Homeಅಂತರಾಷ್ಟ್ರೀಯರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ..- ಮೀಡಿಯಾ ಪಾರ್ಟ್

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳನ್ನು ಭಾರತಕ್ಕೆ ಮಾರುವುದಕ್ಕಾಗಿ ಭಾರತದ ಮಧ್ಯವರ್ತಿಯೊಬ್ಬರಿಗೆ 7.5 ಮಿಲಿಯನ್ ಯೂರೋ (65 ಕೋಟಿ ರೂ) ಲಂಚ ನೀಡಿದೆ. ಈ ಕುರಿತು ಸ್ಪಷ್ಟ ದಾಖಲೆಗಳಿದ್ದರೂ ಸಹ ಭಾರತೀಯ ಏಜೆನ್ಸಿ (CBI) ತನಿಖೆ ಮಾಡಲು ವಿಫಲವಾಗಿದೆ ಎಂದು ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ.

59,000 ಕೋಟಿ ರೂಗಳ ರಾಫೇಲ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮೀಡಿಯಾಪಾರ್ಟ್ 2013 ಕ್ಕೆ ಮುಂಚೆಯೇ ಕಂಪನಿಯು ಮಧ್ಯವರ್ತಿಗೆ ಹಣ ನೀಡಿದೆ ಎಂದು ಹೇಳಿದೆ. ಆ ದಾಖಲೆಗಳನ್ನು ಸಿಬಿಐ ಕಚೇರಿಗೆ ಕಳುಹಿಸಿದೆ.

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ ಎಂದು ಪತ್ರಿಕೆ ದೂರಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ಮೇಲೆ ಈ ಪ್ರಕರಣದಲ್ಲಿ ಏಕೆ ತನಿಖೆಯಿಲ್ಲ ಎಂದು ಮೀಡಿಯಾಪಾರ್ಟ್ ಪ್ರಶ್ನಿಸಿದೆ.

ಮೀಡಿಯಾ ಪಾರ್ಟ್ ಪತ್ರಿಕೆಯೂ ರಾಫೇಲ್ ಹಗರಣದ ದಾಖಲೆಗಳ ತನಿಖೆಯ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ರಾಫೇಲ್ ಭ್ರಷ್ಟಾಚಾರದ ಕುರಿತು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.

ರಫೇಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಒಂದು ವಾರದಲ್ಲಿ ಸಿಬಿಐಗೆ ಅಕ್ಟೋಬರ್ 11, 2018ರಂದೇ ದಾಖಲೆಗಳನ್ನು ಒದಗಿಸಲಾಗಿದೆ. ಅದರೂ ತನಿಖೆ ಆರಂಭಿಸದಿರಲು ಸಿಬಿಐ ನಿರ್ಧರಿಸಿದೆ. ರಹಸ್ಯವಾಗಿ ಲಂಚ ಪಡೆದಿರುವುದು ಸಾಬೀತಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮೀಡಿಯಾಪಾರ್ಟ್ ಆರೋಪಿಸಿದೆ.

“ವಾಸ್ತವದಲ್ಲಿ ಎಷ್ಟು ಲಂಚ ಮತ್ತು ಕಮಿಷನ್ ಅನ್ನು ಪಾವತಿಸಲಾಗಿದೆ? ಮತ್ತು ಭಾರತ ಸರ್ಕಾರದಲ್ಲಿ ಯಾರಿಗೆ ನೀಡಲಾಗಿದೆ ಎಂದು ಕಂಡುಹಿಡಿಯಲು ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದದ ಬಗ್ಗೆ ಪೂರ್ಣ ಮತ್ತು ಸ್ವತಂತ್ರ ತನಿಖೆಯ ಅಗತ್ಯವಿಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.


ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ – ರಫೇಲ್ ಡೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...