Homeಅಂತರಾಷ್ಟ್ರೀಯರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ..- ಮೀಡಿಯಾ ಪಾರ್ಟ್

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳನ್ನು ಭಾರತಕ್ಕೆ ಮಾರುವುದಕ್ಕಾಗಿ ಭಾರತದ ಮಧ್ಯವರ್ತಿಯೊಬ್ಬರಿಗೆ 7.5 ಮಿಲಿಯನ್ ಯೂರೋ (65 ಕೋಟಿ ರೂ) ಲಂಚ ನೀಡಿದೆ. ಈ ಕುರಿತು ಸ್ಪಷ್ಟ ದಾಖಲೆಗಳಿದ್ದರೂ ಸಹ ಭಾರತೀಯ ಏಜೆನ್ಸಿ (CBI) ತನಿಖೆ ಮಾಡಲು ವಿಫಲವಾಗಿದೆ ಎಂದು ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ.

59,000 ಕೋಟಿ ರೂಗಳ ರಾಫೇಲ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮೀಡಿಯಾಪಾರ್ಟ್ 2013 ಕ್ಕೆ ಮುಂಚೆಯೇ ಕಂಪನಿಯು ಮಧ್ಯವರ್ತಿಗೆ ಹಣ ನೀಡಿದೆ ಎಂದು ಹೇಳಿದೆ. ಆ ದಾಖಲೆಗಳನ್ನು ಸಿಬಿಐ ಕಚೇರಿಗೆ ಕಳುಹಿಸಿದೆ.

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ ಎಂದು ಪತ್ರಿಕೆ ದೂರಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ಮೇಲೆ ಈ ಪ್ರಕರಣದಲ್ಲಿ ಏಕೆ ತನಿಖೆಯಿಲ್ಲ ಎಂದು ಮೀಡಿಯಾಪಾರ್ಟ್ ಪ್ರಶ್ನಿಸಿದೆ.

ಮೀಡಿಯಾ ಪಾರ್ಟ್ ಪತ್ರಿಕೆಯೂ ರಾಫೇಲ್ ಹಗರಣದ ದಾಖಲೆಗಳ ತನಿಖೆಯ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ರಾಫೇಲ್ ಭ್ರಷ್ಟಾಚಾರದ ಕುರಿತು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.

ರಫೇಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಒಂದು ವಾರದಲ್ಲಿ ಸಿಬಿಐಗೆ ಅಕ್ಟೋಬರ್ 11, 2018ರಂದೇ ದಾಖಲೆಗಳನ್ನು ಒದಗಿಸಲಾಗಿದೆ. ಅದರೂ ತನಿಖೆ ಆರಂಭಿಸದಿರಲು ಸಿಬಿಐ ನಿರ್ಧರಿಸಿದೆ. ರಹಸ್ಯವಾಗಿ ಲಂಚ ಪಡೆದಿರುವುದು ಸಾಬೀತಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮೀಡಿಯಾಪಾರ್ಟ್ ಆರೋಪಿಸಿದೆ.

“ವಾಸ್ತವದಲ್ಲಿ ಎಷ್ಟು ಲಂಚ ಮತ್ತು ಕಮಿಷನ್ ಅನ್ನು ಪಾವತಿಸಲಾಗಿದೆ? ಮತ್ತು ಭಾರತ ಸರ್ಕಾರದಲ್ಲಿ ಯಾರಿಗೆ ನೀಡಲಾಗಿದೆ ಎಂದು ಕಂಡುಹಿಡಿಯಲು ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದದ ಬಗ್ಗೆ ಪೂರ್ಣ ಮತ್ತು ಸ್ವತಂತ್ರ ತನಿಖೆಯ ಅಗತ್ಯವಿಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.


ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ – ರಫೇಲ್ ಡೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಾತ್ಮ ಗಾಂಧಿ – ವಾಜಪೇಯಿ ಹಾಡಿದ್ದನ್ನೇ ನಾವು ಹಾಡಿದ್ದೇವೆ..’; ವಂದೇ ಮಾತರಂ ವಿವಾದದ ಕುರಿತು ಖರ್ಗೆ ಸ್ಪಷ್ಟನೆ

ಪಕ್ಷದ ಪ್ರಧಾನ ಕಚೇರಿಯಲ್ಲಿ ವಂದೇ ಮಾತರಂ ಹಾಡಿದ ಬಗ್ಗೆ ನಡೆಯುತ್ತಿರುವ ವಿವಾದದ ನಡುವೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್...

ದೆಹಲಿ ಪೊಲೀಸರಿಂದ AAP ಶಾಸಕನ ಅಪಹರಣ?: ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ತುರ್ತು ವಿಚಾರಣೆಗೆ ಅಸ್ತು!

AAP ಶಾಸಕ ಕುಲ್ದೀಪ್ ಕುಮಾರ್ ಅವರನ್ನು ಅವರ ಮನೆಯಿಂದ ಅಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ (Habeas Corpus) ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ಒಪ್ಪಿಗೆ...

ಅದಾನಿ-ಎಲ್‌ಐಸಿ ತನಿಖಾ ವರದಿ: ಪತ್ರಕರ್ತ ರವಿ ನಾಯರ್ ಮನೆಗಳ ಮೇಲೆ ಗುಜರಾತ್ ಪೊಲೀಸರ ದಾಳಿ, ಡಿಜಿಟಲ್ ಉಪಕರಣಗಳ ವಶ

ಅದಾನಿ ಸಮೂಹ ಹಾಗೂ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ (ಎಲ್‌ಐಸಿ) ನಡುವಿನ ಹೂಡಿಕೆ ವ್ಯವಹಾರಕ್ಕೆ ಸಂಬಂಧಿಸಿದಂತೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ತನಿಖಾ ವರದಿ ಪ್ರಕಟಿಸಿದ್ದ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರ ದೆಹಲಿ ಮತ್ತು ಕೇರಳದಲ್ಲಿರುವ...

