Homeಕರ್ನಾಟಕಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6635 ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ

ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6635 ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಳೆದ ಮೂರು ವರ್ಷಗಳಲ್ಲಿ (2023ರಿಂದ) ರಾಜ್ಯದಲ್ಲಿ ಒಟ್ಟು 6,635 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 4,149 ಪ್ರಕರಣಗಳಲ್ಲಿ ಮಾತ್ರ 60 ದಿನಗಳ ಒಳಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು.

ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಶೇಕಡ 63ರಷ್ಟು ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ. ಈ ಪೈಕಿ ಕೇವಲ 36 ಪ್ರಕರಣಗಳಲ್ಲಿ ಶಿಕ್ಷೆಯಾಗಿವೆ. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳಿವೆ ಎಂದು ತಿಳಿಸಿದರು.

2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ (ಆ.25) ನಡೆಯಿತು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ರಾಜ್ಯದಲ್ಲಿ 33 ಡಿಸಿಆರ್‌ಇ ಪೊಲೀಸ್‌ ಠಾಣೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು ಎಂದರು.

ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್‌ಐಆರ್‌ ದಾಖಲಿಸಬೇಕು ಎಂದು ಸಿಎಂ ಸೂಚನೆ ನೀಡಿದರು.

ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿಗೆ ಯಾಕೆ ಬಾಕಿ ಇದೆ. ಪ್ರಸ್ತುತ ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿಯನ್ನು ಸಲ್ಲಿಸಿ ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಸಚಿವರಾದ ಹೆಚ್.ಕೆ ಪಾಟೀಲ್, ಡಾ.ಹೆಚ್.ಸಿ ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ, ಶಾಸಕರಾದ ಎ.ಸಿ ಶ್ರೀನಿವಾಸ್‌, ಎಚ್.ವಿ ವೆಂಕಟೇಶ್‌, ಸುಧಾಮ್‌ ದಾಸ್, ಎ.ಆರ್ ಕೃಷ್ಣಮೂರ್ತಿ, ನರೇಂದ್ರ ಸ್ವಾಮಿ, ಡಿ.ತಿಮ್ಮಯ್ಯ, ಭಾಗೀರಥಿ, ಶಾಂತಾರಾಮ್‌ ಸಿದ್ದಿ, ಬಸವರಾಜ್‌, ಬಿಎಂ.ನಾಗರಾಜ್, ಎನ್.ಟಿ.ಶ್ರೀನಿವಾಸ್, ಬಸನಗೌಡ ತುರವಿಹಾಳ್‌, ರಾಜು ವೇಣುಗೋಪಾಲ ನಾಯಕ್‌, ಡಾ.ಉಮೇಶ್‌ ಜಾಧವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ದಲಿತ ಇಂಜಿನಿಯರ್‌ಗೆ ಶೂನಿಂದ ಹಲ್ಲೆ: ಬಿಜೆಪಿ ಕಾರ್ಯಕರ್ತನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...