Homeಮುಖಪುಟಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು

ಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು

- Advertisement -
- Advertisement -

69 ಕೊರೊನಾ ರೋಗಿಗಳ ಗುಂಪು ಗುರುವಾರ ಬೆಳಿಗ್ಗೆ ಕನಿಷ್ಠ ಒಂದು ಗಂಟೆಗಳ ಕಾಲ ಉತ್ತರ ಪ್ರದೇಶದ ಇಟವಾ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಬೀಗ ಹಾಕಿದ ಗೇಟುಗಳ ಹೊರಗೆ ಫುಟ್‌ಪಾತ್‌ನಲ್ಲಿ ಕಾಯಬೇಕಾದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಆಸ್ಪತ್ರೆಯು ಕೊರೊನಾ ರೋಗಿಗಳಿಗಾಗಿ ಮೀಸಲಾದ ಆಸ್ಪತ್ರೆಯಾಗಿದ್ದು, ಸಮರ್ಪಕ ಸಂವಹನದ ಕೊರತೆಯಿಂದಾಗಿ ಈ ದುರ್ಘಟನೆ ಜರುಗಿದೆ ಎನ್ನಲಾಗಿದೆ.

ಉತ್ತರ ಪ್ರದೇಶದ ಇಟವಾ ಜಿಲ್ಲೆಯ ಸೈಫೈನ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಫ್ಲೂ ಹೊರರೋಗಿ ವಿಭಾಗದ ಗೇಟ್‌ಗಳ ಹೊರಗೆ ವಿಲಕ್ಷಣ ಘಟನೆ ನಡೆದಿದ್ದು, ಗುರುವಾರ ಮುಂಜಾನೆ COVID-19 ಬಾಧಿತ 69 ರೋಗಿಗಳನ್ನು ಕರೆತಂದ ಬಸ್ ಆಸ್ಪತ್ರೆಯ ಗೇಟ್‌ಗಳನ್ನು ಮುಂದೆ ಇಳಿಸಿದೆ.

ರೋಗಿಗಳನ್ನು ಪಶ್ಚಿಮ ಯುಪಿ ನಗರವಾದ ಆಗ್ರಾದಿಂದ ಸೈಫೈನ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗುತ್ತಿತ್ತು. ಇದು ಈ ಪ್ರದೇಶದ ಅತಿದೊಡ್ಡ ಆಸ್ಪತ್ರೆಗಳಲ್ಲಿ ಒಂದಾಗಿದೆ. ರೋಗಿಗಳನ್ನು ಯುಪಿ ಸಾರಿಗೆ ಬಸ್‌ನಲ್ಲಿ 116 ಕಿ.ಮೀ ದೂರದಲ್ಲಿರುವ ಆಗ್ರಾದಿಂದ ಕಳುಹಿಸಲಾಗಿತ್ತು. ಬೆಂಗಾವಲು ತಂಡವನ್ನು ಬಸ್‌ನೊಂದಿಗೆ ಕಳುಹಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ಈ ದೃಶ್ಯಗಳನ್ನು ದೂರದಿಂದ ಸ್ಥಳೀಯರು ವಿಡಿಯೋ ರೆಕಾರ್ಡ್‌ ಮಾಡಿದ್ದಾರೆ. ಅದರಂತೆ ಆಸ್ಪತ್ರೆಯ ಮುಚ್ಚಿದ ಗೇಟ್‌ಗಳ ಹೊರಗೆ ಫುಟ್‌ಪಾತ್‌ನಲ್ಲಿ ರೋಗಿಗಳು ಕುಳಿತಿದ್ದಾರೆ. ಮುಖವನ್ನು ಮರೆಮಾಡಲು ಮಾಸ್ಕ್‌ ಮಾತ್ರ ಧರಿಸಿದ್ದಾರೆ. ಇಬ್ಬರು ಪೊಲೀಸರು ರಕ್ಷಣೆಗಿದ್ದು ಅಂತರ ಕಾಯ್ದುಕೊಳ್ಳಿ ಎಂದು ನಿರ್ದೇಶನ ನೀಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಆನಂತರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಉತ್ತರ ಪ್ರದೇಶದ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ದ್ವಾರಗಳನ್ನು ತಲುಪಿ ಅಲ್ಲಿನ ಬಾಧಿತರನ್ನು ಉದ್ದೇಶಿಸಿ ಮಾತನಾಡಿರುವುದು ಸಹ ಮೊಬೈಲ್‌ನಲ್ಲಿ ರೆಕಾರ್ಡ್ ಆಗಿದೆ.

