HomeUncategorizedಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

ಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

- Advertisement -
- Advertisement -

ಸ್ತ್ರೀಗೆ ಹೆಣ್ತನ ವರದಾನ. ಮಗುವಿಗೆ ಜನ್ಮ ನೀಡುವುದು ಅಂದರೆ ತಾಯಿಯೇ ಪುನರ್ಜನ್ಮ ಪಡೆದಂತೆ. ಅಂತಹ ತಾಯಿ ಒಂಬತ್ತು ತಿಂಗಳವರೆಗೆ ಮಗುವನ್ನು ಹೊತ್ತು ಕನಸು ಕಟ್ಟುತ್ತಾಳೆ. ಮಗುವಿನ ಒದ್ದಾಟ, ಹೊರಳಾಟವನ್ನು ಅನುಭವಿಸಿ, ಬೇನೆ ತಿಂದು, ಜೀವವನ್ನೇ ಪಣಕ್ಕಿಟ್ಟು ತನ್ನ ಕರುಳ ಕುಡಿಯನ್ನು ಜಗತ್ತಿಗೆ ಪರಿಚಯಿಸುತ್ತಾಳೆ. ಇಂತಹ ತಾಯಿಯ ಹೆರಿಗೆಯ ಸಮಯ ಅದೆಷ್ಟು ಯಾತನಾಮಯ. ಆದರೆ ಇದ್ಯಾವುದನ್ನೂ ಲೆಕ್ಕಿಸದೇ, ಹೆರಿಗೆಯ ಸಮಯದವರೆಗೆ ಗರ್ಭಿಣಿ ಕೆಲಸ ಮಾಡುತ್ತಾಳಂತೆ.

ಹೌದು… ಶೇ. 63 ರಷ್ಟು ಗರ್ಭಿಣಿಯರು ಮಗುವಿನ ಹೆರಿಗೆಯ ಸಮಯದವರೆಗೆ ಕೆಲಸ ಮಾಡುತ್ತಾರೆ ಎಂದು ಜಚ್ಚಾ-ಬಚ್ಚಾ ಸಮೀಕ್ಷೆ ಹೇಳಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಸಮೀಕ್ಷೆ ನಡೆಸಿದ್ದ ಜಚ್ಚಾ-ಬಚ್ಚಾ ಗರ್ಭಿಣಿಯರು ಮಗುವಿಗೆ ಜನ್ಮ ನೀಡುವ ಕೊನೆಯ ಗಳಿಗೆಯವರೆಗೂ ಕೆಲಸ ಮಾಡುತ್ತಾರೆ ಎಂದು ತಿಳಿಸಿದೆ.

ಅರ್ಥಶಾಸ್ತ್ರಜ್ಞ ಜೀನ್ ಡ್ರೇಜ್ ನೇತೃತ್ವದ ಸಂಶೋಧನಾ ತಂಡ, ಛತ್ತೀಸ್ ಗಢ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿತ್ತು. ಹಿಂದಿನ 6 ತಿಂಗಳಲ್ಲಿ ಮಗುವಿಗೆ ಜನ್ಮ ನೀಡಿದ ತಾಯಂದಿರನ್ನು ಮಾತನಾಡಿಸಿತ್ತು. 706 ಮಹಿಳೆಯರಲ್ಲಿ 342 ಗರ್ಭಿಣಿಯರು, 364 ಹೆರಿಗೆಯಾದ ತಾಯಂದಿರನ್ನು (ಶೂಶ್ರೂಷೆ ತಾಯಂದಿರನ್ನು) ಸಂದರ್ಶಿಸಿತ್ತು.

