Homeಮುಖಪುಟಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿವಾದದಲ್ಲಿರುವ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ನನ್ನ ಚಾರಿತ್ರ್ಯ ಹರಣ ಮಾಡುವ ವಿಡಿಯೋ ಮಾಡಲು 65 ಲಕ್ಷ ಹಣ ಪಡೆದಿದ್ದಾರೆ ಎಂದು ಕಂಗನಾ ಆರೋಪಿಸಿದ್ದಾರೆ.

ಅಸಲಿಗೆ ಈ ಜಟಾಪಟಿ ಆರಂಭವಾದದ್ದೇ ನಿರ್ದೇಶಕ ಎರೆ ಕ್ಯಾಥರ್ ಮಾಡಿದ್ದ ಟ್ವೀಟ್ ಮೂಲಕ. ಅಕ್ಟೋಬರ್ 31 ರಂದು ಟ್ವೀಟ್ ಮೂಲಕ ಯೂಟ್ಯೂಬರ್ ಧೃವ್ ರಾಠೀ ವಿರುದ್ಧ ಅವರ ಹೆಸರನ್ನು ಉಲ್ಲೇಖಿಸದೆ ಆರೋಪ ಮಾಡಿದ್ದ ಎರೆ ಕ್ಯಾಥರ್, “ದಿವಂಗತ ನಟ ಸುಶಾಂತ್ ಸಿಂಗ್ ಸಾವಿನ ಹಿಂದೆ ಆತನ ಕುಟುಂಬಸ್ಥರ ಪಾತ್ರ ಎಂಬ ಹೆಸರಿನಲ್ಲಿ 40 ಲಕ್ಷ ಚಂದಾದಾರರನ್ನು ಹೊಂದಿರುವ ಖ್ಯಾತ ಯೂಟ್ಯೂಬರ್ ಓರ್ವ ವಿಶ್ಲೇಷನಾತ್ಮಕ ವಿಡಿಯೋ ಒಂದನ್ನು ಮಾಡಲು ಮುಂದಾಗಿದ್ದಾರೆ. ಅಲ್ಲದೆ, ಈ ವಿಡಿಯೋ ಮಾಡಲು ಅವರು 65 ಲಕ್ಷ ಹಣ ಸ್ವೀಕರಿಸಿದ್ದಾರೆ. ಇದೇ ಯೂಟ್ಯೂಬರ್ ಈ ಹಿಂದೆ ನಟಿ ಕಂಗನಾ ಮತ್ತು ಅರ್ನಾಬ್ ವಿರುದ್ಧವೂ ವಿಡಿಯೋ ಮಾಡಿದ್ದರು” ಎಂದು ಆರೋಪಿಸಿದ್ದರು.

ಅಲ್ಲದೆ ಎರೆ ಕ್ಯಾಥರ್ ಮತ್ತೊಂದು ಟ್ವೀಟ್‌ನಲ್ಲಿ, “ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ” ಎಂದು ಆರೋಪಿಸಿದ್ದರು.

ನಿರ್ದೇಶಕ ಎರೆ ಕ್ಯಾಥರ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಯೂಟ್ಯೂಬರ್ ಧೃವ್ ರಾಠೀ, “ನನ್ನನ್ನು ಹೆಸರಿಸಿ ಈ ಸುಳ್ಳು ಸುದ್ದಿಯನ್ನು ಬರೆಯಲಾಗಿದೆ. ಮೊದಲನೇಯದಾಗಿ ನಟಿ ಕಂಗನಾ ವಿರುದ್ಧ ನಾನು ಮಾಡಿದ್ದ ವಿಡಿಯೋಗೆ ಯಾರಿಂದಲೂ ಹಣ ಪಡೆದಿಲ್ಲ. ಎರಡನೇಯದಾಗಿ ಮೃತ ನಟ ಸುಶಾಂತ್ ಸಿಂಗ್ ಸಾವಿನ ಕುರಿತು ವಿಡಿಯೋ ಮಾಡುವ ಯಾವ ಉದ್ದೇಶವೂ ನನಗಿಲ್ಲ. ಮೂರನೇಯದಾಗಿ ನಾನು ಮಾಡುವ ವಿಡಿಯೋಗಳಿಗೆ 30 ಲಕ್ಷ ಹಣದ ಪ್ರಾಯೋಜತ್ವ ಸಿಗಲಿ ಎಂದು ನಾನು ಆಶಿಸುತ್ತೇನೆ. ಅಷ್ಟು ಹಣ ಸಿಕ್ಕರೆ ನಾನು ಎಷ್ಟು ಶ್ರೀಮಂತ ವ್ಯಕ್ತಿಯಾಗಬಹುದು” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ರಾಜಕೀಯಾರ್ಥಿಕ ವಿಶ್ಲೇಷಕ ಧೃವ್ ರಾಠೀ ಬಗ್ಗೆ ನಿಮಗೆಷ್ಟು ಗೊತ್ತು?

