Homeಮುಖಪುಟ67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.

- Advertisement -
- Advertisement -

2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕಳೆದ ಮಾರ್ಚ್ 22 ರಂದು ನವದೆಹಲಿಯಲ್ಲಿ ಪ್ರಕಟಿಸಲಾಗಿತ್ತು. ಕೊರೊನಾ ಕಾರಣದಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿರಲಿಲ್ಲ. ಇಂದು (ಅ.25) ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.

ಕಳೆದ ವರ್ಷ ಅಸಹಜ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಭಿನಯದ ಚಿಚೋರೆ ಚಲನಚಿತ್ರ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಕನ್ನಡದ ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಕನ್ನಡದ ಉತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿಯನ್ನು ಅಸುರನ್ ಪಡೆದಿದೆ.

ಅಸುರನ್ ತಮಿಳು ಚಿತ್ರದ ನಟನೆಗಾಗಿ ಧನುಷ್ ಮತ್ತು ಭೋಂಸ್ಲೆ ಚಿತ್ರಕ್ಕಾಗಿ ನಟ ಮನೋಜ್ ಬಾಜಪೇಯಿ ಉತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮಣಿಕರ್ಣಿಕಾ ಮತ್ತು ಪಂಗಾ ಚಿತ್ರಗಳ ಅಭಿನಯಕ್ಕಾಗಿ ಅತ್ಯತ್ತಮ ನಟಿ ಪ್ರಶಸ್ತಿಯನ್ನು ಕಂಗನಾ ರಣಾವತ್ ಪಡೆದುಕೊಂಡಿದ್ದಾರೆ.

ಸೂಪರ್ ಡಿಲಕ್ಸ್ ಚಿತ್ರದ ಅಭಿನಯಕ್ಕಾಗಿ ವಿಜಯ್ ಸೇತುಪತಿ ಅತ್ಯುತ್ತಮ ಪೋಷಕ ನಟ ಮತ್ತು ಪಲ್ಲವಿ ಜೋಶಿ ದಿ ತಾಷ್ಕೆಂಟ್ ಫೈಲ್ಸ್ ಚಿತ್ರಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ. ಮಲಯಾಳಂ ಭಾಷೆಯ Marakkar Arabikadalinte Simham ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. 

ಇದನ್ನೂ ಓದಿ: ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ಸಿಕ್ಕಿಂ ರಾಜ್ಯವನ್ನು ಅನ್ನು ಅತ್ಯಂತ ಚಲನಚಿತ್ರ ಸ್ನೇಹಿ ರಾಜ್ಯವೆಂದು ಘೋಷಿಸಲಾಗಿದೆ. ನೇತಾಜಿ ಸುಭಾಷ್ ಬೋಸ್ ಆಧಾರಿತ ಗುಮ್ನಾಮಿ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಚಿತ್ರಕಥೆಯನ್ನು ಗೆದ್ದಿದ್ದಾರೆ. ಈ ವರ್ಷ ಭಾರತದಿಂದ ಆಸ್ಕರ್ ಪ್ರವೇಶ ಪಡೆದಿದ್ದ ಜಲ್ಲಿಕಟ್ಟು ಅತ್ಯುತ್ತಮ ಛಾಯಾಗ್ರಹಣ ಗೌರವಕ್ಕೆ ಪಾತ್ರವಾಗಿದೆ.

ಪ್ರಶಸ್ತಿ ಪಟ್ಟಿ ಹೀಗಿದೆ.

ಅತ್ಯುತ್ತಮ ಚಲನಚಿತ್ರ: Marakkar Arabikadalinte Simham (ಮಲಯಾಳಂ)

ಅತ್ಯುತ್ತಮ ನಿರ್ದೇಶನ: ಬಹಟ್ಟರ್ ಹುರೈನ್

ಅತ್ಯುತ್ತಮ ನಟಿ: ಕಂಗನಾ ರಾಣಾವತ್ (ಮಣಿಕರ್ಣಿಕಾ, ಪಂಗಾ)

ಅತ್ಯುತ್ತಮ ನಟ: ಮನೋಜ್ ಬಾಜಪೇಯಿ (ಭೋಂಸ್ಲೆ) ಮತ್ತು ಧನುಷ್ ( ಅಸುರನ್)

ಅತ್ಯುತ್ತಮ ಪೋಷಕ ನಟಿ:  ಪಲ್ಲವಿ ಜೋಶಿ (ದಿ ತಾಷ್ಕೆಂಟ್ ಫೈಲ್ಸ್)

ಅತ್ಯುತ್ತಮ ಪೋಷಕ ನಟ: ವಿಜಯ ಸೇತುಪತಿ (ಸೂಪರ್ ಡಿಲಕ್ಸ್)

ಅತ್ಯುತ್ತಮ ಮಕ್ಕಳ ಚಿತ್ರ: ಕಸ್ತೂರಿ (ಹಿಂದಿ)

ನಿರ್ದೇಶಕರ ಅತ್ಯುತ್ತಮ ಚೊಚ್ಚಲ ಚಿತ್ರಕ್ಕಾಗಿ ಇಂದಿರಾ ಗಾಂಧಿ ಪ್ರಶಸ್ತಿ: ಹೆಲೆನ್ (ಮಲಯಾಳಂ)

