HomeUncategorizedಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

ಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

- Advertisement -
- Advertisement -

ಸ್ತ್ರೀಗೆ ಹೆಣ್ತನ ವರದಾನ. ಮಗುವಿಗೆ ಜನ್ಮ ನೀಡುವುದು ಅಂದರೆ ತಾಯಿಯೇ ಪುನರ್ಜನ್ಮ ಪಡೆದಂತೆ. ಅಂತಹ ತಾಯಿ ಒಂಬತ್ತು ತಿಂಗಳವರೆಗೆ ಮಗುವನ್ನು ಹೊತ್ತು ಕನಸು ಕಟ್ಟುತ್ತಾಳೆ. ಮಗುವಿನ ಒದ್ದಾಟ, ಹೊರಳಾಟವನ್ನು ಅನುಭವಿಸಿ, ಬೇನೆ ತಿಂದು, ಜೀವವನ್ನೇ ಪಣಕ್ಕಿಟ್ಟು ತನ್ನ ಕರುಳ ಕುಡಿಯನ್ನು ಜಗತ್ತಿಗೆ ಪರಿಚಯಿಸುತ್ತಾಳೆ. ಇಂತಹ ತಾಯಿಯ ಹೆರಿಗೆಯ ಸಮಯ ಅದೆಷ್ಟು ಯಾತನಾಮಯ. ಆದರೆ ಇದ್ಯಾವುದನ್ನೂ ಲೆಕ್ಕಿಸದೇ, ಹೆರಿಗೆಯ ಸಮಯದವರೆಗೆ ಗರ್ಭಿಣಿ ಕೆಲಸ ಮಾಡುತ್ತಾಳಂತೆ.

ಹೌದು… ಶೇ. 63 ರಷ್ಟು ಗರ್ಭಿಣಿಯರು ಮಗುವಿನ ಹೆರಿಗೆಯ ಸಮಯದವರೆಗೆ ಕೆಲಸ ಮಾಡುತ್ತಾರೆ ಎಂದು ಜಚ್ಚಾ-ಬಚ್ಚಾ ಸಮೀಕ್ಷೆ ಹೇಳಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಸಮೀಕ್ಷೆ ನಡೆಸಿದ್ದ ಜಚ್ಚಾ-ಬಚ್ಚಾ ಗರ್ಭಿಣಿಯರು ಮಗುವಿಗೆ ಜನ್ಮ ನೀಡುವ ಕೊನೆಯ ಗಳಿಗೆಯವರೆಗೂ ಕೆಲಸ ಮಾಡುತ್ತಾರೆ ಎಂದು ತಿಳಿಸಿದೆ.

ಅರ್ಥಶಾಸ್ತ್ರಜ್ಞ ಜೀನ್ ಡ್ರೇಜ್ ನೇತೃತ್ವದ ಸಂಶೋಧನಾ ತಂಡ, ಛತ್ತೀಸ್ ಗಢ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿತ್ತು. ಹಿಂದಿನ 6 ತಿಂಗಳಲ್ಲಿ ಮಗುವಿಗೆ ಜನ್ಮ ನೀಡಿದ ತಾಯಂದಿರನ್ನು ಮಾತನಾಡಿಸಿತ್ತು. 706 ಮಹಿಳೆಯರಲ್ಲಿ 342 ಗರ್ಭಿಣಿಯರು, 364 ಹೆರಿಗೆಯಾದ ತಾಯಂದಿರನ್ನು (ಶೂಶ್ರೂಷೆ ತಾಯಂದಿರನ್ನು) ಸಂದರ್ಶಿಸಿತ್ತು.