ಈ ನಡುವೆ ಕಂಗನಾ ರಣಾವತ್, “ಎರೆ ಕ್ಯಾಥರ್ ಸರಿಯಾಗಿಯೇ ಹೇಳಿದ್ದಾರೆ. ಈತ ಹಣ ಪಡೆದು ನನ್ನ ವಿರುದ್ಧ ವಿಡಿಯೋಗಳನ್ನು ಮಾಡಿ ಯೂಟ್ಯೂಬ್‌ನಲ್ಲಿ ಹರಿಬಿಟ್ಟಿದ್ದಾನೆ. ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯನ್ನು ಧ್ವಂಸಗೊಳಿಸಿದ್ದ ಪ್ರಕರಣದ ಕುರಿತು ಈತ 60 ಲಕ್ಷ ಹಣ ಪಡೆದು ಸುಳ್ಳು ವಿಡಿಯೋ ಮಾಡಿದ್ದಾನೆ. ಈತನನ್ನು ನಾನು ಕಂಬಿ ಎಣಿಸುವಂತೆ ಮಾಡುತ್ತೇನೆ. ಸರ್ಕಾರ ಮತ್ತು ಹಣದ ಬಲ ಇಲ್ಲದೆ ಓರ್ವ ವ್ಯಕ್ತಿ ಹೀಗೆ ಕಾನೂನಾತ್ಮಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಸುಳ್ಳು ಹೇಳಲು ಸಾಧ್ಯವೇ?” ಎಂದು ಹೇಳುವ ಮೂಲಕ ನಟಿ ಕಂಗನಾ ಮಹಾರಾಷ್ಟ್ರ ಸರ್ಕಾರದ ವಿರುದ್ಧವೂ ಮತ್ತೊಮ್ಮೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಧೃವ್ ರಾಠೀ “ನೀವು ಈ ವೀಡಿಯೊ ಬಗ್ಗೆ ಮಾತನಾಡುತ್ತಿದ್ದೀರಾ? ಸ್ನೇಹಿತರೆ, ಅವರು ಈ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದಾರೋ, ಇಲ್ಲವೋ ಎಂದು ತಿಳಿಯಲು ದಯವಿಟ್ಟು ಈ ವೀಡಿಯೊವನ್ನು ವೀಕ್ಷಿಸಿ ಮತ್ತು ಹಂಚಿಕೊಳ್ಳಬಹುದೇ? ಏಕೆಂದರೆ ನಾನು ಯಾವುದೇ ಹಣವನ್ನು ಸ್ವೀಕರಿಸಿಲ್ಲ” ಎಂದು ತಮ್ಮ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

ಅಲ್ಲದೇ “ನನ್ನ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ, ನನ್ನ ಕಂಗನಾ ವಿಡಿಯೋಗೆ ಹೆಚ್ಚಿನ ಪ್ರಚಾರ ನೀಡಿದ ನಂತರ ಇಂದು 1 ಲಕ್ಷಕ್ಕೂ ಹೆಚ್ಚು ಜನರು ಅದನ್ನು ನೋಡಿದ್ದಾರೆ. ಇದನ್ನು ‘ಸ್ಟ್ರೈಸೆಂಡ್ ಎಫೆಕ್ಟ್’ (ಯಾವುದಾದರೂ ಮಾಹಿತಿಯನ್ನು ಮರೆಮಾಚಲು, ತೆಗೆದುಹಾಕಲು ಅಥವಾ ಸೆನ್ಸಾರ್ ಮಾಡಲು ಪ್ರಯತ್ನಿಸಿದಾಗ ಆ ಮಾಹಿತಿಯು ಇಂಟರ್ನೆಟ್‌ನಲ್ಲಿ ಮತ್ತಷ್ಟು ಪ್ರಚಾರ ಪಡೆದು ವೈರಲ್ ಆಗುವುದು) ಎಂದು ಕರೆಯಲಾಗುತ್ತದೆ” ಎಂದು ತಮ್ಮ ವಿಡಿಯೋ ವೀಕ್ಷಣೆಯ ಅನಾಲಿಟಿಕ್ ಗ್ರಾಫ್ ಅನ್ನು ಷೇರ್ ಮಾಡಿದ್ದಾರೆ.

ಕಂಗಾನಾ ಕುರಿತು ಧೃವ್ ರಾಠೀ ಮಾಡಿರುವ ಆ ವಿಡಿಯೋವನ್ನು ಇದುವರೆಗೂ 39 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, 4.4 ಲಕ್ಷ ಜನ ಲೈಕ್ ಮಾಡಿದ್ದಾರೆ.


ಇದನ್ನೂ ಓದಿ: ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...