“ಇಲ್ಲಿಯೇ ಇರಿ. ವೈದ್ಯಕೀಯ ತಂಡ ಶೀಘ್ರದಲ್ಲೇ ಇಲ್ಲಿಗೆ ಬರಲಿದೆ ಮತ್ತು ಒಂದು ಪಟ್ಟಿಯನ್ನು ತಯಾರಿಸಿ ನಿಮ್ಮನ್ನು ಕರೆದೊಯ್ಯುತ್ತದೆ. ನೀವು ಇಲ್ಲಿ ಸುತ್ತಾಡಬೇಡಿ ಮತ್ತು ಓಡಿಹೋಗಲು ಪ್ರಯತ್ನಿಸಬೇಡಿ. ಒಂದು ವೇಳೆ ಓಡಿಹೋದರೆ ನಿಮ್ಮನ್ನು ಹಿಡಿಯಲಾಗುತ್ತದೆ. ನೀವು ಇದ್ದಕ್ಕಿದ್ದಂತೆ ಬಂದಿದ್ದೀರಿ. ನಿಮ್ಮ ಕುರಿತು ಇಲ್ಲಿ ಯಾವುದೇ ಮಾಹಿತಿ ಇರಲಿಲ್ಲ, ಇದಿದ್ದರೆ ಪಟ್ಟಿಗಳನ್ನು ತಯಾರಿಸಬಹುದಿತ್ತು ಎಂದು ಪೊಲೀಸ್ ಅಧಿಕಾರಿ ಚಂದ್ರ ಪಾಲ್ ಸಿಂಗ್ ಮೊಬೈಲ್ ವೀಡಿಯೊದಲ್ಲಿ ಹೇಳುತ್ತಾರೆ.

ಈ ಕುರಿತು ಆಸ್ಪತ್ರೆಯನ್ನು ನಡೆಸುತ್ತಿರುವ ವಿಶ್ವವಿದ್ಯಾಲಯದ ಉಪಕುಲಪತಿ ಸಂವಹನದ ಕೊರತೆಯಿಂದ ಹೀಗಾಗಿದೆ ಎಂದು ಒಪ್ಪಿಕೊಂಡರು. ಆದರೆ ಇದಕ್ಕಾಗಿ ಸೈಫೈ ಆಸ್ಪತ್ರೆಯ ವೈದ್ಯರು ಅಥವಾ ಅರೆವೈದ್ಯಕೀಯ ಸಿಬ್ಬಂದಿಯನ್ನು ದೂಷಿಸಬಾರದು ಎಂದು ಹೇಳಿದರು.

“ಯಾರು ನಿರ್ಲಕ್ಷ್ಯ ವಹಿಸಿದ್ದಾರೆಂದು ನಾನು ಹೇಳಲಾರೆ. ಆದರೆ ರೋಗಿಗಳು ಒಂದು ದಿನ ಮುಂಚಿತವಾಗಿ (ಬುಧವಾರ) ತಲುಪಬೇಕಾಗಿತ್ತು ಮತ್ತು ರೋಗಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ವರ್ಗಾವಣೆ ಮಾಡಿದಾಗ, ಕಾರ್ಯವಿಧಾನವು ಜವಾಬ್ದಾರಿಯುತ ಅಧಿಕಾರಿ ಅಥವಾ ವೈದ್ಯರ ಪಟ್ಟಿಯೊಂದಿಗೆ ಬರುತ್ತದೆ. ನಂತರ ನಾವು ರೋಗಿಗಳನ್ನು ಒಳಗೆ ಕರೆದೊಯ್ಯುತ್ತೇವೆ. ನಮ್ಮ ತಂಡವು ಜಾಗರೂಕತೆಯಿಂದ ಕೂಡಿತ್ತು. ಆದರೆ ಸಂವಹನದ ಕೊರತೆಯುಂಟಾಗಿದೆ. ಈ ಕಾರಣದಿಂದಾಗಿ ಅವರು ನಿಗದಿತ ದಿನದಂದು ತಲುಪಲಿಲ್ಲ ಆದರೆ ಮರುದಿನ ಬಂದಿರುವುದರಿಂದ ನಮ್ಮ ತಂಡಕ್ಕೆ ಮಾಹಿತಿ ಇಲ್ಲ. ಆದರೆ ನಮ್ಮ ಯಾವುದೇ ದಾಖಲೆಗಳನ್ನು ಹೊಂದಿರದಿದ್ದರೂ ತಂಡವು ಅವರನ್ನು ಕರೆದೊಯ್ಯಿತು. ಇದು 30 ನಿಮಿಷದಿಂದ ಒಂದು ಗಂಟೆಯವರೆಗೆ ಸಮಯದ ತೆಗೆದುಕೊಂಡಿತು. ಆ ಸಮಯದಲ್ಲಿ ಅವರು ಎಲ್ಲಿಯಾದರೂ ತಿರುಗಾಡಿದ್ದಾರೆ ಎಂದು ನನಗೆ ಖಾತ್ರಿಯಿಲ್ಲ ಎಂದು ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ರಾಜ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಬೀಡಿಯೊಳಗೆ ಸುರುಟುವ ಬದುಕಿನ ಬವಣೆಗಳು : ದ.ಕ ಜಿಲ್ಲೆಯ ಸ್ಥಿತಿಗತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...