HomeUncategorizedಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

ಭಾರತದಲ್ಲಿ ಶೇ.63 ರಷ್ಟು ಗರ್ಭಿಣಿಯರು ಹೆರಿಗೆಯಾಗುವ ಕೊನೆಯ ಸಮಯದವರೆಗೂ ಕೆಲಸ ಮಾಡುತ್ತಾರೆ: ಜಚ್ಚಾ-ಬಚ್ಚಾ ಸಮೀಕ್ಷೆ

- Advertisement -
- Advertisement -

ಸ್ತ್ರೀಗೆ ಹೆಣ್ತನ ವರದಾನ. ಮಗುವಿಗೆ ಜನ್ಮ ನೀಡುವುದು ಅಂದರೆ ತಾಯಿಯೇ ಪುನರ್ಜನ್ಮ ಪಡೆದಂತೆ. ಅಂತಹ ತಾಯಿ ಒಂಬತ್ತು ತಿಂಗಳವರೆಗೆ ಮಗುವನ್ನು ಹೊತ್ತು ಕನಸು ಕಟ್ಟುತ್ತಾಳೆ. ಮಗುವಿನ ಒದ್ದಾಟ, ಹೊರಳಾಟವನ್ನು ಅನುಭವಿಸಿ, ಬೇನೆ ತಿಂದು, ಜೀವವನ್ನೇ ಪಣಕ್ಕಿಟ್ಟು ತನ್ನ ಕರುಳ ಕುಡಿಯನ್ನು ಜಗತ್ತಿಗೆ ಪರಿಚಯಿಸುತ್ತಾಳೆ. ಇಂತಹ ತಾಯಿಯ ಹೆರಿಗೆಯ ಸಮಯ ಅದೆಷ್ಟು ಯಾತನಾಮಯ. ಆದರೆ ಇದ್ಯಾವುದನ್ನೂ ಲೆಕ್ಕಿಸದೇ, ಹೆರಿಗೆಯ ಸಮಯದವರೆಗೆ ಗರ್ಭಿಣಿ ಕೆಲಸ ಮಾಡುತ್ತಾಳಂತೆ.

ಹೌದು… ಶೇ. 63 ರಷ್ಟು ಗರ್ಭಿಣಿಯರು ಮಗುವಿನ ಹೆರಿಗೆಯ ಸಮಯದವರೆಗೆ ಕೆಲಸ ಮಾಡುತ್ತಾರೆ ಎಂದು ಜಚ್ಚಾ-ಬಚ್ಚಾ ಸಮೀಕ್ಷೆ ಹೇಳಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಸಮೀಕ್ಷೆ ನಡೆಸಿದ್ದ ಜಚ್ಚಾ-ಬಚ್ಚಾ ಗರ್ಭಿಣಿಯರು ಮಗುವಿಗೆ ಜನ್ಮ ನೀಡುವ ಕೊನೆಯ ಗಳಿಗೆಯವರೆಗೂ ಕೆಲಸ ಮಾಡುತ್ತಾರೆ ಎಂದು ತಿಳಿಸಿದೆ.

ಅರ್ಥಶಾಸ್ತ್ರಜ್ಞ ಜೀನ್ ಡ್ರೇಜ್ ನೇತೃತ್ವದ ಸಂಶೋಧನಾ ತಂಡ, ಛತ್ತೀಸ್ ಗಢ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿತ್ತು. ಹಿಂದಿನ 6 ತಿಂಗಳಲ್ಲಿ ಮಗುವಿಗೆ ಜನ್ಮ ನೀಡಿದ ತಾಯಂದಿರನ್ನು ಮಾತನಾಡಿಸಿತ್ತು. 706 ಮಹಿಳೆಯರಲ್ಲಿ 342 ಗರ್ಭಿಣಿಯರು, 364 ಹೆರಿಗೆಯಾದ ತಾಯಂದಿರನ್ನು (ಶೂಶ್ರೂಷೆ ತಾಯಂದಿರನ್ನು) ಸಂದರ್ಶಿಸಿತ್ತು.

