Homeಮುಖಪುಟಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

- Advertisement -
- Advertisement -

2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ತಡವಾಗಿ ರಾಷ್ಟ್ರೀಯ ಪ್ರಶಸ್ತಿಗಳನ್ನು ಸೋಮವಾರ (ಮಾರ್ಚ್ 22) ನವದೆಹಲಿಯಲ್ಲಿ ಪ್ರಕಟಿಸಲಾಗಿದೆ. ಕಳೆದ ವರ್ಷ ಅಸಹಜ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಭಿನಯದ ಚಿಚೋರೆ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಪಡೆದಿದೆ.

ಕನ್ನಡದ ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಕನ್ನಡದ ಉತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಉತ್ತಮ ನಟ ಪ್ರಶಸ್ತಿಯನ್ನು ಭೋಂಸ್ಲೆ ಚಿತ್ರಕ್ಕಾಗಿ ನಟ ಮನೋಜ್ ಬಾಜಪೇಯಿ ಮತ್ತು ಅಸುರನ್ ನಟನೆಗಾಗಿ ಧನುಷ್ ಪಡೆದುಕೊಂಡಿದ್ದಾರೆ. ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿಯನ್ನು ಅಸುರನ್ ಪಡೆದಿದೆ.

ಮಣಿಕರ್ಣಿಕಾ ಮತ್ತು ಪಂಗಾ ಚಿತ್ರಗಳ ಅಭಿನಯಕ್ಕಾಗಿ ಅತ್ಯತ್ತಮ ನಟಿ ಪ್ರಶಸ್ತಿಯನ್ನು ಕಂಗನಾ ರಾಣಾವತ್ ಪಡೆದುಕೊಂಡಿದ್ದಾರೆ. ಸೂಪರ್ ಡಿಲಕ್ಸ್ ಚಿತ್ರದ ಅಭಿನಯಕ್ಕಾಗಿ ವಿಜಯ್ ಸೇತುಪತಿ ಅತ್ಯುತ್ತಮ ಪೋಷಕ ನಟ ಮತ್ತು ಪಲ್ಲವಿ ಜೋಶಿ ದಿ ತಾಷ್ಕೆಂಟ್ ಫೈಲ್ಸ್ ಚಿತ್ರಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ.

ಇದನ್ನೂ ಓದಿ: ‘ಬಾಂಬೆ ತಂಡ’ದ ಶಾಸಕರ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ: ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

ಮಲಯಾಳಂ ಭಾಷೆಯ Marakkar Arabikadalinte Simham ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. ಸಿಕ್ಕಿಂ ರಾಜ್ಯವನ್ನು ಅನ್ನು ಅತ್ಯಂತ ಚಲನಚಿತ್ರ ಸ್ನೇಹಿ ರಾಜ್ಯವೆಂದು ಘೋಷಿಸಲಾಗಿದೆ.

ನೇತಾಜಿ ಸುಭಾಷ್ ಬೋಸ್ ಆಧಾರಿತ ಗುಮ್ನಾಮಿ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಚಿತ್ರಕಥೆಯನ್ನು ಗೆದ್ದಿದ್ದಾರೆ. ಈ ವರ್ಷ ಭಾರತದಿಂದ ಆಸ್ಕರ್ ಪ್ರವೇಶ ಪಡೆದ ಜಲ್ಲಿಕಟ್ಟು ಅತ್ಯುತ್ತಮ ಛಾಯಾಗ್ರಹಣ ಗೆದ್ದಿದ್ದಾರೆ. COVID-19 ಸಾಂಕ್ರಾಮಿಕ ರೋಗದಿಂದಾಗಿ ಚಲನಚಿತ್ರೋತ್ಸವಗಳ ನಿರ್ದೇಶನಾಲಯವು ನೀಡಿದ ರಾಷ್ಟ್ರೀಯ ಪ್ರಶಸ್ತಿಗಳನ್ನು ಕಳೆದ ವರ್ಷ ಘೋಷಿಸಲಾಗಿಲ್ಲ.

ಪ್ರಶಸ್ತಿ ಪಟ್ಟಿ ಹೀಗಿದೆ.

ಅತ್ಯುತ್ತಮ ಚಲನಚಿತ್ರ: Marakkar Arabikadalinte Simham (ಮಲಯಾಳಂ)

ಅತ್ಯುತ್ತಮ ನಿರ್ದೇಶನ: ಬಹಟ್ಟರ್ ಹುರೈನ್

ಅತ್ಯುತ್ತಮ ನಟಿ: ಕಂಗನಾ ರಾಣಾವತ್ (ಮಣಿಕರ್ಣಿಕಾ, ಪಂಗಾ)

ಅತ್ಯುತ್ತಮ ನಟ: ಮನೋಜ್ ಬಾಜಪೇಯಿ (ಭೋಂಸ್ಲೆ) ಮತ್ತು ಧನುಷ್ ( ಅಸುರನ್)

ಅತ್ಯುತ್ತಮ ಪೋಷಕ ನಟಿ:  ಪಲ್ಲವಿ ಜೋಶಿ (ದಿ ತಾಷ್ಕೆಂಟ್ ಫೈಲ್ಸ್)

ಅತ್ಯುತ್ತಮ ಪೋಷಕ ನಟ: ವಿಜಯ ಸೇತುಪತಿ (ಸೂಪರ್ ಡಿಲಕ್ಸ್)