ಸಮೀಕ್ಷೆ ವೇಳೆ, ಶೇ. 21 ರಷ್ಟು ಶುಶ್ರೂಷಾ ಗರ್ಭಿಣಿಯರಿಗೆ ಕೆಲಸದಲ್ಲಿ ಸಹಾಯ ಮಾಡಲು ಸಹಾಯಕರಿಲ್ಲ. ಕೆಲಸಕ್ಕಾಗಿ ಯಾವುದೇ ಸಹಾಯ ಲಭ್ಯವಿಲ್ಲ ಎಂದು ಸಮೀಕ್ಷೆ ತಿಳಿಸಿದೆ. ಅದರಲ್ಲಿ ಶೇ.49 ರಷ್ಟು ಮಹಿಳೆಯರು ಆಹಾರ ಮತ್ತು ವಿಶ್ರಾಂತಿ ಕೊರತೆಯಿಂದ ಬಳಲಿದ್ದಾರೆ ಮತ್ತು ದಣಿದಿದ್ದಾರೆ ಎಂದು ಮಾಹಿತಿಯನ್ನು ಸಮೀಕ್ಷೆ ಬಹಿರಂಗಪಡಿಸಿದೆ.  ದಾಗಿ ಗರ್ಭಾವಸ್ಥೆಯಲ್ಲಿ ಕ್ಷಾಮ ಮತ್ತು ದಣಿದಿದ್ದಾರೆ. ಭಾರತದಲ್ಲಿ ಸಂಭವಿಸುವ 3 ಮಕ್ಕಳ ಸಾವುಗಳಲ್ಲಿ 2 ಮಕ್ಕಳು ಅಪೌಷ್ಟಿಕತೆಯಿಂದ ಸಾವನ್ನಪ್ಪುತ್ತವೆ. ಇದು ಗ್ರಾಮೀಣ ಭಾಗಗಳಲ್ಲಿ ಅತಿಹೆಚ್ಚು ಪ್ರಮಾಣದಲ್ಲಿದೆ ಎಂದು ಸಮೀಕ್ಷೆ ದೃಢೀಕರಿಸಿದೆ.

ಸಾಮಾನ್ಯವಾಗಿ ನಾರ್ಮಲ್ ಶಿಶುಗಳ ಮಾಸ್ ಇಂಡೆಕ್ಸ್ ಹೊಂದಿರುವ ಗರ್ಭಿಣಿಯರ ತೂಕ 13 ರಿಂದ 18 ಕಿಲೋಗ್ರಾಂ ಇರುತ್ತದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಗ್ರಾಮೀಣ ಭಾಗದ ಮಹಿಳೆಯರಲ್ಲಿ 7 ಕಿಲೋ ಗ್ರಾಂ ತೂಕ ಹೆಚ್ಚಿರುತ್ತದೆ ಎಂದು ಸಮೀಕ್ಷೆ ತಿಳಿಸಿದೆ.

ಪ್ರಾಯೋಗಿಕವಾಗಿ, ಶುಶ್ರೂಷಾ ಮಹಿಳೆಯರು ಹೆರಿಗೆಗಾಗಿ ಸರಾಸರಿ 6,500 ರೂಪಾಯಿಗಳನ್ನು ಖರ್ಚು ಮಾಡಿದ್ದಾರೆ. ಇದು ಒಬ್ಬ ಕಾರ್ಮಿಕನಿಗೆ ಇರುವ ಸಂಬಳಕ್ಕಿಂತ ದುಪ್ಪಟ್ಟು ಖರ್ಚಾಗಿದೆ. ಕಾರ್ಮಿಕರ ಮನೆಯ ಮೂರನೇ ಒಂದು ಭಾಗದಷ್ಟು ಮಹಿಳೆಯರು ವೆಚ್ಚವನ್ನು ಸರಿದೂಗಿಸಲು, ಸಾಲ ಮಾಡುತ್ತಾರೆ ಎಂದು ಸಮೀಕ್ಷೆಯ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮುಂಬೈನಲ್ಲಿ NCP – ಶಿವಸೇನೆ ಜಂಟಿ ಪತ್ರಿಕಾಗೋಷ್ಟಿ: NCP ಶಾಸಕಾಂಗ ನಾಯಕತ್ವದಿಂದ ಅಜಿತ್‌ ಪವಾರ್‌ ಉಚ್ಚಾಟನೆ

