Homeಮುಖಪುಟಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು

ಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು

- Advertisement -
- Advertisement -

69 ಕೊರೊನಾ ರೋಗಿಗಳ ಗುಂಪು ಗುರುವಾರ ಬೆಳಿಗ್ಗೆ ಕನಿಷ್ಠ ಒಂದು ಗಂಟೆಗಳ ಕಾಲ ಉತ್ತರ ಪ್ರದೇಶದ ಇಟವಾ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಬೀಗ ಹಾಕಿದ ಗೇಟುಗಳ ಹೊರಗೆ ಫುಟ್‌ಪಾತ್‌ನಲ್ಲಿ ಕಾಯಬೇಕಾದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಆಸ್ಪತ್ರೆಯು ಕೊರೊನಾ ರೋಗಿಗಳಿಗಾಗಿ ಮೀಸಲಾದ ಆಸ್ಪತ್ರೆಯಾಗಿದ್ದು, ಸಮರ್ಪಕ ಸಂವಹನದ ಕೊರತೆಯಿಂದಾಗಿ ಈ ದುರ್ಘಟನೆ ಜರುಗಿದೆ ಎನ್ನಲಾಗಿದೆ.

ಉತ್ತರ ಪ್ರದೇಶದ ಇಟವಾ ಜಿಲ್ಲೆಯ ಸೈಫೈನ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಫ್ಲೂ ಹೊರರೋಗಿ ವಿಭಾಗದ ಗೇಟ್‌ಗಳ ಹೊರಗೆ ವಿಲಕ್ಷಣ ಘಟನೆ ನಡೆದಿದ್ದು, ಗುರುವಾರ ಮುಂಜಾನೆ COVID-19 ಬಾಧಿತ 69 ರೋಗಿಗಳನ್ನು ಕರೆತಂದ ಬಸ್ ಆಸ್ಪತ್ರೆಯ ಗೇಟ್‌ಗಳನ್ನು ಮುಂದೆ ಇಳಿಸಿದೆ.

ರೋಗಿಗಳನ್ನು ಪಶ್ಚಿಮ ಯುಪಿ ನಗರವಾದ ಆಗ್ರಾದಿಂದ ಸೈಫೈನ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗುತ್ತಿತ್ತು. ಇದು ಈ ಪ್ರದೇಶದ ಅತಿದೊಡ್ಡ ಆಸ್ಪತ್ರೆಗಳಲ್ಲಿ ಒಂದಾಗಿದೆ. ರೋಗಿಗಳನ್ನು ಯುಪಿ ಸಾರಿಗೆ ಬಸ್‌ನಲ್ಲಿ 116 ಕಿ.ಮೀ ದೂರದಲ್ಲಿರುವ ಆಗ್ರಾದಿಂದ ಕಳುಹಿಸಲಾಗಿತ್ತು. ಬೆಂಗಾವಲು ತಂಡವನ್ನು ಬಸ್‌ನೊಂದಿಗೆ ಕಳುಹಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ಈ ದೃಶ್ಯಗಳನ್ನು ದೂರದಿಂದ ಸ್ಥಳೀಯರು ವಿಡಿಯೋ ರೆಕಾರ್ಡ್‌ ಮಾಡಿದ್ದಾರೆ. ಅದರಂತೆ ಆಸ್ಪತ್ರೆಯ ಮುಚ್ಚಿದ ಗೇಟ್‌ಗಳ ಹೊರಗೆ ಫುಟ್‌ಪಾತ್‌ನಲ್ಲಿ ರೋಗಿಗಳು ಕುಳಿತಿದ್ದಾರೆ. ಮುಖವನ್ನು ಮರೆಮಾಡಲು ಮಾಸ್ಕ್‌ ಮಾತ್ರ ಧರಿಸಿದ್ದಾರೆ. ಇಬ್ಬರು ಪೊಲೀಸರು ರಕ್ಷಣೆಗಿದ್ದು ಅಂತರ ಕಾಯ್ದುಕೊಳ್ಳಿ ಎಂದು ನಿರ್ದೇಶನ ನೀಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಆನಂತರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಉತ್ತರ ಪ್ರದೇಶದ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ದ್ವಾರಗಳನ್ನು ತಲುಪಿ ಅಲ್ಲಿನ ಬಾಧಿತರನ್ನು ಉದ್ದೇಶಿಸಿ ಮಾತನಾಡಿರುವುದು ಸಹ ಮೊಬೈಲ್‌ನಲ್ಲಿ ರೆಕಾರ್ಡ್ ಆಗಿದೆ.

