Homeಮುಖಪುಟದೆಹಲಿ ಚುನಾವಣೆ: ಈವರೆಗೆ ಕಳೆದ ಬಾರಿಗಿಂತ ಕಡಿಮೆ ಮತದಾನ..

ದೆಹಲಿ ಚುನಾವಣೆ: ಈವರೆಗೆ ಕಳೆದ ಬಾರಿಗಿಂತ ಕಡಿಮೆ ಮತದಾನ..

ಶಹೀನ್ ಬಾಗ್‌ನ ಎಲ್ಲಾ ಐದು ಮತಗಟ್ಟೆಗಳು"ಅತೀಸೂಕ್ಷ್ಮ"...!!

- Advertisement -
- Advertisement -

ದೆಹಲಿ ಚುನಾವಣೆ ಪ್ರಾರಂಭವಾಗಿದ್ದು ಈವರೆಗೆ 16.04%ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 1.47 ಕೋಟಿ ಮತದಾರರು ಮತ ಚಲಾಯಿಸಲಿದ್ದು, ಕಣದಲ್ಲಿರುವ 672 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

70 ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯು ಮೊದಲ ಮೂರು ಗಂಟೆಗಳಲ್ಲಿ ಕಳೆದ ಬಾರಿಗಿಂತ ಕಡಿಮೆ ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದರು.

2015 ರಲ್ಲಿ ನಡೆದ ಕೊನೆಯ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 67.12% ರಷ್ಟು ಮತದಾನವನ್ನು ದಾಖಲಿಸಿತ್ತು.

81,05,236 ಪುರುಷ ಮತದಾರರು ಮತ್ತು 66,80,277 ಮಹಿಳಾ ಮತದಾರರು ಜೊತೆಗೆ 869 ತೃತೀಯ ಲಿಂಗ ಮತದಾರರನ್ನು ದೆಹಲಿ ಹೊಂದಿದೆ. ದೆಹಲಿಯ 2689 ಪ್ರದೇಶಗಳಲ್ಲಿ 13,571 ಮತದಾನ ಕೇಂದ್ರಗಳಲ್ಲಿ ಮತದಾನ ನಡೆಯಲಿದೆ.

ಕಳೆದ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವೂ 70 ಸ್ಥಾನಗಳಲ್ಲಿ 67 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ದಾಖಲಿಸಿದರೆ.ಬಿಜೆಪಿ ಮೂರು ಸ್ಥಾನಗಳು ಮತ್ತು ಕಾಂಗ್ರೆಸ್ ಶೂನ್ಯ ಸಾಧನೆಯನ್ನು ಮಾಡಿತ್ತು.

ಪ್ರಸುತ ಎಎಪಿ ಎಲ್ಲಾ 70 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಬಿಜೆಪಿ 67 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಮತ್ತು ಉಳಿದ ಮೂರು ಸ್ಥಾನಗಳನ್ನು ತನ್ನ ಮಿತ್ರ ಪಕ್ಷಗಳಾದ ಜನತಾದಳ (ಯುನೈಟೆಡ್)ಗೆ ಎರಡು ಮತ್ತು ಲೋಕ ಜನಶಕ್ತಿ ಪಕ್ಷಕ್ಕೆ (ಎಲ್ಜೆಪಿ) ಒಂದು ಸ್ಥಾನವನ್ನು ಬಿಟ್ಟು ಕೊಟ್ಟಿದೆ. ಕಾಂಗ್ರೆಸ್ 66 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ ತನ್ನ ಮಿತ್ರ ಪಕ್ಷ ರಾಷ್ಟ್ರ ಜನತಾದಳಕ್ಕೆ (ಆರ್‌ಜೆಡಿ) ನಾಲ್ಕು ಸ್ಥಾನಗಳನ್ನು ನೀಡಿದೆ.

ಕೇಜ್ರಿವಾಲ್ ಅವರ ಎಎಪಿ ಸತತ ಎರಡನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದರೆ, ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರ ಮೂಲಕ ಗೆಲ್ಲಲು ಪ್ರಯತ್ನಿಸುತ್ತಿದೆ.

