Homeಎಕಾನಮಿಬಂಡವಾಳಿಗರ 68,000 ಕೋಟಿ ರೂ Write Off ವಿವಾದ: ಏನಿದು ಟೆಕ್ನಿಕಲ್ ರೈಟ್-ಆಫ್?

ಬಂಡವಾಳಿಗರ 68,000 ಕೋಟಿ ರೂ Write Off ವಿವಾದ: ಏನಿದು ಟೆಕ್ನಿಕಲ್ ರೈಟ್-ಆಫ್?

- Advertisement -
- Advertisement -

ಇತ್ತೀಚೆಗೆ ಭಾರತೀಯ ರಿಜ಼ರ್ವ್ ಬ್ಯಾಂಕ್ ಮಾಹಿತಿ ಹಕ್ಕು ಕಾಯಿದೆಯಡಿ ಪತ್ರಕರ್ತ ಸಾಕೇತ್ ಗೋಖಲೆಯವರಿಗೆ ನೀಡಿರುವ ಮಾಹಿತಿ ಪ್ರಕಾರ ಸರಕಾರಿ ಬ್ಯಾಂಕುಗಳು 50 ದೊಡ್ಡ ಉದ್ಯಮಿಗಳಿಗೆ ನೀಡಿರುವ ರೂ. 68,000 ಕೋಟಿ ಸಾಲ ಹೊಡೆದು ಹಾಕಿದೆ ಎಂಬ ಸುದ್ದಿ ಬಹಳ ಚರ್ಚೆಯಲ್ಲಿದೆ.

ಸರಕಾರಿ ಬ್ಯಾಂಕುಗಳು ಕಳೆದ ಮೂರು ವರ್ಷಗಳಲ್ಲಿ ರೂ.1,14,000 ಕೋಟಿ ಸಾಲವನ್ನು ತನ್ನ ಪುಸ್ತಕದಿಂದ ಹೊಡೆದು ಹಾಕಿದೆ ಮತ್ತು ಈ ವರ್ಷದಲ್ಲಿ ಇನ್ನೂ ಸುಮಾರು ರೂ.50,000 ಕೋಟಿ ಸಾಲವನ್ನು ಹೊಡೆದು ಹಾಕಲಿದೆ. ಈ ಹೊಡೆದು ಹಾಕುವ (ರೈಟ್ ಆಫ್) ವಿಧಿಯನ್ನು ಭಾರತೀಯ ರಿಜ಼ರ್ವ್ ಬ್ಯಾಂಕಿನ ಮಾಜಿ ಡೆಪ್ಯೂಟಿ ಗವರ್ನರ್ ಶ್ರೀ ಕೆ.ಸಿ.ಚಕ್ರಬರ್ತಿಯವರು “ದೊಡ್ಡ ಹಗರಣ” ಎಂದು ಕರೆಯುತ್ತಾರೆ.

“ಸಾಲ ಮನ್ನಾ” ಎಂದ ಕೂಡಲೇ ಅದು ಏನೆಂದು ಎಲ್ಲರಿಗೂ ತಿಳಿಯುತ್ತದೆ ಆದರೆ ಈ “ರೈಟ್-ಆಫ್” ಅಂದರೆ “ಸಾಲ ಮನ್ನಾ” ಅಲ್ಲ ಎಂಬುದು ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಯಾವುದೇ ಬ್ಯಾಂಕ್ ತನ್ನ ಸಾಲವನ್ನು ಮನ್ನಾ ಮಾಡಲು ಇಷ್ಟ ಪಡುವುದಿಲ್ಲ, ಏಕೆಂದರೆ ಜನರಿಗೆ/ಉದ್ದಿಮೆಗಳಿಗೆ ನೀಡಿರುವ ಸಾಲ ಬ್ಯಾಂಕಿನ “ಆಸ್ತಿ” ಯಾಗಿರುತ್ತದೆ.

