Homeಮುಖಪುಟ67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.

- Advertisement -
- Advertisement -

2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕಳೆದ ಮಾರ್ಚ್ 22 ರಂದು ನವದೆಹಲಿಯಲ್ಲಿ ಪ್ರಕಟಿಸಲಾಗಿತ್ತು. ಕೊರೊನಾ ಕಾರಣದಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿರಲಿಲ್ಲ. ಇಂದು (ಅ.25) ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.

ಕಳೆದ ವರ್ಷ ಅಸಹಜ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಭಿನಯದ ಚಿಚೋರೆ ಚಲನಚಿತ್ರ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಕನ್ನಡದ ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಕನ್ನಡದ ಉತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿಯನ್ನು ಅಸುರನ್ ಪಡೆದಿದೆ.

ಅಸುರನ್ ತಮಿಳು ಚಿತ್ರದ ನಟನೆಗಾಗಿ ಧನುಷ್ ಮತ್ತು ಭೋಂಸ್ಲೆ ಚಿತ್ರಕ್ಕಾಗಿ ನಟ ಮನೋಜ್ ಬಾಜಪೇಯಿ ಉತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮಣಿಕರ್ಣಿಕಾ ಮತ್ತು ಪಂಗಾ ಚಿತ್ರಗಳ ಅಭಿನಯಕ್ಕಾಗಿ ಅತ್ಯತ್ತಮ ನಟಿ ಪ್ರಶಸ್ತಿಯನ್ನು ಕಂಗನಾ ರಣಾವತ್ ಪಡೆದುಕೊಂಡಿದ್ದಾರೆ.

ಸೂಪರ್ ಡಿಲಕ್ಸ್ ಚಿತ್ರದ ಅಭಿನಯಕ್ಕಾಗಿ ವಿಜಯ್ ಸೇತುಪತಿ ಅತ್ಯುತ್ತಮ ಪೋಷಕ ನಟ ಮತ್ತು ಪಲ್ಲವಿ ಜೋಶಿ ದಿ ತಾಷ್ಕೆಂಟ್ ಫೈಲ್ಸ್ ಚಿತ್ರಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ. ಮಲಯಾಳಂ ಭಾಷೆಯ Marakkar Arabikadalinte Simham ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. 

ಇದನ್ನೂ ಓದಿ: ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ಸಿಕ್ಕಿಂ ರಾಜ್ಯವನ್ನು ಅನ್ನು ಅತ್ಯಂತ ಚಲನಚಿತ್ರ ಸ್ನೇಹಿ ರಾಜ್ಯವೆಂದು ಘೋಷಿಸಲಾಗಿದೆ. ನೇತಾಜಿ ಸುಭಾಷ್ ಬೋಸ್ ಆಧಾರಿತ ಗುಮ್ನಾಮಿ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಚಿತ್ರಕಥೆಯನ್ನು ಗೆದ್ದಿದ್ದಾರೆ. ಈ ವರ್ಷ ಭಾರತದಿಂದ ಆಸ್ಕರ್ ಪ್ರವೇಶ ಪಡೆದಿದ್ದ ಜಲ್ಲಿಕಟ್ಟು ಅತ್ಯುತ್ತಮ ಛಾಯಾಗ್ರಹಣ ಗೌರವಕ್ಕೆ ಪಾತ್ರವಾಗಿದೆ.

ಪ್ರಶಸ್ತಿ ಪಟ್ಟಿ ಹೀಗಿದೆ.

ಅತ್ಯುತ್ತಮ ಚಲನಚಿತ್ರ: Marakkar Arabikadalinte Simham (ಮಲಯಾಳಂ)

ಅತ್ಯುತ್ತಮ ನಿರ್ದೇಶನ: ಬಹಟ್ಟರ್ ಹುರೈನ್

ಅತ್ಯುತ್ತಮ ನಟಿ: ಕಂಗನಾ ರಾಣಾವತ್ (ಮಣಿಕರ್ಣಿಕಾ, ಪಂಗಾ)

ಅತ್ಯುತ್ತಮ ನಟ: ಮನೋಜ್ ಬಾಜಪೇಯಿ (ಭೋಂಸ್ಲೆ) ಮತ್ತು ಧನುಷ್ ( ಅಸುರನ್)

ಅತ್ಯುತ್ತಮ ಪೋಷಕ ನಟಿ:  ಪಲ್ಲವಿ ಜೋಶಿ (ದಿ ತಾಷ್ಕೆಂಟ್ ಫೈಲ್ಸ್)

ಅತ್ಯುತ್ತಮ ಪೋಷಕ ನಟ: ವಿಜಯ ಸೇತುಪತಿ (ಸೂಪರ್ ಡಿಲಕ್ಸ್)

ಅತ್ಯುತ್ತಮ ಮಕ್ಕಳ ಚಿತ್ರ: ಕಸ್ತೂರಿ (ಹಿಂದಿ)

ನಿರ್ದೇಶಕರ ಅತ್ಯುತ್ತಮ ಚೊಚ್ಚಲ ಚಿತ್ರಕ್ಕಾಗಿ ಇಂದಿರಾ ಗಾಂಧಿ ಪ್ರಶಸ್ತಿ: ಹೆಲೆನ್ (ಮಲಯಾಳಂ)