ವಿಶೇಷವಾಗಿ ಉಲ್ಲೇಖಿತ ಸಿನಿಮಾಗಳು: ಬಿರಿಯಾನಿ (ಮಲಯಾಳಂ), ಜೊನಕಿ ಪೊರುವಾ (ಅಸ್ಸಾಮೀಸ್), ಲತಾ ಭಗವಾನ್ ಕರೇ (ಮರಾಠಿ), ಪಿಕಾಸೊ (ಮರಾಠಿ)

ಅತ್ಯುತ್ತಮ ತುಳು ಚಿತ್ರ: ಪಿಂಗರಾ

ಅತ್ಯುತ್ತಮ ಪಾನಿಯಾ ಚಿತ್ರ: ಕೆಂಜೀರಾ

ಅತ್ಯುತ್ತಮ ಮಿಶಿಂಗ್ ಚಿತ್ರ: ಅನು ರುವಾಡ್

ಅತ್ಯುತ್ತಮ ಖಾಸಿ ಚಲನಚಿತ್ರ: Lewduh

ಅತ್ಯುತ್ತಮ ಹರಿಯಾಣಿ ಚಿತ್ರ: ಚೋರಿಯನ್ ಚೋರೊನ್ ಸೆ ಕಾಮ್ ನಹಿ ಹೋತಿ

ಅತ್ಯುತ್ತಮ ಛತ್ತೀಸ್‌ಗಢ ಚಲನಚಿತ್ರ: ಭೂಲನ್ ದಿ ಮೇಜ್

ಅತ್ಯುತ್ತಮ ತೆಲುಗು ಚಲನಚಿತ್ರ: ಜರ್ಸಿ

ಅತ್ಯುತ್ತಮ ತಮಿಳು ಚಿತ್ರ: ಅಸುರನ್

ಅತ್ಯುತ್ತಮ ಪಂಜಾಬಿ ಚಲನಚಿತ್ರ: ರಬ್ ಡಾ ರೇಡಿಯೋ 2

ಅತ್ಯುತ್ತಮ ಒಡಿಯಾ ಚಿತ್ರ: ಸಲಾ ಬುಧರ್ ಬದ್ಲಾ ಮತ್ತು ಕಲಿರಾ ಅತಿತಾ

ಅತ್ಯುತ್ತಮ ಮಣಿಪುರಿ ಚಿತ್ರ: ಈಗಿ ಕೋನಾ

ಅತ್ಯುತ್ತಮ ಮಲಯಾಳಂ ಚಿತ್ರ: ಕಳ್ಳಾ ನೋಟಂ

ಅತ್ಯುತ್ತಮ ಮರಾಠಿ ಚಿತ್ರ: ಬಾರ್ಡೋ

ಅತ್ಯುತ್ತಮ ಕೊಂಕಣಿ ಚಲನಚಿತ್ರ: ಕಾಜ್ರೊ

ಅತ್ಯುತ್ತಮ ಕನ್ನಡ ಚಿತ್ರ: ಅಕ್ಷಿ

ಅತ್ಯುತ್ತಮ ಹಿಂದಿ ಚಲನಚಿತ್ರ: ಚಿಚೋರೆ

ಅತ್ಯುತ್ತಮ ಬಂಗಾಳಿ ಚಲನಚಿತ್ರ: ಗುಮ್ನಾಮಿ

ಅತ್ಯುತ್ತಮ ಅಸ್ಸಾಮೀಸ್ ಚಲನಚಿತ್ರ: ರೋನುವಾ- ಹೂ ನೆವರ್‌ ಸರೆಂಡರ್‌

ಅತ್ಯುತ್ತಮ ಸಾಹಸ: ಅವನೇ ಶ್ರೀಮನ್ನಾರಾಯಣ (ಕನ್ನಡ)

ಅತ್ಯುತ್ತಮ ನೃತ್ಯ ಸಂಯೋಜನೆ: ಮಹರ್ಷಿ (ತೆಲುಗು)

ಅತ್ಯುತ್ತಮ ಸ್ಪೆಷಲ್ ಎಫೆಕ್ಟ್: Marakkar Arabikadalinte Simham (ಮಲಯಾಳಂ)

ವಿಶೇಷ ತೀರ್ಪುಗಾರರ ಪ್ರಶಸ್ತಿ: Oththa Seruppu Size-7 (ತಮಿಳು)

ಅತ್ಯುತ್ತಮ ಸಾಹಿತ್ಯ: ಕೋಲಾಂಬಿ (ಮಲಯಾಳಂ)

ಅತ್ಯುತ್ತಮ ಸಂಗೀತ ನಿರ್ದೇಶನ ಹಾಡುಗಳು: ವಿಶ್ವಾಸಂ (ತಮಿಳು)

ಸಂಗೀತ ನಿರ್ದೇಶನ: Jyeshthoputro

ಅತ್ಯುತ್ತಮ ಮೇಕಪ್ : ಹೆಲೆನ್ (ಮಲಯಾಳಂ)

ಇನ್ನು ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.


ಇದನ್ನೂ ಓದಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...