Homeಮುಖಪುಟಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು

ಉತ್ತರ ಪ್ರದೇಶ ಆಸ್ಪತ್ರೆಯ ಹೊರಗೆ ಫುಟ್‌ಪಾತ್‌ನಲ್ಲಿ ಗಂಟೆಗಟ್ಟಲೆ ಕಾದ 69 ಕೊರೊನಾ ಸೋಂಕಿತರು

- Advertisement -
- Advertisement -

69 ಕೊರೊನಾ ರೋಗಿಗಳ ಗುಂಪು ಗುರುವಾರ ಬೆಳಿಗ್ಗೆ ಕನಿಷ್ಠ ಒಂದು ಗಂಟೆಗಳ ಕಾಲ ಉತ್ತರ ಪ್ರದೇಶದ ಇಟವಾ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಬೀಗ ಹಾಕಿದ ಗೇಟುಗಳ ಹೊರಗೆ ಫುಟ್‌ಪಾತ್‌ನಲ್ಲಿ ಕಾಯಬೇಕಾದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಆಸ್ಪತ್ರೆಯು ಕೊರೊನಾ ರೋಗಿಗಳಿಗಾಗಿ ಮೀಸಲಾದ ಆಸ್ಪತ್ರೆಯಾಗಿದ್ದು, ಸಮರ್ಪಕ ಸಂವಹನದ ಕೊರತೆಯಿಂದಾಗಿ ಈ ದುರ್ಘಟನೆ ಜರುಗಿದೆ ಎನ್ನಲಾಗಿದೆ.

ಉತ್ತರ ಪ್ರದೇಶದ ಇಟವಾ ಜಿಲ್ಲೆಯ ಸೈಫೈನ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಫ್ಲೂ ಹೊರರೋಗಿ ವಿಭಾಗದ ಗೇಟ್‌ಗಳ ಹೊರಗೆ ವಿಲಕ್ಷಣ ಘಟನೆ ನಡೆದಿದ್ದು, ಗುರುವಾರ ಮುಂಜಾನೆ COVID-19 ಬಾಧಿತ 69 ರೋಗಿಗಳನ್ನು ಕರೆತಂದ ಬಸ್ ಆಸ್ಪತ್ರೆಯ ಗೇಟ್‌ಗಳನ್ನು ಮುಂದೆ ಇಳಿಸಿದೆ.

ರೋಗಿಗಳನ್ನು ಪಶ್ಚಿಮ ಯುಪಿ ನಗರವಾದ ಆಗ್ರಾದಿಂದ ಸೈಫೈನ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗುತ್ತಿತ್ತು. ಇದು ಈ ಪ್ರದೇಶದ ಅತಿದೊಡ್ಡ ಆಸ್ಪತ್ರೆಗಳಲ್ಲಿ ಒಂದಾಗಿದೆ. ರೋಗಿಗಳನ್ನು ಯುಪಿ ಸಾರಿಗೆ ಬಸ್‌ನಲ್ಲಿ 116 ಕಿ.ಮೀ ದೂರದಲ್ಲಿರುವ ಆಗ್ರಾದಿಂದ ಕಳುಹಿಸಲಾಗಿತ್ತು. ಬೆಂಗಾವಲು ತಂಡವನ್ನು ಬಸ್‌ನೊಂದಿಗೆ ಕಳುಹಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ಈ ದೃಶ್ಯಗಳನ್ನು ದೂರದಿಂದ ಸ್ಥಳೀಯರು ವಿಡಿಯೋ ರೆಕಾರ್ಡ್‌ ಮಾಡಿದ್ದಾರೆ. ಅದರಂತೆ ಆಸ್ಪತ್ರೆಯ ಮುಚ್ಚಿದ ಗೇಟ್‌ಗಳ ಹೊರಗೆ ಫುಟ್‌ಪಾತ್‌ನಲ್ಲಿ ರೋಗಿಗಳು ಕುಳಿತಿದ್ದಾರೆ. ಮುಖವನ್ನು ಮರೆಮಾಡಲು ಮಾಸ್ಕ್‌ ಮಾತ್ರ ಧರಿಸಿದ್ದಾರೆ. ಇಬ್ಬರು ಪೊಲೀಸರು ರಕ್ಷಣೆಗಿದ್ದು ಅಂತರ ಕಾಯ್ದುಕೊಳ್ಳಿ ಎಂದು ನಿರ್ದೇಶನ ನೀಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಆನಂತರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಉತ್ತರ ಪ್ರದೇಶದ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ದ್ವಾರಗಳನ್ನು ತಲುಪಿ ಅಲ್ಲಿನ ಬಾಧಿತರನ್ನು ಉದ್ದೇಶಿಸಿ ಮಾತನಾಡಿರುವುದು ಸಹ ಮೊಬೈಲ್‌ನಲ್ಲಿ ರೆಕಾರ್ಡ್ ಆಗಿದೆ.

