Homeಮುಖಪುಟ66ನೇ ಫಿಲ್ಮ್‌ ಫೇರ್ ಅವಾರ್ಡ್‌ ಪ್ರಕಟ: 7 ಪ್ರಶಸ್ತಿ ಗೆದ್ದ ತಾಪ್ಸಿ ಪನ್ನು ನಟನೆಯ 'ತಪ್ಪಡ್'...

66ನೇ ಫಿಲ್ಮ್‌ ಫೇರ್ ಅವಾರ್ಡ್‌ ಪ್ರಕಟ: 7 ಪ್ರಶಸ್ತಿ ಗೆದ್ದ ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ

- Advertisement -
- Advertisement -

66ನೇ ಫಿಲ್ಮ್‌ ಫೇರ್ ಪ್ರಶಸ್ತಿ ಪ್ರಕಟವಾಗಿದ್ದು, ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ದಿವಂಗತ ಬಾಲಿವುಡ್ ನಟ ಇರ್ಫಾನ್ ಖಾನ್ ಅಂಗ್ರೇಜಿ ಮೀಡಿಯಂ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಮತ್ತು ಜೀವಮಾನ ಸಾಧನೆಯ ಪ್ರಶಸ್ತಿ ಪಡೆದಿದ್ದಾರೆ.

ಪಿತೃಪ್ರಧಾನತೆಯ ಕರಾಳತೆಯನ್ನು ಹೇಳುವ ಚಿತ್ರ ತಪ್ಪಡ್ ಈ ಬಾರಿಯ ಫಿಲ್ಮ್‌ ಫೇರ್‌ನಲ್ಲಿ 7 ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಅಮಿತಾಬ್ ಬಚ್ಚನ್ ನಟನೆಯ ಗುಲಾಬೋ ಸಿತಾಬೋ ಚಿತ್ರ 6 ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಮೂಲಕ ಅತಿ ಹೆಚ್ಚು ಪ್ರಶಸ್ತಿ ಗಳಿಸಿದ ಚಿತ್ರಗಳಲ್ಲಿ ಈ ಎರಡು ಚಿತ್ರಗಳು ಮೊದಲ ಸಾಲಿನಲ್ಲಿವೆ.

ಹಿಂದಿ ಚಿತ್ರಗಳಲ್ಲಿನ ಕಲಾತ್ಮಕತೆ ಮತ್ತು ತಾಂತ್ರಿಕತೆ ವಿಭಾಗಗಳಿಗೆ ನೀಡುವ ಪ್ರಶಸ್ತಿಗಳು ಶನಿವಾರ ರಾತ್ರಿ ಪ್ರಕಟವಾಗಿವೆ. ಇದರ ಸಂಪೂರ್ಣ ವಿವರ ಇಲ್ಲಿದೆ.

66ನೇ ಫಿಲ್ಮ್‌ ಫೇರ್ ಪ್ರಶಸ್ತಿಗಳು

ಅತ್ಯುತ್ತಮ ಚಿತ್ರ: ತಪ್ಪಡ್

ವಿಮರ್ಶಕರ ಅತ್ಯುತ್ತಮ ಚಿತ್ರ: ಈಬ್ ಅಲ್ಲೆ ಓ…

ಅತ್ಯುತ್ತಮ ನಟ (ಮುಖ್ಯ ಪಾತ್ರ): ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಂ)

ಅತ್ಯುತ್ತಮ ನಟಿ (ಮುಖ್ಯ ಪಾತ್ರ): ತಾಪ್ಸಿ ಪನ್ನು (ತಪ್ಪಡ್)

ವಿಮರ್ಶಕರ ಮೆಚ್ಚುಗೆಯ ನಟ (ಮುಖ್ಯ ಪಾತ್ರ): ಅಮಿತಾಬ್ ಬಚ್ಚನ್ (ಗುಲಾಬೋ ಸಿತಾಬೋ)

ವಿಮರ್ಶಕರ ಮೆಚ್ಚುಗೆಯ ನಟಿ (ಮುಖ್ಯ ಪಾತ್ರ): ತಿಲೋತ್ತಮಾ ಶೋಮ್ (ಸರ್)

ಅತ್ಯುತ್ತಮ ನಿರ್ದೇಶಕ: ಓಮ್ ಬಿರ್ಲಾ (ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್)

ಅತ್ಯುತ್ತಮ ಪೋಷಕ ನಟಿ (ಸ್ತ್ರೀ): ಫಾರೂಖ್ ಜಾಫರ್ (ಗುಲಾಬೊ ಸೀತಾಬೊ)

ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ತಾಂತ್ರಿಕ ವಿಭಾಗ

ಅತ್ಯುತ್ತಮ ಕಥೆ: ಅನುಭವ್ ಸುಶೀಲಾ ಸಿಂಗ್ ಮತ್ತು ಮೃನ್ಮಮೈ ಲಗೂ ವೈಕುಲ್ (ತಪ್ಪಡ್)

