Homeಮುಖಪುಟಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು

ಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು

- Advertisement -
- Advertisement -

69 ಕೊರೊನಾ ರೋಗಿಗಳ ಗುಂಪು ಗುರುವಾರ ಬೆಳಿಗ್ಗೆ ಕನಿಷ್ಠ ಒಂದು ಗಂಟೆಗಳ ಕಾಲ ಉತ್ತರ ಪ್ರದೇಶದ ಇಟವಾ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಬೀಗ ಹಾಕಿದ ಗೇಟುಗಳ ಹೊರಗೆ ಫುಟ್‌ಪಾತ್‌ನಲ್ಲಿ ಕಾಯಬೇಕಾದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಆಸ್ಪತ್ರೆಯು ಕೊರೊನಾ ರೋಗಿಗಳಿಗಾಗಿ ಮೀಸಲಾದ ಆಸ್ಪತ್ರೆಯಾಗಿದ್ದು, ಸಮರ್ಪಕ ಸಂವಹನದ ಕೊರತೆಯಿಂದಾಗಿ ಈ ದುರ್ಘಟನೆ ಜರುಗಿದೆ ಎನ್ನಲಾಗಿದೆ.

ಉತ್ತರ ಪ್ರದೇಶದ ಇಟವಾ ಜಿಲ್ಲೆಯ ಸೈಫೈನ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಫ್ಲೂ ಹೊರರೋಗಿ ವಿಭಾಗದ ಗೇಟ್‌ಗಳ ಹೊರಗೆ ವಿಲಕ್ಷಣ ಘಟನೆ ನಡೆದಿದ್ದು, ಗುರುವಾರ ಮುಂಜಾನೆ COVID-19 ಬಾಧಿತ 69 ರೋಗಿಗಳನ್ನು ಕರೆತಂದ ಬಸ್ ಆಸ್ಪತ್ರೆಯ ಗೇಟ್‌ಗಳನ್ನು ಮುಂದೆ ಇಳಿಸಿದೆ.

ರೋಗಿಗಳನ್ನು ಪಶ್ಚಿಮ ಯುಪಿ ನಗರವಾದ ಆಗ್ರಾದಿಂದ ಸೈಫೈನ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗುತ್ತಿತ್ತು. ಇದು ಈ ಪ್ರದೇಶದ ಅತಿದೊಡ್ಡ ಆಸ್ಪತ್ರೆಗಳಲ್ಲಿ ಒಂದಾಗಿದೆ. ರೋಗಿಗಳನ್ನು ಯುಪಿ ಸಾರಿಗೆ ಬಸ್‌ನಲ್ಲಿ 116 ಕಿ.ಮೀ ದೂರದಲ್ಲಿರುವ ಆಗ್ರಾದಿಂದ ಕಳುಹಿಸಲಾಗಿತ್ತು. ಬೆಂಗಾವಲು ತಂಡವನ್ನು ಬಸ್‌ನೊಂದಿಗೆ ಕಳುಹಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ಈ ದೃಶ್ಯಗಳನ್ನು ದೂರದಿಂದ ಸ್ಥಳೀಯರು ವಿಡಿಯೋ ರೆಕಾರ್ಡ್‌ ಮಾಡಿದ್ದಾರೆ. ಅದರಂತೆ ಆಸ್ಪತ್ರೆಯ ಮುಚ್ಚಿದ ಗೇಟ್‌ಗಳ ಹೊರಗೆ ಫುಟ್‌ಪಾತ್‌ನಲ್ಲಿ ರೋಗಿಗಳು ಕುಳಿತಿದ್ದಾರೆ. ಮುಖವನ್ನು ಮರೆಮಾಡಲು ಮಾಸ್ಕ್‌ ಮಾತ್ರ ಧರಿಸಿದ್ದಾರೆ. ಇಬ್ಬರು ಪೊಲೀಸರು ರಕ್ಷಣೆಗಿದ್ದು ಅಂತರ ಕಾಯ್ದುಕೊಳ್ಳಿ ಎಂದು ನಿರ್ದೇಶನ ನೀಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಆನಂತರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಉತ್ತರ ಪ್ರದೇಶದ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ದ್ವಾರಗಳನ್ನು ತಲುಪಿ ಅಲ್ಲಿನ ಬಾಧಿತರನ್ನು ಉದ್ದೇಶಿಸಿ ಮಾತನಾಡಿರುವುದು ಸಹ ಮೊಬೈಲ್‌ನಲ್ಲಿ ರೆಕಾರ್ಡ್ ಆಗಿದೆ.

