HomeUncategorizedಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

ಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

- Advertisement -
- Advertisement -

ಸ್ತ್ರೀಗೆ ಹೆಣ್ತನ ವರದಾನ. ಮಗುವಿಗೆ ಜನ್ಮ ನೀಡುವುದು ಅಂದರೆ ತಾಯಿಯೇ ಪುನರ್ಜನ್ಮ ಪಡೆದಂತೆ. ಅಂತಹ ತಾಯಿ ಒಂಬತ್ತು ತಿಂಗಳವರೆಗೆ ಮಗುವನ್ನು ಹೊತ್ತು ಕನಸು ಕಟ್ಟುತ್ತಾಳೆ. ಮಗುವಿನ ಒದ್ದಾಟ, ಹೊರಳಾಟವನ್ನು ಅನುಭವಿಸಿ, ಬೇನೆ ತಿಂದು, ಜೀವವನ್ನೇ ಪಣಕ್ಕಿಟ್ಟು ತನ್ನ ಕರುಳ ಕುಡಿಯನ್ನು ಜಗತ್ತಿಗೆ ಪರಿಚಯಿಸುತ್ತಾಳೆ. ಇಂತಹ ತಾಯಿಯ ಹೆರಿಗೆಯ ಸಮಯ ಅದೆಷ್ಟು ಯಾತನಾಮಯ. ಆದರೆ ಇದ್ಯಾವುದನ್ನೂ ಲೆಕ್ಕಿಸದೇ, ಹೆರಿಗೆಯ ಸಮಯದವರೆಗೆ ಗರ್ಭಿಣಿ ಕೆಲಸ ಮಾಡುತ್ತಾಳಂತೆ.

ಹೌದು… ಶೇ. 63 ರಷ್ಟು ಗರ್ಭಿಣಿಯರು ಮಗುವಿನ ಹೆರಿಗೆಯ ಸಮಯದವರೆಗೆ ಕೆಲಸ ಮಾಡುತ್ತಾರೆ ಎಂದು ಜಚ್ಚಾ-ಬಚ್ಚಾ ಸಮೀಕ್ಷೆ ಹೇಳಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಸಮೀಕ್ಷೆ ನಡೆಸಿದ್ದ ಜಚ್ಚಾ-ಬಚ್ಚಾ ಗರ್ಭಿಣಿಯರು ಮಗುವಿಗೆ ಜನ್ಮ ನೀಡುವ ಕೊನೆಯ ಗಳಿಗೆಯವರೆಗೂ ಕೆಲಸ ಮಾಡುತ್ತಾರೆ ಎಂದು ತಿಳಿಸಿದೆ.

ಅರ್ಥಶಾಸ್ತ್ರಜ್ಞ ಜೀನ್ ಡ್ರೇಜ್ ನೇತೃತ್ವದ ಸಂಶೋಧನಾ ತಂಡ, ಛತ್ತೀಸ್ ಗಢ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿತ್ತು. ಹಿಂದಿನ 6 ತಿಂಗಳಲ್ಲಿ ಮಗುವಿಗೆ ಜನ್ಮ ನೀಡಿದ ತಾಯಂದಿರನ್ನು ಮಾತನಾಡಿಸಿತ್ತು. 706 ಮಹಿಳೆಯರಲ್ಲಿ 342 ಗರ್ಭಿಣಿಯರು, 364 ಹೆರಿಗೆಯಾದ ತಾಯಂದಿರನ್ನು (ಶೂಶ್ರೂಷೆ ತಾಯಂದಿರನ್ನು) ಸಂದರ್ಶಿಸಿತ್ತು.

