Homeಅಂತರಾಷ್ಟ್ರೀಯರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ..- ಮೀಡಿಯಾ ಪಾರ್ಟ್

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳನ್ನು ಭಾರತಕ್ಕೆ ಮಾರುವುದಕ್ಕಾಗಿ ಭಾರತದ ಮಧ್ಯವರ್ತಿಯೊಬ್ಬರಿಗೆ 7.5 ಮಿಲಿಯನ್ ಯೂರೋ (65 ಕೋಟಿ ರೂ) ಲಂಚ ನೀಡಿದೆ. ಈ ಕುರಿತು ಸ್ಪಷ್ಟ ದಾಖಲೆಗಳಿದ್ದರೂ ಸಹ ಭಾರತೀಯ ಏಜೆನ್ಸಿ (CBI) ತನಿಖೆ ಮಾಡಲು ವಿಫಲವಾಗಿದೆ ಎಂದು ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ.

59,000 ಕೋಟಿ ರೂಗಳ ರಾಫೇಲ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮೀಡಿಯಾಪಾರ್ಟ್ 2013 ಕ್ಕೆ ಮುಂಚೆಯೇ ಕಂಪನಿಯು ಮಧ್ಯವರ್ತಿಗೆ ಹಣ ನೀಡಿದೆ ಎಂದು ಹೇಳಿದೆ. ಆ ದಾಖಲೆಗಳನ್ನು ಸಿಬಿಐ ಕಚೇರಿಗೆ ಕಳುಹಿಸಿದೆ.

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ ಎಂದು ಪತ್ರಿಕೆ ದೂರಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ಮೇಲೆ ಈ ಪ್ರಕರಣದಲ್ಲಿ ಏಕೆ ತನಿಖೆಯಿಲ್ಲ ಎಂದು ಮೀಡಿಯಾಪಾರ್ಟ್ ಪ್ರಶ್ನಿಸಿದೆ.

ಮೀಡಿಯಾ ಪಾರ್ಟ್ ಪತ್ರಿಕೆಯೂ ರಾಫೇಲ್ ಹಗರಣದ ದಾಖಲೆಗಳ ತನಿಖೆಯ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ರಾಫೇಲ್ ಭ್ರಷ್ಟಾಚಾರದ ಕುರಿತು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.

ರಫೇಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಒಂದು ವಾರದಲ್ಲಿ ಸಿಬಿಐಗೆ ಅಕ್ಟೋಬರ್ 11, 2018ರಂದೇ ದಾಖಲೆಗಳನ್ನು ಒದಗಿಸಲಾಗಿದೆ. ಅದರೂ ತನಿಖೆ ಆರಂಭಿಸದಿರಲು ಸಿಬಿಐ ನಿರ್ಧರಿಸಿದೆ. ರಹಸ್ಯವಾಗಿ ಲಂಚ ಪಡೆದಿರುವುದು ಸಾಬೀತಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮೀಡಿಯಾಪಾರ್ಟ್ ಆರೋಪಿಸಿದೆ.

“ವಾಸ್ತವದಲ್ಲಿ ಎಷ್ಟು ಲಂಚ ಮತ್ತು ಕಮಿಷನ್ ಅನ್ನು ಪಾವತಿಸಲಾಗಿದೆ? ಮತ್ತು ಭಾರತ ಸರ್ಕಾರದಲ್ಲಿ ಯಾರಿಗೆ ನೀಡಲಾಗಿದೆ ಎಂದು ಕಂಡುಹಿಡಿಯಲು ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದದ ಬಗ್ಗೆ ಪೂರ್ಣ ಮತ್ತು ಸ್ವತಂತ್ರ ತನಿಖೆಯ ಅಗತ್ಯವಿಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.


ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ – ರಫೇಲ್ ಡೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...