ಅತ್ಯುತ್ತಮ ಚಿತ್ರಕಥೆ: ರೋಹೆನಾ ಗೆರಾ (ಸರ್)

ಅತ್ಯುತ್ತಮ ಸಂಭಾಷಣೆ: ಜುಹಿ ಚತುರ್ವೇದಿ (ಗುಲಾಬೊ ಸೀತಾಬೊ)

ಅತ್ಯುತ್ತಮ ಚೊಚ್ಚಲ ನಿರ್ದೇಶಕ: ರಾಜೇಶ್ ಕೃಷ್ಣನ್ (ಲೂಟ್‌ಕೇಸ್)

ಅತ್ಯುತ್ತಮ ಚೊಚ್ಚಲ ಸ್ತ್ರೀ: ಅಲಯಾ ಎಫ್ (ಜವಾನಿ ಜಾನೆಮನ್)

ಅತ್ಯುತ್ತಮ ಸಂಗೀತ ಆಲ್ಬಮ್: ಪ್ರೀತಮ್ (ಲುಡೋ)

ಅತ್ಯುತ್ತಮ ಸಾಹಿತ್ಯ: ಗುಲ್ಜಾರ್ (ಛಪಾಕ್)

ಅತ್ಯುತ್ತಮ ಹಿನ್ನೆಲೆ ಗಾಯಕ: ರಾಘವ್ ಚೈತನ್ಯ (ತಪ್ಪಡ್‌‌ನ ಏಕ್ ತುಕ್ಡಾ ಧೂಪ್)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಆಸೀಸ್ ಕೌರ್ (ಮಲಾಂಗ್ ಶೀರ್ಷಿಕೆ ಹಾಡು)

ಅತ್ಯುತ್ತಮ ಸಾಹಸ: ರಂಜಾನ್ ಬುಲಟ್, ಆರ್.ಪಿ.ಯಾದವ್ (ತನ್ಹಾಜಿ: ದಿ ಅನ್ಸಂಗ್ ವಾರಿಯರ್)

ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಕ್ಡೆ (ತಪ್ಪಡ್)

ಅತ್ಯುತ್ತಮ ಛಾಯಾಗ್ರಹಣ: ಅಭಿ ಮುಖೋಪಾಧ್ಯಾಯ (ಗುಲಾಬೊ ಸೀತಾಬೋ)

ಅತ್ಯುತ್ತಮ ನೃತ್ಯ ಸಂಯೋಜನೆ: ಫರಾಹ್ ಖಾನ್ (ದಿಲ್ ಬೆಚರಾ ಶೀರ್ಷಿಕೆ ಹಾಡು)

ಅತ್ಯುತ್ತಮ ವೇಷಭೂಷಣ ವಿನ್ಯಾಸ: ವೀರಾ ಕಪೂರ್ ಇ (ಗುಲಾಬೊ ಸೀತಾಬೊ)

ಅತ್ಯುತ್ತಮ ಎಡಿಟಿಂಗ್: ಯಶಾ ಪುಷ್ಪಾ ರಾಮ್‌ಚಂದಾನಿ (ತಪ್ಪಡ್)

ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್: ಮನಸಿ ಧ್ರುವ್ ಮೆಹ್ತಾ (ಗುಲಾಬೊ ಸೀತಾಬೊ)

ಅತ್ಯುತ್ತಮ ಧ್ವನಿ ವಿನ್ಯಾಸ: ಕಾಮೋಡ್ ಖರಡೆ (ತಪ್ಪಡ್)

ಅತ್ಯುತ್ತಮ ವಿಎಫ್‌ಎಕ್ಸ್: ಪ್ರಸಾದ್ ಸುತಾರ್, ಎನ್ವೈ ವಿಎಫ್‌ಎಕ್ಸ್‌ವಾಲಾ (ತನ್ಹಾಜಿ: ದಿ ಅನ್‌ಸಂಗ್ ವಾರಿಯರ್)

ವಿಶೇಷ ಪ್ರಶಸ್ತಿಗಳು

ಜೀವಮಾನ ಸಾಧನೆ ಪ್ರಶಸ್ತಿ: ಇರ್ಫಾನ್ ಖಾನ್

ಆರ್‌ಡಿ ಬರ್ಮನ್ ಪ್ರಶಸ್ತಿ: ಗುಲ್ಜರ್


ಇದನ್ನೂ ಓದಿ: ಆಸ್ಕರ್ ಪ್ರಶಸ್ತಿಗೆ ಮೊದಲ ಮುಸ್ಲಿಂ ನಟ ನಾಮನಿರ್ದೇಶನ: ಇತಿಹಾಸ ಸೃಷ್ಟಿಸಿದ ರಿಜ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...