹಿಳೆಯರು ವೆಚ್ಚವನ್ನು ಸರಿದೂಗಿಸಲು, ಸಾಲ ಮಾಡುತ್ತಾರೆ ಎಂದು ಸಮೀಕ್ಷೆಯ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮುಂಬೈನಲ್ಲಿ NCP – ಶಿವಸೇನೆ ಜಂಟಿ ಪತ್ರಿಕಾಗೋಷ್ಟಿ: NCP ಶಾಸಕಾಂಗ ನಾಯಕತ್ವದಿಂದ ಅಜಿತ್‌ ಪವಾರ್‌ ಉಚ್ಚಾಟನೆ

ಆದಾಗ್ಯೂ, ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿನ ಎಲ್ಲಾ ಮಹಿಳೆಯರಿಗೆ ಯಾವುದೇ ವೆಚ್ಚವಿಲ್ಲದೆ ಸಾಂಸ್ಥಿಕ ವಿತರಣೆ ನೀಡಬೇಕಾಗಿದೆ. ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಕೇವಲ 4 ಕಿಲೋಗ್ರಾಂಗಳಷ್ಟು ಕಡಿಮೆ ಸರಾಸರಿ ತೂಕ ದಾಖಲಾಗಿದೆ ಎಂದು ಅಧ್ಯಯನಗಳು ತಿಳಿಸಿವೆ. ಸೋನಭದ್ರದಲ್ಲಿ ಸಂದರ್ಶನ ಮಾಡಿದ 64 ಗರ್ಭಿಣಿಯರಲ್ಲಿ  ಶೇ. 48 ರಷ್ಟು ಗರ್ಭಿಣಿಯರು ಕಡಿಮೆ ತೂಕ ಹೊಂದಿದ್ದಾರೆ. ಗರ್ಭಾವಸ್ಥೆಯಲ್ಲಿ ಏನು ತಿನ್ನಬೇಕು ಎಂಬುದರ ಅರಿವು ಇವರಿಗಿಲ್ಲ. ಹೀಗಾಗಿ ಸರಾಸರಿಗಿಂತ ಕಡಿಮೆ ತೂಕ ದಾಖಲಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ತಾಯಿ ಆರೋಗ್ಯ ಕಾರ್ಯಕ್ರಮ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವು ಯೋಜನೆಗಳಿವೆ. ಇವುಗಳ ಮೂಲಕ ಗ್ರಾಮೀಣ ಮಹಿಳೆಯರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಪೂರಕ ವ್ಯವಸ್ಥೆ ಮಾಡಲಾಗಿದೆ. ಹೀಗಿರುವಾಗಲೂ ಗ್ರಾಮೀಣ ಭಾಗದ ಕೆಳಮಟ್ಟದ ಮಹಿಳೆಯರಲ್ಲಿ ಅನಾರೋಗ್ಯ ಕಾಡುತ್ತಿದೆ.

ದೈಹಿಕ ದೌರ್ಬಲ್ಯ, ಶಕ್ತಿ ಕುಂದುವಿಕೆ, ಪಾದಗಳಲ್ಲಿ ಸೆಳೆತ, ಹಗಲು ದೃಷ್ಟಿ ದೋಷ, ಮೈ-ಕೈ ಸೆಳತ, ಗರ್ಭಿಣಿಯರಲ್ಲಿ ಕಂಡು ಬರುವ ಅನಾರೋಗ್ಯಕರ ಅಂಶಗಳಾಗಿವೆ. ಅದರಲ್ಲೂ ಶೇ. 41 ರಷ್ಟು ಪಾದಗಳಲ್ಲಿ ಸೆಳೆತ, ದೃಷ್ಟಿ ದೌರ್ಬಲ್ಯ ಶೇ. 17 ರಷ್ಟು ಶೇ.9 ರಷ್ಟು ಮಹಿಳೆಯರಲ್ಲಿ ಸೆಳೆತದ ಲಕ್ಷಣಗಳು ಕಂಡು ಬರುತ್ತವೆ ಎಂದು ಸಮೀಕ್ಷೆ ಹೇಳಿದೆ.

ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಯೋಜನೆಯ ವ್ಯಾಪ್ತಿಯ ತುಲನಾತ್ಮಕ ಅಂಕಿ-ಅಂಶಗಳನ್ನು ಗಮನಿಸಿದರೆ, ಒಡಿಶಾದಲ್ಲಿ ಗರ್ಭಿಣಿಯರು ಚೆನ್ನಾಗಿದ್ದಾರೆ. ಇಲ್ಲಿನ 3 ರಿಂದ 6 ವರ್ಷದೊಳಗಿನ ಅಂಗನವಾಡಿ ಮಕ್ಕಳು ವಾರಕ್ಕೆ ಐದು ಬಾರಿ ಮೊಟ್ಟೆ ಪಡೆಯುತ್ತಾರೆ. ಕಿರಿಯ ಮಕ್ಕಳು, ಗರ್ಭಿಣಿ ಮತ್ತು ಹೆರಿಗೆಯಾದ ಮಹಿಳೆಯರಿಗೆ ಪಡಿತರ ಭಾಗವಾಗಿ ಮೊಟ್ಟೆಗಳನ್ನು ವಿತರಿಸಲಾಗುತ್ತಿದೆ ಎಂದು ಸಮೀಕ್ಷೆ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...