ಆದಾಗ್ಯೂ, ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿನ ಎಲ್ಲಾ ಮಹಿಳೆಯರಿಗೆ ಯಾವುದೇ ವೆಚ್ಚವಿಲ್ಲದೆ ಸಾಂಸ್ಥಿಕ ವಿತರಣೆ ನೀಡಬೇಕಾಗಿದೆ. ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಕೇವಲ 4 ಕಿಲೋಗ್ರಾಂಗಳಷ್ಟು ಕಡಿಮೆ ಸರಾಸರಿ ತೂಕ ದಾಖಲಾಗಿದೆ ಎಂದು ಅಧ್ಯಯನಗಳು ತಿಳಿಸಿವೆ. ಸೋನಭದ್ರದಲ್ಲಿ ಸಂದರ್ಶನ ಮಾಡಿದ 64 ಗರ್ಭಿಣಿಯರಲ್ಲಿ  ಶೇ. 48 ರಷ್ಟು ಗರ್ಭಿಣಿಯರು ಕಡಿಮೆ ತೂಕ ಹೊಂದಿದ್ದಾರೆ. ಗರ್ಭಾವಸ್ಥೆಯಲ್ಲಿ ಏನು ತಿನ್ನಬೇಕು ಎಂಬುದರ ಅರಿವು ಇವರಿಗಿಲ್ಲ. ಹೀಗಾಗಿ ಸರಾಸರಿಗಿಂತ ಕಡಿಮೆ ತೂಕ ದಾಖಲಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ತಾಯಿ ಆರೋಗ್ಯ ಕಾರ್ಯಕ್ರಮ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವು ಯೋಜನೆಗಳಿವೆ. ಇವುಗಳ ಮೂಲಕ ಗ್ರಾಮೀಣ ಮಹಿಳೆಯರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಪೂರಕ ವ್ಯವಸ್ಥೆ ಮಾಡಲಾಗಿದೆ. ಹೀಗಿರುವಾಗಲೂ ಗ್ರಾಮೀಣ ಭಾಗದ ಕೆಳಮಟ್ಟದ ಮಹಿಳೆಯರಲ್ಲಿ ಅನಾರೋಗ್ಯ ಕಾಡುತ್ತಿದೆ.

ದೈಹಿಕ ದೌರ್ಬಲ್ಯ, ಶಕ್ತಿ ಕುಂದುವಿಕೆ, ಪಾದಗಳಲ್ಲಿ ಸೆಳೆತ, ಹಗಲು ದೃಷ್ಟಿ ದೋಷ, ಮೈ-ಕೈ ಸೆಳತ, ಗರ್ಭಿಣಿಯರಲ್ಲಿ ಕಂಡು ಬರುವ ಅನಾರೋಗ್ಯಕರ ಅಂಶಗಳಾಗಿವೆ. ಅದರಲ್ಲೂ ಶೇ. 41 ರಷ್ಟು ಪಾದಗಳಲ್ಲಿ ಸೆಳೆತ, ದೃಷ್ಟಿ ದೌರ್ಬಲ್ಯ ಶೇ. 17 ರಷ್ಟು ಶೇ.9 ರಷ್ಟು ಮಹಿಳೆಯರಲ್ಲಿ ಸೆಳೆತದ ಲಕ್ಷಣಗಳು ಕಂಡು ಬರುತ್ತವೆ ಎಂದು ಸಮೀಕ್ಷೆ ಹೇಳಿದೆ.

ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಯೋಜನೆಯ ವ್ಯಾಪ್ತಿಯ ತುಲನಾತ್ಮಕ ಅಂಕಿ-ಅಂಶಗಳನ್ನು ಗಮನಿಸಿದರೆ, ಒಡಿಶಾದಲ್ಲಿ ಗರ್ಭಿಣಿಯರು ಚೆನ್ನಾಗಿದ್ದಾರೆ. ಇಲ್ಲಿನ 3 ರಿಂದ 6 ವರ್ಷದೊಳಗಿನ ಅಂಗನವಾಡಿ ಮಕ್ಕಳು ವಾರಕ್ಕೆ ಐದು ಬಾರಿ ಮೊಟ್ಟೆ ಪಡೆಯುತ್ತಾರೆ. ಕಿರಿಯ ಮಕ್ಕಳು, ಗರ್ಭಿಣಿ ಮತ್ತು ಹೆರಿಗೆಯಾದ ಮಹಿಳೆಯರಿಗೆ ಪಡಿತರ ಭಾಗವಾಗಿ ಮೊಟ್ಟೆಗಳನ್ನು ವಿತರಿಸಲಾಗುತ್ತಿದೆ ಎಂದು ಸಮೀಕ್ಷೆ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...