Homeಮುಖಪುಟತೆಲಂಗಾಣ | 64 ಮಾವೋವಾದಿಗಳು ಪೊಲೀಸರಿಗೆ ಶರಣು

ತೆಲಂಗಾಣ | 64 ಮಾವೋವಾದಿಗಳು ಪೊಲೀಸರಿಗೆ ಶರಣು

- Advertisement -
- Advertisement -

ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ಶನಿವಾರ (ಮಾ.15) ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ಒಟ್ಟು 64 ಸದಸ್ಯರು ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಛತ್ತೀಸ್‌ಗಢ ಮತ್ತು ತೆಲಂಗಾಣದ ಗಡಿ ಗ್ರಾಮಗಳ ಪ್ರದೇಶ ಸಮಿತಿ ಸದಸ್ಯ (ಎಸಿಎಂ) ಸೇರಿದಂತೆ ವಿವಿಧ ಕೇಡರ್‌ಗಳಿಗೆ ಸೇರಿದ 64 ಮಾವೋವಾದಿಗಳು ನಕ್ಸಲಿಸಂನ ಹಾದಿಯನ್ನು ತ್ಯಜಿಸಿ ತಮ್ಮ ಕುಟುಂಬಗಳೊಂದಿಗೆ ಶಾಂತಿಯುತ ಜೀವನವನ್ನು ನಡೆಸಲು ನಿರ್ಧರಿಸಿದ್ದಾರೆ. ಪೊಲೀಸ್ ಪ್ರಕಟಣೆಯ ಪ್ರಕಾರ, ಅವರು ಐಜಿಪಿ ಬಹು-ವಲಯ I ಮತ್ತು ಜಿಲ್ಲಾ ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ವರದಿಗಳು ಹೇಳಿವೆ.

ಭದ್ರಾದ್ರಿ ಕೊಥಗುಡೆಮ್ ಜಿಲ್ಲಾ ಪೊಲೀಸರು ಮತ್ತು ಸಿಆರ್‌ಪಿಎಫ್‌ನಿಂದ ಆಪರೇಷನ್ ‘ಚೆಯುತ’ ಕಾರ್ಯಕ್ರಮದಡಿಯಲ್ಲಿ ಶರಣಾದ ಮಾವೋವಾದಿಗಳಿಗೆ ಜಾರಿಗೆ ತರಲಾಗುತ್ತಿರುವ ಕಲ್ಯಾಣ ಕ್ರಮಗಳು ಹಾಗೂ ಬುಡಕಟ್ಟು (ಆದಿವಾಸಿ) ಸಮುದಾಯಗಳ ಅಭಿವೃದ್ಧಿ ಮತ್ತು ಕಲ್ಯಾಣ ಚಟುವಟಿಕೆಗಳ ಬಗ್ಗೆ ತಿಳಿದುಕೊಂಡ ನಂತರ, ಅನೇಕ ಮಾವೋವಾದಿಗಳು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗುತ್ತಿದ್ದಾರೆ ಎಂದು ಪೊಲೀಸರ ಪ್ರಕಟಣೆ ತಿಳಿಸಿದೆ.

ಇಂದು ಶರಣಾದ 64 ಜನರು ಸೇರಿದಂತೆ ಒಟ್ಟು 122 ಮಾವೋವಾದಿಗಳು ಕಳೆದ ಎರಡೂವರೆ ತಿಂಗಳಿನಲ್ಲಿ ಶರಣಾಗಿದ್ದಾರೆ ಎಂದು ಭದ್ರಾದ್ರಿ ಕೊಥಗುಡೆಮ್ ಪೊಲೀಸ್ ವರಿಷ್ಠಾಧಿಕಾರಿ ಬಿ ರೋಹಿತ್ ರಾಜು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

“ನಿಷೇಧಿತ ಸಿಪಿಐ (ಮಾವೋವಾದಿ) ಪಕ್ಷವು ಹಳೆಯ ಸಿದ್ಧಾಂತವನ್ನು ಅನುಸರಿಸುತ್ತಿದೆ ಮತ್ತು ಬುಡಕಟ್ಟು ಜನರ ನಂಬಿಕೆ ಮತ್ತು ಬೆಂಬಲವನ್ನು ಕಳೆದುಕೊಂಡಿದೆ ಎಂದು ಶರಣಾದವರು ಅರಿತುಕೊಂಡಿದ್ದಾರೆ” ಎಂದು ಎಸ್‌ಪಿ ತಿಳಿಸಿದ್ದಾರೆ.

“ಇತ್ತೀಚೆಗೆ, ಮಾವೋವಾದಿಗಳು ಇಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಿಂದಾಗಿ ಬುಡಕಟ್ಟು ಮಹಿಳೆಯೊಬ್ಬರು ತಮ್ಮ ಕಾಲು ಕಳೆದುಕೊಂಡಿದ್ದಾರೆ. ಮಾವೋವಾದಿ ನಾಯಕರ ಇಂತಹ ಕೃತ್ಯಗಳಿಂದಾಗಿ, ಬುಡಕಟ್ಟು ಸಮುದಾಯಗಳು ಮೂಲಭೂತ ಸೌಲಭ್ಯಗಳನ್ನು ಸಹ ಪಡೆಯಲು ಹೆಣಗಾಡುತ್ತಿವೆ” ಎಂದು ಪೊಲೀಸರು ಹೇಳಿದ್ದಾರೆ.

ಶರಣಾಗಲು ಮತ್ತು ಸಾಮಾನ್ಯ ಜೀವನ ನಡೆಸಲು ಬಯಸುವ ಮಾವೋವಾದಿಗಳು ತಮ್ಮ ಹತ್ತಿರದ ಪೊಲೀಸ್ ಠಾಣೆ ಅಥವಾ ಜಿಲ್ಲಾ ಅಧಿಕಾರಿಗಳನ್ನು ತಮ್ಮ ಕುಟುಂಬ ಸದಸ್ಯರ ಮೂಲಕ ಅಥವಾ ನೇರವಾಗಿ ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಕಸ್ಟಡಿಯಲ್ಲಿ ಯುವಕ ಸಾವು; ಪೊಲೀಸರಿಂದ ಚಿತ್ರಹಿಂಸೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...