Homeಮುಖಪುಟಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿವಾದದಲ್ಲಿರುವ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ನನ್ನ ಚಾರಿತ್ರ್ಯ ಹರಣ ಮಾಡುವ ವಿಡಿಯೋ ಮಾಡಲು 65 ಲಕ್ಷ ಹಣ ಪಡೆದಿದ್ದಾರೆ ಎಂದು ಕಂಗನಾ ಆರೋಪಿಸಿದ್ದಾರೆ.

ಅಸಲಿಗೆ ಈ ಜಟಾಪಟಿ ಆರಂಭವಾದದ್ದೇ ನಿರ್ದೇಶಕ ಎರೆ ಕ್ಯಾಥರ್ ಮಾಡಿದ್ದ ಟ್ವೀಟ್ ಮೂಲಕ. ಅಕ್ಟೋಬರ್ 31 ರಂದು ಟ್ವೀಟ್ ಮೂಲಕ ಯೂಟ್ಯೂಬರ್ ಧೃವ್ ರಾಠೀ ವಿರುದ್ಧ ಅವರ ಹೆಸರನ್ನು ಉಲ್ಲೇಖಿಸದೆ ಆರೋಪ ಮಾಡಿದ್ದ ಎರೆ ಕ್ಯಾಥರ್, “ದಿವಂಗತ ನಟ ಸುಶಾಂತ್ ಸಿಂಗ್ ಸಾವಿನ ಹಿಂದೆ ಆತನ ಕುಟುಂಬಸ್ಥರ ಪಾತ್ರ ಎಂಬ ಹೆಸರಿನಲ್ಲಿ 40 ಲಕ್ಷ ಚಂದಾದಾರರನ್ನು ಹೊಂದಿರುವ ಖ್ಯಾತ ಯೂಟ್ಯೂಬರ್ ಓರ್ವ ವಿಶ್ಲೇಷನಾತ್ಮಕ ವಿಡಿಯೋ ಒಂದನ್ನು ಮಾಡಲು ಮುಂದಾಗಿದ್ದಾರೆ. ಅಲ್ಲದೆ, ಈ ವಿಡಿಯೋ ಮಾಡಲು ಅವರು 65 ಲಕ್ಷ ಹಣ ಸ್ವೀಕರಿಸಿದ್ದಾರೆ. ಇದೇ ಯೂಟ್ಯೂಬರ್ ಈ ಹಿಂದೆ ನಟಿ ಕಂಗನಾ ಮತ್ತು ಅರ್ನಾಬ್ ವಿರುದ್ಧವೂ ವಿಡಿಯೋ ಮಾಡಿದ್ದರು” ಎಂದು ಆರೋಪಿಸಿದ್ದರು.

ಅಲ್ಲದೆ ಎರೆ ಕ್ಯಾಥರ್ ಮತ್ತೊಂದು ಟ್ವೀಟ್‌ನಲ್ಲಿ, “ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ” ಎಂದು ಆರೋಪಿಸಿದ್ದರು.

ನಿರ್ದೇಶಕ ಎರೆ ಕ್ಯಾಥರ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಯೂಟ್ಯೂಬರ್ ಧೃವ್ ರಾಠೀ, “ನನ್ನನ್ನು ಹೆಸರಿಸಿ ಈ ಸುಳ್ಳು ಸುದ್ದಿಯನ್ನು ಬರೆಯಲಾಗಿದೆ. ಮೊದಲನೇಯದಾಗಿ ನಟಿ ಕಂಗನಾ ವಿರುದ್ಧ ನಾನು ಮಾಡಿದ್ದ ವಿಡಿಯೋಗೆ ಯಾರಿಂದಲೂ ಹಣ ಪಡೆದಿಲ್ಲ. ಎರಡನೇಯದಾಗಿ ಮೃತ ನಟ ಸುಶಾಂತ್ ಸಿಂಗ್ ಸಾವಿನ ಕುರಿತು ವಿಡಿಯೋ ಮಾಡುವ ಯಾವ ಉದ್ದೇಶವೂ ನನಗಿಲ್ಲ. ಮೂರನೇಯದಾಗಿ ನಾನು ಮಾಡುವ ವಿಡಿಯೋಗಳಿಗೆ 30 ಲಕ್ಷ ಹಣದ ಪ್ರಾಯೋಜತ್ವ ಸಿಗಲಿ ಎಂದು ನಾನು ಆಶಿಸುತ್ತೇನೆ. ಅಷ್ಟು ಹಣ ಸಿಕ್ಕರೆ ನಾನು ಎಷ್ಟು ಶ್ರೀಮಂತ ವ್ಯಕ್ತಿಯಾಗಬಹುದು” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ರಾಜಕೀಯಾರ್ಥಿಕ ವಿಶ್ಲೇಷಕ ಧೃವ್ ರಾಠೀ ಬಗ್ಗೆ ನಿಮಗೆಷ್ಟು ಗೊತ್ತು?

