Homeಮುಖಪುಟದೆಹಲಿ ಚುನಾವಣೆ: ಈವರೆಗೆ ಕಳೆದ ಬಾರಿಗಿಂತ ಕಡಿಮೆ ಮತದಾನ..

ದೆಹಲಿ ಚುನಾವಣೆ: ಈವರೆಗೆ ಕಳೆದ ಬಾರಿಗಿಂತ ಕಡಿಮೆ ಮತದಾನ..

ಶಹೀನ್ ಬಾಗ್‌ನ ಎಲ್ಲಾ ಐದು ಮತಗಟ್ಟೆಗಳು"ಅತೀಸೂಕ್ಷ್ಮ"...!!

- Advertisement -
- Advertisement -

ದೆಹಲಿ ಚುನಾವಣೆ ಪ್ರಾರಂಭವಾಗಿದ್ದು ಈವರೆಗೆ 16.04%ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 1.47 ಕೋಟಿ ಮತದಾರರು ಮತ ಚಲಾಯಿಸಲಿದ್ದು, ಕಣದಲ್ಲಿರುವ 672 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

70 ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯು ಮೊದಲ ಮೂರು ಗಂಟೆಗಳಲ್ಲಿ ಕಳೆದ ಬಾರಿಗಿಂತ ಕಡಿಮೆ ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದರು.

2015 ರಲ್ಲಿ ನಡೆದ ಕೊನೆಯ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 67.12% ರಷ್ಟು ಮತದಾನವನ್ನು ದಾಖಲಿಸಿತ್ತು.

81,05,236 ಪುರುಷ ಮತದಾರರು ಮತ್ತು 66,80,277 ಮಹಿಳಾ ಮತದಾರರು ಜೊತೆಗೆ 869 ತೃತೀಯ ಲಿಂಗ ಮತದಾರರನ್ನು ದೆಹಲಿ ಹೊಂದಿದೆ. ದೆಹಲಿಯ 2689 ಪ್ರದೇಶಗಳಲ್ಲಿ 13,571 ಮತದಾನ ಕೇಂದ್ರಗಳಲ್ಲಿ ಮತದಾನ ನಡೆಯಲಿದೆ.

ಕಳೆದ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವೂ 70 ಸ್ಥಾನಗಳಲ್ಲಿ 67 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ದಾಖಲಿಸಿದರೆ.ಬಿಜೆಪಿ ಮೂರು ಸ್ಥಾನಗಳು ಮತ್ತು ಕಾಂಗ್ರೆಸ್ ಶೂನ್ಯ ಸಾಧನೆಯನ್ನು ಮಾಡಿತ್ತು.

ಪ್ರಸುತ ಎಎಪಿ ಎಲ್ಲಾ 70 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಬಿಜೆಪಿ 67 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಮತ್ತು ಉಳಿದ ಮೂರು ಸ್ಥಾನಗಳನ್ನು ತನ್ನ ಮಿತ್ರ ಪಕ್ಷಗಳಾದ ಜನತಾದಳ (ಯುನೈಟೆಡ್)ಗೆ ಎರಡು ಮತ್ತು ಲೋಕ ಜನಶಕ್ತಿ ಪಕ್ಷಕ್ಕೆ (ಎಲ್ಜೆಪಿ) ಒಂದು ಸ್ಥಾನವನ್ನು ಬಿಟ್ಟು ಕೊಟ್ಟಿದೆ. ಕಾಂಗ್ರೆಸ್ 66 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ ತನ್ನ ಮಿತ್ರ ಪಕ್ಷ ರಾಷ್ಟ್ರ ಜನತಾದಳಕ್ಕೆ (ಆರ್‌ಜೆಡಿ) ನಾಲ್ಕು ಸ್ಥಾನಗಳನ್ನು ನೀಡಿದೆ.

ಕೇಜ್ರಿವಾಲ್ ಅವರ ಎಎಪಿ ಸತತ ಎರಡನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದರೆ, ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರ ಮೂಲಕ ಗೆಲ್ಲಲು ಪ್ರಯತ್ನಿಸುತ್ತಿದೆ.

