Homeಮುಖಪುಟಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿವಾದದಲ್ಲಿರುವ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ನನ್ನ ಚಾರಿತ್ರ್ಯ ಹರಣ ಮಾಡುವ ವಿಡಿಯೋ ಮಾಡಲು 65 ಲಕ್ಷ ಹಣ ಪಡೆದಿದ್ದಾರೆ ಎಂದು ಕಂಗನಾ ಆರೋಪಿಸಿದ್ದಾರೆ.

ಅಸಲಿಗೆ ಈ ಜಟಾಪಟಿ ಆರಂಭವಾದದ್ದೇ ನಿರ್ದೇಶಕ ಎರೆ ಕ್ಯಾಥರ್ ಮಾಡಿದ್ದ ಟ್ವೀಟ್ ಮೂಲಕ. ಅಕ್ಟೋಬರ್ 31 ರಂದು ಟ್ವೀಟ್ ಮೂಲಕ ಯೂಟ್ಯೂಬರ್ ಧೃವ್ ರಾಠೀ ವಿರುದ್ಧ ಅವರ ಹೆಸರನ್ನು ಉಲ್ಲೇಖಿಸದೆ ಆರೋಪ ಮಾಡಿದ್ದ ಎರೆ ಕ್ಯಾಥರ್, “ದಿವಂಗತ ನಟ ಸುಶಾಂತ್ ಸಿಂಗ್ ಸಾವಿನ ಹಿಂದೆ ಆತನ ಕುಟುಂಬಸ್ಥರ ಪಾತ್ರ ಎಂಬ ಹೆಸರಿನಲ್ಲಿ 40 ಲಕ್ಷ ಚಂದಾದಾರರನ್ನು ಹೊಂದಿರುವ ಖ್ಯಾತ ಯೂಟ್ಯೂಬರ್ ಓರ್ವ ವಿಶ್ಲೇಷನಾತ್ಮಕ ವಿಡಿಯೋ ಒಂದನ್ನು ಮಾಡಲು ಮುಂದಾಗಿದ್ದಾರೆ. ಅಲ್ಲದೆ, ಈ ವಿಡಿಯೋ ಮಾಡಲು ಅವರು 65 ಲಕ್ಷ ಹಣ ಸ್ವೀಕರಿಸಿದ್ದಾರೆ. ಇದೇ ಯೂಟ್ಯೂಬರ್ ಈ ಹಿಂದೆ ನಟಿ ಕಂಗನಾ ಮತ್ತು ಅರ್ನಾಬ್ ವಿರುದ್ಧವೂ ವಿಡಿಯೋ ಮಾಡಿದ್ದರು” ಎಂದು ಆರೋಪಿಸಿದ್ದರು.

ಅಲ್ಲದೆ ಎರೆ ಕ್ಯಾಥರ್ ಮತ್ತೊಂದು ಟ್ವೀಟ್‌ನಲ್ಲಿ, “ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ” ಎಂದು ಆರೋಪಿಸಿದ್ದರು.

ನಿರ್ದೇಶಕ ಎರೆ ಕ್ಯಾಥರ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಯೂಟ್ಯೂಬರ್ ಧೃವ್ ರಾಠೀ, “ನನ್ನನ್ನು ಹೆಸರಿಸಿ ಈ ಸುಳ್ಳು ಸುದ್ದಿಯನ್ನು ಬರೆಯಲಾಗಿದೆ. ಮೊದಲನೇಯದಾಗಿ ನಟಿ ಕಂಗನಾ ವಿರುದ್ಧ ನಾನು ಮಾಡಿದ್ದ ವಿಡಿಯೋಗೆ ಯಾರಿಂದಲೂ ಹಣ ಪಡೆದಿಲ್ಲ. ಎರಡನೇಯದಾಗಿ ಮೃತ ನಟ ಸುಶಾಂತ್ ಸಿಂಗ್ ಸಾವಿನ ಕುರಿತು ವಿಡಿಯೋ ಮಾಡುವ ಯಾವ ಉದ್ದೇಶವೂ ನನಗಿಲ್ಲ. ಮೂರನೇಯದಾಗಿ ನಾನು ಮಾಡುವ ವಿಡಿಯೋಗಳಿಗೆ 30 ಲಕ್ಷ ಹಣದ ಪ್ರಾಯೋಜತ್ವ ಸಿಗಲಿ ಎಂದು ನಾನು ಆಶಿಸುತ್ತೇನೆ. ಅಷ್ಟು ಹಣ ಸಿಕ್ಕರೆ ನಾನು ಎಷ್ಟು ಶ್ರೀಮಂತ ವ್ಯಕ್ತಿಯಾಗಬಹುದು” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ರಾಜಕೀಯಾರ್ಥಿಕ ವಿಶ್ಲೇಷಕ ಧೃವ್ ರಾಠೀ ಬಗ್ಗೆ ನಿಮಗೆಷ್ಟು ಗೊತ್ತು?

