Homeಮುಖಪುಟಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು

ಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು

- Advertisement -
- Advertisement -

69 ಕೊರೊನಾ ರೋಗಿಗಳ ಗುಂಪು ಗುರುವಾರ ಬೆಳಿಗ್ಗೆ ಕನಿಷ್ಠ ಒಂದು ಗಂಟೆಗಳ ಕಾಲ ಉತ್ತರ ಪ್ರದೇಶದ ಇಟವಾ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಬೀಗ ಹಾಕಿದ ಗೇಟುಗಳ ಹೊರಗೆ ಫುಟ್‌ಪಾತ್‌ನಲ್ಲಿ ಕಾಯಬೇಕಾದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಆಸ್ಪತ್ರೆಯು ಕೊರೊನಾ ರೋಗಿಗಳಿಗಾಗಿ ಮೀಸಲಾದ ಆಸ್ಪತ್ರೆಯಾಗಿದ್ದು, ಸಮರ್ಪಕ ಸಂವಹನದ ಕೊರತೆಯಿಂದಾಗಿ ಈ ದುರ್ಘಟನೆ ಜರುಗಿದೆ ಎನ್ನಲಾಗಿದೆ.

ಉತ್ತರ ಪ್ರದೇಶದ ಇಟವಾ ಜಿಲ್ಲೆಯ ಸೈಫೈನ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಫ್ಲೂ ಹೊರರೋಗಿ ವಿಭಾಗದ ಗೇಟ್‌ಗಳ ಹೊರಗೆ ವಿಲಕ್ಷಣ ಘಟನೆ ನಡೆದಿದ್ದು, ಗುರುವಾರ ಮುಂಜಾನೆ COVID-19 ಬಾಧಿತ 69 ರೋಗಿಗಳನ್ನು ಕರೆತಂದ ಬಸ್ ಆಸ್ಪತ್ರೆಯ ಗೇಟ್‌ಗಳನ್ನು ಮುಂದೆ ಇಳಿಸಿದೆ.

ರೋಗಿಗಳನ್ನು ಪಶ್ಚಿಮ ಯುಪಿ ನಗರವಾದ ಆಗ್ರಾದಿಂದ ಸೈಫೈನ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗುತ್ತಿತ್ತು. ಇದು ಈ ಪ್ರದೇಶದ ಅತಿದೊಡ್ಡ ಆಸ್ಪತ್ರೆಗಳಲ್ಲಿ ಒಂದಾಗಿದೆ. ರೋಗಿಗಳನ್ನು ಯುಪಿ ಸಾರಿಗೆ ಬಸ್‌ನಲ್ಲಿ 116 ಕಿ.ಮೀ ದೂರದಲ್ಲಿರುವ ಆಗ್ರಾದಿಂದ ಕಳುಹಿಸಲಾಗಿತ್ತು. ಬೆಂಗಾವಲು ತಂಡವನ್ನು ಬಸ್‌ನೊಂದಿಗೆ ಕಳುಹಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ಈ ದೃಶ್ಯಗಳನ್ನು ದೂರದಿಂದ ಸ್ಥಳೀಯರು ವಿಡಿಯೋ ರೆಕಾರ್ಡ್‌ ಮಾಡಿದ್ದಾರೆ. ಅದರಂತೆ ಆಸ್ಪತ್ರೆಯ ಮುಚ್ಚಿದ ಗೇಟ್‌ಗಳ ಹೊರಗೆ ಫುಟ್‌ಪಾತ್‌ನಲ್ಲಿ ರೋಗಿಗಳು ಕುಳಿತಿದ್ದಾರೆ. ಮುಖವನ್ನು ಮರೆಮಾಡಲು ಮಾಸ್ಕ್‌ ಮಾತ್ರ ಧರಿಸಿದ್ದಾರೆ. ಇಬ್ಬರು ಪೊಲೀಸರು ರಕ್ಷಣೆಗಿದ್ದು ಅಂತರ ಕಾಯ್ದುಕೊಳ್ಳಿ ಎಂದು ನಿರ್ದೇಶನ ನೀಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಆನಂತರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಉತ್ತರ ಪ್ರದೇಶದ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ದ್ವಾರಗಳನ್ನು ತಲುಪಿ ಅಲ್ಲಿನ ಬಾಧಿತರನ್ನು ಉದ್ದೇಶಿಸಿ ಮಾತನಾಡಿರುವುದು ಸಹ ಮೊಬೈಲ್‌ನಲ್ಲಿ ರೆಕಾರ್ಡ್ ಆಗಿದೆ.

