Homeಅಂತರಾಷ್ಟ್ರೀಯರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ..- ಮೀಡಿಯಾ ಪಾರ್ಟ್

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳನ್ನು ಭಾರತಕ್ಕೆ ಮಾರುವುದಕ್ಕಾಗಿ ಭಾರತದ ಮಧ್ಯವರ್ತಿಯೊಬ್ಬರಿಗೆ 7.5 ಮಿಲಿಯನ್ ಯೂರೋ (65 ಕೋಟಿ ರೂ) ಲಂಚ ನೀಡಿದೆ. ಈ ಕುರಿತು ಸ್ಪಷ್ಟ ದಾಖಲೆಗಳಿದ್ದರೂ ಸಹ ಭಾರತೀಯ ಏಜೆನ್ಸಿ (CBI) ತನಿಖೆ ಮಾಡಲು ವಿಫಲವಾಗಿದೆ ಎಂದು ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ.

59,000 ಕೋಟಿ ರೂಗಳ ರಾಫೇಲ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮೀಡಿಯಾಪಾರ್ಟ್ 2013 ಕ್ಕೆ ಮುಂಚೆಯೇ ಕಂಪನಿಯು ಮಧ್ಯವರ್ತಿಗೆ ಹಣ ನೀಡಿದೆ ಎಂದು ಹೇಳಿದೆ. ಆ ದಾಖಲೆಗಳನ್ನು ಸಿಬಿಐ ಕಚೇರಿಗೆ ಕಳುಹಿಸಿದೆ.

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ ಎಂದು ಪತ್ರಿಕೆ ದೂರಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ಮೇಲೆ ಈ ಪ್ರಕರಣದಲ್ಲಿ ಏಕೆ ತನಿಖೆಯಿಲ್ಲ ಎಂದು ಮೀಡಿಯಾಪಾರ್ಟ್ ಪ್ರಶ್ನಿಸಿದೆ.

ಮೀಡಿಯಾ ಪಾರ್ಟ್ ಪತ್ರಿಕೆಯೂ ರಾಫೇಲ್ ಹಗರಣದ ದಾಖಲೆಗಳ ತನಿಖೆಯ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ರಾಫೇಲ್ ಭ್ರಷ್ಟಾಚಾರದ ಕುರಿತು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.

ರಫೇಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಒಂದು ವಾರದಲ್ಲಿ ಸಿಬಿಐಗೆ ಅಕ್ಟೋಬರ್ 11, 2018ರಂದೇ ದಾಖಲೆಗಳನ್ನು ಒದಗಿಸಲಾಗಿದೆ. ಅದರೂ ತನಿಖೆ ಆರಂಭಿಸದಿರಲು ಸಿಬಿಐ ನಿರ್ಧರಿಸಿದೆ. ರಹಸ್ಯವಾಗಿ ಲಂಚ ಪಡೆದಿರುವುದು ಸಾಬೀತಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮೀಡಿಯಾಪಾರ್ಟ್ ಆರೋಪಿಸಿದೆ.

“ವಾಸ್ತವದಲ್ಲಿ ಎಷ್ಟು ಲಂಚ ಮತ್ತು ಕಮಿಷನ್ ಅನ್ನು ಪಾವತಿಸಲಾಗಿದೆ? ಮತ್ತು ಭಾರತ ಸರ್ಕಾರದಲ್ಲಿ ಯಾರಿಗೆ ನೀಡಲಾಗಿದೆ ಎಂದು ಕಂಡುಹಿಡಿಯಲು ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದದ ಬಗ್ಗೆ ಪೂರ್ಣ ಮತ್ತು ಸ್ವತಂತ್ರ ತನಿಖೆಯ ಅಗತ್ಯವಿಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.


ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ – ರಫೇಲ್ ಡೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...