“ಇಲ್ಲಿಯೇ ಇರಿ. ವೈದ್ಯಕೀಯ ತಂಡ ಶೀಘ್ರದಲ್ಲೇ ಇಲ್ಲಿಗೆ ಬರಲಿದೆ ಮತ್ತು ಒಂದು ಪಟ್ಟಿಯನ್ನು ತಯಾರಿಸಿ ನಿಮ್ಮನ್ನು ಕರೆದೊಯ್ಯುತ್ತದೆ. ನೀವು ಇಲ್ಲಿ ಸುತ್ತಾಡಬೇಡಿ ಮತ್ತು ಓಡಿಹೋಗಲು ಪ್ರಯತ್ನಿಸಬೇಡಿ. ಒಂದು ವೇಳೆ ಓಡಿಹೋದರೆ ನಿಮ್ಮನ್ನು ಹಿಡಿಯಲಾಗುತ್ತದೆ. ನೀವು ಇದ್ದಕ್ಕಿದ್ದಂತೆ ಬಂದಿದ್ದೀರಿ. ನಿಮ್ಮ ಕುರಿತು ಇಲ್ಲಿ ಯಾವುದೇ ಮಾಹಿತಿ ಇರಲಿಲ್ಲ, ಇದಿದ್ದರೆ ಪಟ್ಟಿಗಳನ್ನು ತಯಾರಿಸಬಹುದಿತ್ತು ಎಂದು ಪೊಲೀಸ್ ಅಧಿಕಾರಿ ಚಂದ್ರ ಪಾಲ್ ಸಿಂಗ್ ಮೊಬೈಲ್ ವೀಡಿಯೊದಲ್ಲಿ ಹೇಳುತ್ತಾರೆ.

ಈ ಕುರಿತು ಆಸ್ಪತ್ರೆಯನ್ನು ನಡೆಸುತ್ತಿರುವ ವಿಶ್ವವಿದ್ಯಾಲಯದ ಉಪಕುಲಪತಿ ಸಂವಹನದ ಕೊರತೆಯಿಂದ ಹೀಗಾಗಿದೆ ಎಂದು ಒಪ್ಪಿಕೊಂಡರು. ಆದರೆ ಇದಕ್ಕಾಗಿ ಸೈಫೈ ಆಸ್ಪತ್ರೆಯ ವೈದ್ಯರು ಅಥವಾ ಅರೆವೈದ್ಯಕೀಯ ಸಿಬ್ಬಂದಿಯನ್ನು ದೂಷಿಸಬಾರದು ಎಂದು ಹೇಳಿದರು.

“ಯಾರು ನಿರ್ಲಕ್ಷ್ಯ ವಹಿಸಿದ್ದಾರೆಂದು ನಾನು ಹೇಳಲಾರೆ. ಆದರೆ ರೋಗಿಗಳು ಒಂದು ದಿನ ಮುಂಚಿತವಾಗಿ (ಬುಧವಾರ) ತಲುಪಬೇಕಾಗಿತ್ತು ಮತ್ತು ರೋಗಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ವರ್ಗಾವಣೆ ಮಾಡಿದಾಗ, ಕಾರ್ಯವಿಧಾನವು ಜವಾಬ್ದಾರಿಯುತ ಅಧಿಕಾರಿ ಅಥವಾ ವೈದ್ಯರ ಪಟ್ಟಿಯೊಂದಿಗೆ ಬರುತ್ತದೆ. ನಂತರ ನಾವು ರೋಗಿಗಳನ್ನು ಒಳಗೆ ಕರೆದೊಯ್ಯುತ್ತೇವೆ. ನಮ್ಮ ತಂಡವು ಜಾಗರೂಕತೆಯಿಂದ ಕೂಡಿತ್ತು. ಆದರೆ ಸಂವಹನದ ಕೊರತೆಯುಂಟಾಗಿದೆ. ಈ ಕಾರಣದಿಂದಾಗಿ ಅವರು ನಿಗದಿತ ದಿನದಂದು ತಲುಪಲಿಲ್ಲ ಆದರೆ ಮರುದಿನ ಬಂದಿರುವುದರಿಂದ ನಮ್ಮ ತಂಡಕ್ಕೆ ಮಾಹಿತಿ ಇಲ್ಲ. ಆದರೆ ನಮ್ಮ ಯಾವುದೇ ದಾಖಲೆಗಳನ್ನು ಹೊಂದಿರದಿದ್ದರೂ ತಂಡವು ಅವರನ್ನು ಕರೆದೊಯ್ಯಿತು. ಇದು 30 ನಿಮಿಷದಿಂದ ಒಂದು ಗಂಟೆಯವರೆಗೆ ಸಮಯದ ತೆಗೆದುಕೊಂಡಿತು. ಆ ಸಮಯದಲ್ಲಿ ಅವರು ಎಲ್ಲಿಯಾದರೂ ತಿರುಗಾಡಿದ್ದಾರೆ ಎಂದು ನನಗೆ ಖಾತ್ರಿಯಿಲ್ಲ ಎಂದು ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ರಾಜ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಬೀಡಿಯೊಳಗೆ ಸುರುಟುವ ಬದುಕಿನ ಬವಣೆಗಳು : ದ.ಕ ಜಿಲ್ಲೆಯ ಸ್ಥಿತಿಗತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...