“ಇಲ್ಲಿಯೇ ಇರಿ. ವೈದ್ಯಕೀಯ ತಂಡ ಶೀಘ್ರದಲ್ಲೇ ಇಲ್ಲಿಗೆ ಬರಲಿದೆ ಮತ್ತು ಒಂದು ಪಟ್ಟಿಯನ್ನು ತಯಾರಿಸಿ ನಿಮ್ಮನ್ನು ಕರೆದೊಯ್ಯುತ್ತದೆ. ನೀವು ಇಲ್ಲಿ ಸುತ್ತಾಡಬೇಡಿ ಮತ್ತು ಓಡಿಹೋಗಲು ಪ್ರಯತ್ನಿಸಬೇಡಿ. ಒಂದು ವೇಳೆ ಓಡಿಹೋದರೆ ನಿಮ್ಮನ್ನು ಹಿಡಿಯಲಾಗುತ್ತದೆ. ನೀವು ಇದ್ದಕ್ಕಿದ್ದಂತೆ ಬಂದಿದ್ದೀರಿ. ನಿಮ್ಮ ಕುರಿತು ಇಲ್ಲಿ ಯಾವುದೇ ಮಾಹಿತಿ ಇರಲಿಲ್ಲ, ಇದಿದ್ದರೆ ಪಟ್ಟಿಗಳನ್ನು ತಯಾರಿಸಬಹುದಿತ್ತು ಎಂದು ಪೊಲೀಸ್ ಅಧಿಕಾರಿ ಚಂದ್ರ ಪಾಲ್ ಸಿಂಗ್ ಮೊಬೈಲ್ ವೀಡಿಯೊದಲ್ಲಿ ಹೇಳುತ್ತಾರೆ.

ಈ ಕುರಿತು ಆಸ್ಪತ್ರೆಯನ್ನು ನಡೆಸುತ್ತಿರುವ ವಿಶ್ವವಿದ್ಯಾಲಯದ ಉಪಕುಲಪತಿ ಸಂವಹನದ ಕೊರತೆಯಿಂದ ಹೀಗಾಗಿದೆ ಎಂದು ಒಪ್ಪಿಕೊಂಡರು. ಆದರೆ ಇದಕ್ಕಾಗಿ ಸೈಫೈ ಆಸ್ಪತ್ರೆಯ ವೈದ್ಯರು ಅಥವಾ ಅರೆವೈದ್ಯಕೀಯ ಸಿಬ್ಬಂದಿಯನ್ನು ದೂಷಿಸಬಾರದು ಎಂದು ಹೇಳಿದರು.

“ಯಾರು ನಿರ್ಲಕ್ಷ್ಯ ವಹಿಸಿದ್ದಾರೆಂದು ನಾನು ಹೇಳಲಾರೆ. ಆದರೆ ರೋಗಿಗಳು ಒಂದು ದಿನ ಮುಂಚಿತವಾಗಿ (ಬುಧವಾರ) ತಲುಪಬೇಕಾಗಿತ್ತು ಮತ್ತು ರೋಗಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ವರ್ಗಾವಣೆ ಮಾಡಿದಾಗ, ಕಾರ್ಯವಿಧಾನವು ಜವಾಬ್ದಾರಿಯುತ ಅಧಿಕಾರಿ ಅಥವಾ ವೈದ್ಯರ ಪಟ್ಟಿಯೊಂದಿಗೆ ಬರುತ್ತದೆ. ನಂತರ ನಾವು ರೋಗಿಗಳನ್ನು ಒಳಗೆ ಕರೆದೊಯ್ಯುತ್ತೇವೆ. ನಮ್ಮ ತಂಡವು ಜಾಗರೂಕತೆಯಿಂದ ಕೂಡಿತ್ತು. ಆದರೆ ಸಂವಹನದ ಕೊರತೆಯುಂಟಾಗಿದೆ. ಈ ಕಾರಣದಿಂದಾಗಿ ಅವರು ನಿಗದಿತ ದಿನದಂದು ತಲುಪಲಿಲ್ಲ ಆದರೆ ಮರುದಿನ ಬಂದಿರುವುದರಿಂದ ನಮ್ಮ ತಂಡಕ್ಕೆ ಮಾಹಿತಿ ಇಲ್ಲ. ಆದರೆ ನಮ್ಮ ಯಾವುದೇ ದಾಖಲೆಗಳನ್ನು ಹೊಂದಿರದಿದ್ದರೂ ತಂಡವು ಅವರನ್ನು ಕರೆದೊಯ್ಯಿತು. ಇದು 30 ನಿಮಿಷದಿಂದ ಒಂದು ಗಂಟೆಯವರೆಗೆ ಸಮಯದ ತೆಗೆದುಕೊಂಡಿತು. ಆ ಸಮಯದಲ್ಲಿ ಅವರು ಎಲ್ಲಿಯಾದರೂ ತಿರುಗಾಡಿದ್ದಾರೆ ಎಂದು ನನಗೆ ಖಾತ್ರಿಯಿಲ್ಲ ಎಂದು ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ರಾಜ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಬೀಡಿಯೊಳಗೆ ಸುರುಟುವ ಬದುಕಿನ ಬವಣೆಗಳು : ದ.ಕ ಜಿಲ್ಲೆಯ ಸ್ಥಿತಿಗತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...