ವಿಶೇಷವಾಗಿ ಉಲ್ಲೇಖಿತ ಸಿನಿಮಾಗಳು: ಬಿರಿಯಾನಿ (ಮಲಯಾಳಂ), ಜೊನಕಿ ಪೊರುವಾ (ಅಸ್ಸಾಮೀಸ್), ಲತಾ ಭಗವಾನ್ ಕರೇ (ಮರಾಠಿ), ಪಿಕಾಸೊ (ಮರಾಠಿ)

ಅತ್ಯುತ್ತಮ ತುಳು ಚಿತ್ರ: ಪಿಂಗರಾ

ಅತ್ಯುತ್ತಮ ಪಾನಿಯಾ ಚಿತ್ರ: ಕೆಂಜೀರಾ

ಅತ್ಯುತ್ತಮ ಮಿಶಿಂಗ್ ಚಿತ್ರ: ಅನು ರುವಾಡ್

ಅತ್ಯುತ್ತಮ ಖಾಸಿ ಚಲನಚಿತ್ರ: Lewduh

ಅತ್ಯುತ್ತಮ ಹರಿಯಾಣಿ ಚಿತ್ರ: ಚೋರಿಯನ್ ಚೋರೊನ್ ಸೆ ಕಾಮ್ ನಹಿ ಹೋತಿ

ಅತ್ಯುತ್ತಮ ಛತ್ತೀಸ್‌ಗಢ ಚಲನಚಿತ್ರ: ಭೂಲನ್ ದಿ ಮೇಜ್

ಅತ್ಯುತ್ತಮ ತೆಲುಗು ಚಲನಚಿತ್ರ: ಜರ್ಸಿ

ಅತ್ಯುತ್ತಮ ತಮಿಳು ಚಿತ್ರ: ಅಸುರನ್

ಅತ್ಯುತ್ತಮ ಪಂಜಾಬಿ ಚಲನಚಿತ್ರ: ರಬ್ ಡಾ ರೇಡಿಯೋ 2

ಅತ್ಯುತ್ತಮ ಒಡಿಯಾ ಚಿತ್ರ: ಸಲಾ ಬುಧರ್ ಬದ್ಲಾ ಮತ್ತು ಕಲಿರಾ ಅತಿತಾ

ಅತ್ಯುತ್ತಮ ಮಣಿಪುರಿ ಚಿತ್ರ: ಈಗಿ ಕೋನಾ

ಅತ್ಯುತ್ತಮ ಮಲಯಾಳಂ ಚಿತ್ರ: ಕಳ್ಳಾ ನೋಟಂ

ಅತ್ಯುತ್ತಮ ಮರಾಠಿ ಚಿತ್ರ: ಬಾರ್ಡೋ

ಅತ್ಯುತ್ತಮ ಕೊಂಕಣಿ ಚಲನಚಿತ್ರ: ಕಾಜ್ರೊ

ಅತ್ಯುತ್ತಮ ಕನ್ನಡ ಚಿತ್ರ: ಅಕ್ಷಿ

ಅತ್ಯುತ್ತಮ ಹಿಂದಿ ಚಲನಚಿತ್ರ: ಚಿಚೋರೆ

ಅತ್ಯುತ್ತಮ ಬಂಗಾಳಿ ಚಲನಚಿತ್ರ: ಗುಮ್ನಾಮಿ

ಅತ್ಯುತ್ತಮ ಅಸ್ಸಾಮೀಸ್ ಚಲನಚಿತ್ರ: ರೋನುವಾ- ಹೂ ನೆವರ್‌ ಸರೆಂಡರ್‌

ಅತ್ಯುತ್ತಮ ಸಾಹಸ: ಅವನೇ ಶ್ರೀಮನ್ನಾರಾಯಣ (ಕನ್ನಡ)

ಅತ್ಯುತ್ತಮ ನೃತ್ಯ ಸಂಯೋಜನೆ: ಮಹರ್ಷಿ (ತೆಲುಗು)

ಅತ್ಯುತ್ತಮ ಸ್ಪೆಷಲ್ ಎಫೆಕ್ಟ್: Marakkar Arabikadalinte Simham (ಮಲಯಾಳಂ)

ವಿಶೇಷ ತೀರ್ಪುಗಾರರ ಪ್ರಶಸ್ತಿ: Oththa Seruppu Size-7 (ತಮಿಳು)

ಅತ್ಯುತ್ತಮ ಸಾಹಿತ್ಯ: ಕೋಲಾಂಬಿ (ಮಲಯಾಳಂ)

ಅತ್ಯುತ್ತಮ ಸಂಗೀತ ನಿರ್ದೇಶನ ಹಾಡುಗಳು: ವಿಶ್ವಾಸಂ (ತಮಿಳು)

ಸಂಗೀತ ನಿರ್ದೇಶನ: Jyeshthoputro

ಅತ್ಯುತ್ತಮ ಮೇಕಪ್ : ಹೆಲೆನ್ (ಮಲಯಾಳಂ)

ಇನ್ನು ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.


ಇದನ್ನೂ ಓದಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...