ಸಮೀಕ್ಷೆ ವೇಳೆ, ಶೇ. 21 ರಷ್ಟು ಶುಶ್ರೂಷಾ ಗರ್ಭಿಣಿಯರಿಗೆ ಕೆಲಸದಲ್ಲಿ ಸಹಾಯ ಮಾಡಲು ಸಹಾಯಕರಿಲ್ಲ. ಕೆಲಸಕ್ಕಾಗಿ ಯಾವುದೇ ಸಹಾಯ ಲಭ್ಯವಿಲ್ಲ ಎಂದು ಸಮೀಕ್ಷೆ ತಿಳಿಸಿದೆ. ಅದರಲ್ಲಿ ಶೇ.49 ರಷ್ಟು ಮಹಿಳೆಯರು ಆಹಾರ ಮತ್ತು ವಿಶ್ರಾಂತಿ ಕೊರತೆಯಿಂದ ಬಳಲಿದ್ದಾರೆ ಮತ್ತು ದಣಿದಿದ್ದಾರೆ ಎಂದು ಮಾಹಿತಿಯನ್ನು ಸಮೀಕ್ಷೆ ಬಹಿರಂಗಪಡಿಸಿದೆ.  ದಾಗಿ ಗರ್ಭಾವಸ್ಥೆಯಲ್ಲಿ ಕ್ಷಾಮ ಮತ್ತು ದಣಿದಿದ್ದಾರೆ. ಭಾರತದಲ್ಲಿ ಸಂಭವಿಸುವ 3 ಮಕ್ಕಳ ಸಾವುಗಳಲ್ಲಿ 2 ಮಕ್ಕಳು ಅಪೌಷ್ಟಿಕತೆಯಿಂದ ಸಾವನ್ನಪ್ಪುತ್ತವೆ. ಇದು ಗ್ರಾಮೀಣ ಭಾಗಗಳಲ್ಲಿ ಅತಿಹೆಚ್ಚು ಪ್ರಮಾಣದಲ್ಲಿದೆ ಎಂದು ಸಮೀಕ್ಷೆ ದೃಢೀಕರಿಸಿದೆ.

ಸಾಮಾನ್ಯವಾಗಿ ನಾರ್ಮಲ್ ಶಿಶುಗಳ ಮಾಸ್ ಇಂಡೆಕ್ಸ್ ಹೊಂದಿರುವ ಗರ್ಭಿಣಿಯರ ತೂಕ 13 ರಿಂದ 18 ಕಿಲೋಗ್ರಾಂ ಇರುತ್ತದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಗ್ರಾಮೀಣ ಭಾಗದ ಮಹಿಳೆಯರಲ್ಲಿ 7 ಕಿಲೋ ಗ್ರಾಂ ತೂಕ ಹೆಚ್ಚಿರುತ್ತದೆ ಎಂದು ಸಮೀಕ್ಷೆ ತಿಳಿಸಿದೆ.

ಪ್ರಾಯೋಗಿಕವಾಗಿ, ಶುಶ್ರೂಷಾ ಮಹಿಳೆಯರು ಹೆರಿಗೆಗಾಗಿ ಸರಾಸರಿ 6,500 ರೂಪಾಯಿಗಳನ್ನು ಖರ್ಚು ಮಾಡಿದ್ದಾರೆ. ಇದು ಒಬ್ಬ ಕಾರ್ಮಿಕನಿಗೆ ಇರುವ ಸಂಬಳಕ್ಕಿಂತ ದುಪ್ಪಟ್ಟು ಖರ್ಚಾಗಿದೆ. ಕಾರ್ಮಿಕರ ಮನೆಯ ಮೂರನೇ ಒಂದು ಭಾಗದಷ್ಟು ಮಹಿಳೆಯರು ವೆಚ್ಚವನ್ನು ಸರಿದೂಗಿಸಲು, ಸಾಲ ಮಾಡುತ್ತಾರೆ ಎಂದು ಸಮೀಕ್ಷೆಯ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮುಂಬೈನಲ್ಲಿ NCP – ಶಿವಸೇನೆ ಜಂಟಿ ಪತ್ರಿಕಾಗೋಷ್ಟಿ: NCP ಶಾಸಕಾಂಗ ನಾಯಕತ್ವದಿಂದ ಅಜಿತ್‌ ಪವಾರ್‌ ಉಚ್ಚಾಟನೆ

