Homeಅಂತರಾಷ್ಟ್ರೀಯರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ..- ಮೀಡಿಯಾ ಪಾರ್ಟ್

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳನ್ನು ಭಾರತಕ್ಕೆ ಮಾರುವುದಕ್ಕಾಗಿ ಭಾರತದ ಮಧ್ಯವರ್ತಿಯೊಬ್ಬರಿಗೆ 7.5 ಮಿಲಿಯನ್ ಯೂರೋ (65 ಕೋಟಿ ರೂ) ಲಂಚ ನೀಡಿದೆ. ಈ ಕುರಿತು ಸ್ಪಷ್ಟ ದಾಖಲೆಗಳಿದ್ದರೂ ಸಹ ಭಾರತೀಯ ಏಜೆನ್ಸಿ (CBI) ತನಿಖೆ ಮಾಡಲು ವಿಫಲವಾಗಿದೆ ಎಂದು ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ.

59,000 ಕೋಟಿ ರೂಗಳ ರಾಫೇಲ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮೀಡಿಯಾಪಾರ್ಟ್ 2013 ಕ್ಕೆ ಮುಂಚೆಯೇ ಕಂಪನಿಯು ಮಧ್ಯವರ್ತಿಗೆ ಹಣ ನೀಡಿದೆ ಎಂದು ಹೇಳಿದೆ. ಆ ದಾಖಲೆಗಳನ್ನು ಸಿಬಿಐ ಕಚೇರಿಗೆ ಕಳುಹಿಸಿದೆ.

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ ಎಂದು ಪತ್ರಿಕೆ ದೂರಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ಮೇಲೆ ಈ ಪ್ರಕರಣದಲ್ಲಿ ಏಕೆ ತನಿಖೆಯಿಲ್ಲ ಎಂದು ಮೀಡಿಯಾಪಾರ್ಟ್ ಪ್ರಶ್ನಿಸಿದೆ.

ಮೀಡಿಯಾ ಪಾರ್ಟ್ ಪತ್ರಿಕೆಯೂ ರಾಫೇಲ್ ಹಗರಣದ ದಾಖಲೆಗಳ ತನಿಖೆಯ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ರಾಫೇಲ್ ಭ್ರಷ್ಟಾಚಾರದ ಕುರಿತು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.

ರಫೇಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಒಂದು ವಾರದಲ್ಲಿ ಸಿಬಿಐಗೆ ಅಕ್ಟೋಬರ್ 11, 2018ರಂದೇ ದಾಖಲೆಗಳನ್ನು ಒದಗಿಸಲಾಗಿದೆ. ಅದರೂ ತನಿಖೆ ಆರಂಭಿಸದಿರಲು ಸಿಬಿಐ ನಿರ್ಧರಿಸಿದೆ. ರಹಸ್ಯವಾಗಿ ಲಂಚ ಪಡೆದಿರುವುದು ಸಾಬೀತಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮೀಡಿಯಾಪಾರ್ಟ್ ಆರೋಪಿಸಿದೆ.

“ವಾಸ್ತವದಲ್ಲಿ ಎಷ್ಟು ಲಂಚ ಮತ್ತು ಕಮಿಷನ್ ಅನ್ನು ಪಾವತಿಸಲಾಗಿದೆ? ಮತ್ತು ಭಾರತ ಸರ್ಕಾರದಲ್ಲಿ ಯಾರಿಗೆ ನೀಡಲಾಗಿದೆ ಎಂದು ಕಂಡುಹಿಡಿಯಲು ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದದ ಬಗ್ಗೆ ಪೂರ್ಣ ಮತ್ತು ಸ್ವತಂತ್ರ ತನಿಖೆಯ ಅಗತ್ಯವಿಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.


ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ – ರಫೇಲ್ ಡೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...