Homeಮುಖಪುಟಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿವಾದದಲ್ಲಿರುವ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ನನ್ನ ಚಾರಿತ್ರ್ಯ ಹರಣ ಮಾಡುವ ವಿಡಿಯೋ ಮಾಡಲು 65 ಲಕ್ಷ ಹಣ ಪಡೆದಿದ್ದಾರೆ ಎಂದು ಕಂಗನಾ ಆರೋಪಿಸಿದ್ದಾರೆ.

ಅಸಲಿಗೆ ಈ ಜಟಾಪಟಿ ಆರಂಭವಾದದ್ದೇ ನಿರ್ದೇಶಕ ಎರೆ ಕ್ಯಾಥರ್ ಮಾಡಿದ್ದ ಟ್ವೀಟ್ ಮೂಲಕ. ಅಕ್ಟೋಬರ್ 31 ರಂದು ಟ್ವೀಟ್ ಮೂಲಕ ಯೂಟ್ಯೂಬರ್ ಧೃವ್ ರಾಠೀ ವಿರುದ್ಧ ಅವರ ಹೆಸರನ್ನು ಉಲ್ಲೇಖಿಸದೆ ಆರೋಪ ಮಾಡಿದ್ದ ಎರೆ ಕ್ಯಾಥರ್, “ದಿವಂಗತ ನಟ ಸುಶಾಂತ್ ಸಿಂಗ್ ಸಾವಿನ ಹಿಂದೆ ಆತನ ಕುಟುಂಬಸ್ಥರ ಪಾತ್ರ ಎಂಬ ಹೆಸರಿನಲ್ಲಿ 40 ಲಕ್ಷ ಚಂದಾದಾರರನ್ನು ಹೊಂದಿರುವ ಖ್ಯಾತ ಯೂಟ್ಯೂಬರ್ ಓರ್ವ ವಿಶ್ಲೇಷನಾತ್ಮಕ ವಿಡಿಯೋ ಒಂದನ್ನು ಮಾಡಲು ಮುಂದಾಗಿದ್ದಾರೆ. ಅಲ್ಲದೆ, ಈ ವಿಡಿಯೋ ಮಾಡಲು ಅವರು 65 ಲಕ್ಷ ಹಣ ಸ್ವೀಕರಿಸಿದ್ದಾರೆ. ಇದೇ ಯೂಟ್ಯೂಬರ್ ಈ ಹಿಂದೆ ನಟಿ ಕಂಗನಾ ಮತ್ತು ಅರ್ನಾಬ್ ವಿರುದ್ಧವೂ ವಿಡಿಯೋ ಮಾಡಿದ್ದರು” ಎಂದು ಆರೋಪಿಸಿದ್ದರು.

ಅಲ್ಲದೆ ಎರೆ ಕ್ಯಾಥರ್ ಮತ್ತೊಂದು ಟ್ವೀಟ್‌ನಲ್ಲಿ, “ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ” ಎಂದು ಆರೋಪಿಸಿದ್ದರು.

ನಿರ್ದೇಶಕ ಎರೆ ಕ್ಯಾಥರ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಯೂಟ್ಯೂಬರ್ ಧೃವ್ ರಾಠೀ, “ನನ್ನನ್ನು ಹೆಸರಿಸಿ ಈ ಸುಳ್ಳು ಸುದ್ದಿಯನ್ನು ಬರೆಯಲಾಗಿದೆ. ಮೊದಲನೇಯದಾಗಿ ನಟಿ ಕಂಗನಾ ವಿರುದ್ಧ ನಾನು ಮಾಡಿದ್ದ ವಿಡಿಯೋಗೆ ಯಾರಿಂದಲೂ ಹಣ ಪಡೆದಿಲ್ಲ. ಎರಡನೇಯದಾಗಿ ಮೃತ ನಟ ಸುಶಾಂತ್ ಸಿಂಗ್ ಸಾವಿನ ಕುರಿತು ವಿಡಿಯೋ ಮಾಡುವ ಯಾವ ಉದ್ದೇಶವೂ ನನಗಿಲ್ಲ. ಮೂರನೇಯದಾಗಿ ನಾನು ಮಾಡುವ ವಿಡಿಯೋಗಳಿಗೆ 30 ಲಕ್ಷ ಹಣದ ಪ್ರಾಯೋಜತ್ವ ಸಿಗಲಿ ಎಂದು ನಾನು ಆಶಿಸುತ್ತೇನೆ. ಅಷ್ಟು ಹಣ ಸಿಕ್ಕರೆ ನಾನು ಎಷ್ಟು ಶ್ರೀಮಂತ ವ್ಯಕ್ತಿಯಾಗಬಹುದು” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ರಾಜಕೀಯಾರ್ಥಿಕ ವಿಶ್ಲೇಷಕ ಧೃವ್ ರಾಠೀ ಬಗ್ಗೆ ನಿಮಗೆಷ್ಟು ಗೊತ್ತು?