“ಇಲ್ಲಿಯೇ ಇರಿ. ವೈದ್ಯಕೀಯ ತಂಡ ಶೀಘ್ರದಲ್ಲೇ ಇಲ್ಲಿಗೆ ಬರಲಿದೆ ಮತ್ತು ಒಂದು ಪಟ್ಟಿಯನ್ನು ತಯಾರಿಸಿ ನಿಮ್ಮನ್ನು ಕರೆದೊಯ್ಯುತ್ತದೆ. ನೀವು ಇಲ್ಲಿ ಸುತ್ತಾಡಬೇಡಿ ಮತ್ತು ಓಡಿಹೋಗಲು ಪ್ರಯತ್ನಿಸಬೇಡಿ. ಒಂದು ವೇಳೆ ಓಡಿಹೋದರೆ ನಿಮ್ಮನ್ನು ಹಿಡಿಯಲಾಗುತ್ತದೆ. ನೀವು ಇದ್ದಕ್ಕಿದ್ದಂತೆ ಬಂದಿದ್ದೀರಿ. ನಿಮ್ಮ ಕುರಿತು ಇಲ್ಲಿ ಯಾವುದೇ ಮಾಹಿತಿ ಇರಲಿಲ್ಲ, ಇದಿದ್ದರೆ ಪಟ್ಟಿಗಳನ್ನು ತಯಾರಿಸಬಹುದಿತ್ತು ಎಂದು ಪೊಲೀಸ್ ಅಧಿಕಾರಿ ಚಂದ್ರ ಪಾಲ್ ಸಿಂಗ್ ಮೊಬೈಲ್ ವೀಡಿಯೊದಲ್ಲಿ ಹೇಳುತ್ತಾರೆ.

ಈ ಕುರಿತು ಆಸ್ಪತ್ರೆಯನ್ನು ನಡೆಸುತ್ತಿರುವ ವಿಶ್ವವಿದ್ಯಾಲಯದ ಉಪಕುಲಪತಿ ಸಂವಹನದ ಕೊರತೆಯಿಂದ ಹೀಗಾಗಿದೆ ಎಂದು ಒಪ್ಪಿಕೊಂಡರು. ಆದರೆ ಇದಕ್ಕಾಗಿ ಸೈಫೈ ಆಸ್ಪತ್ರೆಯ ವೈದ್ಯರು ಅಥವಾ ಅರೆವೈದ್ಯಕೀಯ ಸಿಬ್ಬಂದಿಯನ್ನು ದೂಷಿಸಬಾರದು ಎಂದು ಹೇಳಿದರು.

“ಯಾರು ನಿರ್ಲಕ್ಷ್ಯ ವಹಿಸಿದ್ದಾರೆಂದು ನಾನು ಹೇಳಲಾರೆ. ಆದರೆ ರೋಗಿಗಳು ಒಂದು ದಿನ ಮುಂಚಿತವಾಗಿ (ಬುಧವಾರ) ತಲುಪಬೇಕಾಗಿತ್ತು ಮತ್ತು ರೋಗಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ವರ್ಗಾವಣೆ ಮಾಡಿದಾಗ, ಕಾರ್ಯವಿಧಾನವು ಜವಾಬ್ದಾರಿಯುತ ಅಧಿಕಾರಿ ಅಥವಾ ವೈದ್ಯರ ಪಟ್ಟಿಯೊಂದಿಗೆ ಬರುತ್ತದೆ. ನಂತರ ನಾವು ರೋಗಿಗಳನ್ನು ಒಳಗೆ ಕರೆದೊಯ್ಯುತ್ತೇವೆ. ನಮ್ಮ ತಂಡವು ಜಾಗರೂಕತೆಯಿಂದ ಕೂಡಿತ್ತು. ಆದರೆ ಸಂವಹನದ ಕೊರತೆಯುಂಟಾಗಿದೆ. ಈ ಕಾರಣದಿಂದಾಗಿ ಅವರು ನಿಗದಿತ ದಿನದಂದು ತಲುಪಲಿಲ್ಲ ಆದರೆ ಮರುದಿನ ಬಂದಿರುವುದರಿಂದ ನಮ್ಮ ತಂಡಕ್ಕೆ ಮಾಹಿತಿ ಇಲ್ಲ. ಆದರೆ ನಮ್ಮ ಯಾವುದೇ ದಾಖಲೆಗಳನ್ನು ಹೊಂದಿರದಿದ್ದರೂ ತಂಡವು ಅವರನ್ನು ಕರೆದೊಯ್ಯಿತು. ಇದು 30 ನಿಮಿಷದಿಂದ ಒಂದು ಗಂಟೆಯವರೆಗೆ ಸಮಯದ ತೆಗೆದುಕೊಂಡಿತು. ಆ ಸಮಯದಲ್ಲಿ ಅವರು ಎಲ್ಲಿಯಾದರೂ ತಿರುಗಾಡಿದ್ದಾರೆ ಎಂದು ನನಗೆ ಖಾತ್ರಿಯಿಲ್ಲ ಎಂದು ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ರಾಜ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಬೀಡಿಯೊಳಗೆ ಸುರುಟುವ ಬದುಕಿನ ಬವಣೆಗಳು : ದ.ಕ ಜಿಲ್ಲೆಯ ಸ್ಥಿತಿಗತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...