ಸಮೀಕ್ಷೆ ವೇಳೆ, ಶೇ. 21 ರಷ್ಟು ಶುಶ್ರೂಷಾ ಗರ್ಭಿಣಿಯರಿಗೆ ಕೆಲಸದಲ್ಲಿ ಸಹಾಯ ಮಾಡಲು ಸಹಾಯಕರಿಲ್ಲ. ಕೆಲಸಕ್ಕಾಗಿ ಯಾವುದೇ ಸಹಾಯ ಲಭ್ಯವಿಲ್ಲ ಎಂದು ಸಮೀಕ್ಷೆ ತಿಳಿಸಿದೆ. ಅದರಲ್ಲಿ ಶೇ.49 ರಷ್ಟು ಮಹಿಳೆಯರು ಆಹಾರ ಮತ್ತು ವಿಶ್ರಾಂತಿ ಕೊರತೆಯಿಂದ ಬಳಲಿದ್ದಾರೆ ಮತ್ತು ದಣಿದಿದ್ದಾರೆ ಎಂದು ಮಾಹಿತಿಯನ್ನು ಸಮೀಕ್ಷೆ ಬಹಿರಂಗಪಡಿಸಿದೆ.  ದಾಗಿ ಗರ್ಭಾವಸ್ಥೆಯಲ್ಲಿ ಕ್ಷಾಮ ಮತ್ತು ದಣಿದಿದ್ದಾರೆ. ಭಾರತದಲ್ಲಿ ಸಂಭವಿಸುವ 3 ಮಕ್ಕಳ ಸಾವುಗಳಲ್ಲಿ 2 ಮಕ್ಕಳು ಅಪೌಷ್ಟಿಕತೆಯಿಂದ ಸಾವನ್ನಪ್ಪುತ್ತವೆ. ಇದು ಗ್ರಾಮೀಣ ಭಾಗಗಳಲ್ಲಿ ಅತಿಹೆಚ್ಚು ಪ್ರಮಾಣದಲ್ಲಿದೆ ಎಂದು ಸಮೀಕ್ಷೆ ದೃಢೀಕರಿಸಿದೆ.

ಸಾಮಾನ್ಯವಾಗಿ ನಾರ್ಮಲ್ ಶಿಶುಗಳ ಮಾಸ್ ಇಂಡೆಕ್ಸ್ ಹೊಂದಿರುವ ಗರ್ಭಿಣಿಯರ ತೂಕ 13 ರಿಂದ 18 ಕಿಲೋಗ್ರಾಂ ಇರುತ್ತದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಗ್ರಾಮೀಣ ಭಾಗದ ಮಹಿಳೆಯರಲ್ಲಿ 7 ಕಿಲೋ ಗ್ರಾಂ ತೂಕ ಹೆಚ್ಚಿರುತ್ತದೆ ಎಂದು ಸಮೀಕ್ಷೆ ತಿಳಿಸಿದೆ.

ಪ್ರಾಯೋಗಿಕವಾಗಿ, ಶುಶ್ರೂಷಾ ಮಹಿಳೆಯರು ಹೆರಿಗೆಗಾಗಿ ಸರಾಸರಿ 6,500 ರೂಪಾಯಿಗಳನ್ನು ಖರ್ಚು ಮಾಡಿದ್ದಾರೆ. ಇದು ಒಬ್ಬ ಕಾರ್ಮಿಕನಿಗೆ ಇರುವ ಸಂಬಳಕ್ಕಿಂತ ದುಪ್ಪಟ್ಟು ಖರ್ಚಾಗಿದೆ. ಕಾರ್ಮಿಕರ ಮನೆಯ ಮೂರನೇ ಒಂದು ಭಾಗದಷ್ಟು ಮಹಿಳೆಯರು ವೆಚ್ಚವನ್ನು ಸರಿದೂಗಿಸಲು, ಸಾಲ ಮಾಡುತ್ತಾರೆ ಎಂದು ಸಮೀಕ್ಷೆಯ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮುಂಬೈನಲ್ಲಿ NCP – ಶಿವಸೇನೆ ಜಂಟಿ ಪತ್ರಿಕಾಗೋಷ್ಟಿ: NCP ಶಾಸಕಾಂಗ ನಾಯಕತ್ವದಿಂದ ಅಜಿತ್‌ ಪವಾರ್‌ ಉಚ್ಚಾಟನೆ