ಈ ನಡುವೆ ಕಂಗನಾ ರಣಾವತ್, “ಎರೆ ಕ್ಯಾಥರ್ ಸರಿಯಾಗಿಯೇ ಹೇಳಿದ್ದಾರೆ. ಈತ ಹಣ ಪಡೆದು ನನ್ನ ವಿರುದ್ಧ ವಿಡಿಯೋಗಳನ್ನು ಮಾಡಿ ಯೂಟ್ಯೂಬ್‌ನಲ್ಲಿ ಹರಿಬಿಟ್ಟಿದ್ದಾನೆ. ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯನ್ನು ಧ್ವಂಸಗೊಳಿಸಿದ್ದ ಪ್ರಕರಣದ ಕುರಿತು ಈತ 60 ಲಕ್ಷ ಹಣ ಪಡೆದು ಸುಳ್ಳು ವಿಡಿಯೋ ಮಾಡಿದ್ದಾನೆ. ಈತನನ್ನು ನಾನು ಕಂಬಿ ಎಣಿಸುವಂತೆ ಮಾಡುತ್ತೇನೆ. ಸರ್ಕಾರ ಮತ್ತು ಹಣದ ಬಲ ಇಲ್ಲದೆ ಓರ್ವ ವ್ಯಕ್ತಿ ಹೀಗೆ ಕಾನೂನಾತ್ಮಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಸುಳ್ಳು ಹೇಳಲು ಸಾಧ್ಯವೇ?” ಎಂದು ಹೇಳುವ ಮೂಲಕ ನಟಿ ಕಂಗನಾ ಮಹಾರಾಷ್ಟ್ರ ಸರ್ಕಾರದ ವಿರುದ್ಧವೂ ಮತ್ತೊಮ್ಮೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಧೃವ್ ರಾಠೀ “ನೀವು ಈ ವೀಡಿಯೊ ಬಗ್ಗೆ ಮಾತನಾಡುತ್ತಿದ್ದೀರಾ? ಸ್ನೇಹಿತರೆ, ಅವರು ಈ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದಾರೋ, ಇಲ್ಲವೋ ಎಂದು ತಿಳಿಯಲು ದಯವಿಟ್ಟು ಈ ವೀಡಿಯೊವನ್ನು ವೀಕ್ಷಿಸಿ ಮತ್ತು ಹಂಚಿಕೊಳ್ಳಬಹುದೇ? ಏಕೆಂದರೆ ನಾನು ಯಾವುದೇ ಹಣವನ್ನು ಸ್ವೀಕರಿಸಿಲ್ಲ” ಎಂದು ತಮ್ಮ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

ಅಲ್ಲದೇ “ನನ್ನ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ, ನನ್ನ ಕಂಗನಾ ವಿಡಿಯೋಗೆ ಹೆಚ್ಚಿನ ಪ್ರಚಾರ ನೀಡಿದ ನಂತರ ಇಂದು 1 ಲಕ್ಷಕ್ಕೂ ಹೆಚ್ಚು ಜನರು ಅದನ್ನು ನೋಡಿದ್ದಾರೆ. ಇದನ್ನು ‘ಸ್ಟ್ರೈಸೆಂಡ್ ಎಫೆಕ್ಟ್’ (ಯಾವುದಾದರೂ ಮಾಹಿತಿಯನ್ನು ಮರೆಮಾಚಲು, ತೆಗೆದುಹಾಕಲು ಅಥವಾ ಸೆನ್ಸಾರ್ ಮಾಡಲು ಪ್ರಯತ್ನಿಸಿದಾಗ ಆ ಮಾಹಿತಿಯು ಇಂಟರ್ನೆಟ್‌ನಲ್ಲಿ ಮತ್ತಷ್ಟು ಪ್ರಚಾರ ಪಡೆದು ವೈರಲ್ ಆಗುವುದು) ಎಂದು ಕರೆಯಲಾಗುತ್ತದೆ” ಎಂದು ತಮ್ಮ ವಿಡಿಯೋ ವೀಕ್ಷಣೆಯ ಅನಾಲಿಟಿಕ್ ಗ್ರಾಫ್ ಅನ್ನು ಷೇರ್ ಮಾಡಿದ್ದಾರೆ.

ಕಂಗಾನಾ ಕುರಿತು ಧೃವ್ ರಾಠೀ ಮಾಡಿರುವ ಆ ವಿಡಿಯೋವನ್ನು ಇದುವರೆಗೂ 39 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, 4.4 ಲಕ್ಷ ಜನ ಲೈಕ್ ಮಾಡಿದ್ದಾರೆ.


ಇದನ್ನೂ ಓದಿ: ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...