ಆದಾಗ್ಯೂ, ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿನ ಎಲ್ಲಾ ಮಹಿಳೆಯರಿಗೆ ಯಾವುದೇ ವೆಚ್ಚವಿಲ್ಲದೆ ಸಾಂಸ್ಥಿಕ ವಿತರಣೆ ನೀಡಬೇಕಾಗಿದೆ. ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಕೇವಲ 4 ಕಿಲೋಗ್ರಾಂಗಳಷ್ಟು ಕಡಿಮೆ ಸರಾಸರಿ ತೂಕ ದಾಖಲಾಗಿದೆ ಎಂದು ಅಧ್ಯಯನಗಳು ತಿಳಿಸಿವೆ. ಸೋನಭದ್ರದಲ್ಲಿ ಸಂದರ್ಶನ ಮಾಡಿದ 64 ಗರ್ಭಿಣಿಯರಲ್ಲಿ  ಶೇ. 48 ರಷ್ಟು ಗರ್ಭಿಣಿಯರು ಕಡಿಮೆ ತೂಕ ಹೊಂದಿದ್ದಾರೆ. ಗರ್ಭಾವಸ್ಥೆಯಲ್ಲಿ ಏನು ತಿನ್ನಬೇಕು ಎಂಬುದರ ಅರಿವು ಇವರಿಗಿಲ್ಲ. ಹೀಗಾಗಿ ಸರಾಸರಿಗಿಂತ ಕಡಿಮೆ ತೂಕ ದಾಖಲಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ತಾಯಿ ಆರೋಗ್ಯ ಕಾರ್ಯಕ್ರಮ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವು ಯೋಜನೆಗಳಿವೆ. ಇವುಗಳ ಮೂಲಕ ಗ್ರಾಮೀಣ ಮಹಿಳೆಯರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಪೂರಕ ವ್ಯವಸ್ಥೆ ಮಾಡಲಾಗಿದೆ. ಹೀಗಿರುವಾಗಲೂ ಗ್ರಾಮೀಣ ಭಾಗದ ಕೆಳಮಟ್ಟದ ಮಹಿಳೆಯರಲ್ಲಿ ಅನಾರೋಗ್ಯ ಕಾಡುತ್ತಿದೆ.

ದೈಹಿಕ ದೌರ್ಬಲ್ಯ, ಶಕ್ತಿ ಕುಂದುವಿಕೆ, ಪಾದಗಳಲ್ಲಿ ಸೆಳೆತ, ಹಗಲು ದೃಷ್ಟಿ ದೋಷ, ಮೈ-ಕೈ ಸೆಳತ, ಗರ್ಭಿಣಿಯರಲ್ಲಿ ಕಂಡು ಬರುವ ಅನಾರೋಗ್ಯಕರ ಅಂಶಗಳಾಗಿವೆ. ಅದರಲ್ಲೂ ಶೇ. 41 ರಷ್ಟು ಪಾದಗಳಲ್ಲಿ ಸೆಳೆತ, ದೃಷ್ಟಿ ದೌರ್ಬಲ್ಯ ಶೇ. 17 ರಷ್ಟು ಶೇ.9 ರಷ್ಟು ಮಹಿಳೆಯರಲ್ಲಿ ಸೆಳೆತದ ಲಕ್ಷಣಗಳು ಕಂಡು ಬರುತ್ತವೆ ಎಂದು ಸಮೀಕ್ಷೆ ಹೇಳಿದೆ.

ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಯೋಜನೆಯ ವ್ಯಾಪ್ತಿಯ ತುಲನಾತ್ಮಕ ಅಂಕಿ-ಅಂಶಗಳನ್ನು ಗಮನಿಸಿದರೆ, ಒಡಿಶಾದಲ್ಲಿ ಗರ್ಭಿಣಿಯರು ಚೆನ್ನಾಗಿದ್ದಾರೆ. ಇಲ್ಲಿನ 3 ರಿಂದ 6 ವರ್ಷದೊಳಗಿನ ಅಂಗನವಾಡಿ ಮಕ್ಕಳು ವಾರಕ್ಕೆ ಐದು ಬಾರಿ ಮೊಟ್ಟೆ ಪಡೆಯುತ್ತಾರೆ. ಕಿರಿಯ ಮಕ್ಕಳು, ಗರ್ಭಿಣಿ ಮತ್ತು ಹೆರಿಗೆಯಾದ ಮಹಿಳೆಯರಿಗೆ ಪಡಿತರ ಭಾಗವಾಗಿ ಮೊಟ್ಟೆಗಳನ್ನು ವಿತರಿಸಲಾಗುತ್ತಿದೆ ಎಂದು ಸಮೀಕ್ಷೆ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...