ಎಎಪಿ ಕಳೆದ ಐದು ವರ್ಷಗಳಲ್ಲಿ ಸ್ಥಳೀಯ ಆಡಳಿತ ಸಮಸ್ಯೆಗಳು ಮತ್ತು ಅದರ ಕುರಿತಾಗಿ ಕೇಂದ್ರೀಕರಿಸಿ ಪ್ರಚಾರ ಮಾಡಿದರೆ, ಬಿಜೆಪಿ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ಭದ್ರತೆಯ ವಿಷಯವನ್ನು ದೊಡ್ಡದಾಗಿ ಬಿಂಬಿಸುವ ಮೂಲಕ ಚುನಾವಣಾ ಪ್ರಚಾರ ಮಾಡಿತ್ತು.

ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಪ್ರತಿಷ್ಠಿತ ನವದೆಹಲಿಯಿಂದ ಸ್ಪರ್ಧಿಸುತ್ತಿದ್ದಾರೆ, ಬಿಜೆಪಿ ಅವರ ವಿರುದ್ಧ ಸುನಿಲ್ ಯಾದವ್ ಅವರನ್ನು ಕಣಕ್ಕಿಳಿಸಿದೆ, ಕಾಂಗ್ರೆಸ್ ನಿಂದ ರೋಮೇಶ್ ಸಬ್ಬರ್ವಾಲ್ ಅವರು ಸ್ಪರ್ದಿಸುತ್ತಿದ್ದಾರೆ.

ಎಎಪಿಯ ದಿಲೀಪ್ ಪಾಂಡೆ ತಿಮಾರ್‌ಪುರದಿಂದ, ಕಲ್ಕಾಜಿಯಿಂದ ಅತಿಶಿ, ರಾಜೇಂದರ್ ನಗರದಿಂದ ರಾಘವ್ ಚಾಧಾ ಸ್ಪರ್ಧಿಸುತ್ತಿದ್ದಾರೆ.

ರೋಹಿಣಿಯಿಂದ ವಿಜೇಂದರ್ ಗುಪ್ತಾ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಾಜಿ ಎಎಪಿ ಮುಖಂಡ ಕಪಿಲ್ ಮಿಶ್ರಾ ಈ ಚುನಾವಣೆಯಲ್ಲಿ ಮಾಡೆಲ್ ಟೌನ್‌ನ ಬಿಜೆಪಿ ಅಭ್ಯರ್ಥಿ. ತಾಜಿಂದರ್ ಪಾಲ್ ಸಿಂಗ್ ಬಗ್ಗಾ ಹರಿ ನಗರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಗಾಂಧಿ ನಗರದಿಂದ ಅರವಿಂದರ್ ಸಿಂಗ್ ಲವ್ಲಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಮಾಜಿ ಎಎಪಿ ಮುಖಂಡ ಅಲ್ಕಾ ಲಾಂಬಾ ಚಾಂದನಿ ಚೌಕ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಹರೂನ್ ಯೂಸುಫ್ ಬಲ್ಲಿಮಾರನ್ ನಿಂದ ಸ್ಪರ್ಧಿಸುತ್ತಿದ್ದಾರೆ.

ಎಲ್ಲಾ 70 ಅಸೆಂಬ್ಲಿಗಳಲ್ಲಿ ಶಾಂತಿಯುತ ಮತದಾನವನ್ನು ಖಚಿತಪಡಿಸಿಕೊಳ್ಳಲು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) 190 ಗುಂಪುಗಳನ್ನು ನಿಯೋಜಿಸಲಾಗಿದೆ. ಇದಲ್ಲದೆ, 19,000 ಹೋಮ್ ಗಾರ್ಡ್ ಮತ್ತು 42,000 ದೆಹಲಿ ಪೊಲೀಸ್ ಸಿಬ್ಬಂದಿ ಸಹ ಕರ್ತವ್ಯದಲ್ಲಿದ್ದಾರೆ.

ಒಟ್ಟು 3,141 ಮತಗಟ್ಟೆಗಳಿದ್ದು, 144 ಸೂಕ್ಷ್ಮ ಮತಗಟ್ಟೆಗಳು ಹಾಗು 102ಅತೀ ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ.

ಶಹೀನ್ ಬಾಗ್‌ನ ಎಲ್ಲಾ ಐದು ಮತಗಟ್ಟೆಗಳನ್ನು ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) “ಅತಿ ಸೂಕ್ಷ್ಮ” ಎಂದು ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...