ಉದಾಹರಣೆಗೆ ನೀವು ಬ್ಯಾಂಕಿನಿಂದ ಒಂದು ಲಕ್ಷ ರೂ. ಸಾಲ ಪಡೆದಿದ್ದೀರಿ ಎಂದುಕೊಳ್ಳೋಣ. ಬ್ಯಾಂಕಿನ ದೃಷ್ಟಿಯಲ್ಲಿ ನೀವು ತೆಗೆದುಕೊಂಡಿರುವ ಸಾಲ ಬ್ಯಾಂಕಿಗೆ “ಆಸ್ತಿ” ಮತ್ತು ಅದಕ್ಕೆ ನೀವು ಕಟ್ಟುವ ಬಡ್ಡಿ ಹಣ ಬ್ಯಾಂಕಿಗೆ “ಆದಾಯ” ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಖಾತೆ “ಸಾಮಾನ್ಯ” ಮತ್ತು ನಿಮಗೆ ನೀಡಿರುವ ಹಣ ಬ್ಯಾಂಕಿನ “ಆಸ್ತಿ” ಎಂದು ಪರಿಗಣಿಸಲಾಗುತ್ತದೆ. ಆದರೆ ನೀವು ಬಡ್ಡಿ ಕಟ್ಟುವುದನ್ನು ನಿಲ್ಲಿಸಿದ ನಂತರ ಅಂದರೆ ಬ್ಯಾಂಕಿಗೆ “ಆದಾಯ” ನಿಂತ ದಿನದಿಂದ ನಿಮ್ಮ ಸಾಲವನ್ನು ನಿಷ್ಕ್ರಿಯ ಆಸ್ತಿ (ನಾನ್-ಪರ್ಫಾರ್ಮಿಂಗ್ ಅಸೆಟ್) ಎಂದು ಮತ್ತು ನಿಮ್ಮಿಂದ ಬರಬೇಕಾಗಿದ್ದ ಬಡ್ಡಿ ಹಣವನ್ನು “ಖರ್ಚು” ಎಂದು ಪರಿಗಣಿಸಲಾಗುತ್ತದೆ.

ಆರ್.ಬಿ.ಐ. ನಿಯಮಾವಳಿ ಅನುಸಾರ ಒಂದು ಸಮಯ/ಹಂತದ ನಂತರ ಇದನ್ನು “ಆಸ್ತಿ” ಎಂದು ಪರಿಗಣಿಸಲು ಆಗುವುದಿಲ್ಲ, ಅದಕ್ಕಾಗಿ ಅದನ್ನು ಬ್ಯಾಂಕಿನ ಲೆಕ್ಕ-ಪತ್ರದಲ್ಲಿ ಆಸ್ತಿ ಪಟ್ಟಿಯಿಂದ ಹೊಡೆದು ಹಾಕಲಾಗುತ್ತದೆ. ಇದನ್ನು ರೈಟ್-ಆಫ್ ಎಂದು ಕರೆಯುತ್ತಾರೆ. ರೈಟ್-ಆಫ್ ಎಂದ ಕೂಡಲೇ ಬ್ಯಾಂಕು ಈ ಸಾಲವನ್ನು ಕೈ ಬಿಟ್ಟಿದೆ ಎಂಬ ಅರ್ಥವಲ್ಲ. ಕಾನೂನಿನ ಪ್ರಕಾರ ಸಾಲಗಾರರ ವಿರುದ್ಧ ಸಾಲ ಮತ್ತು ಬಡ್ದಿಯ ವಸೂಲಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರವಿರುತ್ತದೆ. ಕೆಲವು ಬ್ಯಾಂಕುಗಳು ಈ “ಹೊಡೆದು ಹಾಕಿದ ಸಾಲ” ವನ್ನು ವಸೂಲಿಗಾಗಿ ವಸೂಲಿ ಕಂಪನಿಗಳಿಗೆ ಮಾರಲೂಬಹುದು. ಅಂತಹ ಸಂದರ್ಭದಲ್ಲಿ ವಸೂಲಿ ಕಂಪನಿಯ ದಾಂಢಿಗರು ನಿಮ್ಮ ಮನೆ ಬಾಗಿಲಿಗೆ ಬಂದು ಕದ ತಟ್ಟಬಹುದು. ನೀವು ಸಾಲದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇವಷ್ಟು ಪುಸ್ತಕದ ಬದನೇಕಾಯಿ.

