Homeಮುಖಪುಟ66ನೇ ಫಿಲ್ಮ್‌ ಫೇರ್ ಅವಾರ್ಡ್‌ ಪ್ರಕಟ: 7 ಪ್ರಶಸ್ತಿ ಗೆದ್ದ ತಾಪ್ಸಿ ಪನ್ನು ನಟನೆಯ 'ತಪ್ಪಡ್'...

66ನೇ ಫಿಲ್ಮ್‌ ಫೇರ್ ಅವಾರ್ಡ್‌ ಪ್ರಕಟ: 7 ಪ್ರಶಸ್ತಿ ಗೆದ್ದ ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ

- Advertisement -
- Advertisement -

66ನೇ ಫಿಲ್ಮ್‌ ಫೇರ್ ಪ್ರಶಸ್ತಿ ಪ್ರಕಟವಾಗಿದ್ದು, ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ದಿವಂಗತ ಬಾಲಿವುಡ್ ನಟ ಇರ್ಫಾನ್ ಖಾನ್ ಅಂಗ್ರೇಜಿ ಮೀಡಿಯಂ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಮತ್ತು ಜೀವಮಾನ ಸಾಧನೆಯ ಪ್ರಶಸ್ತಿ ಪಡೆದಿದ್ದಾರೆ.

ಪಿತೃಪ್ರಧಾನತೆಯ ಕರಾಳತೆಯನ್ನು ಹೇಳುವ ಚಿತ್ರ ತಪ್ಪಡ್ ಈ ಬಾರಿಯ ಫಿಲ್ಮ್‌ ಫೇರ್‌ನಲ್ಲಿ 7 ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಅಮಿತಾಬ್ ಬಚ್ಚನ್ ನಟನೆಯ ಗುಲಾಬೋ ಸಿತಾಬೋ ಚಿತ್ರ 6 ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಮೂಲಕ ಅತಿ ಹೆಚ್ಚು ಪ್ರಶಸ್ತಿ ಗಳಿಸಿದ ಚಿತ್ರಗಳಲ್ಲಿ ಈ ಎರಡು ಚಿತ್ರಗಳು ಮೊದಲ ಸಾಲಿನಲ್ಲಿವೆ.

ಹಿಂದಿ ಚಿತ್ರಗಳಲ್ಲಿನ ಕಲಾತ್ಮಕತೆ ಮತ್ತು ತಾಂತ್ರಿಕತೆ ವಿಭಾಗಗಳಿಗೆ ನೀಡುವ ಪ್ರಶಸ್ತಿಗಳು ಶನಿವಾರ ರಾತ್ರಿ ಪ್ರಕಟವಾಗಿವೆ. ಇದರ ಸಂಪೂರ್ಣ ವಿವರ ಇಲ್ಲಿದೆ.

66ನೇ ಫಿಲ್ಮ್‌ ಫೇರ್ ಪ್ರಶಸ್ತಿಗಳು

ಅತ್ಯುತ್ತಮ ಚಿತ್ರ: ತಪ್ಪಡ್

ವಿಮರ್ಶಕರ ಅತ್ಯುತ್ತಮ ಚಿತ್ರ: ಈಬ್ ಅಲ್ಲೆ ಓ…

ಅತ್ಯುತ್ತಮ ನಟ (ಮುಖ್ಯ ಪಾತ್ರ): ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಂ)

ಅತ್ಯುತ್ತಮ ನಟಿ (ಮುಖ್ಯ ಪಾತ್ರ): ತಾಪ್ಸಿ ಪನ್ನು (ತಪ್ಪಡ್)

ವಿಮರ್ಶಕರ ಮೆಚ್ಚುಗೆಯ ನಟ (ಮುಖ್ಯ ಪಾತ್ರ): ಅಮಿತಾಬ್ ಬಚ್ಚನ್ (ಗುಲಾಬೋ ಸಿತಾಬೋ)

ವಿಮರ್ಶಕರ ಮೆಚ್ಚುಗೆಯ ನಟಿ (ಮುಖ್ಯ ಪಾತ್ರ): ತಿಲೋತ್ತಮಾ ಶೋಮ್ (ಸರ್)

ಅತ್ಯುತ್ತಮ ನಿರ್ದೇಶಕ: ಓಮ್ ಬಿರ್ಲಾ (ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್)

ಅತ್ಯುತ್ತಮ ಪೋಷಕ ನಟಿ (ಸ್ತ್ರೀ): ಫಾರೂಖ್ ಜಾಫರ್ (ಗುಲಾಬೊ ಸೀತಾಬೊ)

ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ತಾಂತ್ರಿಕ ವಿಭಾಗ

ಅತ್ಯುತ್ತಮ ಕಥೆ: ಅನುಭವ್ ಸುಶೀಲಾ ಸಿಂಗ್ ಮತ್ತು ಮೃನ್ಮಮೈ ಲಗೂ ವೈಕುಲ್ (ತಪ್ಪಡ್)

