Homeಅಂತರಾಷ್ಟ್ರೀಯಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ

ಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ

- Advertisement -
- Advertisement -

ಅಮೆರಿಕದ ಅಲಾಸ್ಕಾ ರಾಜ್ಯದ ಕರಾವಳಿಯಲ್ಲಿ ಬುಧವಾರ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿತ್ತು. ನಂತರ ಅದನ್ನು ಹಿಂಪಡೆಯಲಾಗಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ತಿಳಿಸಿದೆ.

ಸ್ಥಳೀಯ ಸಮಯ ಮಧ್ಯಾಹ್ನ ಸುಮಾರು 12:37 ಕ್ಕೆ ಭೂಮಿ ಕಂಪಿಸಿದ್ದು, ಇದರ ಕೇಂದ್ರ ಬಿಂದುವು ದ್ವೀಪ ಪಟ್ಟಣವಾದ ಸ್ಯಾಂಡ್ ಪಾಯಿಂಟ್‌ನಿಂದ ಸುಮಾರು 54 ಮೈಲುಗಳು (87 ಕಿಲೋಮೀಟರ್) ದಕ್ಷಿಣದಲ್ಲಿ, 12.5 ಮೈಲುಗಳಷ್ಟು ಭೂಮಿಯ ಆಳದಲ್ಲಿ ಪತ್ತೆಯಾಗಿದೆ ಯುಎಸ್‌ಜಿಎಸ್ ಹೇಳಿದೆ.

ಭೂಕಂಪದ ನಂತರ ಅಧಿಕಾರಿಗಳು ಆರಂಭದಲ್ಲಿ ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪಕ್ಕೆ ಸುನಾಮಿ ಎಚ್ಚರಿಕೆಯನ್ನು ನೀಡಿದ್ದರು. ಆದರೆ ನಂತರ ಅದನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡರು ಎಂದು ವರದಿಯಾಗಿದೆ.

“ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪದ ಕರಾವಳಿ ಪ್ರದೇಶಗಳಿಗೆ ನೀಡಲಾಗಿದ್ದ ಸುನಾಮಿ ಎಚ್ಚರಿಕೆಯನ್ನು ಹಿಂಪಡೆಯಲಾಗಿದೆ” ಎಂದು ಭೂಕಂಪದ ಸುಮಾರು ಎರಡು ಗಂಟೆಗಳ ನಂತರ ಬಿಡುಗಡೆ ಮಾಡಿದ ಸಂದೇಶದಲ್ಲಿ ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರ (ಎನ್‌ಟಿಡಬ್ಲ್ಯುಸಿ) ತಿಳಿಸಿದೆ.

ಆರಂಭದ 7.3 ತೀವ್ರತೆಯ ಭೂಕಂಪದ ನಂತರ, 10ಕ್ಕೂ ಅಧಿಕ ಬಾರಿ ಭೂಮಿ ಕಂಪಿಸಿದೆ. ಅವುಗಳಲ್ಲಿ 5.2 ತೀವ್ರತೆ ಅತೀ ಹೆಚ್ಚು ಎಂದು ಯುಎಸ್‌ಜಿಎಸ್‌ ಮಾಹಿತಿ ನೀಡಿದೆ.

ಸುನಾಮಿ ಎಚ್ಚರಿಕೆ ಅಥವಾ ಸಲಹೆಯನ್ನು ಅಲಾಸ್ಕನ್ ಕರಾವಳಿಯ ಪ್ರದೇಶಗಳಿಗೆ ಮಾತ್ರ ನೀಡಲಾಗಿತ್ತು. ಭೂಕಂಪನ ದೂರದ ಪ್ರದೇಶಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಎನ್‌ಟಿಡಬ್ಲ್ಯುಸಿ ತಿಳಿಸಿದೆ.

ಸ್ಯಾಂಡ್ ಪಾಯಿಂಟ್‌ನಲ್ಲಿ ಗರಿಷ್ಠ 0.2 ಅಡಿ (6.1 ಸೆಂಟಿಮೀಟರ್) ಎತ್ತರದ ಸುನಾಮಿ ಅಲೆಗಳು ಕಂಡುಬಂದಿವೆ. ಸುನಾಮಿಯ ಅಪಾಯಕ್ಕೆ ಸದ್ಯಕ್ಕೆ ಇಲ್ಲದಿದ್ದರೂ, ಭೂಕಂಪ ಸಂಭವಿಸಿದ ಪ್ರದೇಶದ ನಿವಾಸಿಗಳು ಅಪಾಯದ ಬಗ್ಗೆ ಎಚ್ಚರದಿಂದಿರಬೇಕು ಎಂದು ಎನ್‌ಟಿಡಬ್ಲ್ಯುಸಿ ಸಲಹೆ ನೀಡಿದೆ.

“ಸ್ಥಳೀಯ ತುರ್ತು ಅಧಿಕಾರಿಗಳು ಸುರಕ್ಷಿತ ಎಂದು ಸೂಚಿಸುವವರೆಗೆ ಅಪಾಯದ ವಲಯಗಳಿಗೆ ಹಿಂದಿರುಗಬೇಡಿ” ಎಂದು ಸೂಚಿಸಿದೆ.

ಅಲಾಸ್ಕಾ ಭೂಕಂಪ ವಲಯ ಎಂದು ಗುರುತಿಸಿರುವ ಪೆಸಿಫಿಕ್ ರಿಂಗ್ ಆಫ್ ಫೈರ್‌ನಲ್ಲಿ ಬರುತ್ತದೆ. ಅಮೆರಿಕದ ಈ ದೂರದ ರಾಜ್ಯವು ಮಾರ್ಚ್ 1964ರಲ್ಲಿ 9.2 ತೀವ್ರತೆಯ ಭೂಕಂಪಕ್ಕೆ ತುತ್ತಾಗಿತ್ತು. ಇದು ಉತ್ತರ ಅಮೆರಿಕಾದಲ್ಲಿ ದಾಖಲಾದ ಅತ್ಯಂತ ಪ್ರಬಲ ಭೂಕಂಪವಾಗಿತ್ತು.

ಈ ಭೂಕಂಪದಿಂದ ಸುನಾಮಿ ಉಂಟಾಗಿತ್ತು. ಪರಿಣಾಮ ಆಂಕಾರೇಜ್ ನಗರದ ಮೇಲೆ ಸಂಪೂರ್ಣ ನಾಮವಶೇಷ ಆಗಿತ್ತು. ಸುನಾಮಿ ಅಲೆಗಳು ಅಲಾಸ್ಕಾ ಕೊಲ್ಲಿ, ಅಮೆರಿಕದ ಪಶ್ಚಿಮ ಕರಾವಳಿ ಮತ್ತು ಹವಾಯಿ ತೀರಕ್ಕೆ ಅಪ್ಪಳಿಸಿತ್ತು. ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದರು ಮತ್ತು 400 ಮಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಆಸ್ತಿ ನಷ್ಟ ಆಗಿತ್ತು.

ಜುಲೈ 2023ರಲ್ಲಿ ಅಲಾಸ್ಕಾ ಪರ್ಯಾಯ ದ್ವೀಪದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಈ ಕಂಪನದಿಂದ ಯಾವುದೇ ದೊಡ್ಡ ಹಾನಿ ಸಂಭವಿಸಿರಲಿಲ್ಲ.

ಗಾಜಾ ನರಮೇಧಕ್ಕೆ ಸಹಭಾಗಿತ್ವ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ IPSP ಸಂಘಟನೆಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...