Homeಮುಖಪುಟ67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.

- Advertisement -
- Advertisement -

2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕಳೆದ ಮಾರ್ಚ್ 22 ರಂದು ನವದೆಹಲಿಯಲ್ಲಿ ಪ್ರಕಟಿಸಲಾಗಿತ್ತು. ಕೊರೊನಾ ಕಾರಣದಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿರಲಿಲ್ಲ. ಇಂದು (ಅ.25) ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.

ಕಳೆದ ವರ್ಷ ಅಸಹಜ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಭಿನಯದ ಚಿಚೋರೆ ಚಲನಚಿತ್ರ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಕನ್ನಡದ ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಕನ್ನಡದ ಉತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿಯನ್ನು ಅಸುರನ್ ಪಡೆದಿದೆ.

ಅಸುರನ್ ತಮಿಳು ಚಿತ್ರದ ನಟನೆಗಾಗಿ ಧನುಷ್ ಮತ್ತು ಭೋಂಸ್ಲೆ ಚಿತ್ರಕ್ಕಾಗಿ ನಟ ಮನೋಜ್ ಬಾಜಪೇಯಿ ಉತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮಣಿಕರ್ಣಿಕಾ ಮತ್ತು ಪಂಗಾ ಚಿತ್ರಗಳ ಅಭಿನಯಕ್ಕಾಗಿ ಅತ್ಯತ್ತಮ ನಟಿ ಪ್ರಶಸ್ತಿಯನ್ನು ಕಂಗನಾ ರಣಾವತ್ ಪಡೆದುಕೊಂಡಿದ್ದಾರೆ.

ಸೂಪರ್ ಡಿಲಕ್ಸ್ ಚಿತ್ರದ ಅಭಿನಯಕ್ಕಾಗಿ ವಿಜಯ್ ಸೇತುಪತಿ ಅತ್ಯುತ್ತಮ ಪೋಷಕ ನಟ ಮತ್ತು ಪಲ್ಲವಿ ಜೋಶಿ ದಿ ತಾಷ್ಕೆಂಟ್ ಫೈಲ್ಸ್ ಚಿತ್ರಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ. ಮಲಯಾಳಂ ಭಾಷೆಯ Marakkar Arabikadalinte Simham ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. 

ಇದನ್ನೂ ಓದಿ: ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ಸಿಕ್ಕಿಂ ರಾಜ್ಯವನ್ನು ಅನ್ನು ಅತ್ಯಂತ ಚಲನಚಿತ್ರ ಸ್ನೇಹಿ ರಾಜ್ಯವೆಂದು ಘೋಷಿಸಲಾಗಿದೆ. ನೇತಾಜಿ ಸುಭಾಷ್ ಬೋಸ್ ಆಧಾರಿತ ಗುಮ್ನಾಮಿ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಚಿತ್ರಕಥೆಯನ್ನು ಗೆದ್ದಿದ್ದಾರೆ. ಈ ವರ್ಷ ಭಾರತದಿಂದ ಆಸ್ಕರ್ ಪ್ರವೇಶ ಪಡೆದಿದ್ದ ಜಲ್ಲಿಕಟ್ಟು ಅತ್ಯುತ್ತಮ ಛಾಯಾಗ್ರಹಣ ಗೌರವಕ್ಕೆ ಪಾತ್ರವಾಗಿದೆ.

ಪ್ರಶಸ್ತಿ ಪಟ್ಟಿ ಹೀಗಿದೆ.

ಅತ್ಯುತ್ತಮ ಚಲನಚಿತ್ರ: Marakkar Arabikadalinte Simham (ಮಲಯಾಳಂ)

ಅತ್ಯುತ್ತಮ ನಿರ್ದೇಶನ: ಬಹಟ್ಟರ್ ಹುರೈನ್

ಅತ್ಯುತ್ತಮ ನಟಿ: ಕಂಗನಾ ರಾಣಾವತ್ (ಮಣಿಕರ್ಣಿಕಾ, ಪಂಗಾ)

ಅತ್ಯುತ್ತಮ ನಟ: ಮನೋಜ್ ಬಾಜಪೇಯಿ (ಭೋಂಸ್ಲೆ) ಮತ್ತು ಧನುಷ್ ( ಅಸುರನ್)

ಅತ್ಯುತ್ತಮ ಪೋಷಕ ನಟಿ:  ಪಲ್ಲವಿ ಜೋಶಿ (ದಿ ತಾಷ್ಕೆಂಟ್ ಫೈಲ್ಸ್)

ಅತ್ಯುತ್ತಮ ಪೋಷಕ ನಟ: ವಿಜಯ ಸೇತುಪತಿ (ಸೂಪರ್ ಡಿಲಕ್ಸ್)

ಅತ್ಯುತ್ತಮ ಮಕ್ಕಳ ಚಿತ್ರ: ಕಸ್ತೂರಿ (ಹಿಂದಿ)

ನಿರ್ದೇಶಕರ ಅತ್ಯುತ್ತಮ ಚೊಚ್ಚಲ ಚಿತ್ರಕ್ಕಾಗಿ ಇಂದಿರಾ ಗಾಂಧಿ ಪ್ರಶಸ್ತಿ: ಹೆಲೆನ್ (ಮಲಯಾಳಂ)