ಅತ್ಯುತ್ತಮ ಚಿತ್ರಕಥೆ: ರೋಹೆನಾ ಗೆರಾ (ಸರ್)

ಅತ್ಯುತ್ತಮ ಸಂಭಾಷಣೆ: ಜುಹಿ ಚತುರ್ವೇದಿ (ಗುಲಾಬೊ ಸೀತಾಬೊ)

ಅತ್ಯುತ್ತಮ ಚೊಚ್ಚಲ ನಿರ್ದೇಶಕ: ರಾಜೇಶ್ ಕೃಷ್ಣನ್ (ಲೂಟ್‌ಕೇಸ್)

ಅತ್ಯುತ್ತಮ ಚೊಚ್ಚಲ ಸ್ತ್ರೀ: ಅಲಯಾ ಎಫ್ (ಜವಾನಿ ಜಾನೆಮನ್)

ಅತ್ಯುತ್ತಮ ಸಂಗೀತ ಆಲ್ಬಮ್: ಪ್ರೀತಮ್ (ಲುಡೋ)

ಅತ್ಯುತ್ತಮ ಸಾಹಿತ್ಯ: ಗುಲ್ಜಾರ್ (ಛಪಾಕ್)

ಅತ್ಯುತ್ತಮ ಹಿನ್ನೆಲೆ ಗಾಯಕ: ರಾಘವ್ ಚೈತನ್ಯ (ತಪ್ಪಡ್‌‌ನ ಏಕ್ ತುಕ್ಡಾ ಧೂಪ್)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಆಸೀಸ್ ಕೌರ್ (ಮಲಾಂಗ್ ಶೀರ್ಷಿಕೆ ಹಾಡು)

ಅತ್ಯುತ್ತಮ ಸಾಹಸ: ರಂಜಾನ್ ಬುಲಟ್, ಆರ್.ಪಿ.ಯಾದವ್ (ತನ್ಹಾಜಿ: ದಿ ಅನ್ಸಂಗ್ ವಾರಿಯರ್)

ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಕ್ಡೆ (ತಪ್ಪಡ್)

ಅತ್ಯುತ್ತಮ ಛಾಯಾಗ್ರಹಣ: ಅಭಿ ಮುಖೋಪಾಧ್ಯಾಯ (ಗುಲಾಬೊ ಸೀತಾಬೋ)

ಅತ್ಯುತ್ತಮ ನೃತ್ಯ ಸಂಯೋಜನೆ: ಫರಾಹ್ ಖಾನ್ (ದಿಲ್ ಬೆಚರಾ ಶೀರ್ಷಿಕೆ ಹಾಡು)

ಅತ್ಯುತ್ತಮ ವೇಷಭೂಷಣ ವಿನ್ಯಾಸ: ವೀರಾ ಕಪೂರ್ ಇ (ಗುಲಾಬೊ ಸೀತಾಬೊ)

ಅತ್ಯುತ್ತಮ ಎಡಿಟಿಂಗ್: ಯಶಾ ಪುಷ್ಪಾ ರಾಮ್‌ಚಂದಾನಿ (ತಪ್ಪಡ್)

ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್: ಮನಸಿ ಧ್ರುವ್ ಮೆಹ್ತಾ (ಗುಲಾಬೊ ಸೀತಾಬೊ)

ಅತ್ಯುತ್ತಮ ಧ್ವನಿ ವಿನ್ಯಾಸ: ಕಾಮೋಡ್ ಖರಡೆ (ತಪ್ಪಡ್)

ಅತ್ಯುತ್ತಮ ವಿಎಫ್‌ಎಕ್ಸ್: ಪ್ರಸಾದ್ ಸುತಾರ್, ಎನ್ವೈ ವಿಎಫ್‌ಎಕ್ಸ್‌ವಾಲಾ (ತನ್ಹಾಜಿ: ದಿ ಅನ್‌ಸಂಗ್ ವಾರಿಯರ್)

ವಿಶೇಷ ಪ್ರಶಸ್ತಿಗಳು

ಜೀವಮಾನ ಸಾಧನೆ ಪ್ರಶಸ್ತಿ: ಇರ್ಫಾನ್ ಖಾನ್

ಆರ್‌ಡಿ ಬರ್ಮನ್ ಪ್ರಶಸ್ತಿ: ಗುಲ್ಜರ್


ಇದನ್ನೂ ಓದಿ: ಆಸ್ಕರ್ ಪ್ರಶಸ್ತಿಗೆ ಮೊದಲ ಮುಸ್ಲಿಂ ನಟ ನಾಮನಿರ್ದೇಶನ: ಇತಿಹಾಸ ಸೃಷ್ಟಿಸಿದ ರಿಜ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...