ಇದರಲ್ಲಿ ಬ್ಯಾಂಕಿಗೆ ಆಗುವ ನಷ್ಟ-ಲಾಭವೇನು ನೋಡೋಣ. ಸಾಲರೂಪದಲ್ಲಿ ನೀಡಿರುವ ಹಣ ಸಂಪೂರ್ಣವಾಗಿ ಹಿಂದಕ್ಕೆ ಬಂದೇ ಬರುವುದೆಂಬ ನಂಬಿಕೆ ಯಾವ ಬ್ಯಾಂಕಿಗೂ ಇರುವುದಿಲ್ಲ ಹಾಗಾಗಿ ಸಾಲದ ಮೊತ್ತದ ಒಂದು ಅಂಶವನ್ನು ಅದು ತನ್ನ ಖರ್ಚೆಂದು ಲೆಕ್ಕದ ಪುಸ್ತಕದಲ್ಲಿ ಮೊದಲೇ ತೋರಿಸುತ್ತದೆ. ಇದು ಒಟ್ಟು ಸಾಲದ 5% ಆಗಿರಬಹುದು ಅಥವಾ ಸಾಲದ ಗುಣಮಟ್ಟದ ಆಧಾರದ ಮೇಲೆ ಇನ್ನೂ ಹೆಚ್ಚಾಗಿರಬಹುದು. ನಿಷ್ಕ್ರಿಯ ಸಾಲವನ್ನು ಆಸ್ತಿ ಪಟ್ಟಿಯಿಂದ ಹೊಡೆದು ಹಾಕಿದ ನಂತರ ಬ್ಯಾಂಕಿಗೆ ಖರ್ಚು ಹೆಚ್ಚಾಗಿ ಅದರ ವಾರ್ಷಿಕ ಲಾಭ ಕಡಿಮೆ ಆಗುತ್ತದೆ ಅಂದರೆ ಆದಾಯ ತೆರಿಗೆಯಲ್ಲಿ ವಿನಾಯಿತಿ ದೊರೆಯುತ್ತದೆ. ಇದರಿಂದ ಬ್ಯಾಂಕಿನ ಲೆಕ್ಕ-ಪತ್ರ ಸ್ವಲ್ಪ ಮಟ್ಟಿಗೆ ಸ್ವಚ್ಛವಾಗುತ್ತದೆ. ಇದರಿಂದ ಸರಕಾರಕ್ಕೆ ಆದಾಯ ಕಡಿಮೆ (ತೆರಿಗೆ ಖೋತಾ) ಆಗುತ್ತದೆ. ಈ ನಿಷ್ಪ್ರಯೋಜಕ ಆಸ್ತಿಗಳನ್ನು ಕೈ ಬಿಟ್ಟ ನಂತರ ಬ್ಯಾಂಕ್ ಮತ್ತೆ ಬೇರೆಯವರಿಗೆ ಸಾಲ ನೀಡಲು ಸಾಧ್ಯವಾಗುತ್ತದೆ. ಸಾಲ ನೀಡಲು ಬ್ಯಾಂಕಿನ ಬಳಿ ಹಣ ಇಲ್ಲದೆ ಇದ್ದಾಗ ಸರಕಾರ ಅವಕ್ಕೆ “ರಿ-ಫೈನಾನ್ಸಿಂಗ್” ಮಾಡುತ್ತದೆ. ಸರಕಾರವೂ ಸಹ ಇಂತಹ “ರೈಟ್-ಆಫ್” ಗೆ ಬೆಂಬಲ ನೀಡುತ್ತವೆ.

