Homeಅಂತರಾಷ್ಟ್ರೀಯರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ರಫೇಲ್ ಒಪ್ಪಂದಕ್ಕೆ 65 ಕೋಟಿ ಲಂಚ, ತನಿಖೆ ನಡೆಸದ CBI : ಫ್ರೆಂಚ್ ಪತ್ರಿಕೆ ಆರೋಪ

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ..- ಮೀಡಿಯಾ ಪಾರ್ಟ್

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳನ್ನು ಭಾರತಕ್ಕೆ ಮಾರುವುದಕ್ಕಾಗಿ ಭಾರತದ ಮಧ್ಯವರ್ತಿಯೊಬ್ಬರಿಗೆ 7.5 ಮಿಲಿಯನ್ ಯೂರೋ (65 ಕೋಟಿ ರೂ) ಲಂಚ ನೀಡಿದೆ. ಈ ಕುರಿತು ಸ್ಪಷ್ಟ ದಾಖಲೆಗಳಿದ್ದರೂ ಸಹ ಭಾರತೀಯ ಏಜೆನ್ಸಿ (CBI) ತನಿಖೆ ಮಾಡಲು ವಿಫಲವಾಗಿದೆ ಎಂದು ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ.

59,000 ಕೋಟಿ ರೂಗಳ ರಾಫೇಲ್ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮೀಡಿಯಾಪಾರ್ಟ್ 2013 ಕ್ಕೆ ಮುಂಚೆಯೇ ಕಂಪನಿಯು ಮಧ್ಯವರ್ತಿಗೆ ಹಣ ನೀಡಿದೆ ಎಂದು ಹೇಳಿದೆ. ಆ ದಾಖಲೆಗಳನ್ನು ಸಿಬಿಐ ಕಚೇರಿಗೆ ಕಳುಹಿಸಿದೆ.

ಭಾರತದ ಸುಶೇನ್ ಗುಪ್ತಾ ಎಂಬಾತನಿಗೆ ರಹಸ್ಯವಾಗಿ ಲಂಚ ನೀಡಲಾಗಿದೆ. ಸುಳ್ಳು ರಶೀದಿಗಳನ್ನು ಸೃಷ್ಟಿಸಲಾಗಿದೆ. ಇಷ್ಟೆಲ್ಲಾ ದಾಖಲೆಗಳು 2018 ರಲ್ಲಿಯೇ ಸಿಬಿಐ ಮತ್ತು ಇಡಿಗೆ ಸಿಕ್ಕಿದ್ದರೂ ಅವರು ತನಿಖೆ ಆರಂಭಿಸಿಲ್ಲ ಎಂದು ಪತ್ರಿಕೆ ದೂರಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ಮೇಲೆ ಈ ಪ್ರಕರಣದಲ್ಲಿ ಏಕೆ ತನಿಖೆಯಿಲ್ಲ ಎಂದು ಮೀಡಿಯಾಪಾರ್ಟ್ ಪ್ರಶ್ನಿಸಿದೆ.

ಮೀಡಿಯಾ ಪಾರ್ಟ್ ಪತ್ರಿಕೆಯೂ ರಾಫೇಲ್ ಹಗರಣದ ದಾಖಲೆಗಳ ತನಿಖೆಯ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸಿದೆ. ಇದು ರಾಫೇಲ್ ಭ್ರಷ್ಟಾಚಾರದ ಕುರಿತು ಫ್ರಾನ್ಸ್‌ನಲ್ಲಿ ನ್ಯಾಯಾಂಗ ತನಿಖೆಗೆ ಕಾರಣವಾಗಿದೆ.

ರಫೇಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಒಂದು ವಾರದಲ್ಲಿ ಸಿಬಿಐಗೆ ಅಕ್ಟೋಬರ್ 11, 2018ರಂದೇ ದಾಖಲೆಗಳನ್ನು ಒದಗಿಸಲಾಗಿದೆ. ಅದರೂ ತನಿಖೆ ಆರಂಭಿಸದಿರಲು ಸಿಬಿಐ ನಿರ್ಧರಿಸಿದೆ. ರಹಸ್ಯವಾಗಿ ಲಂಚ ಪಡೆದಿರುವುದು ಸಾಬೀತಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮೀಡಿಯಾಪಾರ್ಟ್ ಆರೋಪಿಸಿದೆ.

“ವಾಸ್ತವದಲ್ಲಿ ಎಷ್ಟು ಲಂಚ ಮತ್ತು ಕಮಿಷನ್ ಅನ್ನು ಪಾವತಿಸಲಾಗಿದೆ? ಮತ್ತು ಭಾರತ ಸರ್ಕಾರದಲ್ಲಿ ಯಾರಿಗೆ ನೀಡಲಾಗಿದೆ ಎಂದು ಕಂಡುಹಿಡಿಯಲು ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದದ ಬಗ್ಗೆ ಪೂರ್ಣ ಮತ್ತು ಸ್ವತಂತ್ರ ತನಿಖೆಯ ಅಗತ್ಯವಿಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.


ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ – ರಫೇಲ್ ಡೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...