Homeಮುಖಪುಟಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿವಾದದಲ್ಲಿರುವ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ನನ್ನ ಚಾರಿತ್ರ್ಯ ಹರಣ ಮಾಡುವ ವಿಡಿಯೋ ಮಾಡಲು 65 ಲಕ್ಷ ಹಣ ಪಡೆದಿದ್ದಾರೆ ಎಂದು ಕಂಗನಾ ಆರೋಪಿಸಿದ್ದಾರೆ.

ಅಸಲಿಗೆ ಈ ಜಟಾಪಟಿ ಆರಂಭವಾದದ್ದೇ ನಿರ್ದೇಶಕ ಎರೆ ಕ್ಯಾಥರ್ ಮಾಡಿದ್ದ ಟ್ವೀಟ್ ಮೂಲಕ. ಅಕ್ಟೋಬರ್ 31 ರಂದು ಟ್ವೀಟ್ ಮೂಲಕ ಯೂಟ್ಯೂಬರ್ ಧೃವ್ ರಾಠೀ ವಿರುದ್ಧ ಅವರ ಹೆಸರನ್ನು ಉಲ್ಲೇಖಿಸದೆ ಆರೋಪ ಮಾಡಿದ್ದ ಎರೆ ಕ್ಯಾಥರ್, “ದಿವಂಗತ ನಟ ಸುಶಾಂತ್ ಸಿಂಗ್ ಸಾವಿನ ಹಿಂದೆ ಆತನ ಕುಟುಂಬಸ್ಥರ ಪಾತ್ರ ಎಂಬ ಹೆಸರಿನಲ್ಲಿ 40 ಲಕ್ಷ ಚಂದಾದಾರರನ್ನು ಹೊಂದಿರುವ ಖ್ಯಾತ ಯೂಟ್ಯೂಬರ್ ಓರ್ವ ವಿಶ್ಲೇಷನಾತ್ಮಕ ವಿಡಿಯೋ ಒಂದನ್ನು ಮಾಡಲು ಮುಂದಾಗಿದ್ದಾರೆ. ಅಲ್ಲದೆ, ಈ ವಿಡಿಯೋ ಮಾಡಲು ಅವರು 65 ಲಕ್ಷ ಹಣ ಸ್ವೀಕರಿಸಿದ್ದಾರೆ. ಇದೇ ಯೂಟ್ಯೂಬರ್ ಈ ಹಿಂದೆ ನಟಿ ಕಂಗನಾ ಮತ್ತು ಅರ್ನಾಬ್ ವಿರುದ್ಧವೂ ವಿಡಿಯೋ ಮಾಡಿದ್ದರು” ಎಂದು ಆರೋಪಿಸಿದ್ದರು.

ಅಲ್ಲದೆ ಎರೆ ಕ್ಯಾಥರ್ ಮತ್ತೊಂದು ಟ್ವೀಟ್‌ನಲ್ಲಿ, “ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ” ಎಂದು ಆರೋಪಿಸಿದ್ದರು.

ನಿರ್ದೇಶಕ ಎರೆ ಕ್ಯಾಥರ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಯೂಟ್ಯೂಬರ್ ಧೃವ್ ರಾಠೀ, “ನನ್ನನ್ನು ಹೆಸರಿಸಿ ಈ ಸುಳ್ಳು ಸುದ್ದಿಯನ್ನು ಬರೆಯಲಾಗಿದೆ. ಮೊದಲನೇಯದಾಗಿ ನಟಿ ಕಂಗನಾ ವಿರುದ್ಧ ನಾನು ಮಾಡಿದ್ದ ವಿಡಿಯೋಗೆ ಯಾರಿಂದಲೂ ಹಣ ಪಡೆದಿಲ್ಲ. ಎರಡನೇಯದಾಗಿ ಮೃತ ನಟ ಸುಶಾಂತ್ ಸಿಂಗ್ ಸಾವಿನ ಕುರಿತು ವಿಡಿಯೋ ಮಾಡುವ ಯಾವ ಉದ್ದೇಶವೂ ನನಗಿಲ್ಲ. ಮೂರನೇಯದಾಗಿ ನಾನು ಮಾಡುವ ವಿಡಿಯೋಗಳಿಗೆ 30 ಲಕ್ಷ ಹಣದ ಪ್ರಾಯೋಜತ್ವ ಸಿಗಲಿ ಎಂದು ನಾನು ಆಶಿಸುತ್ತೇನೆ. ಅಷ್ಟು ಹಣ ಸಿಕ್ಕರೆ ನಾನು ಎಷ್ಟು ಶ್ರೀಮಂತ ವ್ಯಕ್ತಿಯಾಗಬಹುದು” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ರಾಜಕೀಯಾರ್ಥಿಕ ವಿಶ್ಲೇಷಕ ಧೃವ್ ರಾಠೀ ಬಗ್ಗೆ ನಿಮಗೆಷ್ಟು ಗೊತ್ತು?

