Homeಅಂತರಾಷ್ಟ್ರೀಯರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ..- ಮೀಡಿಯಾ ಪಾರ್ಟ್

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳನ್ನು ಭಾರತಕ್ಕೆ ಮಾರುವುದಕ್ಕಾಗಿ ಭಾರತದ ಮಧ್ಯವರ್ತಿಯೊಬ್ಬರಿಗೆ 7.5 ಮಿಲಿಯನ್ ಯೂರೋ (65 ಕೋಟಿ ರೂ) ಲಂಚ ನೀಡಿದೆ. ಈ ಕುರಿತು ಸ್ಪಷ್ಟ ದಾಖಲೆಗಳಿದ್ದರೂ ಸಹ ಭಾರತೀಯ ಏಜೆನ್ಸಿ (CBI) ತನಿಖೆ ಮಾಡಲು ವಿಫಲವಾಗಿದೆ ಎಂದು ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ.

59,000 ಕೋಟಿ ರೂಗಳ ರಾಫೇಲ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮೀಡಿಯಾಪಾರ್ಟ್ 2013 ಕ್ಕೆ ಮುಂಚೆಯೇ ಕಂಪನಿಯು ಮಧ್ಯವರ್ತಿಗೆ ಹಣ ನೀಡಿದೆ ಎಂದು ಹೇಳಿದೆ. ಆ ದಾಖಲೆಗಳನ್ನು ಸಿಬಿಐ ಕಚೇರಿಗೆ ಕಳುಹಿಸಿದೆ.

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ ಎಂದು ಪತ್ರಿಕೆ ದೂರಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ಮೇಲೆ ಈ ಪ್ರಕರಣದಲ್ಲಿ ಏಕೆ ತನಿಖೆಯಿಲ್ಲ ಎಂದು ಮೀಡಿಯಾಪಾರ್ಟ್ ಪ್ರಶ್ನಿಸಿದೆ.

ಮೀಡಿಯಾ ಪಾರ್ಟ್ ಪತ್ರಿಕೆಯೂ ರಾಫೇಲ್ ಹಗರಣದ ದಾಖಲೆಗಳ ತನಿಖೆಯ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ರಾಫೇಲ್ ಭ್ರಷ್ಟಾಚಾರದ ಕುರಿತು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.

ರಫೇಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಒಂದು ವಾರದಲ್ಲಿ ಸಿಬಿಐಗೆ ಅಕ್ಟೋಬರ್ 11, 2018ರಂದೇ ದಾಖಲೆಗಳನ್ನು ಒದಗಿಸಲಾಗಿದೆ. ಅದರೂ ತನಿಖೆ ಆರಂಭಿಸದಿರಲು ಸಿಬಿಐ ನಿರ್ಧರಿಸಿದೆ. ರಹಸ್ಯವಾಗಿ ಲಂಚ ಪಡೆದಿರುವುದು ಸಾಬೀತಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮೀಡಿಯಾಪಾರ್ಟ್ ಆರೋಪಿಸಿದೆ.

“ವಾಸ್ತವದಲ್ಲಿ ಎಷ್ಟು ಲಂಚ ಮತ್ತು ಕಮಿಷನ್ ಅನ್ನು ಪಾವತಿಸಲಾಗಿದೆ? ಮತ್ತು ಭಾರತ ಸರ್ಕಾರದಲ್ಲಿ ಯಾರಿಗೆ ನೀಡಲಾಗಿದೆ ಎಂದು ಕಂಡುಹಿಡಿಯಲು ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದದ ಬಗ್ಗೆ ಪೂರ್ಣ ಮತ್ತು ಸ್ವತಂತ್ರ ತನಿಖೆಯ ಅಗತ್ಯವಿಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.


ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ – ರಫೇಲ್ ಡೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...