ಎಎಪಿ ಕಳೆದ ಐದು ವರ್ಷಗಳಲ್ಲಿ ಸ್ಥಳೀಯ ಆಡಳಿತ ಸಮಸ್ಯೆಗಳು ಮತ್ತು ಅದರ ಕುರಿತಾಗಿ ಕೇಂದ್ರೀಕರಿಸಿ ಪ್ರಚಾರ ಮಾಡಿದರೆ, ಬಿಜೆಪಿ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ಭದ್ರತೆಯ ವಿಷಯವನ್ನು ದೊಡ್ಡದಾಗಿ ಬಿಂಬಿಸುವ ಮೂಲಕ ಚುನಾವಣಾ ಪ್ರಚಾರ ಮಾಡಿತ್ತು.

ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಪ್ರತಿಷ್ಠಿತ ನವದೆಹಲಿಯಿಂದ ಸ್ಪರ್ಧಿಸುತ್ತಿದ್ದಾರೆ, ಬಿಜೆಪಿ ಅವರ ವಿರುದ್ಧ ಸುನಿಲ್ ಯಾದವ್ ಅವರನ್ನು ಕಣಕ್ಕಿಳಿಸಿದೆ, ಕಾಂಗ್ರೆಸ್ ನಿಂದ ರೋಮೇಶ್ ಸಬ್ಬರ್ವಾಲ್ ಅವರು ಸ್ಪರ್ದಿಸುತ್ತಿದ್ದಾರೆ.

ಎಎಪಿಯ ದಿಲೀಪ್ ಪಾಂಡೆ ತಿಮಾರ್‌ಪುರದಿಂದ, ಕಲ್ಕಾಜಿಯಿಂದ ಅತಿಶಿ, ರಾಜೇಂದರ್ ನಗರದಿಂದ ರಾಘವ್ ಚಾಧಾ ಸ್ಪರ್ಧಿಸುತ್ತಿದ್ದಾರೆ.

ರೋಹಿಣಿಯಿಂದ ವಿಜೇಂದರ್ ಗುಪ್ತಾ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಾಜಿ ಎಎಪಿ ಮುಖಂಡ ಕಪಿಲ್ ಮಿಶ್ರಾ ಈ ಚುನಾವಣೆಯಲ್ಲಿ ಮಾಡೆಲ್ ಟೌನ್‌ನ ಬಿಜೆಪಿ ಅಭ್ಯರ್ಥಿ. ತಾಜಿಂದರ್ ಪಾಲ್ ಸಿಂಗ್ ಬಗ್ಗಾ ಹರಿ ನಗರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಗಾಂಧಿ ನಗರದಿಂದ ಅರವಿಂದರ್ ಸಿಂಗ್ ಲವ್ಲಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಮಾಜಿ ಎಎಪಿ ಮುಖಂಡ ಅಲ್ಕಾ ಲಾಂಬಾ ಚಾಂದನಿ ಚೌಕ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಹರೂನ್ ಯೂಸುಫ್ ಬಲ್ಲಿಮಾರನ್ ನಿಂದ ಸ್ಪರ್ಧಿಸುತ್ತಿದ್ದಾರೆ.

ಎಲ್ಲಾ 70 ಅಸೆಂಬ್ಲಿಗಳಲ್ಲಿ ಶಾಂತಿಯುತ ಮತದಾನವನ್ನು ಖಚಿತಪಡಿಸಿಕೊಳ್ಳಲು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) 190 ಗುಂಪುಗಳನ್ನು ನಿಯೋಜಿಸಲಾಗಿದೆ. ಇದಲ್ಲದೆ, 19,000 ಹೋಮ್ ಗಾರ್ಡ್ ಮತ್ತು 42,000 ದೆಹಲಿ ಪೊಲೀಸ್ ಸಿಬ್ಬಂದಿ ಸಹ ಕರ್ತವ್ಯದಲ್ಲಿದ್ದಾರೆ.

ಒಟ್ಟು 3,141 ಮತಗಟ್ಟೆಗಳಿದ್ದು, 144 ಸೂಕ್ಷ್ಮ ಮತಗಟ್ಟೆಗಳು ಹಾಗು 102ಅತೀ ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ.

ಶಹೀನ್ ಬಾಗ್‌ನ ಎಲ್ಲಾ ಐದು ಮತಗಟ್ಟೆಗಳನ್ನು ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) “ಅತಿ ಸೂಕ್ಷ್ಮ” ಎಂದು ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...