ಆದಾಗ್ಯೂ, ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿನ ಎಲ್ಲಾ ಮಹಿಳೆಯರಿಗೆ ಯಾವುದೇ ವೆಚ್ಚವಿಲ್ಲದೆ ಸಾಂಸ್ಥಿಕ ವಿತರಣೆ ನೀಡಬೇಕಾಗಿದೆ. ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಕೇವಲ 4 ಕಿಲೋಗ್ರಾಂಗಳಷ್ಟು ಕಡಿಮೆ ಸರಾಸರಿ ತೂಕ ದಾಖಲಾಗಿದೆ ಎಂದು ಅಧ್ಯಯನಗಳು ತಿಳಿಸಿವೆ. ಸೋನಭದ್ರದಲ್ಲಿ ಸಂದರ್ಶನ ಮಾಡಿದ 64 ಗರ್ಭಿಣಿಯರಲ್ಲಿ  ಶೇ. 48 ರಷ್ಟು ಗರ್ಭಿಣಿಯರು ಕಡಿಮೆ ತೂಕ ಹೊಂದಿದ್ದಾರೆ. ಗರ್ಭಾವಸ್ಥೆಯಲ್ಲಿ ಏನು ತಿನ್ನಬೇಕು ಎಂಬುದರ ಅರಿವು ಇವರಿಗಿಲ್ಲ. ಹೀಗಾಗಿ ಸರಾಸರಿಗಿಂತ ಕಡಿಮೆ ತೂಕ ದಾಖಲಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ತಾಯಿ ಆರೋಗ್ಯ ಕಾರ್ಯಕ್ರಮ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವು ಯೋಜನೆಗಳಿವೆ. ಇವುಗಳ ಮೂಲಕ ಗ್ರಾಮೀಣ ಮಹಿಳೆಯರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಪೂರಕ ವ್ಯವಸ್ಥೆ ಮಾಡಲಾಗಿದೆ. ಹೀಗಿರುವಾಗಲೂ ಗ್ರಾಮೀಣ ಭಾಗದ ಕೆಳಮಟ್ಟದ ಮಹಿಳೆಯರಲ್ಲಿ ಅನಾರೋಗ್ಯ ಕಾಡುತ್ತಿದೆ.

ದೈಹಿಕ ದೌರ್ಬಲ್ಯ, ಶಕ್ತಿ ಕುಂದುವಿಕೆ, ಪಾದಗಳಲ್ಲಿ ಸೆಳೆತ, ಹಗಲು ದೃಷ್ಟಿ ದೋಷ, ಮೈ-ಕೈ ಸೆಳತ, ಗರ್ಭಿಣಿಯರಲ್ಲಿ ಕಂಡು ಬರುವ ಅನಾರೋಗ್ಯಕರ ಅಂಶಗಳಾಗಿವೆ. ಅದರಲ್ಲೂ ಶೇ. 41 ರಷ್ಟು ಪಾದಗಳಲ್ಲಿ ಸೆಳೆತ, ದೃಷ್ಟಿ ದೌರ್ಬಲ್ಯ ಶೇ. 17 ರಷ್ಟು ಶೇ.9 ರಷ್ಟು ಮಹಿಳೆಯರಲ್ಲಿ ಸೆಳೆತದ ಲಕ್ಷಣಗಳು ಕಂಡು ಬರುತ್ತವೆ ಎಂದು ಸಮೀಕ್ಷೆ ಹೇಳಿದೆ.

ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಯೋಜನೆಯ ವ್ಯಾಪ್ತಿಯ ತುಲನಾತ್ಮಕ ಅಂಕಿ-ಅಂಶಗಳನ್ನು ಗಮನಿಸಿದರೆ, ಒಡಿಶಾದಲ್ಲಿ ಗರ್ಭಿಣಿಯರು ಚೆನ್ನಾಗಿದ್ದಾರೆ. ಇಲ್ಲಿನ 3 ರಿಂದ 6 ವರ್ಷದೊಳಗಿನ ಅಂಗನವಾಡಿ ಮಕ್ಕಳು ವಾರಕ್ಕೆ ಐದು ಬಾರಿ ಮೊಟ್ಟೆ ಪಡೆಯುತ್ತಾರೆ. ಕಿರಿಯ ಮಕ್ಕಳು, ಗರ್ಭಿಣಿ ಮತ್ತು ಹೆರಿಗೆಯಾದ ಮಹಿಳೆಯರಿಗೆ ಪಡಿತರ ಭಾಗವಾಗಿ ಮೊಟ್ಟೆಗಳನ್ನು ವಿತರಿಸಲಾಗುತ್ತಿದೆ ಎಂದು ಸಮೀಕ್ಷೆ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...