Homeಮುಖಪುಟಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು

ಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು

- Advertisement -
- Advertisement -

69 ಕೊರೊನಾ ರೋಗಿಗಳ ಗುಂಪು ಗುರುವಾರ ಬೆಳಿಗ್ಗೆ ಕನಿಷ್ಠ ಒಂದು ಗಂಟೆಗಳ ಕಾಲ ಉತ್ತರ ಪ್ರದೇಶದ ಇಟವಾ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಬೀಗ ಹಾಕಿದ ಗೇಟುಗಳ ಹೊರಗೆ ಫುಟ್‌ಪಾತ್‌ನಲ್ಲಿ ಕಾಯಬೇಕಾದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಆಸ್ಪತ್ರೆಯು ಕೊರೊನಾ ರೋಗಿಗಳಿಗಾಗಿ ಮೀಸಲಾದ ಆಸ್ಪತ್ರೆಯಾಗಿದ್ದು, ಸಮರ್ಪಕ ಸಂವಹನದ ಕೊರತೆಯಿಂದಾಗಿ ಈ ದುರ್ಘಟನೆ ಜರುಗಿದೆ ಎನ್ನಲಾಗಿದೆ.

ಉತ್ತರ ಪ್ರದೇಶದ ಇಟವಾ ಜಿಲ್ಲೆಯ ಸೈಫೈನ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಫ್ಲೂ ಹೊರರೋಗಿ ವಿಭಾಗದ ಗೇಟ್‌ಗಳ ಹೊರಗೆ ವಿಲಕ್ಷಣ ಘಟನೆ ನಡೆದಿದ್ದು, ಗುರುವಾರ ಮುಂಜಾನೆ COVID-19 ಬಾಧಿತ 69 ರೋಗಿಗಳನ್ನು ಕರೆತಂದ ಬಸ್ ಆಸ್ಪತ್ರೆಯ ಗೇಟ್‌ಗಳನ್ನು ಮುಂದೆ ಇಳಿಸಿದೆ.

ರೋಗಿಗಳನ್ನು ಪಶ್ಚಿಮ ಯುಪಿ ನಗರವಾದ ಆಗ್ರಾದಿಂದ ಸೈಫೈನ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗುತ್ತಿತ್ತು. ಇದು ಈ ಪ್ರದೇಶದ ಅತಿದೊಡ್ಡ ಆಸ್ಪತ್ರೆಗಳಲ್ಲಿ ಒಂದಾಗಿದೆ. ರೋಗಿಗಳನ್ನು ಯುಪಿ ಸಾರಿಗೆ ಬಸ್‌ನಲ್ಲಿ 116 ಕಿ.ಮೀ ದೂರದಲ್ಲಿರುವ ಆಗ್ರಾದಿಂದ ಕಳುಹಿಸಲಾಗಿತ್ತು. ಬೆಂಗಾವಲು ತಂಡವನ್ನು ಬಸ್‌ನೊಂದಿಗೆ ಕಳುಹಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ಈ ದೃಶ್ಯಗಳನ್ನು ದೂರದಿಂದ ಸ್ಥಳೀಯರು ವಿಡಿಯೋ ರೆಕಾರ್ಡ್‌ ಮಾಡಿದ್ದಾರೆ. ಅದರಂತೆ ಆಸ್ಪತ್ರೆಯ ಮುಚ್ಚಿದ ಗೇಟ್‌ಗಳ ಹೊರಗೆ ಫುಟ್‌ಪಾತ್‌ನಲ್ಲಿ ರೋಗಿಗಳು ಕುಳಿತಿದ್ದಾರೆ. ಮುಖವನ್ನು ಮರೆಮಾಡಲು ಮಾಸ್ಕ್‌ ಮಾತ್ರ ಧರಿಸಿದ್ದಾರೆ. ಇಬ್ಬರು ಪೊಲೀಸರು ರಕ್ಷಣೆಗಿದ್ದು ಅಂತರ ಕಾಯ್ದುಕೊಳ್ಳಿ ಎಂದು ನಿರ್ದೇಶನ ನೀಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಆನಂತರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಉತ್ತರ ಪ್ರದೇಶದ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ದ್ವಾರಗಳನ್ನು ತಲುಪಿ ಅಲ್ಲಿನ ಬಾಧಿತರನ್ನು ಉದ್ದೇಶಿಸಿ ಮಾತನಾಡಿರುವುದು ಸಹ ಮೊಬೈಲ್‌ನಲ್ಲಿ ರೆಕಾರ್ಡ್ ಆಗಿದೆ.