ಗುಜರಾತ್ | ನಕಲಿ ಸರ್ಕಾರಿ ಕಚೇರಿಗಳನ್ನು ಸ್ಥಾಪಿಸಿ ಸರ್ಕಾರದ ಅನುದಾನ ಲೂಟಿ; ಬೃಹತ್ ಹಗರಣ ಬಯಲು

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನೀರಾವರಿ ಮತ್ತು ಜಲಸಂಪನ್ಮೂಲ ಇಲಾಖೆಯ ಹೆಸರಿನಲ್ಲಿ 6 ನಕಲಿ ಸರ್ಕಾರಿ ಕಚೇರಿಗಳನ್ನು ಸೃಷ್ಟಿಸಿ, ಕೋಟ್ಯಂತರ ರೂಪಾಯಿ ಸರ್ಕಾರಿ ಅನುದಾನವನ್ನು ಲೂಟಿ ಮಾಡಿರುವುದು ಪತ್ತೆಯಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ...

ಎನ್‌ಎಎಲ್‌ಎಸ್‌ಎಆರ್‌ ಘಟಿಕೋತ್ಸವದ ಆಹ್ವಾನವನ್ನು ನಾನು ಸ್ವೀಕರಿಸಿರಲೇ ಇಲ್ಲ: ಸಿಜೆಐ ಸೂರ್ಯ ಕಾಂತ್

ಎನ್‌ಎಎಲ್‌ಎಸ್‌ಎಆರ್‌ ಕಾನೂನು ವಿಶ್ವವಿದ್ಯಾಲಯದ ಮುಂಬರುವ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಾನು ಎಂದಿಗೂ ಒಪ್ಪಿಗೆ ನೀಡಿರಲಿಲ್ಲ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ವಿರೋಧದ ನಡುವೆಯೂ...

ಎರಡು ವರ್ಷಗಳ ವಿಳಂಬದ ನಂತರ ಹಣಕಾಸು ವರದಿ ಬಿಡುಗಡೆ ಮಾಡಿದ ಪಿಎಂ ಕೇರ್ಸ್

ಎರಡು ವರ್ಷಗಳ ವಿಳಂಬದ ನಂತರ ಪಿಎಂ ಕೇರ್ಸ್ ನಿಧಿಯು ತನ್ನ 2023-24 ಮತ್ತು 2024-25ರ ಹಣಕಾಸು ವರ್ಷಗಳ ಆಡಿಟ್ ವರದಿಗಳನ್ನು (ಲೆಕ್ಕಪರಿಶೋಧನಾ ವರದಿ) ಆಗಸ್ಟ್ 17ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ಪಿಎಂ...

ಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೋಗಿ ಎಂದು ಕಾಲೆಳೆದ ಕಾಂಗ್ರೆಸ್

ಭಾರತದ ಚುನಾವಣಾ ವ್ಯವಸ್ಥೆ ಹಾಗೂ ಮತದಾರರ ಫೋಟೋ ಗುರುತಿನ ಚೀಟಿ (Voter ID) ಕಡ್ಡಾಯ ನಿಯಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯನ್ನು ಇಟ್ಟುಕೊಂಡು...

ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ ದಾಖಲು: ಬಿಜೆಪಿಯ ಕೀಳು ಮಟ್ಟದ ರಾಜಕೀಯ ಎಂದ ಸಿಪಿಐ(ಎಂ)

ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್‌ಬ್ಯೂರೋ ಹಿರಿಯ ಸದಸ್ಯ ಮಾಣಿಕ್ ಸರ್ಕಾರ್ ಅವರು ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯೊಂದರಲ್ಲಿ ನೀಡಿದ್ದ ಹೇಳಿಕೆಯನ್ನು ಆಧರಿಸಿ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ...

ಮುಹಮ್ಮದ್ ದೀಪಕ್‌ಗೆ 2026 ನೇ ಸಾಲಿನ ‘ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿ’

ಆಲ್ ಇಂಡಿಯಾ ಬಾಜ್ಮ್-ಎ-ರೆಹಮತ್-ಎ-ಆಲಂ ಸಂಘಟನೆಯು, ಮುಹಮ್ಮದ್ ದೀಪಕ್ ಎಂದೇ ಜನಪ್ರಿಯರಾಗಿರುವ ದೀಪಕ್ ಕುಮಾರ್ ಅವರಿಗೆ 2026 ರ ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿಯನ್ನು ಘೋಷಿಸಿದೆ. ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆಯಾದ ಮಿಲಾದ್-ಉನ್-ನಬಿಯನ್ನು ಗುರುತಿಸಲು ಆಯೋಜಿಸಲಾದ...

ಸ್ವಾತಂತ್ರ್ಯ ದಿನಾಚರಣೆಯಲ್ಲಿ ದಲಿತರಿಗೆ ಅವಮಾನ; ಬಲವಂತವಾಗಿ ನೆಲದ ಮೇಲೆ ಕೂರಿಸಿದ ಐವರ ವಿರುದ್ಧ ಪ್ರಕರಣ ದಾಖಲು

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದಲಿತ ಸಮುದಾಯದ ಇಬ್ಬರಿಗೆ ಜಾತಿ ನಿಂದನೆ ಮಾಡಿದ್ದು, ಅವರು ಕುಳಿತಿದ್ದ ಕುರ್ಚಿಗಳನ್ನು ಖಾಲಿ ಮಾಡಿಸಿ ನೆಲದ ಮೇಲೆ ಕೂರಿಸಿದ್ದಾರೆ. ಈ ಬಗ್ಗೆ...