ಇತ್ತೀಚೆಗೆ ಬ್ಯಾಂಕಿನವರು ಹೊಸ “ಟೆಕ್ನಿಕಲ್ ರೈಟ್-ಆಫ್” ಎಂಬ ಪದ ಉಪಯೋಗಿಸಿ ಜನ ಸಾಮಾನ್ಯರನ್ನು ದಾರಿ ತಪ್ಪಿಸುತ್ತಿವೆ. ಇದನ್ನು ಮಾಜಿ ಡೆಪ್ಯೂಟಿ ಗವರ್ನರ್ ಶ್ರೀ ಕೆ.ಸಿ.ಚಕ್ರಬರ್ತಿಯವರು “ದೊಡ್ಡ ಹಗರಣ” ಎಂದು ಕರೆಯುತ್ತಾರೆ. ಇದರಲ್ಲಿ ಯಾವುದೇ “ಟೆಕ್ನಿಕಲ್” ಪ್ರಶ್ನೆ ಇಲ್ಲ, ಸಾಲ ತೆಗೆದುಕೊಂಡಿರುವ ಉದ್ದಿಮೆಗಳ ನಿವ್ವಳ ಆದಾಯ ಬ್ಯಾಂಕಿಗೆ ಬರಬೇಕಾಗಿರುವ ಬಡ್ಡಿಯಷ್ಟೂ ಇಲ್ಲದಿರುವುದು ಅವರ ಲೆಕ್ಕ-ಪತ್ರದಲ್ಲಿ ಸ್ಪಷ್ಟವಾಗಿರುವಾಗ ಸಾಲ ತೆಗೆದುಕೊಂಡಿರುವುದು ಮೋಸದ ಉದ್ದೇಶ. ರೈಟ್-ಆಫ್ ಎನ್ನುವುದು ಬ್ಯಾಂಕಿಂಗ್ ಕ್ಷೇತ್ರದ ಸರ್ವೇ ಸಾಮಾನ್ಯ ಪ್ರಕ್ರಿಯೆ ಅದನ್ನು ಮೀರಿ ನಡೆದಿರುವ ಎಲ್ಲಾ “ಟೆಕ್ನಿಕಲ್ ರೈಟ್-ಆಫ್”ಗಳೂ ಕೇವಲ ಹಗರಣ ಎಂಬುದು ಅವರ ಅನಿಸಿಕೆ.

ಹಾಗಾದರೆ ಈ ಹೊಡೆದು ಹಾಕಿದ ಮೊತ್ತ ಬ್ಯಾಂಕಿಗೆ ಮತ್ತೆ ಬರುತ್ತದೆಯೇ? ವಿಷಯ ಪರಿಣಿತರಲ್ಲಿ ಇದರ ಬಗ್ಗೆ ಏಕಾಭಿಪ್ರಾಯ ಇಲ್ಲ. ಕೆಲವರು ಕೇವಲ 20% ಮಾತ್ರ ಬರುತ್ತದೆ. ಅದೂ ಸಹ ಹತ್ತಾರು ವರ್ಷಗಳ ನ್ಯಾಯಾಲಯದ ಹೋರಾಟದ ನಂತರ, ಎಂದರೆ ಕೆಲವರು ಸುಮಾರು ಅರ್ಧದಷ್ಟು ಬರುತ್ತದೆ ಎನ್ನುತ್ತಾರೆ.

ಏನೇ ಆಗಲಿ ದೊಡ್ಡವರ ದೊಡ್ಡ ಮೊತ್ತದ ಸಾಲ ದೊಡ್ಡ ಹಗರಣವೇ ಸರಿ. ಇದರಲ್ಲಿ ಎಲ್ಲರೂ ಸಹಭಾಗಿ. ಕೊನೆಗೆ ಸರಕಾರಿ ಬ್ಯಾಂಕಿನ ಹಣ ನಮ್ಮ ನಿಮ್ಮ ತೆರಿಗೆಯಿಂದಲೇ ಬರಬೇಕು. ಆದ್ದರಿಂದ ಈಗ ಸರಕಾರ ಹೊಡೆದು ಹಾಕಿರುವ ರೂ.68,000 ಕೋಟಿ ಸರಿಯೋ ತಪ್ಪೋ ನೀವೇ ಮತ್ತೊಮ್ಮೆ ಯೋಚಿಸಿ.

  • ಜಿ. ಆರ್. ವಿದ್ಯಾರಣ್ಯ

(ಡಿಸ್ಕ್ಲೇಮರ್: ಲೇಖಕರು ಬ್ಯಾಂಕಿಂಗ್/ಫೈನಾನ್ಸ್ ಪರಿಣಿತರಲ್ಲ. ಬಲ್ಲವರೊಂದಿಗೆ ಚರ್ಚಿಸಿ ಲೇಖನ ತಯಾರಿಸಿದ್ದಾರೆ. ನಿಮ್ಮ ಅನಿಸಿಕೆಗೆ ಸ್ವಾಗತ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...