Homeಅಂತರಾಷ್ಟ್ರೀಯಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ

ಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ

- Advertisement -
- Advertisement -

ಅಮೆರಿಕದ ಅಲಾಸ್ಕಾ ರಾಜ್ಯದ ಕರಾವಳಿಯಲ್ಲಿ ಬುಧವಾರ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿತ್ತು. ನಂತರ ಅದನ್ನು ಹಿಂಪಡೆಯಲಾಗಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ತಿಳಿಸಿದೆ.

ಸ್ಥಳೀಯ ಸಮಯ ಮಧ್ಯಾಹ್ನ ಸುಮಾರು 12:37 ಕ್ಕೆ ಭೂಮಿ ಕಂಪಿಸಿದ್ದು, ಇದರ ಕೇಂದ್ರ ಬಿಂದುವು ದ್ವೀಪ ಪಟ್ಟಣವಾದ ಸ್ಯಾಂಡ್ ಪಾಯಿಂಟ್‌ನಿಂದ ಸುಮಾರು 54 ಮೈಲುಗಳು (87 ಕಿಲೋಮೀಟರ್) ದಕ್ಷಿಣದಲ್ಲಿ, 12.5 ಮೈಲುಗಳಷ್ಟು ಭೂಮಿಯ ಆಳದಲ್ಲಿ ಪತ್ತೆಯಾಗಿದೆ ಯುಎಸ್‌ಜಿಎಸ್ ಹೇಳಿದೆ.

ಭೂಕಂಪದ ನಂತರ ಅಧಿಕಾರಿಗಳು ಆರಂಭದಲ್ಲಿ ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪಕ್ಕೆ ಸುನಾಮಿ ಎಚ್ಚರಿಕೆಯನ್ನು ನೀಡಿದ್ದರು. ಆದರೆ ನಂತರ ಅದನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡರು ಎಂದು ವರದಿಯಾಗಿದೆ.

“ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪದ ಕರಾವಳಿ ಪ್ರದೇಶಗಳಿಗೆ ನೀಡಲಾಗಿದ್ದ ಸುನಾಮಿ ಎಚ್ಚರಿಕೆಯನ್ನು ಹಿಂಪಡೆಯಲಾಗಿದೆ” ಎಂದು ಭೂಕಂಪದ ಸುಮಾರು ಎರಡು ಗಂಟೆಗಳ ನಂತರ ಬಿಡುಗಡೆ ಮಾಡಿದ ಸಂದೇಶದಲ್ಲಿ ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರ (ಎನ್‌ಟಿಡಬ್ಲ್ಯುಸಿ) ತಿಳಿಸಿದೆ.

ಆರಂಭದ 7.3 ತೀವ್ರತೆಯ ಭೂಕಂಪದ ನಂತರ, 10ಕ್ಕೂ ಅಧಿಕ ಬಾರಿ ಭೂಮಿ ಕಂಪಿಸಿದೆ. ಅವುಗಳಲ್ಲಿ 5.2 ತೀವ್ರತೆ ಅತೀ ಹೆಚ್ಚು ಎಂದು ಯುಎಸ್‌ಜಿಎಸ್‌ ಮಾಹಿತಿ ನೀಡಿದೆ.

ಸುನಾಮಿ ಎಚ್ಚರಿಕೆ ಅಥವಾ ಸಲಹೆಯನ್ನು ಅಲಾಸ್ಕನ್ ಕರಾವಳಿಯ ಪ್ರದೇಶಗಳಿಗೆ ಮಾತ್ರ ನೀಡಲಾಗಿತ್ತು. ಭೂಕಂಪನ ದೂರದ ಪ್ರದೇಶಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಎನ್‌ಟಿಡಬ್ಲ್ಯುಸಿ ತಿಳಿಸಿದೆ.

ಸ್ಯಾಂಡ್ ಪಾಯಿಂಟ್‌ನಲ್ಲಿ ಗರಿಷ್ಠ 0.2 ಅಡಿ (6.1 ಸೆಂಟಿಮೀಟರ್) ಎತ್ತರದ ಸುನಾಮಿ ಅಲೆಗಳು ಕಂಡುಬಂದಿವೆ. ಸುನಾಮಿಯ ಅಪಾಯಕ್ಕೆ ಸದ್ಯಕ್ಕೆ ಇಲ್ಲದಿದ್ದರೂ, ಭೂಕಂಪ ಸಂಭವಿಸಿದ ಪ್ರದೇಶದ ನಿವಾಸಿಗಳು ಅಪಾಯದ ಬಗ್ಗೆ ಎಚ್ಚರದಿಂದಿರಬೇಕು ಎಂದು ಎನ್‌ಟಿಡಬ್ಲ್ಯುಸಿ ಸಲಹೆ ನೀಡಿದೆ.

“ಸ್ಥಳೀಯ ತುರ್ತು ಅಧಿಕಾರಿಗಳು ಸುರಕ್ಷಿತ ಎಂದು ಸೂಚಿಸುವವರೆಗೆ ಅಪಾಯದ ವಲಯಗಳಿಗೆ ಹಿಂದಿರುಗಬೇಡಿ” ಎಂದು ಸೂಚಿಸಿದೆ.

ಅಲಾಸ್ಕಾ ಭೂಕಂಪ ವಲಯ ಎಂದು ಗುರುತಿಸಿರುವ ಪೆಸಿಫಿಕ್ ರಿಂಗ್ ಆಫ್ ಫೈರ್‌ನಲ್ಲಿ ಬರುತ್ತದೆ. ಅಮೆರಿಕದ ಈ ದೂರದ ರಾಜ್ಯವು ಮಾರ್ಚ್ 1964ರಲ್ಲಿ 9.2 ತೀವ್ರತೆಯ ಭೂಕಂಪಕ್ಕೆ ತುತ್ತಾಗಿತ್ತು. ಇದು ಉತ್ತರ ಅಮೆರಿಕಾದಲ್ಲಿ ದಾಖಲಾದ ಅತ್ಯಂತ ಪ್ರಬಲ ಭೂಕಂಪವಾಗಿತ್ತು.

ಈ ಭೂಕಂಪದಿಂದ ಸುನಾಮಿ ಉಂಟಾಗಿತ್ತು. ಪರಿಣಾಮ ಆಂಕಾರೇಜ್ ನಗರದ ಮೇಲೆ ಸಂಪೂರ್ಣ ನಾಮವಶೇಷ ಆಗಿತ್ತು. ಸುನಾಮಿ ಅಲೆಗಳು ಅಲಾಸ್ಕಾ ಕೊಲ್ಲಿ, ಅಮೆರಿಕದ ಪಶ್ಚಿಮ ಕರಾವಳಿ ಮತ್ತು ಹವಾಯಿ ತೀರಕ್ಕೆ ಅಪ್ಪಳಿಸಿತ್ತು. ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದರು ಮತ್ತು 400 ಮಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಆಸ್ತಿ ನಷ್ಟ ಆಗಿತ್ತು.

ಜುಲೈ 2023ರಲ್ಲಿ ಅಲಾಸ್ಕಾ ಪರ್ಯಾಯ ದ್ವೀಪದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಈ ಕಂಪನದಿಂದ ಯಾವುದೇ ದೊಡ್ಡ ಹಾನಿ ಸಂಭವಿಸಿರಲಿಲ್ಲ.

ಗಾಜಾ ನರಮೇಧಕ್ಕೆ ಸಹಭಾಗಿತ್ವ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ IPSP ಸಂಘಟನೆಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...