ಸಮೀಕ್ಷೆ ವೇಳೆ, ಶೇ. 21 ರಷ್ಟು ಶುಶ್ರೂಷಾ ಗರ್ಭಿಣಿಯರಿಗೆ ಕೆಲಸದಲ್ಲಿ ಸಹಾಯ ಮಾಡಲು ಸಹಾಯಕರಿಲ್ಲ. ಕೆಲಸಕ್ಕಾಗಿ ಯಾವುದೇ ಸಹಾಯ ಲಭ್ಯವಿಲ್ಲ ಎಂದು ಸಮೀಕ್ಷೆ ತಿಳಿಸಿದೆ. ಅದರಲ್ಲಿ ಶೇ.49 ರಷ್ಟು ಮಹಿಳೆಯರು ಆಹಾರ ಮತ್ತು ವಿಶ್ರಾಂತಿ ಕೊರತೆಯಿಂದ ಬಳಲಿದ್ದಾರೆ ಮತ್ತು ದಣಿದಿದ್ದಾರೆ ಎಂದು ಮಾಹಿತಿಯನ್ನು ಸಮೀಕ್ಷೆ ಬಹಿರಂಗಪಡಿಸಿದೆ.  ದಾಗಿ ಗರ್ಭಾವಸ್ಥೆಯಲ್ಲಿ ಕ್ಷಾಮ ಮತ್ತು ದಣಿದಿದ್ದಾರೆ. ಭಾರತದಲ್ಲಿ ಸಂಭವಿಸುವ 3 ಮಕ್ಕಳ ಸಾವುಗಳಲ್ಲಿ 2 ಮಕ್ಕಳು ಅಪೌಷ್ಟಿಕತೆಯಿಂದ ಸಾವನ್ನಪ್ಪುತ್ತವೆ. ಇದು ಗ್ರಾಮೀಣ ಭಾಗಗಳಲ್ಲಿ ಅತಿಹೆಚ್ಚು ಪ್ರಮಾಣದಲ್ಲಿದೆ ಎಂದು ಸಮೀಕ್ಷೆ ದೃಢೀಕರಿಸಿದೆ.

ಸಾಮಾನ್ಯವಾಗಿ ನಾರ್ಮಲ್ ಶಿಶುಗಳ ಮಾಸ್ ಇಂಡೆಕ್ಸ್ ಹೊಂದಿರುವ ಗರ್ಭಿಣಿಯರ ತೂಕ 13 ರಿಂದ 18 ಕಿಲೋಗ್ರಾಂ ಇರುತ್ತದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಗ್ರಾಮೀಣ ಭಾಗದ ಮಹಿಳೆಯರಲ್ಲಿ 7 ಕಿಲೋ ಗ್ರಾಂ ತೂಕ ಹೆಚ್ಚಿರುತ್ತದೆ ಎಂದು ಸಮೀಕ್ಷೆ ತಿಳಿಸಿದೆ.

ಪ್ರಾಯೋಗಿಕವಾಗಿ, ಶುಶ್ರೂಷಾ ಮಹಿಳೆಯರು ಹೆರಿಗೆಗಾಗಿ ಸರಾಸರಿ 6,500 ರೂಪಾಯಿಗಳನ್ನು ಖರ್ಚು ಮಾಡಿದ್ದಾರೆ. ಇದು ಒಬ್ಬ ಕಾರ್ಮಿಕನಿಗೆ ಇರುವ ಸಂಬಳಕ್ಕಿಂತ ದುಪ್ಪಟ್ಟು ಖರ್ಚಾಗಿದೆ. ಕಾರ್ಮಿಕರ ಮನೆಯ ಮೂರನೇ ಒಂದು ಭಾಗದಷ್ಟು ಮಹಿಳೆಯರು ವೆಚ್ಚವನ್ನು ಸರಿದೂಗಿಸಲು, ಸಾಲ ಮಾಡುತ್ತಾರೆ ಎಂದು ಸಮೀಕ್ಷೆಯ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮುಂಬೈನಲ್ಲಿ NCP – ಶಿವಸೇನೆ ಜಂಟಿ ಪತ್ರಿಕಾಗೋಷ್ಟಿ: NCP ಶಾಸಕಾಂಗ ನಾಯಕತ್ವದಿಂದ ಅಜಿತ್‌ ಪವಾರ್‌ ಉಚ್ಚಾಟನೆ

