Homeಮುಖಪುಟಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿವಾದದಲ್ಲಿರುವ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ನನ್ನ ಚಾರಿತ್ರ್ಯ ಹರಣ ಮಾಡುವ ವಿಡಿಯೋ ಮಾಡಲು 65 ಲಕ್ಷ ಹಣ ಪಡೆದಿದ್ದಾರೆ ಎಂದು ಕಂಗನಾ ಆರೋಪಿಸಿದ್ದಾರೆ.

ಅಸಲಿಗೆ ಈ ಜಟಾಪಟಿ ಆರಂಭವಾದದ್ದೇ ನಿರ್ದೇಶಕ ಎರೆ ಕ್ಯಾಥರ್ ಮಾಡಿದ್ದ ಟ್ವೀಟ್ ಮೂಲಕ. ಅಕ್ಟೋಬರ್ 31 ರಂದು ಟ್ವೀಟ್ ಮೂಲಕ ಯೂಟ್ಯೂಬರ್ ಧೃವ್ ರಾಠೀ ವಿರುದ್ಧ ಅವರ ಹೆಸರನ್ನು ಉಲ್ಲೇಖಿಸದೆ ಆರೋಪ ಮಾಡಿದ್ದ ಎರೆ ಕ್ಯಾಥರ್, “ದಿವಂಗತ ನಟ ಸುಶಾಂತ್ ಸಿಂಗ್ ಸಾವಿನ ಹಿಂದೆ ಆತನ ಕುಟುಂಬಸ್ಥರ ಪಾತ್ರ ಎಂಬ ಹೆಸರಿನಲ್ಲಿ 40 ಲಕ್ಷ ಚಂದಾದಾರರನ್ನು ಹೊಂದಿರುವ ಖ್ಯಾತ ಯೂಟ್ಯೂಬರ್ ಓರ್ವ ವಿಶ್ಲೇಷನಾತ್ಮಕ ವಿಡಿಯೋ ಒಂದನ್ನು ಮಾಡಲು ಮುಂದಾಗಿದ್ದಾರೆ. ಅಲ್ಲದೆ, ಈ ವಿಡಿಯೋ ಮಾಡಲು ಅವರು 65 ಲಕ್ಷ ಹಣ ಸ್ವೀಕರಿಸಿದ್ದಾರೆ. ಇದೇ ಯೂಟ್ಯೂಬರ್ ಈ ಹಿಂದೆ ನಟಿ ಕಂಗನಾ ಮತ್ತು ಅರ್ನಾಬ್ ವಿರುದ್ಧವೂ ವಿಡಿಯೋ ಮಾಡಿದ್ದರು” ಎಂದು ಆರೋಪಿಸಿದ್ದರು.

ಅಲ್ಲದೆ ಎರೆ ಕ್ಯಾಥರ್ ಮತ್ತೊಂದು ಟ್ವೀಟ್‌ನಲ್ಲಿ, “ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ” ಎಂದು ಆರೋಪಿಸಿದ್ದರು.

ನಿರ್ದೇಶಕ ಎರೆ ಕ್ಯಾಥರ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಯೂಟ್ಯೂಬರ್ ಧೃವ್ ರಾಠೀ, “ನನ್ನನ್ನು ಹೆಸರಿಸಿ ಈ ಸುಳ್ಳು ಸುದ್ದಿಯನ್ನು ಬರೆಯಲಾಗಿದೆ. ಮೊದಲನೇಯದಾಗಿ ನಟಿ ಕಂಗನಾ ವಿರುದ್ಧ ನಾನು ಮಾಡಿದ್ದ ವಿಡಿಯೋಗೆ ಯಾರಿಂದಲೂ ಹಣ ಪಡೆದಿಲ್ಲ. ಎರಡನೇಯದಾಗಿ ಮೃತ ನಟ ಸುಶಾಂತ್ ಸಿಂಗ್ ಸಾವಿನ ಕುರಿತು ವಿಡಿಯೋ ಮಾಡುವ ಯಾವ ಉದ್ದೇಶವೂ ನನಗಿಲ್ಲ. ಮೂರನೇಯದಾಗಿ ನಾನು ಮಾಡುವ ವಿಡಿಯೋಗಳಿಗೆ 30 ಲಕ್ಷ ಹಣದ ಪ್ರಾಯೋಜತ್ವ ಸಿಗಲಿ ಎಂದು ನಾನು ಆಶಿಸುತ್ತೇನೆ. ಅಷ್ಟು ಹಣ ಸಿಕ್ಕರೆ ನಾನು ಎಷ್ಟು ಶ್ರೀಮಂತ ವ್ಯಕ್ತಿಯಾಗಬಹುದು” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ರಾಜಕೀಯಾರ್ಥಿಕ ವಿಶ್ಲೇಷಕ ಧೃವ್ ರಾಠೀ ಬಗ್ಗೆ ನಿಮಗೆಷ್ಟು ಗೊತ್ತು?

