Homeಮುಖಪುಟ67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.

- Advertisement -
- Advertisement -

2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕಳೆದ ಮಾರ್ಚ್ 22 ರಂದು ನವದೆಹಲಿಯಲ್ಲಿ ಪ್ರಕಟಿಸಲಾಗಿತ್ತು. ಕೊರೊನಾ ಕಾರಣದಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿರಲಿಲ್ಲ. ಇಂದು (ಅ.25) ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.

ಕಳೆದ ವರ್ಷ ಅಸಹಜ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಭಿನಯದ ಚಿಚೋರೆ ಚಲನಚಿತ್ರ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಕನ್ನಡದ ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಕನ್ನಡದ ಉತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿಯನ್ನು ಅಸುರನ್ ಪಡೆದಿದೆ.

ಅಸುರನ್ ತಮಿಳು ಚಿತ್ರದ ನಟನೆಗಾಗಿ ಧನುಷ್ ಮತ್ತು ಭೋಂಸ್ಲೆ ಚಿತ್ರಕ್ಕಾಗಿ ನಟ ಮನೋಜ್ ಬಾಜಪೇಯಿ ಉತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮಣಿಕರ್ಣಿಕಾ ಮತ್ತು ಪಂಗಾ ಚಿತ್ರಗಳ ಅಭಿನಯಕ್ಕಾಗಿ ಅತ್ಯತ್ತಮ ನಟಿ ಪ್ರಶಸ್ತಿಯನ್ನು ಕಂಗನಾ ರಣಾವತ್ ಪಡೆದುಕೊಂಡಿದ್ದಾರೆ.

ಸೂಪರ್ ಡಿಲಕ್ಸ್ ಚಿತ್ರದ ಅಭಿನಯಕ್ಕಾಗಿ ವಿಜಯ್ ಸೇತುಪತಿ ಅತ್ಯುತ್ತಮ ಪೋಷಕ ನಟ ಮತ್ತು ಪಲ್ಲವಿ ಜೋಶಿ ದಿ ತಾಷ್ಕೆಂಟ್ ಫೈಲ್ಸ್ ಚಿತ್ರಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ. ಮಲಯಾಳಂ ಭಾಷೆಯ Marakkar Arabikadalinte Simham ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. 

ಇದನ್ನೂ ಓದಿ: ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ಸಿಕ್ಕಿಂ ರಾಜ್ಯವನ್ನು ಅನ್ನು ಅತ್ಯಂತ ಚಲನಚಿತ್ರ ಸ್ನೇಹಿ ರಾಜ್ಯವೆಂದು ಘೋಷಿಸಲಾಗಿದೆ. ನೇತಾಜಿ ಸುಭಾಷ್ ಬೋಸ್ ಆಧಾರಿತ ಗುಮ್ನಾಮಿ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಚಿತ್ರಕಥೆಯನ್ನು ಗೆದ್ದಿದ್ದಾರೆ. ಈ ವರ್ಷ ಭಾರತದಿಂದ ಆಸ್ಕರ್ ಪ್ರವೇಶ ಪಡೆದಿದ್ದ ಜಲ್ಲಿಕಟ್ಟು ಅತ್ಯುತ್ತಮ ಛಾಯಾಗ್ರಹಣ ಗೌರವಕ್ಕೆ ಪಾತ್ರವಾಗಿದೆ.

ಪ್ರಶಸ್ತಿ ಪಟ್ಟಿ ಹೀಗಿದೆ.

ಅತ್ಯುತ್ತಮ ಚಲನಚಿತ್ರ: Marakkar Arabikadalinte Simham (ಮಲಯಾಳಂ)

ಅತ್ಯುತ್ತಮ ನಿರ್ದೇಶನ: ಬಹಟ್ಟರ್ ಹುರೈನ್

ಅತ್ಯುತ್ತಮ ನಟಿ: ಕಂಗನಾ ರಾಣಾವತ್ (ಮಣಿಕರ್ಣಿಕಾ, ಪಂಗಾ)

ಅತ್ಯುತ್ತಮ ನಟ: ಮನೋಜ್ ಬಾಜಪೇಯಿ (ಭೋಂಸ್ಲೆ) ಮತ್ತು ಧನುಷ್ ( ಅಸುರನ್)

ಅತ್ಯುತ್ತಮ ಪೋಷಕ ನಟಿ:  ಪಲ್ಲವಿ ಜೋಶಿ (ದಿ ತಾಷ್ಕೆಂಟ್ ಫೈಲ್ಸ್)

ಅತ್ಯುತ್ತಮ ಪೋಷಕ ನಟ: ವಿಜಯ ಸೇತುಪತಿ (ಸೂಪರ್ ಡಿಲಕ್ಸ್)

ಅತ್ಯುತ್ತಮ ಮಕ್ಕಳ ಚಿತ್ರ: ಕಸ್ತೂರಿ (ಹಿಂದಿ)

ನಿರ್ದೇಶಕರ ಅತ್ಯುತ್ತಮ ಚೊಚ್ಚಲ ಚಿತ್ರಕ್ಕಾಗಿ ಇಂದಿರಾ ಗಾಂಧಿ ಪ್ರಶಸ್ತಿ: ಹೆಲೆನ್ (ಮಲಯಾಳಂ)