ಈ ನಡುವೆ ಕಂಗನಾ ರಣಾವತ್, “ಎರೆ ಕ್ಯಾಥರ್ ಸರಿಯಾಗಿಯೇ ಹೇಳಿದ್ದಾರೆ. ಈತ ಹಣ ಪಡೆದು ನನ್ನ ವಿರುದ್ಧ ವಿಡಿಯೋಗಳನ್ನು ಮಾಡಿ ಯೂಟ್ಯೂಬ್‌ನಲ್ಲಿ ಹರಿಬಿಟ್ಟಿದ್ದಾನೆ. ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯನ್ನು ಧ್ವಂಸಗೊಳಿಸಿದ್ದ ಪ್ರಕರಣದ ಕುರಿತು ಈತ 60 ಲಕ್ಷ ಹಣ ಪಡೆದು ಸುಳ್ಳು ವಿಡಿಯೋ ಮಾಡಿದ್ದಾನೆ. ಈತನನ್ನು ನಾನು ಕಂಬಿ ಎಣಿಸುವಂತೆ ಮಾಡುತ್ತೇನೆ. ಸರ್ಕಾರ ಮತ್ತು ಹಣದ ಬಲ ಇಲ್ಲದೆ ಓರ್ವ ವ್ಯಕ್ತಿ ಹೀಗೆ ಕಾನೂನಾತ್ಮಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಸುಳ್ಳು ಹೇಳಲು ಸಾಧ್ಯವೇ?” ಎಂದು ಹೇಳುವ ಮೂಲಕ ನಟಿ ಕಂಗನಾ ಮಹಾರಾಷ್ಟ್ರ ಸರ್ಕಾರದ ವಿರುದ್ಧವೂ ಮತ್ತೊಮ್ಮೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಧೃವ್ ರಾಠೀ “ನೀವು ಈ ವೀಡಿಯೊ ಬಗ್ಗೆ ಮಾತನಾಡುತ್ತಿದ್ದೀರಾ? ಸ್ನೇಹಿತರೆ, ಅವರು ಈ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದಾರೋ, ಇಲ್ಲವೋ ಎಂದು ತಿಳಿಯಲು ದಯವಿಟ್ಟು ಈ ವೀಡಿಯೊವನ್ನು ವೀಕ್ಷಿಸಿ ಮತ್ತು ಹಂಚಿಕೊಳ್ಳಬಹುದೇ? ಏಕೆಂದರೆ ನಾನು ಯಾವುದೇ ಹಣವನ್ನು ಸ್ವೀಕರಿಸಿಲ್ಲ” ಎಂದು ತಮ್ಮ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

ಅಲ್ಲದೇ “ನನ್ನ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ, ನನ್ನ ಕಂಗನಾ ವಿಡಿಯೋಗೆ ಹೆಚ್ಚಿನ ಪ್ರಚಾರ ನೀಡಿದ ನಂತರ ಇಂದು 1 ಲಕ್ಷಕ್ಕೂ ಹೆಚ್ಚು ಜನರು ಅದನ್ನು ನೋಡಿದ್ದಾರೆ. ಇದನ್ನು ‘ಸ್ಟ್ರೈಸೆಂಡ್ ಎಫೆಕ್ಟ್’ (ಯಾವುದಾದರೂ ಮಾಹಿತಿಯನ್ನು ಮರೆಮಾಚಲು, ತೆಗೆದುಹಾಕಲು ಅಥವಾ ಸೆನ್ಸಾರ್ ಮಾಡಲು ಪ್ರಯತ್ನಿಸಿದಾಗ ಆ ಮಾಹಿತಿಯು ಇಂಟರ್ನೆಟ್‌ನಲ್ಲಿ ಮತ್ತಷ್ಟು ಪ್ರಚಾರ ಪಡೆದು ವೈರಲ್ ಆಗುವುದು) ಎಂದು ಕರೆಯಲಾಗುತ್ತದೆ” ಎಂದು ತಮ್ಮ ವಿಡಿಯೋ ವೀಕ್ಷಣೆಯ ಅನಾಲಿಟಿಕ್ ಗ್ರಾಫ್ ಅನ್ನು ಷೇರ್ ಮಾಡಿದ್ದಾರೆ.

ಕಂಗಾನಾ ಕುರಿತು ಧೃವ್ ರಾಠೀ ಮಾಡಿರುವ ಆ ವಿಡಿಯೋವನ್ನು ಇದುವರೆಗೂ 39 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, 4.4 ಲಕ್ಷ ಜನ ಲೈಕ್ ಮಾಡಿದ್ದಾರೆ.


ಇದನ್ನೂ ಓದಿ: ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....