Homeಅಂತರಾಷ್ಟ್ರೀಯರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ..- ಮೀಡಿಯಾ ಪಾರ್ಟ್

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳನ್ನು ಭಾರತಕ್ಕೆ ಮಾರುವುದಕ್ಕಾಗಿ ಭಾರತದ ಮಧ್ಯವರ್ತಿಯೊಬ್ಬರಿಗೆ 7.5 ಮಿಲಿಯನ್ ಯೂರೋ (65 ಕೋಟಿ ರೂ) ಲಂಚ ನೀಡಿದೆ. ಈ ಕುರಿತು ಸ್ಪಷ್ಟ ದಾಖಲೆಗಳಿದ್ದರೂ ಸಹ ಭಾರತೀಯ ಏಜೆನ್ಸಿ (CBI) ತನಿಖೆ ಮಾಡಲು ವಿಫಲವಾಗಿದೆ ಎಂದು ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ.

59,000 ಕೋಟಿ ರೂಗಳ ರಾಫೇಲ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮೀಡಿಯಾಪಾರ್ಟ್ 2013 ಕ್ಕೆ ಮುಂಚೆಯೇ ಕಂಪನಿಯು ಮಧ್ಯವರ್ತಿಗೆ ಹಣ ನೀಡಿದೆ ಎಂದು ಹೇಳಿದೆ. ಆ ದಾಖಲೆಗಳನ್ನು ಸಿಬಿಐ ಕಚೇರಿಗೆ ಕಳುಹಿಸಿದೆ.

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ ಎಂದು ಪತ್ರಿಕೆ ದೂರಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ಮೇಲೆ ಈ ಪ್ರಕರಣದಲ್ಲಿ ಏಕೆ ತನಿಖೆಯಿಲ್ಲ ಎಂದು ಮೀಡಿಯಾಪಾರ್ಟ್ ಪ್ರಶ್ನಿಸಿದೆ.

ಮೀಡಿಯಾ ಪಾರ್ಟ್ ಪತ್ರಿಕೆಯೂ ರಾಫೇಲ್ ಹಗರಣದ ದಾಖಲೆಗಳ ತನಿಖೆಯ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ರಾಫೇಲ್ ಭ್ರಷ್ಟಾಚಾರದ ಕುರಿತು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.

ರಫೇಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಒಂದು ವಾರದಲ್ಲಿ ಸಿಬಿಐಗೆ ಅಕ್ಟೋಬರ್ 11, 2018ರಂದೇ ದಾಖಲೆಗಳನ್ನು ಒದಗಿಸಲಾಗಿದೆ. ಅದರೂ ತನಿಖೆ ಆರಂಭಿಸದಿರಲು ಸಿಬಿಐ ನಿರ್ಧರಿಸಿದೆ. ರಹಸ್ಯವಾಗಿ ಲಂಚ ಪಡೆದಿರುವುದು ಸಾಬೀತಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮೀಡಿಯಾಪಾರ್ಟ್ ಆರೋಪಿಸಿದೆ.

“ವಾಸ್ತವದಲ್ಲಿ ಎಷ್ಟು ಲಂಚ ಮತ್ತು ಕಮಿಷನ್ ಅನ್ನು ಪಾವತಿಸಲಾಗಿದೆ? ಮತ್ತು ಭಾರತ ಸರ್ಕಾರದಲ್ಲಿ ಯಾರಿಗೆ ನೀಡಲಾಗಿದೆ ಎಂದು ಕಂಡುಹಿಡಿಯಲು ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದದ ಬಗ್ಗೆ ಪೂರ್ಣ ಮತ್ತು ಸ್ವತಂತ್ರ ತನಿಖೆಯ ಅಗತ್ಯವಿಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.


ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ – ರಫೇಲ್ ಡೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...