ಈ ನಡುವೆ ಕಂಗನಾ ರಣಾವತ್, “ಎರೆ ಕ್ಯಾಥರ್ ಸರಿಯಾಗಿಯೇ ಹೇಳಿದ್ದಾರೆ. ಈತ ಹಣ ಪಡೆದು ನನ್ನ ವಿರುದ್ಧ ವಿಡಿಯೋಗಳನ್ನು ಮಾಡಿ ಯೂಟ್ಯೂಬ್‌ನಲ್ಲಿ ಹರಿಬಿಟ್ಟಿದ್ದಾನೆ. ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯನ್ನು ಧ್ವಂಸಗೊಳಿಸಿದ್ದ ಪ್ರಕರಣದ ಕುರಿತು ಈತ 60 ಲಕ್ಷ ಹಣ ಪಡೆದು ಸುಳ್ಳು ವಿಡಿಯೋ ಮಾಡಿದ್ದಾನೆ. ಈತನನ್ನು ನಾನು ಕಂಬಿ ಎಣಿಸುವಂತೆ ಮಾಡುತ್ತೇನೆ. ಸರ್ಕಾರ ಮತ್ತು ಹಣದ ಬಲ ಇಲ್ಲದೆ ಓರ್ವ ವ್ಯಕ್ತಿ ಹೀಗೆ ಕಾನೂನಾತ್ಮಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಸುಳ್ಳು ಹೇಳಲು ಸಾಧ್ಯವೇ?” ಎಂದು ಹೇಳುವ ಮೂಲಕ ನಟಿ ಕಂಗನಾ ಮಹಾರಾಷ್ಟ್ರ ಸರ್ಕಾರದ ವಿರುದ್ಧವೂ ಮತ್ತೊಮ್ಮೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಧೃವ್ ರಾಠೀ “ನೀವು ಈ ವೀಡಿಯೊ ಬಗ್ಗೆ ಮಾತನಾಡುತ್ತಿದ್ದೀರಾ? ಸ್ನೇಹಿತರೆ, ಅವರು ಈ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದಾರೋ, ಇಲ್ಲವೋ ಎಂದು ತಿಳಿಯಲು ದಯವಿಟ್ಟು ಈ ವೀಡಿಯೊವನ್ನು ವೀಕ್ಷಿಸಿ ಮತ್ತು ಹಂಚಿಕೊಳ್ಳಬಹುದೇ? ಏಕೆಂದರೆ ನಾನು ಯಾವುದೇ ಹಣವನ್ನು ಸ್ವೀಕರಿಸಿಲ್ಲ” ಎಂದು ತಮ್ಮ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

ಅಲ್ಲದೇ “ನನ್ನ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ, ನನ್ನ ಕಂಗನಾ ವಿಡಿಯೋಗೆ ಹೆಚ್ಚಿನ ಪ್ರಚಾರ ನೀಡಿದ ನಂತರ ಇಂದು 1 ಲಕ್ಷಕ್ಕೂ ಹೆಚ್ಚು ಜನರು ಅದನ್ನು ನೋಡಿದ್ದಾರೆ. ಇದನ್ನು ‘ಸ್ಟ್ರೈಸೆಂಡ್ ಎಫೆಕ್ಟ್’ (ಯಾವುದಾದರೂ ಮಾಹಿತಿಯನ್ನು ಮರೆಮಾಚಲು, ತೆಗೆದುಹಾಕಲು ಅಥವಾ ಸೆನ್ಸಾರ್ ಮಾಡಲು ಪ್ರಯತ್ನಿಸಿದಾಗ ಆ ಮಾಹಿತಿಯು ಇಂಟರ್ನೆಟ್‌ನಲ್ಲಿ ಮತ್ತಷ್ಟು ಪ್ರಚಾರ ಪಡೆದು ವೈರಲ್ ಆಗುವುದು) ಎಂದು ಕರೆಯಲಾಗುತ್ತದೆ” ಎಂದು ತಮ್ಮ ವಿಡಿಯೋ ವೀಕ್ಷಣೆಯ ಅನಾಲಿಟಿಕ್ ಗ್ರಾಫ್ ಅನ್ನು ಷೇರ್ ಮಾಡಿದ್ದಾರೆ.

ಕಂಗಾನಾ ಕುರಿತು ಧೃವ್ ರಾಠೀ ಮಾಡಿರುವ ಆ ವಿಡಿಯೋವನ್ನು ಇದುವರೆಗೂ 39 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, 4.4 ಲಕ್ಷ ಜನ ಲೈಕ್ ಮಾಡಿದ್ದಾರೆ.


ಇದನ್ನೂ ಓದಿ: ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...