ಈ ನಡುವೆ ಕಂಗನಾ ರಣಾವತ್, “ಎರೆ ಕ್ಯಾಥರ್ ಸರಿಯಾಗಿಯೇ ಹೇಳಿದ್ದಾರೆ. ಈತ ಹಣ ಪಡೆದು ನನ್ನ ವಿರುದ್ಧ ವಿಡಿಯೋಗಳನ್ನು ಮಾಡಿ ಯೂಟ್ಯೂಬ್‌ನಲ್ಲಿ ಹರಿಬಿಟ್ಟಿದ್ದಾನೆ. ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯನ್ನು ಧ್ವಂಸಗೊಳಿಸಿದ್ದ ಪ್ರಕರಣದ ಕುರಿತು ಈತ 60 ಲಕ್ಷ ಹಣ ಪಡೆದು ಸುಳ್ಳು ವಿಡಿಯೋ ಮಾಡಿದ್ದಾನೆ. ಈತನನ್ನು ನಾನು ಕಂಬಿ ಎಣಿಸುವಂತೆ ಮಾಡುತ್ತೇನೆ. ಸರ್ಕಾರ ಮತ್ತು ಹಣದ ಬಲ ಇಲ್ಲದೆ ಓರ್ವ ವ್ಯಕ್ತಿ ಹೀಗೆ ಕಾನೂನಾತ್ಮಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಸುಳ್ಳು ಹೇಳಲು ಸಾಧ್ಯವೇ?” ಎಂದು ಹೇಳುವ ಮೂಲಕ ನಟಿ ಕಂಗನಾ ಮಹಾರಾಷ್ಟ್ರ ಸರ್ಕಾರದ ವಿರುದ್ಧವೂ ಮತ್ತೊಮ್ಮೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಧೃವ್ ರಾಠೀ “ನೀವು ಈ ವೀಡಿಯೊ ಬಗ್ಗೆ ಮಾತನಾಡುತ್ತಿದ್ದೀರಾ? ಸ್ನೇಹಿತರೆ, ಅವರು ಈ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದಾರೋ, ಇಲ್ಲವೋ ಎಂದು ತಿಳಿಯಲು ದಯವಿಟ್ಟು ಈ ವೀಡಿಯೊವನ್ನು ವೀಕ್ಷಿಸಿ ಮತ್ತು ಹಂಚಿಕೊಳ್ಳಬಹುದೇ? ಏಕೆಂದರೆ ನಾನು ಯಾವುದೇ ಹಣವನ್ನು ಸ್ವೀಕರಿಸಿಲ್ಲ” ಎಂದು ತಮ್ಮ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

ಅಲ್ಲದೇ “ನನ್ನ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ, ನನ್ನ ಕಂಗನಾ ವಿಡಿಯೋಗೆ ಹೆಚ್ಚಿನ ಪ್ರಚಾರ ನೀಡಿದ ನಂತರ ಇಂದು 1 ಲಕ್ಷಕ್ಕೂ ಹೆಚ್ಚು ಜನರು ಅದನ್ನು ನೋಡಿದ್ದಾರೆ. ಇದನ್ನು ‘ಸ್ಟ್ರೈಸೆಂಡ್ ಎಫೆಕ್ಟ್’ (ಯಾವುದಾದರೂ ಮಾಹಿತಿಯನ್ನು ಮರೆಮಾಚಲು, ತೆಗೆದುಹಾಕಲು ಅಥವಾ ಸೆನ್ಸಾರ್ ಮಾಡಲು ಪ್ರಯತ್ನಿಸಿದಾಗ ಆ ಮಾಹಿತಿಯು ಇಂಟರ್ನೆಟ್‌ನಲ್ಲಿ ಮತ್ತಷ್ಟು ಪ್ರಚಾರ ಪಡೆದು ವೈರಲ್ ಆಗುವುದು) ಎಂದು ಕರೆಯಲಾಗುತ್ತದೆ” ಎಂದು ತಮ್ಮ ವಿಡಿಯೋ ವೀಕ್ಷಣೆಯ ಅನಾಲಿಟಿಕ್ ಗ್ರಾಫ್ ಅನ್ನು ಷೇರ್ ಮಾಡಿದ್ದಾರೆ.

ಕಂಗಾನಾ ಕುರಿತು ಧೃವ್ ರಾಠೀ ಮಾಡಿರುವ ಆ ವಿಡಿಯೋವನ್ನು ಇದುವರೆಗೂ 39 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, 4.4 ಲಕ್ಷ ಜನ ಲೈಕ್ ಮಾಡಿದ್ದಾರೆ.


ಇದನ್ನೂ ಓದಿ: ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...