ಆದಾಗ್ಯೂ, ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿನ ಎಲ್ಲಾ ಮಹಿಳೆಯರಿಗೆ ಯಾವುದೇ ವೆಚ್ಚವಿಲ್ಲದೆ ಸಾಂಸ್ಥಿಕ ವಿತರಣೆ ನೀಡಬೇಕಾಗಿದೆ. ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಕೇವಲ 4 ಕಿಲೋಗ್ರಾಂಗಳಷ್ಟು ಕಡಿಮೆ ಸರಾಸರಿ ತೂಕ ದಾಖಲಾಗಿದೆ ಎಂದು ಅಧ್ಯಯನಗಳು ತಿಳಿಸಿವೆ. ಸೋನಭದ್ರದಲ್ಲಿ ಸಂದರ್ಶನ ಮಾಡಿದ 64 ಗರ್ಭಿಣಿಯರಲ್ಲಿ  ಶೇ. 48 ರಷ್ಟು ಗರ್ಭಿಣಿಯರು ಕಡಿಮೆ ತೂಕ ಹೊಂದಿದ್ದಾರೆ. ಗರ್ಭಾವಸ್ಥೆಯಲ್ಲಿ ಏನು ತಿನ್ನಬೇಕು ಎಂಬುದರ ಅರಿವು ಇವರಿಗಿಲ್ಲ. ಹೀಗಾಗಿ ಸರಾಸರಿಗಿಂತ ಕಡಿಮೆ ತೂಕ ದಾಖಲಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ತಾಯಿ ಆರೋಗ್ಯ ಕಾರ್ಯಕ್ರಮ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವು ಯೋಜನೆಗಳಿವೆ. ಇವುಗಳ ಮೂಲಕ ಗ್ರಾಮೀಣ ಮಹಿಳೆಯರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಪೂರಕ ವ್ಯವಸ್ಥೆ ಮಾಡಲಾಗಿದೆ. ಹೀಗಿರುವಾಗಲೂ ಗ್ರಾಮೀಣ ಭಾಗದ ಕೆಳಮಟ್ಟದ ಮಹಿಳೆಯರಲ್ಲಿ ಅನಾರೋಗ್ಯ ಕಾಡುತ್ತಿದೆ.

ದೈಹಿಕ ದೌರ್ಬಲ್ಯ, ಶಕ್ತಿ ಕುಂದುವಿಕೆ, ಪಾದಗಳಲ್ಲಿ ಸೆಳೆತ, ಹಗಲು ದೃಷ್ಟಿ ದೋಷ, ಮೈ-ಕೈ ಸೆಳತ, ಗರ್ಭಿಣಿಯರಲ್ಲಿ ಕಂಡು ಬರುವ ಅನಾರೋಗ್ಯಕರ ಅಂಶಗಳಾಗಿವೆ. ಅದರಲ್ಲೂ ಶೇ. 41 ರಷ್ಟು ಪಾದಗಳಲ್ಲಿ ಸೆಳೆತ, ದೃಷ್ಟಿ ದೌರ್ಬಲ್ಯ ಶೇ. 17 ರಷ್ಟು ಶೇ.9 ರಷ್ಟು ಮಹಿಳೆಯರಲ್ಲಿ ಸೆಳೆತದ ಲಕ್ಷಣಗಳು ಕಂಡು ಬರುತ್ತವೆ ಎಂದು ಸಮೀಕ್ಷೆ ಹೇಳಿದೆ.

ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಯೋಜನೆಯ ವ್ಯಾಪ್ತಿಯ ತುಲನಾತ್ಮಕ ಅಂಕಿ-ಅಂಶಗಳನ್ನು ಗಮನಿಸಿದರೆ, ಒಡಿಶಾದಲ್ಲಿ ಗರ್ಭಿಣಿಯರು ಚೆನ್ನಾಗಿದ್ದಾರೆ. ಇಲ್ಲಿನ 3 ರಿಂದ 6 ವರ್ಷದೊಳಗಿನ ಅಂಗನವಾಡಿ ಮಕ್ಕಳು ವಾರಕ್ಕೆ ಐದು ಬಾರಿ ಮೊಟ್ಟೆ ಪಡೆಯುತ್ತಾರೆ. ಕಿರಿಯ ಮಕ್ಕಳು, ಗರ್ಭಿಣಿ ಮತ್ತು ಹೆರಿಗೆಯಾದ ಮಹಿಳೆಯರಿಗೆ ಪಡಿತರ ಭಾಗವಾಗಿ ಮೊಟ್ಟೆಗಳನ್ನು ವಿತರಿಸಲಾಗುತ್ತಿದೆ ಎಂದು ಸಮೀಕ್ಷೆ ವರದಿಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...