Homeಅಂತರಾಷ್ಟ್ರೀಯರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ..- ಮೀಡಿಯಾ ಪಾರ್ಟ್

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳನ್ನು ಭಾರತಕ್ಕೆ ಮಾರುವುದಕ್ಕಾಗಿ ಭಾರತದ ಮಧ್ಯವರ್ತಿಯೊಬ್ಬರಿಗೆ 7.5 ಮಿಲಿಯನ್ ಯೂರೋ (65 ಕೋಟಿ ರೂ) ಲಂಚ ನೀಡಿದೆ. ಈ ಕುರಿತು ಸ್ಪಷ್ಟ ದಾಖಲೆಗಳಿದ್ದರೂ ಸಹ ಭಾರತೀಯ ಏಜೆನ್ಸಿ (CBI) ತನಿಖೆ ಮಾಡಲು ವಿಫಲವಾಗಿದೆ ಎಂದು ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ.

59,000 ಕೋಟಿ ರೂಗಳ ರಾಫೇಲ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮೀಡಿಯಾಪಾರ್ಟ್ 2013 ಕ್ಕೆ ಮುಂಚೆಯೇ ಕಂಪನಿಯು ಮಧ್ಯವರ್ತಿಗೆ ಹಣ ನೀಡಿದೆ ಎಂದು ಹೇಳಿದೆ. ಆ ದಾಖಲೆಗಳನ್ನು ಸಿಬಿಐ ಕಚೇರಿಗೆ ಕಳುಹಿಸಿದೆ.

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ ಎಂದು ಪತ್ರಿಕೆ ದೂರಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ಮೇಲೆ ಈ ಪ್ರಕರಣದಲ್ಲಿ ಏಕೆ ತನಿಖೆಯಿಲ್ಲ ಎಂದು ಮೀಡಿಯಾಪಾರ್ಟ್ ಪ್ರಶ್ನಿಸಿದೆ.

ಮೀಡಿಯಾ ಪಾರ್ಟ್ ಪತ್ರಿಕೆಯೂ ರಾಫೇಲ್ ಹಗರಣದ ದಾಖಲೆಗಳ ತನಿಖೆಯ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ರಾಫೇಲ್ ಭ್ರಷ್ಟಾಚಾರದ ಕುರಿತು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.

ರಫೇಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಒಂದು ವಾರದಲ್ಲಿ ಸಿಬಿಐಗೆ ಅಕ್ಟೋಬರ್ 11, 2018ರಂದೇ ದಾಖಲೆಗಳನ್ನು ಒದಗಿಸಲಾಗಿದೆ. ಅದರೂ ತನಿಖೆ ಆರಂಭಿಸದಿರಲು ಸಿಬಿಐ ನಿರ್ಧರಿಸಿದೆ. ರಹಸ್ಯವಾಗಿ ಲಂಚ ಪಡೆದಿರುವುದು ಸಾಬೀತಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮೀಡಿಯಾಪಾರ್ಟ್ ಆರೋಪಿಸಿದೆ.

“ವಾಸ್ತವದಲ್ಲಿ ಎಷ್ಟು ಲಂಚ ಮತ್ತು ಕಮಿಷನ್ ಅನ್ನು ಪಾವತಿಸಲಾಗಿದೆ? ಮತ್ತು ಭಾರತ ಸರ್ಕಾರದಲ್ಲಿ ಯಾರಿಗೆ ನೀಡಲಾಗಿದೆ ಎಂದು ಕಂಡುಹಿಡಿಯಲು ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದದ ಬಗ್ಗೆ ಪೂರ್ಣ ಮತ್ತು ಸ್ವತಂತ್ರ ತನಿಖೆಯ ಅಗತ್ಯವಿಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.


ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ – ರಫೇಲ್ ಡೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...