ವಿಶೇಷವಾಗಿ ಉಲ್ಲೇಖಿತ ಸಿನಿಮಾಗಳು: ಬಿರಿಯಾನಿ (ಮಲಯಾಳಂ), ಜೊನಕಿ ಪೊರುವಾ (ಅಸ್ಸಾಮೀಸ್), ಲತಾ ಭಗವಾನ್ ಕರೇ (ಮರಾಠಿ), ಪಿಕಾಸೊ (ಮರಾಠಿ)

ಅತ್ಯುತ್ತಮ ತುಳು ಚಿತ್ರ: ಪಿಂಗರಾ

ಅತ್ಯುತ್ತಮ ಪಾನಿಯಾ ಚಿತ್ರ: ಕೆಂಜೀರಾ

ಅತ್ಯುತ್ತಮ ಮಿಶಿಂಗ್ ಚಿತ್ರ: ಅನು ರುವಾಡ್

ಅತ್ಯುತ್ತಮ ಖಾಸಿ ಚಲನಚಿತ್ರ: Lewduh

ಅತ್ಯುತ್ತಮ ಹರಿಯಾಣಿ ಚಿತ್ರ: ಚೋರಿಯನ್ ಚೋರೊನ್ ಸೆ ಕಾಮ್ ನಹಿ ಹೋತಿ

ಅತ್ಯುತ್ತಮ ಛತ್ತೀಸ್‌ಗಢ ಚಲನಚಿತ್ರ: ಭೂಲನ್ ದಿ ಮೇಜ್

ಅತ್ಯುತ್ತಮ ತೆಲುಗು ಚಲನಚಿತ್ರ: ಜರ್ಸಿ

ಅತ್ಯುತ್ತಮ ತಮಿಳು ಚಿತ್ರ: ಅಸುರನ್

ಅತ್ಯುತ್ತಮ ಪಂಜಾಬಿ ಚಲನಚಿತ್ರ: ರಬ್ ಡಾ ರೇಡಿಯೋ 2

ಅತ್ಯುತ್ತಮ ಒಡಿಯಾ ಚಿತ್ರ: ಸಲಾ ಬುಧರ್ ಬದ್ಲಾ ಮತ್ತು ಕಲಿರಾ ಅತಿತಾ

ಅತ್ಯುತ್ತಮ ಮಣಿಪುರಿ ಚಿತ್ರ: ಈಗಿ ಕೋನಾ

ಅತ್ಯುತ್ತಮ ಮಲಯಾಳಂ ಚಿತ್ರ: ಕಳ್ಳಾ ನೋಟಂ

ಅತ್ಯುತ್ತಮ ಮರಾಠಿ ಚಿತ್ರ: ಬಾರ್ಡೋ

ಅತ್ಯುತ್ತಮ ಕೊಂಕಣಿ ಚಲನಚಿತ್ರ: ಕಾಜ್ರೊ

ಅತ್ಯುತ್ತಮ ಕನ್ನಡ ಚಿತ್ರ: ಅಕ್ಷಿ

ಅತ್ಯುತ್ತಮ ಹಿಂದಿ ಚಲನಚಿತ್ರ: ಚಿಚೋರೆ

ಅತ್ಯುತ್ತಮ ಬಂಗಾಳಿ ಚಲನಚಿತ್ರ: ಗುಮ್ನಾಮಿ

ಅತ್ಯುತ್ತಮ ಅಸ್ಸಾಮೀಸ್ ಚಲನಚಿತ್ರ: ರೋನುವಾ- ಹೂ ನೆವರ್‌ ಸರೆಂಡರ್‌

ಅತ್ಯುತ್ತಮ ಸಾಹಸ: ಅವನೇ ಶ್ರೀಮನ್ನಾರಾಯಣ (ಕನ್ನಡ)

ಅತ್ಯುತ್ತಮ ನೃತ್ಯ ಸಂಯೋಜನೆ: ಮಹರ್ಷಿ (ತೆಲುಗು)

ಅತ್ಯುತ್ತಮ ಸ್ಪೆಷಲ್ ಎಫೆಕ್ಟ್: Marakkar Arabikadalinte Simham (ಮಲಯಾಳಂ)

ವಿಶೇಷ ತೀರ್ಪುಗಾರರ ಪ್ರಶಸ್ತಿ: Oththa Seruppu Size-7 (ತಮಿಳು)

ಅತ್ಯುತ್ತಮ ಸಾಹಿತ್ಯ: ಕೋಲಾಂಬಿ (ಮಲಯಾಳಂ)

ಅತ್ಯುತ್ತಮ ಸಂಗೀತ ನಿರ್ದೇಶನ ಹಾಡುಗಳು: ವಿಶ್ವಾಸಂ (ತಮಿಳು)

ಸಂಗೀತ ನಿರ್ದೇಶನ: Jyeshthoputro

ಅತ್ಯುತ್ತಮ ಮೇಕಪ್ : ಹೆಲೆನ್ (ಮಲಯಾಳಂ)

ಇನ್ನು ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.


ಇದನ್ನೂ ಓದಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...