ವಿಶೇಷವಾಗಿ ಉಲ್ಲೇಖಿತ ಸಿನಿಮಾಗಳು: ಬಿರಿಯಾನಿ (ಮಲಯಾಳಂ), ಜೊನಕಿ ಪೊರುವಾ (ಅಸ್ಸಾಮೀಸ್), ಲತಾ ಭಗವಾನ್ ಕರೇ (ಮರಾಠಿ), ಪಿಕಾಸೊ (ಮರಾಠಿ)

ಅತ್ಯುತ್ತಮ ತುಳು ಚಿತ್ರ: ಪಿಂಗರಾ

ಅತ್ಯುತ್ತಮ ಪಾನಿಯಾ ಚಿತ್ರ: ಕೆಂಜೀರಾ

ಅತ್ಯುತ್ತಮ ಮಿಶಿಂಗ್ ಚಿತ್ರ: ಅನು ರುವಾಡ್

ಅತ್ಯುತ್ತಮ ಖಾಸಿ ಚಲನಚಿತ್ರ: Lewduh

ಅತ್ಯುತ್ತಮ ಹರಿಯಾಣಿ ಚಿತ್ರ: ಚೋರಿಯನ್ ಚೋರೊನ್ ಸೆ ಕಾಮ್ ನಹಿ ಹೋತಿ

ಅತ್ಯುತ್ತಮ ಛತ್ತೀಸ್‌ಗಢ ಚಲನಚಿತ್ರ: ಭೂಲನ್ ದಿ ಮೇಜ್

ಅತ್ಯುತ್ತಮ ತೆಲುಗು ಚಲನಚಿತ್ರ: ಜರ್ಸಿ

ಅತ್ಯುತ್ತಮ ತಮಿಳು ಚಿತ್ರ: ಅಸುರನ್

ಅತ್ಯುತ್ತಮ ಪಂಜಾಬಿ ಚಲನಚಿತ್ರ: ರಬ್ ಡಾ ರೇಡಿಯೋ 2

ಅತ್ಯುತ್ತಮ ಒಡಿಯಾ ಚಿತ್ರ: ಸಲಾ ಬುಧರ್ ಬದ್ಲಾ ಮತ್ತು ಕಲಿರಾ ಅತಿತಾ

ಅತ್ಯುತ್ತಮ ಮಣಿಪುರಿ ಚಿತ್ರ: ಈಗಿ ಕೋನಾ

ಅತ್ಯುತ್ತಮ ಮಲಯಾಳಂ ಚಿತ್ರ: ಕಳ್ಳಾ ನೋಟಂ

ಅತ್ಯುತ್ತಮ ಮರಾಠಿ ಚಿತ್ರ: ಬಾರ್ಡೋ

ಅತ್ಯುತ್ತಮ ಕೊಂಕಣಿ ಚಲನಚಿತ್ರ: ಕಾಜ್ರೊ

ಅತ್ಯುತ್ತಮ ಕನ್ನಡ ಚಿತ್ರ: ಅಕ್ಷಿ

ಅತ್ಯುತ್ತಮ ಹಿಂದಿ ಚಲನಚಿತ್ರ: ಚಿಚೋರೆ

ಅತ್ಯುತ್ತಮ ಬಂಗಾಳಿ ಚಲನಚಿತ್ರ: ಗುಮ್ನಾಮಿ

ಅತ್ಯುತ್ತಮ ಅಸ್ಸಾಮೀಸ್ ಚಲನಚಿತ್ರ: ರೋನುವಾ- ಹೂ ನೆವರ್‌ ಸರೆಂಡರ್‌

ಅತ್ಯುತ್ತಮ ಸಾಹಸ: ಅವನೇ ಶ್ರೀಮನ್ನಾರಾಯಣ (ಕನ್ನಡ)

ಅತ್ಯುತ್ತಮ ನೃತ್ಯ ಸಂಯೋಜನೆ: ಮಹರ್ಷಿ (ತೆಲುಗು)

ಅತ್ಯುತ್ತಮ ಸ್ಪೆಷಲ್ ಎಫೆಕ್ಟ್: Marakkar Arabikadalinte Simham (ಮಲಯಾಳಂ)

ವಿಶೇಷ ತೀರ್ಪುಗಾರರ ಪ್ರಶಸ್ತಿ: Oththa Seruppu Size-7 (ತಮಿಳು)

ಅತ್ಯುತ್ತಮ ಸಾಹಿತ್ಯ: ಕೋಲಾಂಬಿ (ಮಲಯಾಳಂ)

ಅತ್ಯುತ್ತಮ ಸಂಗೀತ ನಿರ್ದೇಶನ ಹಾಡುಗಳು: ವಿಶ್ವಾಸಂ (ತಮಿಳು)

ಸಂಗೀತ ನಿರ್ದೇಶನ: Jyeshthoputro

ಅತ್ಯುತ್ತಮ ಮೇಕಪ್ : ಹೆಲೆನ್ (ಮಲಯಾಳಂ)

ಇನ್ನು ಹಿರಿಯ ನಟ ರಜನಿಕಾಂತ್ ಅವರಿಗೆ 51 ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.


ಇದನ್ನೂ ಓದಿ: ಒಬ್ಬ ಹಿಂದೂವಾಗಿ ನನಗೆ ನಾಚಿಕೆಯಾಗುತ್ತಿದೆ!: ಮುಸ್ಲಿಮರ ಮೇಲಿನ ದಾಳಿಗೆ ನಟಿ ಸ್ವರಾ ಭಾಸ್ಕರ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...