ಅತ್ಯುತ್ತಮ ಮಕ್ಕಳ ಚಿತ್ರ: ಕಸ್ತೂರಿ (ಹಿಂದಿ)

ನಿರ್ದೇಶಕರ ಅತ್ಯುತ್ತಮ ಚೊಚ್ಚಲ ಚಿತ್ರಕ್ಕಾಗಿ ಇಂದಿರಾ ಗಾಂಧಿ ಪ್ರಶಸ್ತಿ: ಹೆಲೆನ್ (ಮಲಯಾಳಂ)

ವಿಶೇಷವಾಗಿ ಉಲ್ಲೇಖಿತ ಸಿನಿಮಾಗಳು: ಬಿರಿಯಾನಿ (ಮಲಯಾಳಂ), ಜೊನಕಿ ಪೊರುವಾ (ಅಸ್ಸಾಮೀಸ್), ಲತಾ ಭಗವಾನ್ ಕರೇ (ಮರಾಠಿ), ಪಿಕಾಸೊ (ಮರಾಠಿ)

ಅತ್ಯುತ್ತಮ ತುಳು ಚಿತ್ರ: ಪಿಂಗರಾ

ಅತ್ಯುತ್ತಮ ಪಾನಿಯಾ ಚಿತ್ರ: ಕೆಂಜೀರಾ

ಅತ್ಯುತ್ತಮ ಮಿಶಿಂಗ್ ಚಿತ್ರ: ಅನು ರುವಾಡ್

ಅತ್ಯುತ್ತಮ ಖಾಸಿ ಚಲನಚಿತ್ರ: Lewduh

ಅತ್ಯುತ್ತಮ ಹರಿಯಾಣಿ ಚಿತ್ರ: ಚೋರಿಯನ್ ಚೋರೊನ್ ಸೆ ಕಾಮ್ ನಹಿ ಹೋತಿ

ಅತ್ಯುತ್ತಮ ಛತ್ತೀಸ್‌ಗಢ ಚಲನಚಿತ್ರ: ಭೂಲನ್ ದಿ ಮೇಜ್

ಅತ್ಯುತ್ತಮ ತೆಲುಗು ಚಲನಚಿತ್ರ: ಜರ್ಸಿ

ಅತ್ಯುತ್ತಮ ತಮಿಳು ಚಿತ್ರ: ಅಸುರನ್

ಅತ್ಯುತ್ತಮ ಪಂಜಾಬಿ ಚಲನಚಿತ್ರ: ರಬ್ ಡಾ ರೇಡಿಯೋ 2

ಅತ್ಯುತ್ತಮ ಒಡಿಯಾ ಚಿತ್ರ: ಸಲಾ ಬುಧರ್ ಬದ್ಲಾ ಮತ್ತು ಕಲಿರಾ ಅತಿತಾ

ಅತ್ಯುತ್ತಮ ಮಣಿಪುರಿ ಚಿತ್ರ: ಈಗಿ ಕೋನಾ

ಅತ್ಯುತ್ತಮ ಮಲಯಾಳಂ ಚಿತ್ರ: ಕಳ್ಳಾ ನೋಟಂ

ಅತ್ಯುತ್ತಮ ಮರಾಠಿ ಚಿತ್ರ: ಬಾರ್ಡೋ

ಅತ್ಯುತ್ತಮ ಕೊಂಕಣಿ ಚಲನಚಿತ್ರ: ಕಾಜ್ರೊ

ಅತ್ಯುತ್ತಮ ಕನ್ನಡ ಚಿತ್ರ: ಅಕ್ಷಿ

ಅತ್ಯುತ್ತಮ ಹಿಂದಿ ಚಲನಚಿತ್ರ: ಚಿಚೋರೆ

ಅತ್ಯುತ್ತಮ ಬಂಗಾಳಿ ಚಲನಚಿತ್ರ: ಗುಮ್ನಾಮಿ

ಅತ್ಯುತ್ತಮ ಅಸ್ಸಾಮೀಸ್ ಚಲನಚಿತ್ರ: ರೋನುವಾ- ಹೂ ನೆವರ್‌ ಸರೆಂಡರ್‌

ಅತ್ಯುತ್ತಮ ಸಾಹಸ: ಅವನೇ ಶ್ರೀಮನ್ನಾರಾಯಣ (ಕನ್ನಡ)

ಅತ್ಯುತ್ತಮ ನೃತ್ಯ ಸಂಯೋಜನೆ: ಮಹರ್ಷಿ (ತೆಲುಗು)

ಅತ್ಯುತ್ತಮ ಸ್ಪೆಷಲ್ ಎಫೆಕ್ಟ್: Marakkar Arabikadalinte Simham (ಮಲಯಾಳಂ)

ವಿಶೇಷ ತೀರ್ಪುಗಾರರ ಪ್ರಶಸ್ತಿ: Oththa Seruppu Size-7 (ತಮಿಳು)

ಅತ್ಯುತ್ತಮ ಸಾಹಿತ್ಯ: ಕೋಲಾಂಬಿ (ಮಲಯಾಳಂ)

ಅತ್ಯುತ್ತಮ ಸಂಗೀತ ನಿರ್ದೇಶನ ಹಾಡುಗಳು: ವಿಶ್ವಾಸಂ (ತಮಿಳು)

ಸಂಗೀತ ನಿರ್ದೇಶನ: Jyeshthoputro

ಅತ್ಯುತ್ತಮ ಮೇಕಪ್ : ಹೆಲೆನ್ (ಮಲಯಾಳಂ)


ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...