“ಇಲ್ಲಿಯೇ ಇರಿ. ವೈದ್ಯಕೀಯ ತಂಡ ಶೀಘ್ರದಲ್ಲೇ ಇಲ್ಲಿಗೆ ಬರಲಿದೆ ಮತ್ತು ಒಂದು ಪಟ್ಟಿಯನ್ನು ತಯಾರಿಸಿ ನಿಮ್ಮನ್ನು ಕರೆದೊಯ್ಯುತ್ತದೆ. ನೀವು ಇಲ್ಲಿ ಸುತ್ತಾಡಬೇಡಿ ಮತ್ತು ಓಡಿಹೋಗಲು ಪ್ರಯತ್ನಿಸಬೇಡಿ. ಒಂದು ವೇಳೆ ಓಡಿಹೋದರೆ ನಿಮ್ಮನ್ನು ಹಿಡಿಯಲಾಗುತ್ತದೆ. ನೀವು ಇದ್ದಕ್ಕಿದ್ದಂತೆ ಬಂದಿದ್ದೀರಿ. ನಿಮ್ಮ ಕುರಿತು ಇಲ್ಲಿ ಯಾವುದೇ ಮಾಹಿತಿ ಇರಲಿಲ್ಲ, ಇದಿದ್ದರೆ ಪಟ್ಟಿಗಳನ್ನು ತಯಾರಿಸಬಹುದಿತ್ತು ಎಂದು ಪೊಲೀಸ್ ಅಧಿಕಾರಿ ಚಂದ್ರ ಪಾಲ್ ಸಿಂಗ್ ಮೊಬೈಲ್ ವೀಡಿಯೊದಲ್ಲಿ ಹೇಳುತ್ತಾರೆ.

ಈ ಕುರಿತು ಆಸ್ಪತ್ರೆಯನ್ನು ನಡೆಸುತ್ತಿರುವ ವಿಶ್ವವಿದ್ಯಾಲಯದ ಉಪಕುಲಪತಿ ಸಂವಹನದ ಕೊರತೆಯಿಂದ ಹೀಗಾಗಿದೆ ಎಂದು ಒಪ್ಪಿಕೊಂಡರು. ಆದರೆ ಇದಕ್ಕಾಗಿ ಸೈಫೈ ಆಸ್ಪತ್ರೆಯ ವೈದ್ಯರು ಅಥವಾ ಅರೆವೈದ್ಯಕೀಯ ಸಿಬ್ಬಂದಿಯನ್ನು ದೂಷಿಸಬಾರದು ಎಂದು ಹೇಳಿದರು.

“ಯಾರು ನಿರ್ಲಕ್ಷ್ಯ ವಹಿಸಿದ್ದಾರೆಂದು ನಾನು ಹೇಳಲಾರೆ. ಆದರೆ ರೋಗಿಗಳು ಒಂದು ದಿನ ಮುಂಚಿತವಾಗಿ (ಬುಧವಾರ) ತಲುಪಬೇಕಾಗಿತ್ತು ಮತ್ತು ರೋಗಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ವರ್ಗಾವಣೆ ಮಾಡಿದಾಗ, ಕಾರ್ಯವಿಧಾನವು ಜವಾಬ್ದಾರಿಯುತ ಅಧಿಕಾರಿ ಅಥವಾ ವೈದ್ಯರ ಪಟ್ಟಿಯೊಂದಿಗೆ ಬರುತ್ತದೆ. ನಂತರ ನಾವು ರೋಗಿಗಳನ್ನು ಒಳಗೆ ಕರೆದೊಯ್ಯುತ್ತೇವೆ. ನಮ್ಮ ತಂಡವು ಜಾಗರೂಕತೆಯಿಂದ ಕೂಡಿತ್ತು. ಆದರೆ ಸಂವಹನದ ಕೊರತೆಯುಂಟಾಗಿದೆ. ಈ ಕಾರಣದಿಂದಾಗಿ ಅವರು ನಿಗದಿತ ದಿನದಂದು ತಲುಪಲಿಲ್ಲ ಆದರೆ ಮರುದಿನ ಬಂದಿರುವುದರಿಂದ ನಮ್ಮ ತಂಡಕ್ಕೆ ಮಾಹಿತಿ ಇಲ್ಲ. ಆದರೆ ನಮ್ಮ ಯಾವುದೇ ದಾಖಲೆಗಳನ್ನು ಹೊಂದಿರದಿದ್ದರೂ ತಂಡವು ಅವರನ್ನು ಕರೆದೊಯ್ಯಿತು. ಇದು 30 ನಿಮಿಷದಿಂದ ಒಂದು ಗಂಟೆಯವರೆಗೆ ಸಮಯದ ತೆಗೆದುಕೊಂಡಿತು. ಆ ಸಮಯದಲ್ಲಿ ಅವರು ಎಲ್ಲಿಯಾದರೂ ತಿರುಗಾಡಿದ್ದಾರೆ ಎಂದು ನನಗೆ ಖಾತ್ರಿಯಿಲ್ಲ ಎಂದು ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ರಾಜ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಬೀಡಿಯೊಳಗೆ ಸುರುಟುವ ಬದುಕಿನ ಬವಣೆಗಳು : ದ.ಕ ಜಿಲ್ಲೆಯ ಸ್ಥಿತಿಗತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...