Homeಮುಖಪುಟ66ನೇ ಫಿಲ್ಮ್‌ ಫೇರ್ ಅವಾರ್ಡ್‌ ಪ್ರಕಟ: 7 ಪ್ರಶಸ್ತಿ ಗೆದ್ದ ತಾಪ್ಸಿ ಪನ್ನು ನಟನೆಯ 'ತಪ್ಪಡ್'...

66ನೇ ಫಿಲ್ಮ್‌ ಫೇರ್ ಅವಾರ್ಡ್‌ ಪ್ರಕಟ: 7 ಪ್ರಶಸ್ತಿ ಗೆದ್ದ ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ

- Advertisement -
- Advertisement -

66ನೇ ಫಿಲ್ಮ್‌ ಫೇರ್ ಪ್ರಶಸ್ತಿ ಪ್ರಕಟವಾಗಿದ್ದು, ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ದಿವಂಗತ ಬಾಲಿವುಡ್ ನಟ ಇರ್ಫಾನ್ ಖಾನ್ ಅಂಗ್ರೇಜಿ ಮೀಡಿಯಂ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಮತ್ತು ಜೀವಮಾನ ಸಾಧನೆಯ ಪ್ರಶಸ್ತಿ ಪಡೆದಿದ್ದಾರೆ.

ಪಿತೃಪ್ರಧಾನತೆಯ ಕರಾಳತೆಯನ್ನು ಹೇಳುವ ಚಿತ್ರ ತಪ್ಪಡ್ ಈ ಬಾರಿಯ ಫಿಲ್ಮ್‌ ಫೇರ್‌ನಲ್ಲಿ 7 ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಅಮಿತಾಬ್ ಬಚ್ಚನ್ ನಟನೆಯ ಗುಲಾಬೋ ಸಿತಾಬೋ ಚಿತ್ರ 6 ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಮೂಲಕ ಅತಿ ಹೆಚ್ಚು ಪ್ರಶಸ್ತಿ ಗಳಿಸಿದ ಚಿತ್ರಗಳಲ್ಲಿ ಈ ಎರಡು ಚಿತ್ರಗಳು ಮೊದಲ ಸಾಲಿನಲ್ಲಿವೆ.

ಹಿಂದಿ ಚಿತ್ರಗಳಲ್ಲಿನ ಕಲಾತ್ಮಕತೆ ಮತ್ತು ತಾಂತ್ರಿಕತೆ ವಿಭಾಗಗಳಿಗೆ ನೀಡುವ ಪ್ರಶಸ್ತಿಗಳು ಶನಿವಾರ ರಾತ್ರಿ ಪ್ರಕಟವಾಗಿವೆ. ಇದರ ಸಂಪೂರ್ಣ ವಿವರ ಇಲ್ಲಿದೆ.

66ನೇ ಫಿಲ್ಮ್‌ ಫೇರ್ ಪ್ರಶಸ್ತಿಗಳು

ಅತ್ಯುತ್ತಮ ಚಿತ್ರ: ತಪ್ಪಡ್

ವಿಮರ್ಶಕರ ಅತ್ಯುತ್ತಮ ಚಿತ್ರ: ಈಬ್ ಅಲ್ಲೆ ಓ…

ಅತ್ಯುತ್ತಮ ನಟ (ಮುಖ್ಯ ಪಾತ್ರ): ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಂ)

ಅತ್ಯುತ್ತಮ ನಟಿ (ಮುಖ್ಯ ಪಾತ್ರ): ತಾಪ್ಸಿ ಪನ್ನು (ತಪ್ಪಡ್)

ವಿಮರ್ಶಕರ ಮೆಚ್ಚುಗೆಯ ನಟ (ಮುಖ್ಯ ಪಾತ್ರ): ಅಮಿತಾಬ್ ಬಚ್ಚನ್ (ಗುಲಾಬೋ ಸಿತಾಬೋ)

ವಿಮರ್ಶಕರ ಮೆಚ್ಚುಗೆಯ ನಟಿ (ಮುಖ್ಯ ಪಾತ್ರ): ತಿಲೋತ್ತಮಾ ಶೋಮ್ (ಸರ್)

ಅತ್ಯುತ್ತಮ ನಿರ್ದೇಶಕ: ಓಮ್ ಬಿರ್ಲಾ (ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್)

ಅತ್ಯುತ್ತಮ ಪೋಷಕ ನಟಿ (ಸ್ತ್ರೀ): ಫಾರೂಖ್ ಜಾಫರ್ (ಗುಲಾಬೊ ಸೀತಾಬೊ)

ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ತಾಂತ್ರಿಕ ವಿಭಾಗ

ಅತ್ಯುತ್ತಮ ಕಥೆ: ಅನುಭವ್ ಸುಶೀಲಾ ಸಿಂಗ್ ಮತ್ತು ಮೃನ್ಮಮೈ ಲಗೂ ವೈಕುಲ್ (ತಪ್ಪಡ್)