ಈ ನಡುವೆ ಕಂಗನಾ ರಣಾವತ್, “ಎರೆ ಕ್ಯಾಥರ್ ಸರಿಯಾಗಿಯೇ ಹೇಳಿದ್ದಾರೆ. ಈತ ಹಣ ಪಡೆದು ನನ್ನ ವಿರುದ್ಧ ವಿಡಿಯೋಗಳನ್ನು ಮಾಡಿ ಯೂಟ್ಯೂಬ್‌ನಲ್ಲಿ ಹರಿಬಿಟ್ಟಿದ್ದಾನೆ. ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯನ್ನು ಧ್ವಂಸಗೊಳಿಸಿದ್ದ ಪ್ರಕರಣದ ಕುರಿತು ಈತ 60 ಲಕ್ಷ ಹಣ ಪಡೆದು ಸುಳ್ಳು ವಿಡಿಯೋ ಮಾಡಿದ್ದಾನೆ. ಈತನನ್ನು ನಾನು ಕಂಬಿ ಎಣಿಸುವಂತೆ ಮಾಡುತ್ತೇನೆ. ಸರ್ಕಾರ ಮತ್ತು ಹಣದ ಬಲ ಇಲ್ಲದೆ ಓರ್ವ ವ್ಯಕ್ತಿ ಹೀಗೆ ಕಾನೂನಾತ್ಮಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಸುಳ್ಳು ಹೇಳಲು ಸಾಧ್ಯವೇ?” ಎಂದು ಹೇಳುವ ಮೂಲಕ ನಟಿ ಕಂಗನಾ ಮಹಾರಾಷ್ಟ್ರ ಸರ್ಕಾರದ ವಿರುದ್ಧವೂ ಮತ್ತೊಮ್ಮೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಧೃವ್ ರಾಠೀ “ನೀವು ಈ ವೀಡಿಯೊ ಬಗ್ಗೆ ಮಾತನಾಡುತ್ತಿದ್ದೀರಾ? ಸ್ನೇಹಿತರೆ, ಅವರು ಈ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದಾರೋ, ಇಲ್ಲವೋ ಎಂದು ತಿಳಿಯಲು ದಯವಿಟ್ಟು ಈ ವೀಡಿಯೊವನ್ನು ವೀಕ್ಷಿಸಿ ಮತ್ತು ಹಂಚಿಕೊಳ್ಳಬಹುದೇ? ಏಕೆಂದರೆ ನಾನು ಯಾವುದೇ ಹಣವನ್ನು ಸ್ವೀಕರಿಸಿಲ್ಲ” ಎಂದು ತಮ್ಮ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

ಅಲ್ಲದೇ “ನನ್ನ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ, ನನ್ನ ಕಂಗನಾ ವಿಡಿಯೋಗೆ ಹೆಚ್ಚಿನ ಪ್ರಚಾರ ನೀಡಿದ ನಂತರ ಇಂದು 1 ಲಕ್ಷಕ್ಕೂ ಹೆಚ್ಚು ಜನರು ಅದನ್ನು ನೋಡಿದ್ದಾರೆ. ಇದನ್ನು ‘ಸ್ಟ್ರೈಸೆಂಡ್ ಎಫೆಕ್ಟ್’ (ಯಾವುದಾದರೂ ಮಾಹಿತಿಯನ್ನು ಮರೆಮಾಚಲು, ತೆಗೆದುಹಾಕಲು ಅಥವಾ ಸೆನ್ಸಾರ್ ಮಾಡಲು ಪ್ರಯತ್ನಿಸಿದಾಗ ಆ ಮಾಹಿತಿಯು ಇಂಟರ್ನೆಟ್‌ನಲ್ಲಿ ಮತ್ತಷ್ಟು ಪ್ರಚಾರ ಪಡೆದು ವೈರಲ್ ಆಗುವುದು) ಎಂದು ಕರೆಯಲಾಗುತ್ತದೆ” ಎಂದು ತಮ್ಮ ವಿಡಿಯೋ ವೀಕ್ಷಣೆಯ ಅನಾಲಿಟಿಕ್ ಗ್ರಾಫ್ ಅನ್ನು ಷೇರ್ ಮಾಡಿದ್ದಾರೆ.

ಕಂಗಾನಾ ಕುರಿತು ಧೃವ್ ರಾಠೀ ಮಾಡಿರುವ ಆ ವಿಡಿಯೋವನ್ನು ಇದುವರೆಗೂ 39 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, 4.4 ಲಕ್ಷ ಜನ ಲೈಕ್ ಮಾಡಿದ್ದಾರೆ.


ಇದನ್ನೂ ಓದಿ: ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...