“ಇಲ್ಲಿಯೇ ಇರಿ. ವೈದ್ಯಕೀಯ ತಂಡ ಶೀಘ್ರದಲ್ಲೇ ಇಲ್ಲಿಗೆ ಬರಲಿದೆ ಮತ್ತು ಒಂದು ಪಟ್ಟಿಯನ್ನು ತಯಾರಿಸಿ ನಿಮ್ಮನ್ನು ಕರೆದೊಯ್ಯುತ್ತದೆ. ನೀವು ಇಲ್ಲಿ ಸುತ್ತಾಡಬೇಡಿ ಮತ್ತು ಓಡಿಹೋಗಲು ಪ್ರಯತ್ನಿಸಬೇಡಿ. ಒಂದು ವೇಳೆ ಓಡಿಹೋದರೆ ನಿಮ್ಮನ್ನು ಹಿಡಿಯಲಾಗುತ್ತದೆ. ನೀವು ಇದ್ದಕ್ಕಿದ್ದಂತೆ ಬಂದಿದ್ದೀರಿ. ನಿಮ್ಮ ಕುರಿತು ಇಲ್ಲಿ ಯಾವುದೇ ಮಾಹಿತಿ ಇರಲಿಲ್ಲ, ಇದಿದ್ದರೆ ಪಟ್ಟಿಗಳನ್ನು ತಯಾರಿಸಬಹುದಿತ್ತು ಎಂದು ಪೊಲೀಸ್ ಅಧಿಕಾರಿ ಚಂದ್ರ ಪಾಲ್ ಸಿಂಗ್ ಮೊಬೈಲ್ ವೀಡಿಯೊದಲ್ಲಿ ಹೇಳುತ್ತಾರೆ.

ಈ ಕುರಿತು ಆಸ್ಪತ್ರೆಯನ್ನು ನಡೆಸುತ್ತಿರುವ ವಿಶ್ವವಿದ್ಯಾಲಯದ ಉಪಕುಲಪತಿ ಸಂವಹನದ ಕೊರತೆಯಿಂದ ಹೀಗಾಗಿದೆ ಎಂದು ಒಪ್ಪಿಕೊಂಡರು. ಆದರೆ ಇದಕ್ಕಾಗಿ ಸೈಫೈ ಆಸ್ಪತ್ರೆಯ ವೈದ್ಯರು ಅಥವಾ ಅರೆವೈದ್ಯಕೀಯ ಸಿಬ್ಬಂದಿಯನ್ನು ದೂಷಿಸಬಾರದು ಎಂದು ಹೇಳಿದರು.

“ಯಾರು ನಿರ್ಲಕ್ಷ್ಯ ವಹಿಸಿದ್ದಾರೆಂದು ನಾನು ಹೇಳಲಾರೆ. ಆದರೆ ರೋಗಿಗಳು ಒಂದು ದಿನ ಮುಂಚಿತವಾಗಿ (ಬುಧವಾರ) ತಲುಪಬೇಕಾಗಿತ್ತು ಮತ್ತು ರೋಗಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ವರ್ಗಾವಣೆ ಮಾಡಿದಾಗ, ಕಾರ್ಯವಿಧಾನವು ಜವಾಬ್ದಾರಿಯುತ ಅಧಿಕಾರಿ ಅಥವಾ ವೈದ್ಯರ ಪಟ್ಟಿಯೊಂದಿಗೆ ಬರುತ್ತದೆ. ನಂತರ ನಾವು ರೋಗಿಗಳನ್ನು ಒಳಗೆ ಕರೆದೊಯ್ಯುತ್ತೇವೆ. ನಮ್ಮ ತಂಡವು ಜಾಗರೂಕತೆಯಿಂದ ಕೂಡಿತ್ತು. ಆದರೆ ಸಂವಹನದ ಕೊರತೆಯುಂಟಾಗಿದೆ. ಈ ಕಾರಣದಿಂದಾಗಿ ಅವರು ನಿಗದಿತ ದಿನದಂದು ತಲುಪಲಿಲ್ಲ ಆದರೆ ಮರುದಿನ ಬಂದಿರುವುದರಿಂದ ನಮ್ಮ ತಂಡಕ್ಕೆ ಮಾಹಿತಿ ಇಲ್ಲ. ಆದರೆ ನಮ್ಮ ಯಾವುದೇ ದಾಖಲೆಗಳನ್ನು ಹೊಂದಿರದಿದ್ದರೂ ತಂಡವು ಅವರನ್ನು ಕರೆದೊಯ್ಯಿತು. ಇದು 30 ನಿಮಿಷದಿಂದ ಒಂದು ಗಂಟೆಯವರೆಗೆ ಸಮಯದ ತೆಗೆದುಕೊಂಡಿತು. ಆ ಸಮಯದಲ್ಲಿ ಅವರು ಎಲ್ಲಿಯಾದರೂ ತಿರುಗಾಡಿದ್ದಾರೆ ಎಂದು ನನಗೆ ಖಾತ್ರಿಯಿಲ್ಲ ಎಂದು ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ರಾಜ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಬೀಡಿಯೊಳಗೆ ಸುರುಟುವ ಬದುಕಿನ ಬವಣೆಗಳು : ದ.ಕ ಜಿಲ್ಲೆಯ ಸ್ಥಿತಿಗತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...