ಅತ್ಯುತ್ತಮ ಚಿತ್ರಕಥೆ: ರೋಹೆನಾ ಗೆರಾ (ಸರ್)

ಅತ್ಯುತ್ತಮ ಸಂಭಾಷಣೆ: ಜುಹಿ ಚತುರ್ವೇದಿ (ಗುಲಾಬೊ ಸೀತಾಬೊ)

ಅತ್ಯುತ್ತಮ ಚೊಚ್ಚಲ ನಿರ್ದೇಶಕ: ರಾಜೇಶ್ ಕೃಷ್ಣನ್ (ಲೂಟ್‌ಕೇಸ್)

ಅತ್ಯುತ್ತಮ ಚೊಚ್ಚಲ ಸ್ತ್ರೀ: ಅಲಯಾ ಎಫ್ (ಜವಾನಿ ಜಾನೆಮನ್)

ಅತ್ಯುತ್ತಮ ಸಂಗೀತ ಆಲ್ಬಮ್: ಪ್ರೀತಮ್ (ಲುಡೋ)

ಅತ್ಯುತ್ತಮ ಸಾಹಿತ್ಯ: ಗುಲ್ಜಾರ್ (ಛಪಾಕ್)

ಅತ್ಯುತ್ತಮ ಹಿನ್ನೆಲೆ ಗಾಯಕ: ರಾಘವ್ ಚೈತನ್ಯ (ತಪ್ಪಡ್‌‌ನ ಏಕ್ ತುಕ್ಡಾ ಧೂಪ್)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಆಸೀಸ್ ಕೌರ್ (ಮಲಾಂಗ್ ಶೀರ್ಷಿಕೆ ಹಾಡು)

ಅತ್ಯುತ್ತಮ ಸಾಹಸ: ರಂಜಾನ್ ಬುಲಟ್, ಆರ್.ಪಿ.ಯಾದವ್ (ತನ್ಹಾಜಿ: ದಿ ಅನ್ಸಂಗ್ ವಾರಿಯರ್)

ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಕ್ಡೆ (ತಪ್ಪಡ್)

ಅತ್ಯುತ್ತಮ ಛಾಯಾಗ್ರಹಣ: ಅಭಿ ಮುಖೋಪಾಧ್ಯಾಯ (ಗುಲಾಬೊ ಸೀತಾಬೋ)

ಅತ್ಯುತ್ತಮ ನೃತ್ಯ ಸಂಯೋಜನೆ: ಫರಾಹ್ ಖಾನ್ (ದಿಲ್ ಬೆಚರಾ ಶೀರ್ಷಿಕೆ ಹಾಡು)

ಅತ್ಯುತ್ತಮ ವೇಷಭೂಷಣ ವಿನ್ಯಾಸ: ವೀರಾ ಕಪೂರ್ ಇ (ಗುಲಾಬೊ ಸೀತಾಬೊ)

ಅತ್ಯುತ್ತಮ ಎಡಿಟಿಂಗ್: ಯಶಾ ಪುಷ್ಪಾ ರಾಮ್‌ಚಂದಾನಿ (ತಪ್ಪಡ್)

ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್: ಮನಸಿ ಧ್ರುವ್ ಮೆಹ್ತಾ (ಗುಲಾಬೊ ಸೀತಾಬೊ)

ಅತ್ಯುತ್ತಮ ಧ್ವನಿ ವಿನ್ಯಾಸ: ಕಾಮೋಡ್ ಖರಡೆ (ತಪ್ಪಡ್)

ಅತ್ಯುತ್ತಮ ವಿಎಫ್‌ಎಕ್ಸ್: ಪ್ರಸಾದ್ ಸುತಾರ್, ಎನ್ವೈ ವಿಎಫ್‌ಎಕ್ಸ್‌ವಾಲಾ (ತನ್ಹಾಜಿ: ದಿ ಅನ್‌ಸಂಗ್ ವಾರಿಯರ್)

ವಿಶೇಷ ಪ್ರಶಸ್ತಿಗಳು

ಜೀವಮಾನ ಸಾಧನೆ ಪ್ರಶಸ್ತಿ: ಇರ್ಫಾನ್ ಖಾನ್

ಆರ್‌ಡಿ ಬರ್ಮನ್ ಪ್ರಶಸ್ತಿ: ಗುಲ್ಜರ್


ಇದನ್ನೂ ಓದಿ: ಆಸ್ಕರ್ ಪ್ರಶಸ್ತಿಗೆ ಮೊದಲ ಮುಸ್ಲಿಂ ನಟ ನಾಮನಿರ್ದೇಶನ: ಇತಿಹಾಸ ಸೃಷ್ಟಿಸಿದ ರಿಜ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...